AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳು ಎಲೆ-ಅಡಿಕೆ ಸೇವನೆ ಏಕೆ ಮಾಡಬಾರದು? ಮಾಹಿತಿ ಇಲ್ಲಿದೆ

ಬಸವರಾಜ ಗುರೂಜಿ ಅವರು ವಿದ್ಯಾರ್ಥಿಗಳು ತಾಂಬೂಲ ಸೇವನೆಯನ್ನು ತಪ್ಪಿಸಬೇಕೆಂದು ಸಲಹೆ ನೀಡುತ್ತಾರೆ. ಪ್ರಾಚೀನ ಶಾಸ್ತ್ರಗಳಲ್ಲಿ "ಛಾತ್ರೈ ತಾಂಬೂಲಂ ನಭಕ್ಷಣೀಯಂ" ಎಂಬ ಶ್ಲೋಕವಿದೆ. ತಾಂಬೂಲದಲ್ಲಿರುವ ಸುಣ್ಣ, ಅಡಿಕೆ ಮುಂತಾದ ಪದಾರ್ಥಗಳು ವಿದ್ಯಾರ್ಥಿಗಳ ಮನಸ್ಸನ್ನು ವಿಚಲಿತಗೊಳಿಸಬಹುದು ಮತ್ತು ಅವರ ಅಧ್ಯಯನದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ನಂಬಲಾಗಿದೆ. ಆದರೆ ಗೃಹಸ್ಥರು ಮತ್ತು ವಯಸ್ಕರಿಗೆ ಯಾವುದೇ ನಿರ್ಬಂಧವಿಲ್ಲ.

ವಿದ್ಯಾರ್ಥಿಗಳು ಎಲೆ-ಅಡಿಕೆ ಸೇವನೆ ಏಕೆ ಮಾಡಬಾರದು? ಮಾಹಿತಿ ಇಲ್ಲಿದೆ
ತಾಂಬೂಲ
ಅಕ್ಷತಾ ವರ್ಕಾಡಿ
|

Updated on: Mar 11, 2025 | 10:52 AM

Share

ಸಾಮಾನ್ಯವಾಗಿ ಊಟ ಆದ ಬಳಿಕ ವೀಳ್ಯದೆಲೆ -ಅಡಿಕೆ ತಿನ್ನುತ್ತಾರೆ. ಮದುವೆ, ಮುಂಜಿ ಇರಲಿ, ನಾಮಕರಣ, ಪೂಜೆ ಇರಲಿ ವೀಳ್ಯದೆಲೆ ಇಲ್ಲದೆ ಯಾವ ಶುಭ ಸಮಾರಂಭವೂ ನಡೆಯುವುದಿಲ್ಲ. ವೀಳ್ಯದೆಲೆಯನ್ನು ತಾಂಬೂಲ, ತಮಲಪಾಕು, ನಾಗವಲ್ಲಿ, ನಾಗರಬೆಲ್ ಎಂದು ಸಹ ಕರೆಯುತ್ತಾರೆ. ವೀಳ್ಯದೆಲೆಯನ್ನು ಊಟದ ನಂತರ ಉಪಹಾರವಾಗಿ ಬಳಸಲಾಗುತ್ತದೆ. ಪರಿಮಳಯುಕ್ತ ಸುವಾಸೆಯು ನೈಸರ್ಗಿಕ ಮೌತ್ ಫ್ರೆಶ್ನರ್ ಆಗಿ ಸಹ ಕಾರ್ಯನಿರ್ವಹಿಸುತ್ತದೆ.

ವಿದ್ಯಾರ್ಥಿಗಳು ತಾಂಬೂಲ ಚವಣ ಮಾಡುವುದು ನಿಷಿದ್ಧ ಎಂದು ಖ್ಯಾತ ಜ್ಯೋತಿಷಿಗಳಾದ ಬಸವರಾಜ ಗುರೂಜಿಯವರು ಹೇಳುತ್ತಾರೆ. ಆದರೆ ವಿದ್ಯಾರ್ಥಿಗಳು ತಾಂಬೂಲ ಅಥವಾ ವೀಳ್ಯದೆಲೆಯನ್ನು ಏಕೆ ತಿನ್ನಬಾರದು ಎಂದು ನಿಮಗೆ ತಿಳಿದಿದೆಯೇ? ತಿಳಿದಿಲ್ಲವೆಂದರೆ ಬಸವರಾಜ ಗುರೂಜಿಯವರು ನೀಡಿರುವ ಸಂಪೂರ್ಣ ವಿವರಗಳು ಈ ವಿಡಿಯೋದಲ್ಲಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹೋಳಿ ಹಬ್ಬದಂದೇ ಚಂದ್ರಗ್ರಹಣ; ಈ 4 ರಾಶಿಯವರು ಜಾಗರೂಕರಾಗಿರಿ!

ಗುರೂಜಿ ಹೇಳುವಂತೆ, ಪ್ರಾಚೀನ ಶಾಸ್ತ್ರಗಳಲ್ಲಿ, “ಛಾತ್ರೈ ತಾಂಬೂಲಂ ನಭಕ್ಷಣೀಯಂ” ಎಂಬ ಶ್ಲೋಕವಿದೆ, ಈ ಶ್ಲೋಕ ವಿದ್ಯಾರ್ಥಿಗಳು ತಾಂಬೂಲವನ್ನು ತಿನ್ನಬಾರದು ಎಂಬ ಅರ್ಥವನ್ನು ನೀಡುತ್ತದೆ. ಇದಕ್ಕೆ ಕಾರಣ, ತಾಂಬೂಲದಲ್ಲಿರುವ ವಿವಿಧ ಪದಾರ್ಥಗಳಾದ ಸುಣ್ಣ, ಅಡಿಗೆ ಇತ್ಯಾದಿ. ಇದು ವಿದ್ಯಾರ್ಥಿಗಳ ಮನಸ್ಸನ್ನು ವಿಚಲಿತಗೊಳಿಸಬಹುದು ಮತ್ತು ಅವರ ಅಧ್ಯಯನದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ನಂಬಲಾಗಿದೆ. ಇದಲ್ಲದೇ ಎಲೆ ಅಡಿಕೆ ತಿನ್ನುವುದರಿಂದ ಕಾಮೋದ್ರೇಕ ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ. ಆದಾಗ್ಯೂ, ಗೃಹಸ್ಥರು ಮತ್ತು ವಯಸ್ಕರಿಗೆ ತಾಂಬೂಲ ಸೇವನೆಯಲ್ಲಿ ಯಾವುದೇ ನಿರ್ಬಂಧಗಳಿಲ್ಲ ಎಂದು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಸಲಹೆ ನೀಡುತ್ತಾರೆ.

ಮತ್ತಷ್ಟು ಅಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ