Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯಗ್ರಹಣ ಸಂಭವಿಸುವ ದಿನವೇ ಶನಿ ಅಮಾವಾಸ್ಯೆ; ಈ ದಿನದ ಮಹತ್ವವೇನು? ಶನಿ ದೋಷದಿಂದ ಮುಕ್ತಿ ಪಡೆಯಲು ಇಲ್ಲಿದೆ ಸೂತ್ರ

ಶನಿವಾರವನ್ನು ಭಗವಾನ್ ಶನಿ ದೇವರಿಗೆ ಅರ್ಪಿಸಲಾಗಿದೆ. ಹಾಗೂ ಹಿಂದೂ ಧರ್ಮಗ್ರಂಥಗಳಲ್ಲಿ ಅಮವಾಸ್ಯೆಯ ತಿಥಿಯನ್ನು ಪೂರ್ವಜರಿಗೆ ಸಮರ್ಪಿಸಲಾಗಿದೆ. ಪೂರ್ವಜರಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡಲು ಈ ದಿನಾಂಕವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇದರೊಂದಿಗೆ ಪೂಜೆ, ಸ್ನಾನ, ದಾನ ಇತ್ಯಾದಿಗಳ ವಿಶೇಷ ಮಹತ್ವವಿದೆ.

ಸೂರ್ಯಗ್ರಹಣ ಸಂಭವಿಸುವ ದಿನವೇ ಶನಿ ಅಮಾವಾಸ್ಯೆ; ಈ ದಿನದ ಮಹತ್ವವೇನು? ಶನಿ ದೋಷದಿಂದ ಮುಕ್ತಿ ಪಡೆಯಲು ಇಲ್ಲಿದೆ ಸೂತ್ರ
ಶನಿ
Follow us
TV9 Web
| Updated By: ಆಯೇಷಾ ಬಾನು

Updated on: Dec 04, 2021 | 7:28 AM

ಶನಿ ಸೂರ್ಯ ದೇವನ ಪುತ್ರ. ಆದ್ರೆ ಗ್ರಂಥಗಳ ಪ್ರಕಾರ ಇವರಿಬ್ಬರದ್ದು ಹೊಂದಾಣಿಕೆಯಾಗದ ಸಂಬಂಧ. ಶನಿ ಅಮಾವಾಸ್ಯೆಯು ವರ್ಷದ ಕೊನೆಯ ಸೂರ್ಯಗ್ರಹಣದಂದೇ ಬರುತ್ತದೆ. ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಸೂರ್ಯ ಗ್ರಹಣ ಇದೆ. ವಿಶೇಷ ಎಂದರೆ ಈ ಬಾರಿ ಅಮಾವಾಸ್ಯೆ ಶನಿವಾಸ ಬಂದಿರುವುದರಿಂದ ಇದು ಶನಿ ಅಮಾವಾಸ್ಯೆ ಆಗಿದೆ. ಶನಿವಾರವನ್ನು ಭಗವಾನ್ ಶನಿ ದೇವರಿಗೆ ಅರ್ಪಿಸಲಾಗಿದೆ. ಹಾಗೂ ಹಿಂದೂ ಧರ್ಮಗ್ರಂಥಗಳಲ್ಲಿ ಅಮವಾಸ್ಯೆಯ ತಿಥಿಯನ್ನು ಪೂರ್ವಜರಿಗೆ ಸಮರ್ಪಿಸಲಾಗಿದೆ. ಪೂರ್ವಜರಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡಲು ಈ ದಿನಾಂಕವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇದರೊಂದಿಗೆ ಪೂಜೆ, ಸ್ನಾನ, ದಾನ ಇತ್ಯಾದಿಗಳ ವಿಶೇಷ ಮಹತ್ವವಿದೆ.

ತರ್ಪಣ ಧಾರ್ಮಿಕ ನಂಬಿಕೆಯ ಪ್ರಕಾರ ಅಮವಾಸ್ಯೆಯ ದಿನದಂದು ನದಿ ಸ್ನಾನ ಮಾಡಿ ದಾನ ಇತ್ಯಾದಿಗಳಿಂದ ಪಾಪಗಳು ನಿವಾರಣೆಯಾಗಿ ಮುಕ್ತಿ ದೊರೆಯುತ್ತದೆ. ಪೂರ್ವಜರ ಆತ್ಮತೃಪ್ತಿಗಾಗಿ ಅಮವಾಸ್ಯೆ ತಿಥಿಯಂದು ತರ್ಪಣ, ಪಿಂಡದಾನ ಮತ್ತು ಶ್ರಾದ್ಧ ಆಚರಣೆಗಳನ್ನು ಸಹ ಮಾಡಲಾಗುತ್ತದೆ. ಜಾತಕದಲ್ಲಿದ್ದರೆ, ಪಿತ್ರಾ ದೋಷ ನಿವಾರಣೆಗೆ ಈ ದಿನವನ್ನು ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಅಮಾವಾಸ್ಯೆಯಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಪೂರ್ವಜರಿಗೆ ಧೂಪ-ಧ್ಯಾನವನ್ನು ಮಾಡಬೇಕು. ಇದಕ್ಕಾಗಿ ಹಸುವಿನ ಸಗಣಿ ಸುಟ್ಟು ಹೊಗೆ ಬರುವುದು ನಿಂತಾಗ ಸುಟ್ಟ ಸಗಣಿಗೆ ಬೆಲ್ಲ-ತುಪ್ಪ ಹಾಕಿ ಧೂಪ ಹಾಕಬೇಕು. ಅಗತ್ಯವಿರುವ ಜನರಿಗೆ ಸಾಮರ್ಥ್ಯಕ್ಕೆ ಅನುಗುಣವಾಗಿ ದಾನ ಮಾಡಿ.

ದಾನ ಪಂಚಾಂಗದಲ್ಲಿ ಅಮಾವಾಸ್ಯೆ ದಿನಕ್ಕೆ ವಿಶೇಷ ಮಹತ್ವವಿದೆ. ಈ ದಿನ ಬಡವರಿಗೆ ದಾನ ಮಾಡುವುದರಿಂದ ವಿಶೇಷ ಪುಣ್ಯ ಪ್ರಾಪ್ತಿಯಾಗುತ್ತದೆ. ಶನಿಯನ್ನು ಬಡವರ ನಾರಾಯಣ ಎಂದೂ ಕರೆಯುತ್ತಾರೆ. ಆದ್ದರಿಂದ ಶನಿಯು ಬಡವರ ಸೇವೆಯಿಂದ ಸಂತೋಷಗೊಳ್ಳುತ್ತಾನೆ. ಹೀಗಾಗಿ ಈ ದಿನ ಬಡವರ ಸೇವೆ ಮಾಡಿ

ಶನಿದೇವನ ಆರಾಧನೆ ಮಾಡಿ ಅಮಾವಾಸ್ಯೆ ಮತ್ತು ಶನಿವಾರದ ಸಂಯೋಜನೆಯಿಂದಾಗಿ ಇದನ್ನು ಶನಿಶ್ಚರಿ ಅಮಾವಾಸ್ಯೆ ಎಂದು ಕರೆಯಲಾಗುವುದು. ಈ ದಿನದಂದು ಶನಿದೇವನ ವಿಶೇಷ ಪೂಜೆಯನ್ನು ಮಾಡುವುದರಿಂದ ಶನಿ ಸಾಡೆ ಸತಿ ಮತ್ತು ತೊಂದರೆಗಳಿಂದ ಮುಕ್ತಿ ಪಡೆಯಬಹುದು. ಅಮಾವಾಸ್ಯೆಯಂದು ಸಾಸಿವೆ ಎಣ್ಣೆಯನ್ನು ದಾನ ಮಾಡಿ. ಓಂ ಶನಿಶ್ಚರಾಯ ನಮಃ ಎಂಬ ಮಂತ್ರವನ್ನು ಕನಿಷ್ಠ 108 ಬಾರಿ ಜಪಿಸಿ. ಅರಳಿ ಮರದ ಕೆಳಗೆ ಸಾಸಿವೆ ಎಣ್ಣೆಯ ದೀಪವನ್ನು ಬೆಳಗಿಸಿ. ಕಪ್ಪು ಎಳ್ಳು, ಕರಿಬೇವು, ಕಪ್ಪು ಬಟ್ಟೆ ಮತ್ತು ಕಪ್ಪು ಕಂಬಳಿ ಇತ್ಯಾದಿಗಳನ್ನು ಸಾಮರ್ಥ್ಯಕ್ಕೆ ಅನುಗುಣವಾಗಿ ಅಗತ್ಯವಿರುವವರಿಗೆ ದಾನ ಮಾಡಿ.

ಹನುಮಾನ್ ಪೂಜೆ ಮಾಡಿ ಭಗವಾನ್ ಭೋಲೇನಾಥನನ್ನು ಮತ್ತು ಹನುಮಾನ್‌ ದೇವನನ್ನು ಪೂಜಿಸುವುದರಿಂದ ಶನಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ ಎನ್ನುವ ನಂಬಿಕೆಗಳಿವೆ. ಶಿವ ಮತ್ತು ಹನುಮಂತನ ಕೃಪೆಯುಳ್ಳವರ ಮೇಲೆ ಶನಿಯು ತನ್ನ ಕೆಟ್ಟ ದೃಷ್ಟಿಯನ್ನು ಹಾಕಲಾರ. ಹೀಗಾಗಿ ಶನಿವಾರದಂದು ಹನುಮಾನ್ ಪೂಜೆಗೂ ವಿಶೇಷ ಮಹತ್ವವಿದೆ.

ಇದನ್ನೂ ಓದಿ: Shani Mantra: ಶನಿಯ ಈ ಮಂತ್ರಗಳನ್ನು ಪಠಿಸಿದರೆ ಎಲ್ಲಾ ಶನಿ ದೋಷಗಳು ದೂರವಾಗುತ್ತವೆ

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್