Sign In

By signing in or creating an account, you agree with Associated Broadcasting Company's Terms & Conditions and Privacy Policy.

Sabarimala Ayyappa Swamy Temple: ಹದಿನೆಂಟು ಮೆಟ್ಟಿಲುಗಳನ್ನು ಏರಿ ಮಲೆಯಲ್ಲಿ ನೆಲೆ ನಿಂತ ಅಯ್ಯಪ್ಪಸ್ವಾಮಿ ಜನ್ಮ ರಹಸ್ಯ

ಕೇರಳ ರಾಜ್ಯದ ಪತನಂತಿಟ್ಟ ಜಿಲ್ಲೆಯ ಪೆರುನಾಡ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೆಲೆ ನಿಂತಿರುವ ಅಯ್ಯಪ್ಪ ಸ್ವಾಮಿ ತನ್ನ ಅಪರೂಪದ ಮಹಾ ಪವಾಡದಿಂದ ಜಗತ್ ಪ್ರಸಿದ್ಧ.

Sabarimala Ayyappa Swamy Temple: ಹದಿನೆಂಟು ಮೆಟ್ಟಿಲುಗಳನ್ನು ಏರಿ ಮಲೆಯಲ್ಲಿ ನೆಲೆ ನಿಂತ ಅಯ್ಯಪ್ಪಸ್ವಾಮಿ ಜನ್ಮ ರಹಸ್ಯ
ಅಯ್ಯಪ್ಪಸ್ವಾಮಿ
Follow us
TV9 Web
| Updated By: ಆಯೇಷಾ ಬಾನು

Updated on: Jan 01, 2023 | 7:00 AM

ವಿಶ್ವ ವಿಖ್ಯಾತ, ದೇವರ ನಾಡಿನ ಅಯ್ಯಪ್ಪ ಸ್ವಾಮಿ ದೇವಾಲಯವೇ(Sabarimala Ayyappa Swamy Temple) ಒಂದು ವಿಸ್ಮಯ. ‘ಸ್ವಾಮಿಯೇ ಶರಣಂ ಅಯ್ಯಪ್ಪ'(Swamiye Saranam Ayyappa) ಎಂದು ದೀನವಾಗಿ ಕೂಗುತ್ತ ಹದಿನೆಂಟು ಮೆಟ್ಟಿಲುಗಳನ್ನು ಏರಿ ಮಲೆಯಲ್ಲಿ ನೆಲೆಯಾಗಿರುವ ಅಯ್ಯಪ್ಪ ಸ್ವಾಮಿಯನ್ನು ಕಾಣಲು ಇಲ್ಲಿಗೆ ಭಕ್ತರು ಒಂದು ಹೊತ್ತಿನ ಊಟ, ತಣ್ಣೀರು ಸ್ನಾನ, ಮಂಡಲ ವ್ರತ.. ಹೀಗೆ ಶ್ರದ್ಧಾ ಭಕ್ತಿಯಿಂದ ಮಡಿ ಮೈಲಿಗೆಯಲ್ಲಿ ಮಾಲೆ ಹಾಕಿ ಬರುತ್ತಾರೆ. ಆದ್ರೆ ಈ ದೇವಸ್ಥಾನಕ್ಕೆ ಹೆಣ್ಣು ಮಕ್ಕಳಿಗೆ ಪ್ರವೇಶವಿಲ್ಲ. ಬನ್ನಿ ಈ ದೇವಾಲಯದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಯನ್ನು ತಿಳಿಯಿರಿ.

ಹರಿಹರ ಸುತ ಅಯ್ಯಪ್ಪ

ಕೇರಳ ರಾಜ್ಯದ ಪತನಂತಿಟ್ಟ ಜಿಲ್ಲೆಯ ಪೆರುನಾಡ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೆಲೆ ನಿಂತಿರುವ ಅಯ್ಯಪ್ಪ ಸ್ವಾಮಿ ತನ್ನ ಅಪರೂಪದ ಮಹಾ ಪವಾಡದಿಂದ ಜಗತ್ ಪ್ರಸಿದ್ಧ. ಧಾರ್ಮಿಕ ದಂತಕಥೆಯ ಪ್ರಕಾರ, ಸಾಗರ ಮಂಥನದ ಸಮಯದಲ್ಲಿ, ಭೋಲೇನಾಥ್ ಶಿವನು, ಭಗವಾನ್ ವಿಷ್ಣುವಿನ ಮೋಹಿನಿ ರೂಪದಿಂದ ಆಕರ್ಷಿತರಾಗುತ್ತಾರೆ. ಈ ಕಾರಣದಿಂದಾಗಿ, ಹರಿಹರನ ಮಿಲನದ ಸಂಕೇತವಾಗಿ ಒಂದು ಮಗು ಜನಿಸಿತು. ಆ ಮಗುವನ್ನು ಪಂಪಾ ನದಿಯ ತೀರದಲ್ಲಿ ಬಿಡಲಾಗುತ್ತದೆ. ಈ ಸಮಯದಲ್ಲಿ, ರಾಜ ರಾಜಶೇಖರ ಅವರನ್ನು 12 ವರ್ಷಗಳ ಕಾಲ ಬೆಳೆಸಿದರು. ಈ ಮಗುವೇ ನಂತರ ಅಯ್ಯಪ್ಪ ಸ್ವಾಮಿ ಎಂದು ಕರೆಯಲ್ಪಟ್ಟರು.

ayyappa swamy temple (1)

ಅಯ್ಯಪ್ಪ ಸನ್ನಿಧಿಯಲ್ಲಿ ಮಹಿಳೆಯರಿಗೆ ಪ್ರವೇಶವಿಲ್ಲ

ಅಯ್ಯಪ್ಪ ಸ್ವಾಮಿ ಬ್ರಹ್ಮಚಾರಿ ಮತ್ತು ತಪಸ್ವಿಯಾಗಿದ್ದರು. ಅದಕ್ಕಾಗಿಯೇ ಅವರ ದರ್ಶನಕ್ಕೆ 10 ರಿಂದ 50 ವರ್ಷ ವಯಸ್ಸಿನ ಹುಡುಗಿಯರು ಮತ್ತು ಮಹಿಳೆಯರಿಗೆ ದೇವಸ್ಥಾನಕ್ಕೆ ಪ್ರವೇಶಿಸಲು ಅವಕಾಶವಿಲ್ಲ.  ಆದ್ರೆ ಈ ಹಿಂದೆ ಸುಪ್ರೀಂ ಕೋರ್ಟ್​ ಮಹಿಳೆಯರಿಗೆ ಪ್ರವೇಶ ನೀಡಬೇಕೆಂದು ತೀರ್ಪು ನೀಡಿತ್ತು. ಆದ್ರೆ ಈ ತೀರ್ಪು ಅನೇಕ ಹೋರಾಟ, ಹಿಂಸೆಗೆ ಕಾರಣವಾಯಿತು. ಇದಾದ ಬಳಿಕ ಮಹಿಳೆಯರ ಪ್ರವೇಶದ ತೀರ್ಪು ಪ್ರಶ್ನಿಸಿ ಧ್ವನಿಗಳೆದ್ದವು. ಹೀಗಾಗಿ ಇದರ ಮರು ಪರಿಶೀಲನೆಗೆ ಬೇಡಿಕೆ ಹೆಚ್ಚಾಗಿ ಈ ತೀಪಿನ ಬಗ್ಗೆ ಇನ್ನೂ ಕೂಡ ಚರ್ಚೆಗಳು ನಡೆಯುತ್ತಿವೆ.

ಇದನ್ನೂ ಓದಿ: ಅಯ್ಯಪ್ಪ ಸ್ವಾಮಿ ಭಕ್ತರಿಂದ ಪುನೀತ್ ರಾಜ್‌ಕುಮಾರ್ ಭಾವಚಿತ್ರಕ್ಕೆ ಪೂಜೆ; ಇಲ್ಲಿದೆ ವಿಡಿಯೋ

ಮಕರ ಸಂಕ್ರಾಂತಿಯ ರಾತ್ರಿ ಆಕಾಶದಲ್ಲಿ ಬೆಳಕು

ಇನ್ನು ಇಲ್ಲಿ ನಡೆಯುವ ಮತ್ತೊಂದು ವಿಸ್ಮಯವೆಂದರೆ ಇಲ್ಲಿ ಮಕರ ಸಂಕ್ರಾಂತಿಯ ರಾತ್ರಿ ಅಯ್ಯಪ್ಪ ಸ್ವಾಮಿಯ ದೇವಸ್ಥಾನದ ಬಳಿ ಆಕಾಶದಲ್ಲಿ ಒಂದು ಬೆಳಕು ಗೋಚರಿಸುತ್ತದೆ. ದಟ್ಟ ಕತ್ತಲೆಯಲ್ಲೂ ಬೆಳಕು ಪ್ರಕಾಶಮಾನವಾಗಿ ಬೆಳಗುತ್ತಿರುತ್ತದೆ. ಈ ಬೆಳಕನ್ನು ನೋಡಿದಾಗಲೆಲ್ಲಾ ಅದರ ಜೊತೆಯಲ್ಲಿ ಶಬ್ದವೂ ಕೇಳಿಸುತ್ತದೆ.

ayyappa swamy temple (2)

ದೇವಾಲಯದ ಆಡಳಿತದ ಅರ್ಚಕರ ಪ್ರಕಾರ, ಮಕರ ತಿಂಗಳ ಮೊದಲ ದಿನ ಆಕಾಶದಲ್ಲಿ ಕಾಣುವ ವಿಶೇಷ ನಕ್ಷತ್ರವನ್ನೇ ಮಕರ ಜ್ಯೋತಿ ಎಂದು ಕರೆಯಲಾಗುತ್ತದೆ. ನಮ್ಮ ಆಕಾಶದಲ್ಲಿ ಗೋಚರಿಸುವ ಸೂರ್ಯನ ನಂತರ ಮಕರ ಜ್ಯೋತಿ ಎರಡನೇ ಪ್ರಕಾಶಮಾನವಾದ ನಕ್ಷತ್ರವಾಗಿದೆ, ಇದರ ಬೆಳಕು ಅದ್ಭುತವಾಗಿ ಗೋಚರಿಸುತ್ತದೆ. ಆದರೆ ಭಕ್ತರು ಹೇಳುವ ಪ್ರಕಾರ, ಇದು ನಕ್ಷತ್ರವಾಗಿದ್ದರೆ ಇಡೀ ಪ್ರಪಂಚಕ್ಕೆ ಕಾಣಿಸಬೇಕಾಗಿತ್ತು, ಆದರೆ ಕೇವಲ ಇಲ್ಲಿ ಮಾತ್ರ ಯಾಕೆ ಕಾಣಿಸುತ್ತದೆ ಎಂದು ಪ್ರಶ್ನೆಯನ್ನು ಮಾಡುತ್ತಾರೆ. ಇಂದಿಗೂ ಕೂಡ ಇದು ಇಲ್ಲಿ ರಹಸ್ಯವಾಗಿಯೇ ಉಳಿದಿದೆ.

ಹಣೆಗೆ ವಿಭೂತಿ ಅಥವಾ ಚಂದನವನ್ನು ಹಚ್ಚಿಕೊಂಡು, ಮುಖ ಕ್ಷೌರವನ್ನು ಮಾಡಿಸದೆ, ಬೆಳಗ್ಗೆ ಮತ್ತು ಸಂಜೆ ತಣ್ಣೀರಿನಲ್ಲಿ ಸ್ನಾನ ಮಾಡುತ್ತ ಅಯ್ಯಪ್ಪನ ಆರಾಧನೆ ಮಾಡುವ ಭಕ್ತರು ಸಂಕ್ರಾಂತಿ ಸಮಯದಲ್ಲಿ ಎಲ್ಲರೂ ತಂಡ ತಂಡವಾಗಿ ಗುರುಸ್ವಾಮಿ ಎಂದು ಕರೆಯುವ ನಾಯಕನ ನೇತೃತ್ವದಲ್ಲಿ ಶಬರಿಮಲೆಗೆ ಬಂದು ತಲುಪುತ್ತಾರೆ.

ಮತ್ತಷ್ಟು ಅಧ್ಯಾತ್ಮಿಕ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?