
ಶಿವನ ವಾಸಸ್ಥಾನವೆಂದೇ ನಂಬಲಾದ ಪವಿತ್ರ ಕೈಲಾಸ ಪರ್ವತದ ದರ್ಶನ ಪಡೆಯಲು ಬಯಸುವ ಭಕ್ತರಿಗೆ ಒಂದು ಮಹತ್ವದ ಸುದ್ದಿ ಇಲ್ಲಿದೆ. 2026ರ ಸಾಲಿನ ಕೈಲಾಸ ಮಾನಸ ಸರೋವರ ಯಾತ್ರೆಗೆ ಇಂದಿನಿಂದ ಅಧಿಕೃತವಾಗಿ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಈ ವರ್ಷದ ಯಾತ್ರೆಯು ಕೇವಲ ಧಾರ್ಮಿಕ ಪ್ರಯಾಣವಷ್ಟೇ ಅಲ್ಲದೆ, ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದಲೂ ಅತ್ಯಂತ ವಿಶೇಷವೆನಿಸಿದೆ.
ಈ ಬಾರಿಯ ಯಾತ್ರೆಯು 60 ವರ್ಷಗಳಿಗೊಮ್ಮೆ ಬರುವ ಅಪರೂಪದ ಟಿಬೆಟಿಯನ್ ಮತ್ತು ಹಿಮಾಲಯನ್ ಜ್ಯೋತಿಷ್ಯದ ಸಂಯೋಜನೆಯಲ್ಲಿ ನಡೆಯುತ್ತಿದೆ. ಇದನ್ನು ‘ಅಗ್ನಿ ಕುದುರೆ ವರ್ಷ’ (Fire Horse) ಎಂದು ಕರೆಯಲಾಗುತ್ತಿದ್ದು, ಈ ಅವಧಿಯಲ್ಲಿ ಕೈಲಾಸ ದರ್ಶನ ಮಾಡುವುದು ಹಿಂದೂ, ಜೈನ ಮತ್ತು ಬೌದ್ಧ ಧರ್ಮಗಳಲ್ಲಿ ‘ಮೋಕ್ಷದ ಬಾಗಿಲು’ ತೆರೆದಂತೆ ಎಂದು ನಂಬಲಾಗಿದೆ. ಈ ದೈವಿಕ ಸಂಯೋಗದ ಕಾರಣದಿಂದಾಗಿ ಈ ವರ್ಷ ಭಾರತ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಯಾತ್ರಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಯಾತ್ರೆಯ ಮೊದಲ ಬ್ಯಾಚ್ ಜೂನ್ ಮೊದಲ ವಾರದಲ್ಲಿ ಹೊರಡಲಿದೆ. ಈ ಬಾರಿ ಉತ್ತರಾಖಂಡ ಮಾರ್ಗದ ಮೂಲಕ 500 ಯಾತ್ರಿಕರಿಗೆ ಅವಕಾಶ ಕಲ್ಪಿಸಲು ಸರ್ಕಾರ ಯೋಜಿಸಿದೆ. ಹಿಮಾಲಯದ ಕಠಿಣ ಹವಾಮಾನವನ್ನು ಗಮನದಲ್ಲಿಟ್ಟುಕೊಂಡು ವಿದೇಶಾಂಗ ಸಚಿವಾಲಯವು (MEA) ಭಕ್ತರ ಸುರಕ್ಷತೆಗೆ ವಿಶೇಷ ಆದ್ಯತೆ ನೀಡಿದೆ.
ವಿದೇಶಾಂಗ ಸಚಿವಾಲಯವು ಪ್ರತಿ ವರ್ಷ ಜೂನ್ನಿಂದ ಸೆಪ್ಟೆಂಬರ್ವರೆಗೆ ಎರಡು ವಿಭಿನ್ನ ಮಾರ್ಗಗಳ ಮೂಲಕ ಯಾತ್ರೆಯನ್ನು ಆಯೋಜಿಸುತ್ತದೆ:
ಇದನ್ನೂ ಓದಿ: ಉತ್ತರ ದಿಕ್ಕಿಗೆ ತಲೆ ಇಟ್ಟು ಮಲಗಬಾರದು ಏಕೆ? ವಾಸ್ತು ಮತ್ತು ವೈಜ್ಞಾನಿಕ ಕಾರಣ ಇಲ್ಲಿದೆ
ಯಾತ್ರೆಯಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಈ ಕೆಳಗಿನ ಸಿದ್ಧತೆಗಳನ್ನು ಮಾಡಿಕೊಳ್ಳುವುದು ಕಡ್ಡಾಯ:
ಕೈಲಾಸ ಮಾನಸ ಸರೋವರವು ಸಮುದ್ರ ಮಟ್ಟದಿಂದ ಅತೀ ಎತ್ತರದಲ್ಲಿರುವುದರಿಂದ ಆಮ್ಲಜನಕದ ಮಟ್ಟ ಕಡಿಮೆ ಇರುತ್ತದೆ. ಹೀಗಾಗಿ, ಪ್ರಯಾಣಕ್ಕೆ ಕೆಲವು ದಿನಗಳ ಮೊದಲು ದೇಹವನ್ನು ಅಲ್ಲಿನ ವಾತಾವರಣಕ್ಕೆ ಒಗ್ಗಿಸಿಕೊಳ್ಳುವುದು (Acclimatization) ಬಹಳ ಮುಖ್ಯ. ಸಾಮಾನ್ಯವಾಗಿ ಈ ಇಡೀ ಯಾತ್ರೆಯು ಪೂರ್ಣಗೊಳ್ಳಲು ಹವಾಮಾನಕ್ಕೆ ಅನುಗುಣವಾಗಿ 15 ರಿಂದ 20 ದಿನಗಳು ಬೇಕಾಗುತ್ತವೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ