AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ತಂದೆಯರ ಭಾಗ್ಯದಲ್ಲಿ ಮಗಳು ಇರಲ್ಲ! ಏನು ಹಾಗಂದ್ರೆ? ಮಗಳ ಮಹತ್ವಕ್ಕೆ ಇಲ್ಲಿದೆ ಉದಾಹರಣೆ

ದಶರಥ ಮಹಾರಾಜ ತನ್ನ ನಾಲ್ಕು ಪುತ್ರರತ್ನರ ಜೊತೆ ಸಕುಟುಂಬ ಪರಿವಾರ ಸಮೇತ ಅದ್ದೂರಿ ಮದುವೆಯ ದಿಬ್ಬಣದ ಸಂಗಡ ಜನಕ ಮಹಾರಾಜನ ಅರಮನೆಯ ಹೆಬ್ಬಾಗಿಲಲ್ಲಿ ಬಂದು ನಿಲ್ಲುತ್ತಾನೆ. ಆಗ ಜನಕ ಮಹಾರಾಜನು ತನ್ನ ಪರಿವಾರದ ಜೊತೆ ಎದುರಿಗೆ ಬಂದು ರಘುರಾಮನ ಮದುವೆ ಮೆರವಣಿಗೆಗೆ ಸ್ವಾಗತ ಕೋರುತ್ತಾನೆ. ದಶರಥ ಮಹಾರಾಜ ತುಂಬಾ ವಿನಮ್ರದಿಂದ ಜನಕ ಮಹಾರಾಜನ ಹತ್ತಿರ ಹೋಗಿ ಆತನ ಪಾದಗಳಿಗೆ ನಮಸ್ಕಾರ ಮಾಡುತ್ತಾನೆ. ಗಲಿಬಿಲಿಗೊಂಡ ಜನಕನು ದಶರಥನನ್ನು ಎಬ್ಬಿಸಿ ಅಪ್ಪಿಕೊಂಡು ಆಶ್ಚರ್ಯದಿಂದ ಮಹಾರಾಜ ನೀವು ದೊಡ್ಡವರು. ಮೇಲಾಗಿ ವರನ […]

ಎಲ್ಲ ತಂದೆಯರ ಭಾಗ್ಯದಲ್ಲಿ ಮಗಳು ಇರಲ್ಲ! ಏನು ಹಾಗಂದ್ರೆ? ಮಗಳ ಮಹತ್ವಕ್ಕೆ ಇಲ್ಲಿದೆ ಉದಾಹರಣೆ
ಎಲ್ಲಾ ತಂದೆಯರ ಭಾಗ್ಯದಲ್ಲಿ ಮಗಳು ಇರಲ್ಲ! ಏನು ಹಾಗಂದ್ರೆ, ಪುತ್ರಿ ಪ್ರೇಮ ತಿಳಿಯಿರಿ
TV9 Web
| Edited By: |

Updated on: Oct 02, 2021 | 7:36 AM

Share

ದಶರಥ ಮಹಾರಾಜ ತನ್ನ ನಾಲ್ಕು ಪುತ್ರರತ್ನರ ಜೊತೆ ಸಕುಟುಂಬ ಪರಿವಾರ ಸಮೇತ ಅದ್ದೂರಿ ಮದುವೆಯ ದಿಬ್ಬಣದ ಸಂಗಡ ಜನಕ ಮಹಾರಾಜನ ಅರಮನೆಯ ಹೆಬ್ಬಾಗಿಲಲ್ಲಿ ಬಂದು ನಿಲ್ಲುತ್ತಾನೆ. ಆಗ ಜನಕ ಮಹಾರಾಜನು ತನ್ನ ಪರಿವಾರದ ಜೊತೆ ಎದುರಿಗೆ ಬಂದು ರಘುರಾಮನ ಮದುವೆ ಮೆರವಣಿಗೆಗೆ ಸ್ವಾಗತ ಕೋರುತ್ತಾನೆ. ದಶರಥ ಮಹಾರಾಜ ತುಂಬಾ ವಿನಮ್ರದಿಂದ ಜನಕ ಮಹಾರಾಜನ ಹತ್ತಿರ ಹೋಗಿ ಆತನ ಪಾದಗಳಿಗೆ ನಮಸ್ಕಾರ ಮಾಡುತ್ತಾನೆ.

ಗಲಿಬಿಲಿಗೊಂಡ ಜನಕನು ದಶರಥನನ್ನು ಎಬ್ಬಿಸಿ ಅಪ್ಪಿಕೊಂಡು ಆಶ್ಚರ್ಯದಿಂದ ಮಹಾರಾಜ ನೀವು ದೊಡ್ಡವರು. ಮೇಲಾಗಿ ವರನ ಕಡೆಯವರು. ಹೀಗೆ ನನಗೆ ಪಾದಾಭಿವಂದನೆ ಮಾಡುವುದು ಸರಿಯಲ್ಲ. ಗಂಗೆಯು ಹಿಂದಕ್ಕೆ ಹರಿಯುತ್ತಿರುವವಳೇ? ಎಂಬ ಸಂಶಯ ಮೂಡುತ್ತಿದೆ! ಎಂದು ವಿನಮ್ರನಾಗಿ ಹೇಳುವನು.

ಅದಕ್ಕೆ ಮಹಾರಾಜ ದಶರಥ ಒಂದು ಅದ್ಭುತ, ಮಾರ್ಮಿಕವಾದ ಉತ್ತರ ಕೊಡುತ್ತಾನೆ. ಓ ಜನಕ ರಾಜನೇ! ನೀವು ದಾನ ನೀಡುವವವರು. ಇನ್ನೇನು ಸ್ವಲ್ಪ ಹೊತ್ತಿಗೆ ಕನ್ಯಾದಾನ ಮಾಡುತ್ತಿರುವವರು. ನಾನು ಯಾಚಕ. ನಿಮ್ಮಿಂದ ಮಗನಿಗಾಗಿ ಕನ್ಯೆಯನ್ನು ಪಡೆಯಲು ಬಂದಿರುವವನು. ಈಗ ನೀವೇ ಹೇಳಿ, ದಾನ ಮಾಡುವವ ದೊಡ್ಡವನೋ? ಇಲ್ಲಾ ಯಾಚಕನೋ!? ನಮ್ಮಿಬ್ಬರಲ್ಲಿ ಶ್ರೇಷ್ಠನಾರೋ, ನಿಮಗೆ ಗೊತ್ತು ಎಂದು ಕೋರಿಕೆಯ ದನಿಯಲ್ಲಿ ಹೇಳುವನು.

ಆಗ ದಶರಥ ಮಹಾರಾಜನ ಮಾತು ಕೇಳಿದ ಜನಕನಿಗೆ ಕಣ್ಣೀರು, ಆನಂದಭಾಷ್ಪ. ಉದ್ವೇಗದಿಂದ ತನ್ನಲ್ಲಿಯೇ ಅಂದುಕೊಳ್ಳುತ್ತಾನೆ.. ಹೌದು ಯಾರ ಮನೆಯಲ್ಲಿ ಮಗಳಿರುತ್ತಾಳೋ ಅವರೇ ಭಾಗ್ಯವಂತರು!

ಪ್ರತಿ ಮಗಳ ಭಾಗ್ಯದಲ್ಲಿ ಅಥವಾ ಅದೃಷ್ಟದಲ್ಲಿ ತಂದೆ ಇದ್ದೇ ಇರುತ್ತಾನೆ. ಆದರೆ ಪ್ರತಿ ತಂದೆಯ ಭಾಗ್ಯದಲ್ಲಿ ಮಗಳಿರಲ್ಲ! ಇದು ಮಗಳಿಗಿರುವ ಮಹತ್ವ. ಇದು ಭಾರತೀಯ ಸಂಸ್ಕೃತಿಯ ರೀತಿ. ಇದು ನಮ್ಮ ರಾಮಾಯಣದ ನೀತಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು