AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshaya Tritiya 2023: ಅಕ್ಷಯ ತೃತೀಯ ಹಬ್ಬವು ಏ. 22 ಅಥವಾ 23 ಯಾವಾಗ? ಹಬ್ಬದ ಶುಭ ಮುಹೂರ್ತ, ಚಿನ್ನ ಖರೀದಿಸಲು ಮಂಗಳಕರ ಸಮಯ

Akshaya Tritiya: ಅಕ್ಷಯ ತೃತೀಯ ದಿನದಂದು ಪ್ರಾರಂಭಗೊಳ್ಳುವ ಯಾವುದೇ ಕಾರ್ಯವು ಯಾವಾಗಲು ಯಶಸ್ವಿಯಾಗುತ್ತದೆ ಎಂಬ ನಂಬಿಕೆಯಿದೆ. ಮತ್ತು ಈ ದಿನ ಚಿನ್ನ ಮತ್ತು ಆಸ್ತಿಯನ್ನು ಖರೀದಿಸುವುದು ಭವಿಷ್ಯದಲ್ಲಿ ಅದು ಸಮೃದ್ಧಿ ಮತ್ತು ಸಂಪತ್ತನ್ನು ತರುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಈ ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಲು ಮಂಗಳಕರ ಸಮಯ ಯಾವುದು, ಶುಭ ಮುಹೂರ್ತ ಯಾವಾಗ ಎಂಬೆಲ್ಲ ವಿಚಾರಗಳನ್ನು ತಿಳಿಯಿರಿ.

Akshaya Tritiya 2023: ಅಕ್ಷಯ ತೃತೀಯ ಹಬ್ಬವು ಏ. 22 ಅಥವಾ 23 ಯಾವಾಗ? ಹಬ್ಬದ ಶುಭ ಮುಹೂರ್ತ, ಚಿನ್ನ ಖರೀದಿಸಲು ಮಂಗಳಕರ ಸಮಯ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on:Apr 20, 2023 | 3:39 PM

Share

ಅಖಾ ತೀಜ್ ಎಂದು ಕರೆಯಲ್ಪಡುವ ಅಕ್ಷಯ ತೃತೀಯ ಹಬ್ಬವು ಹಿಂದೂ ಮತ್ತು ಜೈನರ ಪವಿತ್ರ ಹಬ್ಬಗಳಲ್ಲಿ ಒಂದಾಗಿದೆ. ಇದನ್ನು ಶುಕ್ಷ ಪಕ್ಷ ತೃತೀಯದಂದು ಆಚರಿಸಲಾಗುತ್ತದೆ ಈ ಹಬ್ಬವನ್ನು ಹೊಸ ಆರಂಭಗಳಿಗೆ ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗಿದೆ. ದೃಕ್ ಪಂಚಾಂಗದ ಪ್ರಕಾರ ಅಕ್ಷಯ ಎಂದರೆ ‘ಎಂದಿಗೂ ಕಡಿಮೆಯಾಗುವುದಿಲ್ಲ’ ಎಂದರ್ಥ. ಈ ದಿನದಂದು ಯಾವುದೇ ಹೊಸ ಉದ್ಯಮ, ವ್ಯಾಪಾರ ಮತ್ತು ಕಟ್ಟಡ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಿದರೆ ಅದು ಸಮೃದ್ಧವಾಗುತ್ತದೆ ಹಾಗೂ ಈ ದಿನದಂದು ಚಿನ್ನ ಮತ್ತು ಆಸ್ತಿಯನ್ನು ಖರೀದಿಸುವುದು ಭವಿಷ್ಯದಲ್ಲಿ ಸಮೃದ್ಧಿ ಮತ್ತು ಸಂಪತ್ತನ್ನು ತರುತ್ತದೆ ಎಂದು ನಂಬಲಾಗಿದೆ. ಈ ದಿನದಂದು ಭಗವಾನ್ ವಿಷ್ಣುವನ್ನು ಪೂಜಿಸುವುದು ಪ್ರಮುಖ ಆಚರಣೆಗಳಲ್ಲಿ ಒಂದಾಗಿದೆ.

ಅಕ್ಷಯ ತೃತೀಯ ಹಬ್ಬ ಏಪ್ರಿಲ್ 22 ಅಥವಾ 23 ಯಾವಾಗ?

ಈ ವರ್ಷ ಅಕ್ಷಯ ತೃತೀಯ ಏಪ್ರಿಲ್ 22 ಕ್ಕೆ ಅಥವಾ 23 ರಂದು ನಡೆಯುತ್ತದೆಯೋ ಎಂಬ ಗೊಂದಲ ಅನೇಕರಲ್ಲಿ ಇದೆ. ದೃಕ್ ಪಂಚಾಂಗದ ಪ್ರಕಾರ, ಏಪ್ರಿಲ್ 22 ರಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಕ್ಷಯ ತೃತೀಯ ತಿಥಿಯು ಏಪ್ರಿಲ್ 22 ರಂದು ಬೆಳಗ್ಗೆ 7:49 ಕ್ಕೆ ಪ್ರಾರಂಭವಾಗಿ ಏಪ್ರಿಲ್ 23 ಬೆಳಗ್ಗೆ 7.47 ಕ್ಕೆ ಕೊನೆಗೊಳ್ಳುತ್ತದೆ.

ಅಕ್ಷಯ ತೃತೀಯ ಶುಭ ಮುಹೂರ್ತ:

ಅಕ್ಷಯ ತೃತೀಯ ಪೂಜೆಯ ಶುಭ ಮುಹೂರ್ತವು ಬೆಳಗ್ಗೆ 7:49 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಮಧ್ಯಾಹ್ನ 12:20 ಕ್ಕೆ ಕೊನೆಗೊಳ್ಳುತ್ತದೆ. ಹೆಚ್ಚುವರಿಯಾಗಿ ಚೋಗಾಡಿಯಾ ಮುಹೂರ್ತವು ಬೆಳಗ್ಗೆ 7:49 ಕ್ಕೆ ಪ್ರಾರಂಭವಾಗಿ ಬೆಳಗ್ಗೆ 9:04 ಕ್ಕೆ ಕೊನೆಗೊಳ್ಳುತ್ತದೆ. ಏಪ್ರಿಲ್ 23 ರಂದು ಇದು ಬೆಳಗ್ಗೆ 7:26 ಕ್ಕೆ ಪ್ರಾರಂಭವಾಗಿ ಅದೇ ದಿನ ಬೆಳಗ್ಗೆ 7:47 ಕ್ಕೆ ಕೊನೆಗೊಳ್ಳುತ್ತದೆ.

ಇದನ್ನೂ ಓದಿ: Akshaya Tritiya 2023: ಅಕ್ಷಯವಾಗಲಿ ಈ ಅಕ್ಷಯ ತೃತೀಯ, ಅಂದು ಬದರಿ ನಾರಾಯಣ ದೇವಾಲಯದ ದ್ವಾರ ತೆರೆಯುವುದು

ಅಕ್ಷಯ ತೃತೀಯದಲ್ಲಿ ಚಿನ್ನ ಖರೀದಿಸಲು ಶುಭ ಸಮಯ:

ದೃಕ್ ಪಂಚಾಂಗದ ಪ್ರಕಾರ ಚಿನ್ನವನ್ನು ಖರೀದಿಸಲು ಶುಭ ಮುಹೂರ್ತವು ಏಪ್ರಿಲ್ 22 ರಂದು ಬೆಳಗ್ಗೆ 7:49 ಕ್ಕೆ ಪ್ರಾರಂಭವಾಗಿ ಏಪ್ರಿಲ್ 23 ರಂದು ಬೆಳಗ್ಗೆ 5:48 ಕ್ಕೆ ಕೊನೆಗೊಳ್ಳುತ್ತದೆ.

ಅಕ್ಷಯ ತೃತೀಯ ಹಬ್ಬದ ನಗರವಾರು ಪೂಜೆಯ ಸಮಯ:

ನವದೆಹಲಿ – ಬೆಳಿಗ್ಗೆ 7:49 ರಿಂದ ಮಧ್ಯಾಹ್ನ 12:20 ರವರೆಗೆ, ಪುಣೆ – 7:49 ರಿಂದ 12:33 ರವರೆಗೆ, ಚೆನ್ನೈ – ಬೆಳಿಗ್ಗೆ 7:49 ರಿಂದ ಮಧ್ಯಾಹ್ನ 12:08 ರವರೆಗೆ, ಕೋಲ್ಕತ್ತಾ – ಬೆಳಿಗ್ಗೆ 5:10 ರಿಂದ 07:47 ರವರೆಗೆ, ಹೈದರಾಬಾದ್ – ಬೆಳಿಗ್ಗೆ 7:49 ರಿಂದ ಮಧ್ಯಾಹ್ನ 12:15 ರವರೆಗೆ, ಅಹಮದಾಬಾದ್ – 7:49 ರಿಂದ 12:38 ರವರೆಗೆ, ನೋಯ್ಡಾ – ಬೆಳಿಗ್ಗೆ 7:49 ರಿಂದ ಮಧ್ಯಾಹ್ನ 12:19 ರವರೆಗೆ, ಜೈಪುರ – ಬೆಳಿಗ್ಗೆ 7:49 ರಿಂದ 12:26 ರವರೆಗೆ, ಮುಂಬೈ – 7:49 ರಿಂದ 12:37 ರವರೆಗೆ, ಬೆಂಗಳೂರು – ಬೆಳಿಗ್ಗೆ 7:49 ರಿಂದ ಮಧ್ಯಾಹ್ನ 12:18 ರವರೆಗೆ, ಚಂಡೀಗಢ – ಬೆಳಗ್ಗೆ 7:49 ರಿಂದ 12:22 ರವರೆಗೆ.

ಆಧ್ಯಾತ್ಮ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:22 pm, Thu, 20 April 23

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!