AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahashivratri 2022: ಶಿವರಾತ್ರಿಯಂದು ಜಾಗರಣೆ ಮಾಡುವ ಭಕ್ತರಿಗೆ ಇಲ್ಲಿವೆ ಕನ್ನಡ ಭಕ್ತಿಗೀತೆಗಳು

ಇಡೀ ದಿನ ಉಪವಾಸವಿದ್ದು ಶಿವನ ಭಜನೆ ಮಾಡುತ್ತಾ ಜಾಗರಣೆ ಮಾಡುವುದೇ ಈ ಹಬ್ಬದ ವಿಶೇಷ. ದೇವಾಯಲಗಳಲ್ಲಿ, ಮನೆಗಳಲ್ಲಿ, ಮಂದಿರಗಳಲ್ಲಿ ಶಿವನನ್ನು ಸ್ಮರಿಸುತ್ತಾ ಜಾಗರಣೆ ಮಾಡಲಾಗುತ್ತದೆ.

Mahashivratri 2022: ಶಿವರಾತ್ರಿಯಂದು ಜಾಗರಣೆ ಮಾಡುವ ಭಕ್ತರಿಗೆ ಇಲ್ಲಿವೆ ಕನ್ನಡ ಭಕ್ತಿಗೀತೆಗಳು
ಶಿವ
TV9 Web
| Edited By: sandhya thejappa|

Updated on:Feb 28, 2022 | 1:30 PM

Share

ಭಾರತದಲ್ಲಿ ಹಿಂದೂ ಧರ್ಮದ ಪ್ರತೀ ಹಬ್ಬಗಳನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಅದರದ್ದೇ ಆದ ಹಿನ್ನೆಲೆ ಕಥೆಯಿದೆ. ಅದೇ ರೀತಿ ಶಿವರಾತ್ರಿ (Shivratri) ಕೂಡಾ ವಿಶಿಷ್ಟವಾಗಿ ಆಚರಿಸಲಾಗುತ್ತದೆ. ಇಡೀ ದಿನ ಉಪವಾಸವಿದ್ದು ಶಿವನ ಭಜನೆ ಮಾಡುತ್ತಾ ಜಾಗರಣೆ ಮಾಡುವುದೇ ಈ ಹಬ್ಬದ ವಿಶೇಷ. ದೇವಾಯಲಗಳಲ್ಲಿ, ಮನೆಗಳಲ್ಲಿ, ಮಂದಿರಗಳಲ್ಲಿ ಶಿವನನ್ನು ಸ್ಮರಿಸುತ್ತಾ ಜಾಗರಣೆ ಮಾಡಲಾಗುತ್ತದೆ. ಜಾಗರಣೆ ಮಾಡುವಾಗ ಕನ್ನಡದ ಈ ಹಾಡುಗಳನ್ನು ಹಾಡುವ ಮೂಲಕ ಶಿವನನ್ನು ಪೂಜಿಸಬಹುದು.

* ಮಹಾಪ್ರಾಣ ದೀಪಂ: ಈ ಹಾಡನ್ನು ಕೇಳಿದವರಿಗೆ ಈ ಹಾಡಿನ ಶಕ್ತಿ ತಿಳಿದಿರುತ್ತದೆ. ಮಹಾಪ್ರಾಣ ದೀಪಂ ಎಂಬ ಸಾಹಿತ್ಯದಿಂದ ಆರಂಭವಾಗುವ ಈ ಹಾಡು ಕಿವಿಗೆ ಬೀಳುತ್ತಿದ್ದಂತೆ ಬೇರೆ ಯಾವ ಯೋಚನೆಗಳು ಬರಲ್ಲ. ಶಿವನ ಬಳಿಯೇ ಹೋಗಿ ಬದ್ದಂತೆ ಅನುಭವ ಆಗುತ್ತದೆ. ಗಟ್ಟಿ ಧ್ವನಿಯಲ್ಲಿ ಮೊಳಗುವ ಈ ಹಾಡನ್ನು ಆಲಿಸಿದಾಗ ರೋಮಗಳು ನೆಟ್ಟಗಾಗುತ್ತವೆ. ಕನ್ನಡ ಹಾಡಿನ ಪೈಕಿ ಈ ಹಾಡು ಹೆಚ್ಚು ಪ್ರಸಿದ್ಧಿ ಪಡೆದಿದೆ.

* ಶಿವ ಶಿವ ಎಂದರೆ ಭಯವಿಲ್ಲ: ಎಸ್ ಪಿ ಬಾಲಸುಬ್ರಮಣ್ಯಂ ಅವರ ಕಂಠವೇ ಕರ್ನಾಟಕ ಪಾಲಿಗೆ ಉಡುಗೊರೆ. ಅವರ ಧ್ವನಿಯಲ್ಲಿ ಮೂಡಿಬರುವ ಹಾಡುಗಳೆಲ್ಲವೂ ಜನಪ್ರಿಯತೆ ಪಡೆದಿವೆ. ಅದರಲ್ಲಿ ಕೆಲವೊಂದು ಸೂಪರ್ ಹಿಟ್ ಆಗಿವೆ. ಈ ಸಾಲಿಗೆ ಶಿವ ಶಿವ ಎಂದರೆ ಭಯವಿಲ್ಲ ಎಂಬ ಹಾಡು ಸೇರುತ್ತದೆ. ಶಿವನ ಸ್ಮರಿಸುವ ಭಕ್ತರಿಗೆ ಈ ಹಾಡು ಸೂಕ್ತವಾಗಿದೆ. ಸದ್ಯ ಶಿವರಾತ್ರಿ ಸಮೀಪಿಸುತ್ತಿರುವ ಕಾರಣ ಜಾಗರಣೆ ವೇಳೆ ಈ ಹಾಡನ್ನು ಹೇಳಬಹುದು.

* ಪಾಹಿ ಮಹೇಶ: ಬ್ರಹ್ಮಾಂಡ ಒಡೆಯನಾದ ಶಿವನಿಗೆ ಸಮರ್ಪಿತವಾದ ಮತ್ತೊಂದು ಹಾಡೆಂದರೆ ಪಾಹಿ ಮಹೇಶ. ಈ ಹಾಡನ್ನು ಶಿವರಾತ್ರಿ ದಿನದಂದು ಶಿವನನ್ನು ಸ್ಮರಿಸುತ್ತಾ ಹೇಳಬಹುದು.

* ಕೈಲಾಸ ಗಿರಿವಾಸ: ಜಾಗರಣೆಯಲ್ಲಿ ಶಿವನ ಸ್ಮರಿಸುತ್ತಾ ಎಲ್ಲರೂ ಕೂಡಿ ಭಜನೆ ಮಾಡುತ್ತಾರೆ. ಭಜನೆ ವೇಳೆ ಶಿವನ ಯಾವ ಹಾಡುಗಳು ಹೇಳಬೇಕು ಎಂಬ ಗೊಂದಲವೂ ಇರುತ್ತೆ. ಶಿವನಿಗೆ ಸಮರ್ಪಿತವಾದ ಇನ್ನೊಂದು ಹಾಡೆಂದರೆ ಕೈಲಾಸ ಗಿರಿವಾಸ. ಈ ಹಾಡು ಹೇಳುವ ಮೂಲಕ ದೇವರಿಗೆ ಭಕ್ತಿ ಸಮರ್ಪಿಸಬಹುದು.

* ಜಯ ಜಯ ಸಾಂಬಾಸಧಶಿವ ಎಸ್ ಜಾನಕಿ ಹಾಡಿರುವ ಜಯ ಜಯ ಸಾಂಬಾಸಧಶಿವ ಹಾಡು ಭಕ್ತಿ ಪ್ರಧಾನದಿಂದ ಕೂಡಿದೆ. ಭಜನೆಗೆ ಈ ಹಾಡು ಸೂಕ್ತವಾಗಿದೆ.

ಇದನ್ನೂ ಓದಿ

Maha Shivaratri 2022: ಶಿವರಾತ್ರಿ ಉಪವಾಸಕ್ಕೆ ಕೊಪ್ಪಳದಲ್ಲಿ ಹಣ್ಣಿನ ಮೇಳ! ರೈತರಿಗೂ ಸಂಭ್ರಮ, ಶಿವ ಭಕ್ತರಿಗೂ ಆನಂದ!

Shivratri 2022; ಶಿವರಾತ್ರಿಯಂದು ಭೇಟಿ ನೀಡಲು ಸೂಕ್ತವಾದ ಬೆಂಗಳೂರಿನ ಶಿವನ ದೇವಸ್ಥಾನಗಳು

Published On - 12:15 pm, Mon, 28 February 22

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ