Jaya Ekadashi 2024: ಜೀವನದಲ್ಲಿ ಯಶಸ್ಸನ್ನು ಪಡೆಯಲು ಜಯ ಏಕಾದಶಿಯಂದು ಈ ರೀತಿ ಮಾಡಿ

ಮಾಘ ಮಾಸದ ಶುಕ್ಲ ಪಕ್ಷದ ಏಕಾದಶಿ ದಿನವನ್ನು ಜಯ ಏಕಾದಶಿ ಎಂದು ಕರೆಯಲಾಗುತ್ತದೆ. ಈ ವರ್ಷ ಜಯ ಏಕಾದಶಿಯನ್ನು ಫೆಬ್ರವರಿ 20 ರಂದು ಮಂಗಳವಾರ ಆಚರಿಸಲಾಗುತ್ತದೆ. ಈ ದಿನದಂದು, ವಿಷ್ಣುವನ್ನು ಪೂಜಿಸಲಾಗುತ್ತದೆ ಮತ್ತು ಉಪವಾಸವನ್ನು ಆಚರಿಸಲಾಗುತ್ತದೆ ಮತ್ತು ವ್ಯಕ್ತಿಯು ಪ್ರೇತಾತ್ಮಗಳ ಕಾಟದಿಂದ ಮುಕ್ತನಾಗುತ್ತಾನೆ ಎಂದು ನಂಬಲಾಗಿದೆ. ಅಲ್ಲದೆ ಈ ವ್ರತವನ್ನು ಭಕ್ತಿಯಿಂದ ಆಚರಿಸುವ ವ್ಯಕ್ತಿಯು ಬ್ರಾಹ್ಮಣ ಹತ್ಯಾ ಪಾಪದಿಂದಲೂ ಮುಕ್ತನಾಗಬಹುದು ಎಂದು ಹೇಳಲಾಗುತ್ತದೆ.

Jaya Ekadashi 2024: ಜೀವನದಲ್ಲಿ ಯಶಸ್ಸನ್ನು ಪಡೆಯಲು ಜಯ ಏಕಾದಶಿಯಂದು ಈ ರೀತಿ ಮಾಡಿ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Feb 19, 2024 | 6:28 PM

ವರ್ಷದಲ್ಲಿ ಬರುವ ಎಲ್ಲಾ ಏಕಾದಶಿಗಳಲ್ಲಿ, ಜಯ ಏಕಾದಶಿಯನ್ನು ವಿಶೇಷ ಮಹತ್ವವೆಂದು ಪರಿಗಣಿಸಲಾಗಿದೆ. ಈ ದಿನವನ್ನು ಆಚರಣೆ ಮಾಡುವುದರಿಂದ ಎಲ್ಲಾ ರೀತಿಯ ಪಾಪಗಳು ನಿವಾರಣೆಯಾಗಿ ಪುಣ್ಯ ಫಲ ಪ್ರಾಪ್ತಿಯಾಗುತ್ತದೆ. ಈ ದಿನ, ವಿಷ್ಣುವನ್ನು ಭಕ್ತಿಯಿಂದ ಪೂಜಿಸುವ ಮೂಲಕ ವಿವಿಧ ರೀತಿಯ ಆಚರಣೆಗಳನ್ನು ಪಾಲನೆ ಮಾಡಲಾಗುತ್ತದೆ. ಇನ್ನು ಈ ಬಾರಿ ಜಯ ಏಕಾದಶಿಯು ಫೆ. 20 ರಂದು ಆಚರಣೆ ಮಾಡಲಾಗುತ್ತಿದೆ. ಇನ್ನು ಈ ಏಕಾದಶಿಯ ಬಗ್ಗೆ ಧರ್ಮಗ್ರಂಥಗಳಲ್ಲಿಯೂ ಕೂಡ ವರ್ಣಿಸಲಾಗಿದ್ದು, ಅರಿಯದೆಯೇ ಮಾಡಿದ ತಪ್ಪುಗಳಿಗೂ ಪರಿಹಾರ ಸಿಗುತ್ತದೆ ಎನ್ನಲಾಗುತ್ತದೆ.

ಈ ಏಕಾದಶಿ ಉಪವಾಸವನ್ನು ಆಚರಿಸುವ ಮೂಲಕ, ವ್ಯಕ್ತಿಯು ಪ್ರೇತಾತ್ಮಗಳ ಕಾಟದಿಂದ ಮುಕ್ತನಾಗುತ್ತಾನೆ ಎಂದು ನಂಬಲಾಗಿದೆ. ಅಲ್ಲದೆ ಈ ವ್ರತವನ್ನು ಭಕ್ತಿಯಿಂದ ಆಚರಿಸುವ ವ್ಯಕ್ತಿಯು ಬ್ರಾಹ್ಮಣ ಹತ್ಯಾ ಪಾಪದಿಂದಲೂ ಮುಕ್ತನಾಗಬಹುದು ಎಂದು ಹೇಳಲಾಗುತ್ತದೆ.

ಹಿಂದೂ ಕ್ಯಾಲೆಂಡರ್ ಪ್ರಕಾರ, ಪ್ರತಿ ವರ್ಷ ಜಯ ಏಕಾದಶಿ ಉಪವಾಸವನ್ನು ಮಾಘ ತಿಂಗಳ ಶುಕ್ಲ ಪಕ್ಷದ ಏಕಾದಶಿ ದಿನದಂದು ಆಚರಿಸಲಾಗುತ್ತದೆ. ಈ ಏಕಾದಶಿಯಂದು ಉಪವಾಸ ಮಾಡುವ ಮೂಲಕ, ವಿಷ್ಣುವಿನ ಕೃಪೆಯಿಂದ ಜೀವನದಲ್ಲಿ ಎಲ್ಲಾ ರೀತಿಯ ಸಂತೋಷವನ್ನು ಪಡೆಯುತ್ತಾರೆ. ಪೌರಾಣಿಕ ನಂಬಿಕೆಗಳ ಪ್ರಕಾರ, ಈ ದಿನದಂದು ಪೂಜೆಯ ಜೊತೆಗೆ, ಕೆಲವು ಪರಿಹಾರಗಳನ್ನು ವಿಶೇಷವಾಗಿ ಫಲಪ್ರದವೆಂದು ಪರಿಗಣಿಸಲಾಗುತ್ತದೆ. ಜಯ ಏಕಾದಶಿ ದಿನದಂದು ಈ ಕ್ರಮಗಳನ್ನು ಅಳವಡಿಸಿಕೊಳ್ಳುವುದರಿಂದ ಉದ್ಯೋಗದಲ್ಲಿ ಬಡ್ತಿ ಮತ್ತು ತೊಂದರೆಗಳಿಂದ ಪರಿಹಾರ ಸಿಗುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಈ ಕ್ರಮಗಳ ಬಗ್ಗೆ ತಿಳಿದುಕೊಳ್ಳೋಣ..

ಇದನ್ನೂ ಓದಿ: ವೃಂದಾವನದ ನಿಧಿವನಕ್ಕೆ ಸಂಜೆಯ ನಂತರ ಪ್ರವೇಶ ನಿಷೇಧಿಸಿರುವುದೇಕೆ? ಇಲ್ಲಿದೆ ರಹಸ್ಯ ಮಾಹಿತಿ

-ಜಯ ಏಕಾದಶಿ ದಿನದಂದು, ವಿಷ್ಣುವಿನೊಂದಿಗೆ ಲಕ್ಷ್ಮೀ ದೇವಿಯನ್ನು ಪೂಜಿಸಿ. ಹೀಗೆ ಮಾಡುವುದರಿಂದ ಮನೆಯಲ್ಲಿ ಹಣದ ಕೊರತೆ ಬರುವುದಿಲ್ಲ ಜೊತೆಗೆ ಕೆಲಸದ ಸ್ಥಳದಲ್ಲಿ ಪ್ರಗತಿ ಇರುತ್ತದೆ.

-ಜಯ ಏಕಾದಶಿಯಂದು ವಿಷ್ಣುವನ್ನು ಮೆಚ್ಚಿಸಲು, ಅವನಿಗೆ ಹಳದಿ ಬಣ್ಣದ ಬಟ್ಟೆಗಳು, ಹೂವುಗಳು, ಹೂವಿನ ಹಾರ ಮತ್ತು ಹಣ್ಣುಗಳನ್ನು ಅರ್ಪಿಸಿ.

-ಈ ದಿನದಂದು ಹಸುವಿಗೆ ಮೇವು ನೀಡುವುದು ಬಹಳ ಫಲಪ್ರದವೆಂದು ಪರಿಗಣಿಸಲಾಗಿದೆ.

-ಭಗವಾನ್ ವಿಷ್ಣು ಅರಳಿ ಮರದಲ್ಲಿ ವಾಸಿಸುತ್ತಾನೆ ಎಂಬ ಧಾರ್ಮಿಕ ನಂಬಿಕೆ ಇದೆ. ಹಾಗಾಗಿ ಈ ಏಕಾದಶಿ ದಿನದಂದು, ಅರಳಿ ಮರವನ್ನು ಪೂಜಿಸಿ, ಅದಕ್ಕೆ ನೀರನ್ನು ಅರ್ಪಿಸಿ ಬಳಿಕ ತುಪ್ಪದ ದೀಪವನ್ನು ಬೆಳಗಿಸಿ. ಈ ದಿನ ಹೀಗೆ ಮಾಡುವುದರಿಂದ ಎಲ್ಲಾ ನಿಮ್ಮ ಸುಪ್ತ ಆಸೆಗಳು ಈಡೇರುತ್ತವೆ.

-ಜಯ ಏಕಾದಶಿ ದಿನದಂದು, ತುಳಸಿ ಎಲೆಗಳನ್ನು ಕೆಂಪು ಬಟ್ಟೆಯಲ್ಲಿ ಕಟ್ಟಿ ಮನೆಯಲ್ಲಿ ಸುರಕ್ಷಿತವಾಗಿ ಇರಿಸಿ ಮತ್ತು ನಂತರ ಏಕಾದಶಿ ಪೂಜೆಯ ನಂತರ, ಆ ಎಲೆಗಳನ್ನು ಲಕ್ಷ್ಮೀ ದೇವಿ ಮತ್ತು ವಿಷ್ಣುವಿನ ಪಾದಗಳಿಗೆ ಅರ್ಪಿಸಿ. ಇದರ ನಂತರ, ಈ ತುಳಸಿ ಎಲೆಗಳೊಂದಿಗೆ ಒಂದು ರೂಪಾಯಿ ನಾಣ್ಯವನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಅದನ್ನು ನಿಮ್ಮ ಪರ್ಸ್ ನಲ್ಲಿ ಇರಿಸಿ. ಇದು ಆರ್ಥಿಕ ಲಾಭವನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ.

ಜಯ ಏಕಾದಶಿಯಂದು ಈ ಮಂತ್ರಗಳನ್ನು ಪಠಿಸಿ;

-ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂ

ವಿಶ್ವಾಧಾರಂ ಗಗನ ಸದೃಶಂ ಮೇಘವರ್ಣಂ ಶುಭಾಂಗಂ

ಲಕ್ಷ್ಮೀಕಾಂತಂ ಕಮಲನಯನಂ ಯೋಗಿಬಿರ್ಧ್ಯಾನಗಮಯಂ

ವಂದೇ ವಿಷ್ಣುಂ ಭವಭಯಹರಂ ಸರ್ವಲೋಕೈಕನಾಥಂ

-ಓಂ ನಮೋ ನಾರಾಯಣಾಯ

-ಓಂ ನಮೋ ಭಗವತೇ ವಾಸುದೇವಾಯ ಎಂಬ ಮಂತ್ರವನ್ನು ಜಪಿಸಬೇಕು. ಜಯ ಏಕಾದಶಿ ದಿನದಂದು ವಿಷ್ಣುವಿನ ಮಂತ್ರಗಳನ್ನು ಪಠಿಸುವುದು ಶುಭ ಫಲಿತಾಂಶಗಲು ಪ್ರಾಪ್ತಿಯಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:27 pm, Mon, 19 February 24

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ