AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kamada Ekadashi 2024: ಕಷ್ಟಗಳಿಂದ ಮುಕ್ತಿ ಪಡೆಯಲು ಕಾಮದ ಏಕಾದಶಿಯಂದು ವಿಷ್ಣುವನ್ನು ಈ ರೀತಿ ಪೂಜಿಸಿ

ಈ ಬಾರಿ ಚೈತ್ರ ಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಕಾಮದ ಏಕಾದಶಿ ಎಂದು ಕರೆಯಲಾಗುತ್ತದೆ. ಇದನ್ನು ಎ.19 ರ ಶುಕ್ರವಾರ ಆಚರಿಸಲಾಗುತ್ತದೆ. ಕಾಮದ ಏಕಾದಶಿಯ ದಿನ ವಿಷ್ಣುವನ್ನು ಭಕ್ತಿಯಿಂದ ಪೂಜಿಸಿದಲ್ಲಿ ಜೀವನದಲ್ಲಿರುವ ಎಲ್ಲಾ ದುಃಖ ಮತ್ತು ತೊಂದರೆಗಳಿಗೆ ಪರಿಹಾರ ಸಿಗುತ್ತದೆ. ಜೊತೆಗೆ ಸಂತೋಷ, ಶಾಂತಿ, ಸಮೃದ್ಧಿ ಎಲ್ಲವೂ ಪ್ರಾಪ್ತಿಯಾಗುತ್ತದೆ.

Kamada Ekadashi 2024: ಕಷ್ಟಗಳಿಂದ ಮುಕ್ತಿ ಪಡೆಯಲು ಕಾಮದ ಏಕಾದಶಿಯಂದು ವಿಷ್ಣುವನ್ನು ಈ ರೀತಿ ಪೂಜಿಸಿ
ಕಾಮದ ಏಕಾದಶಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 18, 2024 | 9:27 AM

Share

ಹಿಂದೂ ಧರ್ಮದಲ್ಲಿ, ಏಕಾದಶಿ (Ekadashi) ಪ್ರತಿ ತಿಂಗಳು 2 ಬಾರಿ ಮತ್ತು ವರ್ಷಕ್ಕೆ 24 ಬಾರಿ ಬರುತ್ತದೆ. ಇದರಲ್ಲಿ ಮೊದಲನೇಯದು ಕೃಷ್ಣ ಪಕ್ಷದ ಏಕಾದಶಿ ಎರಡನೇಯದು ಶುಕ್ಲ ಪಕ್ಷದ ಏಕಾದಶಿ.  m ಈ ದಿನದಂದು ವಿಶ್ವದ ಸೃಷ್ಟಿಕರ್ತ ವಿಷ್ಣುವಿನ ಜೊತೆಗೆ ತಾಯಿ ಲಕ್ಷ್ಮೀ ದೇವಿಯನ್ನು ಆರಾಧನೆ ಮಾಡಲಾಗುತ್ತದೆ. ಈ ಬಾರಿ ಚೈತ್ರ ಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಕಾಮದ ಏಕಾದಶಿ (Kamada Ekadashi) ಎಂದು ಕರೆಯಲಾಗುತ್ತದೆ. ಇದನ್ನು ಎ.19 ರ ಶುಕ್ರವಾರ ಆಚರಿಸಲಾಗುತ್ತದೆ. ಕಾಮದ ಏಕಾದಶಿಯ ದಿನ ವಿಷ್ಣುವನ್ನು ಭಕ್ತಿಯಿಂದ ಪೂಜಿಸಿದಲ್ಲಿ ಜೀವನದಲ್ಲಿರುವ ಎಲ್ಲಾ ದುಃಖ ಮತ್ತು ತೊಂದರೆಗಳಿಗೆ ಪರಿಹಾರ ಸಿಗುತ್ತದೆ. ಜೊತೆಗೆ ಸಂತೋಷ, ಶಾಂತಿ, ಸಮೃದ್ಧಿ ಎಲ್ಲವೂ ಪ್ರಾಪ್ತಿಯಾಗುತ್ತದೆ.

ಕಾಮದ ಏಕಾದಶಿಯ ಶುಭ ಸಮಯ;

ಪಂಚಾಂಗದ ಪ್ರಕಾರ, ಚೈತ್ರ ಮಾಸದ ಶುಕ್ಲ ಪಕ್ಷದ ಏಕಾದಶಿಯು ಎ. 18 ರಂದು ಸಂಜೆ 05:31 ಕ್ಕೆ ಪ್ರಾರಂಭವಾಗುತ್ತದೆ. ಎ. 19 ರಂದು ರಾತ್ರಿ 08:04 ಕ್ಕೆ ಕೊನೆಗೊಳ್ಳುತ್ತದೆ. ಹಾಗಾಗಿ ಉದಯ ತಿಥಿಯ ಪ್ರಕಾರ, ಈ ಏಕಾದಶಿ ಉಪವಾಸವನ್ನು ಎ.19 ರಂದು ಆಚರಿಸಲಾಗುತ್ತದೆ.

ಇದನ್ನೂ ಓದಿ: ಹನುಮಂತನಿಲ್ಲದ ರಾಮ ದೇವಾಲಯ ಎಲ್ಲಿದೆ? ಏಕೆ ಗೊತ್ತಾ?

ಕಾಮದ ಏಕಾದಶಿ ಪೂಜಾ ವಿಧಾನ;

-ಈ ದಿನ, ಬ್ರಹ್ಮ ಮುಹೂರ್ತದಲ್ಲಿ ಬೆಳಿಗ್ಗೆ ಎದ್ದು ಸ್ನಾನ ಮಾಡಿ.

-ದೇವರ ಕೋಣೆಯಲ್ಲಿ ಶ್ರೀಹರಿ ಮತ್ತು ತಾಯಿ ಲಕ್ಷ್ಮೀಯ ವಿಗ್ರಹಗಳಿಗೆ ಅಲಂಕಾರ ಮಾಡಿ.

-ಇದಾದ ನಂತರ, ಅರಿಶಿನ, ಅಕ್ಷತೆ, ಹೂವು ಇತ್ಯಾದಿಗಳನ್ನು ದೇವರಿಗೆ ಅರ್ಪಿಸಿ ಬಳಿಕ ತುಪ್ಪದ ದೀಪ ಹಚ್ಚಿ, ಆರತಿ ಮಾಡಿ.

-ಏಕಾದಶಿ ದಿನ ವಿಷ್ಣು ಚಾಲೀಸಾ ಮತ್ತು ಮಂತ್ರಗಳನ್ನು ಪಠಿಸಿ. ಜೀವನದಲ್ಲಿ ಸಂತೋಷ ಮತ್ತು ಶಾಂತಿಗಾಗಿ ವಿಷ್ಣುವನ್ನು ಪ್ರಾರ್ಥಿಸಿ.

-ಕೊನೆಯಲ್ಲಿ ದೇವರಿಗೆ ನೈವೇದ್ಯವನ್ನು ಅರ್ಪಿಸಿ, ಪ್ರಸಾದವನ್ನು ಜನರಿಗೆ ವಿತರಿಸಿ.

-ಏಕಾದಶಿಯ ಕಥೆಯನ್ನು ಓದಿದ ನಂತರ ಆರತಿ ಮಾಡಿ.

-ಸಂಜೆ ತುಳಸಿ ಮಾತೆಯ ಮುಂದೆ ತುಪ್ಪದ ದೀಪವನ್ನು ಹಚ್ಚಿಡುವುದನ್ನು ಮರೆಯಬೇಡಿ.

-ಈ ರೀತಿಯಾಗಿ ಕಾಮದ ಏಕಾದಶಿ ಉಪವಾಸವನ್ನು ಆಚರಣೆ ಮಾಡುವುದರಿಂದ ಜೀವನದಲ್ಲಿನ ಕಷ್ಟಗಳಿಂದ ಮುಕ್ತಿ ಸಿಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ