AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿಯೇ ಮಹಾ ಸ್ಮಶಾನ! ಅಲ್ಲಿದೆ ಮೋಕ್ಷ ಭವನ, ಏನಿದರ ಸ್ಥಳ ಮಹಾತ್ಮೆ? ಇಲ್ಲಿದೆ ವಿವರ

Salvation in Varanasi: ಕಾಶಿಯಲ್ಲಿ ಸಾಯುವವರಿಗೆಲ್ಲ ಮುಕ್ತಿ ಸಿಗುವುದಿಲ್ಲ, ಮುಕ್ತಿ ಸಿಗಲು ಕಾಶಿಯಲ್ಲೇ ಸಾಯಬೇಕಾಗಿಲ್ಲ. ಕರ್ಮ ಕಳೆಯುವ ತನಕ ಮುಕ್ತಿ ಇಲ್ಲ ಎಂಬ ಮಾತಿದ್ದರೂ, ಹುಟ್ಟು ಸಾವಿನ ಮರ್ಮ ಅರಿತರೇ ಮೋಕ್ಷ ತಾನಾಗೇ ಲಭಿಸುತ್ತದೆ.

ಕಾಶಿಯೇ ಮಹಾ ಸ್ಮಶಾನ! ಅಲ್ಲಿದೆ ಮೋಕ್ಷ ಭವನ, ಏನಿದರ ಸ್ಥಳ ಮಹಾತ್ಮೆ? ಇಲ್ಲಿದೆ ವಿವರ
ಕಾಶಿಯೇ ಮಹಾ ಸ್ಮಶಾನ! ಅಲ್ಲಿದೆ ಮೋಕ್ಷ ಭವನ, ಏನಿದರ ಸ್ಥಳ ಮಹಾತ್ಮೆ? ಇಲ್ಲಿದೆ ವಿವರ
TV9 Web
| Edited By: ಸಾಧು ಶ್ರೀನಾಥ್​|

Updated on: Sep 20, 2022 | 6:06 AM

Share

ಕಾಶಿ ಎಂದಾಕ್ಷಣ ಥಟ್ಟನೆ ನೆನಪಿಗೆ ಬರುವುದು… ಕಾಶಿ ವಿಶ್ವನಾಥ, ಕಲುಷಿತವಾದ ಗಂಗೆ, ಜನನಿಬಿಡ ಗಲ್ಲಿಗಳು, ಸಾಧು ಸನ್ಯಾಸಿಗಳು, ಬೆನ್ನು ಬಿದ್ದು ಕಾಸು ಕೀಳುವ ಪಂಡಾಗಳು, ಮತ್ತು ಅಗಾಧ ಭಕ್ತ ಸಮೂಹ.. ಇಂಥ ಕಾಶಿಗೆ ಬರೀ ಪುಣ್ಯಕ್ಷೇತ್ರ ದರ್ಶನಕ್ಕೆ ಬರುವುದಿಲ್ಲ, ಸಾಯಲೂ (salvation) ಬರುತ್ತಾರೆ! ಕಾಶಿಯಲ್ಲಿ ಸಾಯಲು ಬರುವವರಿಗೆ ವಿಶೇಷ ಮರ್ಯಾದೆ ಇದೆ. ಸತ್ತ ನಂತರ ಅವರಿಗೆ ಮುಕ್ತಿ ಪ್ರಾಪ್ತಿಯಾಗುತ್ತದಂತೆ. ಹಾಗಾಗಿ, ಕೆಲವರು ಸಾಯುವ ಹಂತದಲ್ಲಿ ಇಲ್ಲಿಗೆ ಬಂದು ಕೆಲಕಾಲ ತಂಗಿ ದೇಹತ್ಯಾಗ ಮಾಡಿದರೆ; ಇನ್ನುಳಿದವರು ಸತ್ತನಂತರ ಕೂಡ ದೇಹವನ್ನು ಇಲ್ಲಿಗೆ ತಂದು ಗಂಗೆಯ ದಡದಲ್ಲಿ ದಹನ ಮಾಡುತ್ತಾರೆ. ಹಾಗಾಗಿ ಬಿಹಾರ, ಉತ್ತರಪ್ರದೇಶದ ಎಷ್ಟೋ ಊರುಗಳಲ್ಲಿ ಸ್ಮಶಾನವೇ ಇಲ್ಲ! ಕಾಶಿಯನ್ನೇ ‘ಮಹಾ ಸ್ಮಶಾನ’ ಎಂದು ಕರೆಯುತ್ತಾರೆ (Varanasi).

ಕಾಶೀಲಾಭ್ ಮುಕ್ತಿಭವನ Kashi Labh Mukti Bhawan: ಇದು ಕಾಶಿಗೆ ಸಾಯಲು ಬರುವವರ ತಾತ್ಕಾಲಿಕ ತಂಗುದಾಣ. ಇಲ್ಲಿ 12 ಕೋಣೆಗಳಿವೆ. ಉಳಿದುಕೊಳ್ಳಲು ಯಾವುದೇ ರೀತಿಯ ಶುಲ್ಕ ನೀಡಬೇಕಿಲ್ಲ. ಕೋಣೆ, ನೀರು, ವಿದ್ಯುತ್ ಎಲ್ಲವೂ ಉಚಿತ! ಒಂದೇ ಕಂಡೀಷನ್. ನಿಮಗೆ 60 ವರ್ಷ ದಾಟಿರಬೇಕು! ಸಾವಿನ ಅಂಚಿನಲ್ಲಿರಬೇಕು. ಜೊತೆಗೆ ಮುಂಚೆಯೇ ಕಾಗದ ಬರೆದು, ಇಲ್ಲಿಯ ಕೋಣೆಯನ್ನು ಕಾದಿರಿಸಿರಬೇಕು. ಎಲ್ಲವೂ ಸುಸೂತ್ರವಾಗಿ ನಡೆದು, ಅಲ್ಲಿಯ ಮ್ಯಾನೇಜರ್ ಬನ್ನಿ ಎಂದರೆ, ಇಲ್ಲಿಗೆ ಬಂದು ನಾಲ್ಕು ಜನ ಬಂಧುಗಳೊಂದಿಗೆ ತಂಗಬಹುದು. 15 ದಿನ ನೀವು ಅವರ ಅತಿಥಿ. ಆ ಅವಧಿಯಲ್ಲಿ ನಿಮಗೆ ಸಾವು ಬಂದು ಸತ್ತರೆ ನೇರ ಸ್ವರ್ಗ, ಇಲ್ಲವೇ ವಾಪಸ್ ನಿಮ್ಮ ಊರಿಗೆ ಟಿಕೆಟ್! ಇದು ತಮಾಷೆಯಲ್ಲ.

ಕಾಶಿ ಲಾಭ್ ಮುಕ್ತಿ ಭವನ ಮಣಿಕರ್ಣಿಕಾದಿಂದ ದೂರವಿದ್ದರೂ ಮೋಕ್ಷಾರ್ಥಿಗಳ ಮೆಚ್ಚುಗೆ ಗಳಿಸಿದೆ. ಮೊದಲಿಂದಲೂ ಸತ್ಸಂಗ ಭವನವಾಗಿ ಬೆಳೆದು ಬಂದಿರುವ ಕಾಶಿ ಲಾಭ್ ಮುಕ್ತಿ ಭವನದಲ್ಲಿ ನಿತ್ಯ ಪೂಜೆ, ಪುನಸ್ಕಾರ, ಭಜನೆ ನಡೆಯುತ್ತಲೆ ಇರುತ್ತದೆ. ಇದರಿಂದ ಮುಕ್ತಿ ಹೊಂದಲು ಬಂದಿರುವ ವ್ಯಕ್ತಿಗೆ ಸೂಕ್ತ ಆಧಾತ್ಮಿಕ ವಾತಾವರಣ ಸೃಷ್ಟಿಯಾಗುತ್ತದೆ ಎಂದು ಜನ ನಂಬಿದ್ದಾರೆ. ಸಾಯುವ ಮುನ್ನ ಭಗವನ್ನಾಮ್ ಸ್ಮರಣೆ, ರಾಮಚರಿತಾ ಮಾನಸ ಕಿವಿಗೆ ಬೀಳುತ್ತಿದ್ದರೆ, ಮೋಕ್ಷಾರ್ಥಿಗಳಿಗೆ ಮೋಕ್ಷ ಖಚಿತ ಎನ್ನಲಾಗಿದೆ.

ಹೀಗೆ, ಸುಮಾರು 52 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ‘ಕಾಶೀಲಾಭ್ ಮುಕ್ತಿಭವನ’ದಲ್ಲಿ ಈಗಾಗಲೇ ಸುಮಾರು 20 ಸಾವಿರಕ್ಕು ಹೆಚ್ಚು ಜನರ ಪ್ರಾಣ ಹೋಗಿದೆ! ಅವರಿಗೆಲ್ಲ ಸ್ವರ್ಗ ಸಿಕ್ಕಿದೆಯೇ? ಮನುಷ್ಯ ಜನ್ಮದಿಂದ ಮುಕ್ತಿ ಪಡೆದಿದ್ದಾರೆಯೇ? ಗೊತ್ತಿಲ್ಲ. ಏಕೆಂದರೆ ಹೋದವರು ಯಾರೂ ವಾಪಸ್ ಬಂದು ಹೇಳುವುದಿಲ್ಲ…ಅಲ್ಲವಾ!?

ಈ ಮುಕ್ತಿ ಭವನಗಳಲ್ಲಿ ನೆಲೆಸಲು ನಿಯಮಗಳಿವೆ: 1. ಮರಣಶಯ್ಯೆಯಲ್ಲಿರುವ ಮೋಕ್ಷಾರ್ಥಿ ಹಾಗೂ ಆತನ ಕುಟುಂಬ ಗರಿಷ್ಠ 15 ದಿನಗಳ ಇಲ್ಲಿ ನೆಲೆಸಬಹುದು. 2. ಸಾಂಕ್ರಾಮಿಕ ರೋಗಗ್ರಸ್ತರಿಗೆ ನೆಲೆಸಲು ಅವಕಾಶವಿಲ್ಲ. 3. ಅತಿಥಿ ಗೃಹದ ಇತರೆ ಸದಸ್ಯರು, ನಿರ್ವಾಹಕರೊಡನೆ ಅಸಭ್ಯವಾಗಿ ವರ್ತಿಸುವುದು, ಅನುಚಿತವಾಗಿ ನಡೆದುಕೊಳ್ಳುವಂತಿಲ್ಲ. 4. ಸಂಬಂಧಿಕರು ಸೌದೆ ಒಲೆಯಲ್ಲಿ ಅಡುಗೆ ಮಾಡಿಕೊಳ್ಳತಕ್ಕದ್ದು. 5. ಮೋಕ್ಷಾರ್ಥಿಯೂ ಮುಕ್ತಿ ಹೊಂದಿದ 24 ಗಂಟೆಗಳಲ್ಲಿ ಅವರ ಕುಟುಂಬಸ್ಥರು ಅತಿಥಿ ಗೃಹ ತೊರೆಯಬೇಕು. 6. ಕರ್ಮ ಕಳೆಯುವ ತನಕ ಮುಕ್ತಿ ಇಲ್ಲ. 7. ಸಾವಿನಲ್ಲೂ ಇಲ್ಲಿ ಸಮಾನತೆ ಇಲ್ಲ. ಕಾಶಿಯಲ್ಲಿ ಹಲವೆಡೆ ವರ್ಣಾಶ್ರಮಕ್ಕೆ ತಕ್ಕ ಪ್ರತ್ಯೇಕ ಘಾಟ್ ಗಳಿವೆ. ಕೆಲವು ಹಿಂದೂಗಳಿಗೆ ಸಾವಿನಲ್ಲೂ ಹೆಚ್ಚಿನ ಮರ್ಯಾದೆ ನೀಡಲಾಗುತ್ತದೆ ಎಂಬ ಕೂಗಿದೆ.

ಆದರೆ, ಮೊದಲೇ ಹೇಳಿದಂತೆ ಮುಕ್ತಿ ಹೊಂದಲು ಸಾಯುವ ವ್ಯಕ್ತಿಯ ಮನಃಸ್ಥಿತಿ ಮುಖ್ಯವಾಗುತ್ತದೆ. ಜಾತಿ, ಧರ್ಮ, ಮತ, ಪಂಥ ಎಲ್ಲವನ್ನೂ ಮೀರಿದ್ದು ಸಾವು. ಅತಿಥಿ ಗೃಹಗಳು ಮೋಕ್ಷಾರ್ಥಿಯ ಕೊನೆ ನಿಲ್ದಾಣವಾಗಿ, ಹುಟ್ಟು ಸಾವಿನ ಚಕ್ರದಿಂದ ತಪ್ಪಿಸಿಕೊಳ್ಳಲು ಕಾಶಿಯಲ್ಲಿ ಮುಕ್ತಿ ಹೊಂದುವುದೇ ಮಾರ್ಗ ಎಂಬ ನಂಬಿಕೆ ಅಚಲವಾಗಿ ಇಂದಿಗೂ ಉಳಿದುಕೊಂಡು ಬಂದಿದೆ. ಆದರೆ, ಕಾಶಿಯಲ್ಲಿ ಸಾಯುವವರಿಗೆಲ್ಲ ಮುಕ್ತಿ ಸಿಗುವುದಿಲ್ಲ, ಮುಕ್ತಿ ಸಿಗಲು ಕಾಶಿಯಲ್ಲೇ ಸಾಯಬೇಕಾಗಿಲ್ಲ. ಕರ್ಮ ಕಳೆಯುವ ತನಕ ಮುಕ್ತಿ ಇಲ್ಲ ಎಂಬ ಮಾತಿದ್ದರೂ, ಹುಟ್ಟು ಸಾವಿನ ಮರ್ಮ ಅರಿತರೇ ಮೋಕ್ಷ ತಾನಾಗೇ ಲಭಿಸುತ್ತದೆ. (ಸಂಗ್ರಹ- ಸತ್ಸಂಗ)

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ