AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಮಹಿಳೆಯರು ಹೂವನ್ನು ಮುಡಿಯುವುದಿಲ್ಲ! ಏಕೆ ಗೊತ್ತಾ?

No Flowers for Women in Tirupati: ತಿರುಮಲವೆಂದರೆ ಹೂವಿನ ಮಂಟಪ... ಬ್ರಹ್ಮೋತ್ಸವದ ಸಂದರ್ಭದಲ್ಲಿ ಗೋವಿಂದ ನೂರಾರು ಅಲಂಕಾರಗಳಲ್ಲಿ ಭಕ್ತರನ್ನು ಪುಳಕಿತಗೊಳಿಸುತ್ತಾನೆ. ತಿರುಮಲದಲ್ಲಿ ಅರಳುವ ಪ್ರತಿಯೊಂದು ಹೂವು ಶ್ರೀ ಮನ್ನಾರಾಯಣನಿಗೆ ಸಮರ್ಪಿತವಾಗಿದೆ ಎಂದು ಜನರು ಮತ್ತು ಭಕ್ತರು ನಂಬುತ್ತಾರೆ. ಹಾಗಾಗಿ ಭಕ್ತರು ಹೂವನ್ನು ಮುಟ್ಟುವುದಕ್ಕೂ ಅವಕಾಶವಿಲ್ಲ!

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಮಹಿಳೆಯರು ಹೂವನ್ನು ಮುಡಿಯುವುದಿಲ್ಲ! ಏಕೆ ಗೊತ್ತಾ?
In Tirupati Women Do Not Put Flowers In the head Know Why in Kannada
ಸಾಧು ಶ್ರೀನಾಥ್​
|

Updated on:Jul 09, 2024 | 4:35 AM

Share

ಭಕ್ತರು ಸಾಮಾನ್ಯವಾಗಿ ದೇವಾಲಯಗಳಿಗೆ ಭೇಟಿ ನೀಡಿದಾಗ ಸಾಂಪ್ರದಾಯಿಕ ಬಟ್ಟೆಗಳನ್ನು ಧರಿಸುತ್ತಾರೆ. ಅದರಲ್ಲೂ ಮಹಿಳೆಯರು ಈ ವಿಷಯದಲ್ಲಿ ಮುಂಚೂಣಿಯಲ್ಲಿರುತ್ತಾರೆ. ಹಣೆಗೆ ಕುಂಕುಮ, ತಲೆಗೆ ಹೂವು ಇಡುವುದನ್ನು ಕಡ್ಡಾಯವಾಗಿ ಪಾಲಿಸುತ್ತಾರೆ. ಆದರೆ ಶ್ರೀ ವೆಂಕಟೇಶ್ವರ ಸ್ವಾಮಿಯ ಪುಣ್ಯಕ್ಷೇತ್ರ ತಿರುಮಲದಲ್ಲಿ ಮಹಿಳೆಯರು ಹೂ ಮುಡಿಯಬಾರದು ಎಂಬ ನಿಯಮವಿದೆ ಗೊತ್ತಾ? ಪ್ರತಿ ವರ್ಷ ಕೋಟ್ಯಂತರ ಭಕ್ತರು ಭೂವೈಕುಂಠ ತಿರುಮಲಕ್ಕೆ ಭೇಟಿ ನೀಡಿ, ತಿಮ್ಮಪ್ಪನ ದರ್ಶನ ಪಡೆಯುತ್ತಾರೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಿಂದ ನಿತ್ಯ ಸಾವಿರಾರು ಭಕ್ತರು ಏಳು ಬೆಟ್ಟಗಳ ಒಡೆಯ ವೆಂಕಣ್ಣನ ದರ್ಶನಕ್ಕೆ ಆಗಮಿಸುತ್ತಾರೆ (No Flowers for Women in Tirupati). ತಿರುಮಲಕ್ಕೆ ಭಾರತ ಮಾತ್ರವಲ್ಲದೆ ವಿದೇಶಗಳಿಂದಲೂ ಭಕ್ತರು ಬರುತ್ತಾರೆ. ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದಿನಗಟ್ಟಲೆ ಗೋವಿಂದಾ.. ಲಕ್ಷ್ಮೀ ವಲ್ಲಭ ಎಂದು ಸ್ತುತಿಸುತ್ತಾರೆ (Spiritual ).

ತಿರುಮಲದಲ್ಲಿ ಪ್ರತಿದಿನ ಶ್ರೀವೆಂಕಟೇಶ್ವರನಿಗೆ ವಿಶೇಷ ಪೂಜೆಗಳು, ಅರ್ಚನೆಗಳು ಮತ್ತು ಅಭಿಷೇಕಗಳನ್ನು ಮಾಡಲಾಗುತ್ತದೆ. ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ವಿವಿಧ ಅಲಂಕಾರಗಳಲ್ಲಿ ಭಕ್ತರಿಗೆ ಕಾಣಿಸಿಕೊಳ್ಳುತ್ತಾನೆ. ಆದ್ದರಿಂದಲೇ ಮಹಾವಿಷ್ಣುನನ್ನು ಬಹು ಅಲಂಕಾರ ಪ್ರಿಯ ಎಂದು ಕರೆಯುತ್ತಾರೆ. ಶ್ರೀಹರಿಯನ್ನು ಹೂವಿನ ಪ್ರೇಮಿ ಎಂದೂ ಕರೆಯುವುದುಂಟು.

Also Read:  ಇಂದಿರಾ ಗಾಂಧಿ ಜೈಪುರದ ಜೈಗಢ ಕೋಟೆಯಲ್ಲಿ ‘ಎಮರ್ಜೆನ್ಸಿ’ ನಿಧಿ ಶೋಧ ನಡೆಸಿದಾಗ ಸಿಕ್ಕಿದ್ದೆಷ್ಟು? ಪಾಕಿಸ್ತಾನದ ಕ್ಯಾತೆ ಏನಿತ್ತು? ಮೂಲ ಎಲ್ಲಿತ್ತು?

ತಿರುಮಲವೆಂದರೆ ಹೂವಿನ ಮಂಟಪ… ಹಾಗಾಗಿ ಭಕ್ತರು ಹೂವನ್ನು ಮುಟ್ಟುವುದಕ್ಕೂ ಅವಕಾಶವಿಲ್ಲ!

ಪುರಾಣಗಳಲ್ಲಿ ತಿರುಮಲವನ್ನು ಹೂವಿನ ಮಂಟಪ ಎಂದೇ ಹೆಸರಿಸಲಾಗಿದೆ. ತಿರುಮಲ ಹೂವಿನ ಮಂಟಪವಾಗಿರುವುದರಿಂದ ಶ್ರೀಹರಿಯು ಹೂವಿನ ಅಲಂಕಾರ ಪ್ರಿಯನಾಗಿರುವುದರಿಂದ ನಿತ್ಯವೂ ಭಗವಂತನಿಗೆ ಟನ್ ಗಟ್ಟಲೆ ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಗುತ್ತದೆ. ಬ್ರಹ್ಮೋತ್ಸವದ ಸಂದರ್ಭದಲ್ಲಿ ಗೋವಿಂದ ನೂರಾರು ಅಲಂಕಾರಗಳಲ್ಲಿ ಭಕ್ತರನ್ನು ಪುಳಕಿತಗೊಳಿಸುತ್ತಾನೆ. ತಿರುಮಲದಲ್ಲಿ ಅರಳುವ ಪ್ರತಿಯೊಂದು ಹೂವು ಶ್ರೀ ಮನ್ನಾರಾಯಣನಿಗೆ ಸಮರ್ಪಿತವಾಗಿದೆ ಎಂದು ಜನರು ಮತ್ತು ಭಕ್ತರು ನಂಬುತ್ತಾರೆ.

Also Read: Political Crime Thriller – ಭಾರತದ ಚೊಚ್ಚಲ ಲೈಂಗಿಕ ಹಗರಣದಿಂದಾಗಿ ಆ ನಾಯಕನಿಗೆ ಪ್ರಧಾನಿ ಖುರ್ಚಿ ಜಸ್ಟ್​​ ಮಿಸ್​ ಆಗಿತ್ತು! ಸಂಜಯ್​ ಗಾಂಧಿ ‘ಕೈ’ವಾಡ ಏನಿತ್ತು?

ಅದಕ್ಕಾಗಿಯೇ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಭಗವಂತನ ದರ್ಶನಕ್ಕೆ ಬರುವ ಯಾವುದೇ ಭಕ್ತರಾಗಲಿ ಹೂವುಗಳನ್ನು ಮುಟ್ಟಬಾರದು ಎಂಬ ನಿಯಮ ಆಚರಣೆಯಲ್ಲಿದೆ. ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ Tirumala Tirupati Devasthanam -TTD) ಆಡಳಿತ ಮಂಡಲಿಯು ಇದನ್ನು ಕಡ್ಡಾಯವಾಗಿ ಜಾರಿಗೆ ತಂದಿದೆ. ಈ ಕಾರಣದಿಂದಲೇ ಸ್ವಾಮಿಯ ದರ್ಶನಕ್ಕೆ ಬರುವ ಮಹಿಳೆಯರು ತಲೆಯಲ್ಲಿ ಹೂ ಮುಡಿಯುವುದಿಲ್ಲ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

(ಗಮನಿಸಿ: ಈ ಲೇಖನವು ರೂಢಿಗತ, ಜನಪ್ರಿಯ ನಂಬಿಕೆಗಳನ್ನು ಆಧರಿಸಿದೆ. ಈ ಸುದ್ದಿಯಲ್ಲಿ ಒಳಗೊಂಡಿರುವ ಮಾಹಿತಿ ಮತ್ತು ಸತ್ಯಗಳ ನಿಖರತೆಗೆ ಟಿವಿ9 ಜವಾಬ್ದಾರರಾಗಿರುವುದಿಲ್ಲ)

Published On - 4:34 am, Tue, 9 July 24

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​