AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mars Transit in Taurus: ಜುಲೈನಲ್ಲಿ ಮಂಗಳ ಗ್ರಹ ವೃಷಭ ರಾಶಿಗೆ ಸಂಚಾರ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?

ಜುಲೈ ತಿಂಗಳಲ್ಲಿ ಮಂಗಳ ಗ್ರಹವು ವೃಷಭ ರಾಶಿಗೆ ಸಂಚರಿಸಲಿದೆ. ಶಕ್ತಿ ಮತ್ತು ಸಾಹಸದ ಕಾರಕನಾದ ಕುಜನ ಈ ಸಂಚಾರವು ದ್ವಾದಶ ರಾಶಿಗಳ ಮೇಲೆ ಶುಭ, ಮಿಶ್ರ ಮತ್ತು ಅಶುಭ ಫಲಗಳನ್ನು ನೀಡಲಿದೆ. ಈ ಜ್ಯೋತಿಷ್ಯ ಬದಲಾವಣೆಯು ಆರ್ಥಿಕ, ವೃತ್ತಿ, ಕುಟುಂಬ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಪ್ರತಿಯೊಂದು ರಾಶಿಯ ಮೇಲಿನ ಪ್ರಭಾವ ಮತ್ತು ಅದಕ್ಕೆ ಸೂಕ್ತ ಪರಿಹಾರೋಪಾಯಗಳನ್ನು ಇಲ್ಲಿ ವಿವರಿಸಲಾಗಿದೆ.

Mars Transit in Taurus: ಜುಲೈನಲ್ಲಿ ಮಂಗಳ ಗ್ರಹ ವೃಷಭ ರಾಶಿಗೆ ಸಂಚಾರ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?
Mars Transit in TaurusImage Credit source: Getty Images
ಅಕ್ಷತಾ ವರ್ಕಾಡಿ
|

Updated on:Jun 26, 2026 | 2:35 PM

Share

ಜುಲೈ ತಿಂಗಳಲ್ಲಿ ಮಂಗಳ ಗ್ರಹವು ವೃಷಭ ರಾಶಿಯಲ್ಲಿ ಸಂಚರಿಸಲಿದ್ದಾನೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಕುಜನನ್ನು ಶಕ್ತಿ, ಸಾಹಸ, ಭೂಮಿ ಮತ್ತು ಭ್ರಾತೃತ್ವದ ಕಾರಕನೆಂದು ಪರಿಗಣಿಸಲಾಗುತ್ತದೆ. ವೃಷಭ ರಾಶಿಯು ಶುಕ್ರನ ಮನೆಯಾಗಿದ್ದು, ಇದು ಸ್ಥಿರ ಹಾಗೂ ಪೃಥ್ವಿ ತತ್ವದ ರಾಶಿಯಾಗಿದೆ. ಈ ಸಂಚಾರದಿಂದಾಗಿ ಜುಲೈ ತಿಂಗಳಲ್ಲಿ ದ್ವಾದಶ ರಾಶಿಗಳ ಮೇಲೆ ಹೀಗೆಲ್ಲ ಪರಿಣಾಮ ಬೀರಲಿದೆ.

​ಈ ರಾಶಿಗೆ ಉತ್ತಮ ಫಲ:

ಮೇಷ ರಾಶಿ:

ನಿಮ್ಮ ರಾಶ್ಯಾಧಿಪತಿಯಾದ ಕುಜನು ದ್ವಿತೀಯ ಭಾವದಲ್ಲಿ ಸಂಚರಿಸುವುದರಿಂದ ಆರ್ಥಿಕವಾಗಿ ಲಾಭದಾಯಕವಾಗಿರುತ್ತದೆ. ಬಾಕಿ ಉಳಿದಿರುವ ಹಣ ಕೈ ಸೇರಲಿದೆ. ಆದರೆ, ಮಾತಿನಲ್ಲಿ ಕಠೋರತೆ ಬರಬಹುದು, ಕುಟುಂಬದಲ್ಲಿ ಸಂಯಮದಿಂದ ವರ್ತಿಸುವುದು ಒಳಿತು.

​ಸಿಂಹ ರಾಶಿ:

ದಶಮ ಭಾವದಲ್ಲಿ ಕುಜನ ಸಂಚಾರವು ವೃತ್ತಿ ರಂಗದಲ್ಲಿ ಅದ್ಭುತ ಪ್ರಗತಿಯನ್ನು ನೀಡುತ್ತದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಅಥವಾ ಬಡ್ತಿ ಸಿಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಧೈರ್ಯದ ನಿರ್ಧಾರಗಳು ಲಾಭ ತರಲಿವೆ.

​ವೃಶ್ಚಿಕ ರಾಶಿ:

ಸಪ್ತಮ ಭಾವದಲ್ಲಿ ಕುಜನಿರುವುದರಿಂದ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು, ಆದರೆ ವ್ಯಾಪಾರ ಮತ್ತು ಜಂಟಿ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ ಕಾಣಬಹುದು. ನಿಮ್ಮ ಪ್ರಭಾವ ಸಮಾಜದಲ್ಲಿ ಹೆಚ್ಚಾಗಲಿದೆ.

​ಮಕರ ರಾಶಿ:

ಪಂಚಮ ಭಾವದಲ್ಲಿ ಕುಜನ ಇರುವಿಕೆಯಿಂದಾಗಿ ಧೈರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಲಿದೆ. ಆಕಸ್ಮಿಕ ಧನಲಾಭದ ಯೋಗವಿದೆ.

​ಈ ರಾಶಿಗೆ ಮಿಶ್ರ ಫಲ

ವೃಷಭ ರಾಶಿ:

ನಿಮ್ಮದೇ ರಾಶಿಯಲ್ಲಿ ಕುಜನಿರುವುದರಿಂದ ಕೋಪ ಮತ್ತು ಆತುರ ಹೆಚ್ಚಾಗಬಹುದು. ಆರೋಗ್ಯದ ಕಡೆಗೆ ಗಮನ ಕೊಡುವುದು ಅಗತ್ಯ. ರಕ್ತದೊತ್ತಡ ಅಥವಾ ಉಷ್ಣ ಬಾಧೆ ಕಾಡಬಹುದು. ಆದಾಗ್ಯೂ, ಕಾರ್ಯಕ್ಷಮತೆ ಹೆಚ್ಚಿರುತ್ತದೆ.

​ಕರ್ಕಾಟಕ ರಾಶಿ:

ಏಕಾದಶ ಭಾವದಲ್ಲಿ ಕುಜನಿರುವುದರಿಂದ ಆರ್ಥಿಕ ಪ್ರಗತಿ ಉತ್ತಮವಾಗಿರುತ್ತದೆ. ಆದರೆ ದೊಡ್ಡ ಒಡಹುಟ್ಟಿದವರೊಂದಿಗೆ ಅಥವಾ ಸ್ನೇಹಿತರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರದಂತೆ ಎಚ್ಚರ ವಹಿಸಬೇಕು.

​ಕನ್ಯಾ ರಾಶಿ:

ಭಾಗ್ಯಸ್ಥಾನದಲ್ಲಿ ಕುಜನಿರುವುದರಿಂದ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚುತ್ತದೆ. ತಂದೆಯವರ ಆರೋಗ್ಯದ ಕಡೆಗೆ ನಿಗಾ ಇರಲಿ. ವಿದೇಶ ಪ್ರಯಾಣ ಅಥವಾ ದೂರದ ಪ್ರಯಾಣದ ಯೋಜನೆಗಳು ಸಫಲವಾಗುತ್ತವೆ.

​ಮೀನ ರಾಶಿ:

ತೃತೀಯ ಭಾವದಲ್ಲಿ ಕುಜನಿರುವುದರಿಂದ ನಿಮ್ಮ ಪರಾಕ್ರಮ ಮತ್ತು ಧೈರ್ಯ ವೃದ್ಧಿಯಾಗುತ್ತದೆ. ಸಣ್ಣ ಪ್ರವಾಸಗಳಿಂದ ಲಾಭವಾಗಲಿದೆ. ಸಹೋದರ-ಸಹೋದರಿಯರೊಂದಿಗೆ ಸುಧಾರಿತ ಬಾಂಧವ್ಯ ಇರಲಿದೆ.

​ಈ ರಾಶಿಗೆ ಅಶುಭ ಫಲ

​ಮಿಥುನ ರಾಶಿ:

ದ್ವಾದಶ ಭಾವದಲ್ಲಿ ಕುಜನಿರುವುದರಿಂದ ಅನಗತ್ಯ ಖರ್ಚುಗಳು ಹೆಚ್ಚಾಗಬಹುದು. ಕಣ್ಣಿನ ಸಮಸ್ಯೆ ಅಥವಾ ನಿದ್ರಾಹೀನತೆ ಕಾಡಬಹುದು. ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಜಾಗರೂಕರಾಗಿರಿ.

ಇದನ್ನೂ ಓದಿ: ಶುಕ್ರ-ಕೇತು ಸಂಯೋಗ; ಈ 4 ರಾಶಿಯವರು ಜುಲೈನಲ್ಲಿ ಅತ್ಯಂತ ಜಾಗರೂಕರಾಗಿರಿ

​ತುಲಾ ರಾಶಿ:

ಅಷ್ಟಮ ಭಾವದಲ್ಲಿ ಕುಜನ ಸಂಚಾರವಿರುವುದರಿಂದ ವಾಹನ ಚಾಲನೆಯಲ್ಲಿ ಅತಿ ಹೆಚ್ಚಿನ ಜಾಗ್ರತೆ ಅಗತ್ಯ. ಹಠಾತ್ ಆರೋಗ್ಯ ಏರುಪೇರಾಗಬಹುದು. ಮಾತು ಮತ್ತು ಸಿಟ್ಟಿನ ಮೇಲೆ ನಿಯಂತ್ರಣವಿರಲಿ.

​ಧನು ರಾಶಿ:

ಷಷ್ಠ ಭಾವದಲ್ಲಿ ಕುಜನಿರುವುದರಿಂದ ಶತ್ರುಗಳ ಮೇಲೆ ಜಯ ಸಿಗಲಿದೆ. ಆದರೆ ಸಾಲದ ವಹಿವಾಟುಗಳಿಂದ ದೂರವಿರಿ. ಆರೋಗ್ಯದ ದೃಷ್ಟಿಯಿಂದ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಗಮನ ಕೊಡಿ.

​ಕುಂಭ ರಾಶಿ:

ಚತುರ್ಥ ಭಾವದಲ್ಲಿ ಕುಜನಿರುವುದರಿಂದ ಕೌಟುಂಬಿಕ ಜೀವನದಲ್ಲಿ ಶಾಂತಿ ಕೊರತೆಯಾಗಬಹುದು. ತಾಯಿಯವರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಭೂಮಿ ಅಥವಾ ವಾಹನ ಖರೀದಿ ಮಾಡುವಾಗ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಿ. ಕುಜನ ಅನುಗ್ರಹಕ್ಕಾಗಿ ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆ ಮಾಡುವುದು ಉತ್ತಮ.

– ಲೋಹಿತ್ ಹೆಬ್ಬಾರ್

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Fri, 26 June 26

Follow Us
ಇಂದು ಮಧ್ಯಾಹ್ನ ಚೆನ್ನಮ್ಮ ಅಂತ್ಯಕ್ರಿಯೆ: ಪ್ರಮುಖ ಬಿಜೆಪಿ ನಾಯಕರು ಭಾಗಿ
ಇಂದು ಮಧ್ಯಾಹ್ನ ಚೆನ್ನಮ್ಮ ಅಂತ್ಯಕ್ರಿಯೆ: ಪ್ರಮುಖ ಬಿಜೆಪಿ ನಾಯಕರು ಭಾಗಿ
ಇಂದು ಸ್ಕಂದ ಷಷ್ಠಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಸ್ಕಂದ ಷಷ್ಠಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕಾಕ್ರೋಚ್ ಜನತಾ ಪಕ್ಷದ 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!
ಕಾಕ್ರೋಚ್ ಜನತಾ ಪಕ್ಷದ 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!
ದೇವೇಗೌಡರ ಪತ್ನಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಾಲಿ, ದೊಡ್ಡಣ್ಣ: ವಿಡಿಯೋ
ದೇವೇಗೌಡರ ಪತ್ನಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಾಲಿ, ದೊಡ್ಡಣ್ಣ: ವಿಡಿಯೋ
ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ?
ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ?
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು