AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿಯೇ ಮಹಾ ಸ್ಮಶಾನ! ಅಲ್ಲಿದೆ ಮೋಕ್ಷ ಭವನ, ಏನಿದರ ಸ್ಥಳ ಮಹಾತ್ಮೆ? ಇಲ್ಲಿದೆ ವಿವರ

Salvation in Varanasi: ಕಾಶಿಯಲ್ಲಿ ಸಾಯುವವರಿಗೆಲ್ಲ ಮುಕ್ತಿ ಸಿಗುವುದಿಲ್ಲ, ಮುಕ್ತಿ ಸಿಗಲು ಕಾಶಿಯಲ್ಲೇ ಸಾಯಬೇಕಾಗಿಲ್ಲ. ಕರ್ಮ ಕಳೆಯುವ ತನಕ ಮುಕ್ತಿ ಇಲ್ಲ ಎಂಬ ಮಾತಿದ್ದರೂ, ಹುಟ್ಟು ಸಾವಿನ ಮರ್ಮ ಅರಿತರೇ ಮೋಕ್ಷ ತಾನಾಗೇ ಲಭಿಸುತ್ತದೆ.

ಕಾಶಿಯೇ ಮಹಾ ಸ್ಮಶಾನ! ಅಲ್ಲಿದೆ ಮೋಕ್ಷ ಭವನ, ಏನಿದರ ಸ್ಥಳ ಮಹಾತ್ಮೆ? ಇಲ್ಲಿದೆ ವಿವರ
ಕಾಶಿಯೇ ಮಹಾ ಸ್ಮಶಾನ! ಅಲ್ಲಿದೆ ಮೋಕ್ಷ ಭವನ, ಏನಿದರ ಸ್ಥಳ ಮಹಾತ್ಮೆ? ಇಲ್ಲಿದೆ ವಿವರ
TV9 Web
| Edited By: ಸಾಧು ಶ್ರೀನಾಥ್​|

Updated on: Sep 20, 2022 | 6:06 AM

Share

ಕಾಶಿ ಎಂದಾಕ್ಷಣ ಥಟ್ಟನೆ ನೆನಪಿಗೆ ಬರುವುದು… ಕಾಶಿ ವಿಶ್ವನಾಥ, ಕಲುಷಿತವಾದ ಗಂಗೆ, ಜನನಿಬಿಡ ಗಲ್ಲಿಗಳು, ಸಾಧು ಸನ್ಯಾಸಿಗಳು, ಬೆನ್ನು ಬಿದ್ದು ಕಾಸು ಕೀಳುವ ಪಂಡಾಗಳು, ಮತ್ತು ಅಗಾಧ ಭಕ್ತ ಸಮೂಹ.. ಇಂಥ ಕಾಶಿಗೆ ಬರೀ ಪುಣ್ಯಕ್ಷೇತ್ರ ದರ್ಶನಕ್ಕೆ ಬರುವುದಿಲ್ಲ, ಸಾಯಲೂ (salvation) ಬರುತ್ತಾರೆ! ಕಾಶಿಯಲ್ಲಿ ಸಾಯಲು ಬರುವವರಿಗೆ ವಿಶೇಷ ಮರ್ಯಾದೆ ಇದೆ. ಸತ್ತ ನಂತರ ಅವರಿಗೆ ಮುಕ್ತಿ ಪ್ರಾಪ್ತಿಯಾಗುತ್ತದಂತೆ. ಹಾಗಾಗಿ, ಕೆಲವರು ಸಾಯುವ ಹಂತದಲ್ಲಿ ಇಲ್ಲಿಗೆ ಬಂದು ಕೆಲಕಾಲ ತಂಗಿ ದೇಹತ್ಯಾಗ ಮಾಡಿದರೆ; ಇನ್ನುಳಿದವರು ಸತ್ತನಂತರ ಕೂಡ ದೇಹವನ್ನು ಇಲ್ಲಿಗೆ ತಂದು ಗಂಗೆಯ ದಡದಲ್ಲಿ ದಹನ ಮಾಡುತ್ತಾರೆ. ಹಾಗಾಗಿ ಬಿಹಾರ, ಉತ್ತರಪ್ರದೇಶದ ಎಷ್ಟೋ ಊರುಗಳಲ್ಲಿ ಸ್ಮಶಾನವೇ ಇಲ್ಲ! ಕಾಶಿಯನ್ನೇ ‘ಮಹಾ ಸ್ಮಶಾನ’ ಎಂದು ಕರೆಯುತ್ತಾರೆ (Varanasi).

ಕಾಶೀಲಾಭ್ ಮುಕ್ತಿಭವನ Kashi Labh Mukti Bhawan: ಇದು ಕಾಶಿಗೆ ಸಾಯಲು ಬರುವವರ ತಾತ್ಕಾಲಿಕ ತಂಗುದಾಣ. ಇಲ್ಲಿ 12 ಕೋಣೆಗಳಿವೆ. ಉಳಿದುಕೊಳ್ಳಲು ಯಾವುದೇ ರೀತಿಯ ಶುಲ್ಕ ನೀಡಬೇಕಿಲ್ಲ. ಕೋಣೆ, ನೀರು, ವಿದ್ಯುತ್ ಎಲ್ಲವೂ ಉಚಿತ! ಒಂದೇ ಕಂಡೀಷನ್. ನಿಮಗೆ 60 ವರ್ಷ ದಾಟಿರಬೇಕು! ಸಾವಿನ ಅಂಚಿನಲ್ಲಿರಬೇಕು. ಜೊತೆಗೆ ಮುಂಚೆಯೇ ಕಾಗದ ಬರೆದು, ಇಲ್ಲಿಯ ಕೋಣೆಯನ್ನು ಕಾದಿರಿಸಿರಬೇಕು. ಎಲ್ಲವೂ ಸುಸೂತ್ರವಾಗಿ ನಡೆದು, ಅಲ್ಲಿಯ ಮ್ಯಾನೇಜರ್ ಬನ್ನಿ ಎಂದರೆ, ಇಲ್ಲಿಗೆ ಬಂದು ನಾಲ್ಕು ಜನ ಬಂಧುಗಳೊಂದಿಗೆ ತಂಗಬಹುದು. 15 ದಿನ ನೀವು ಅವರ ಅತಿಥಿ. ಆ ಅವಧಿಯಲ್ಲಿ ನಿಮಗೆ ಸಾವು ಬಂದು ಸತ್ತರೆ ನೇರ ಸ್ವರ್ಗ, ಇಲ್ಲವೇ ವಾಪಸ್ ನಿಮ್ಮ ಊರಿಗೆ ಟಿಕೆಟ್! ಇದು ತಮಾಷೆಯಲ್ಲ.

ಕಾಶಿ ಲಾಭ್ ಮುಕ್ತಿ ಭವನ ಮಣಿಕರ್ಣಿಕಾದಿಂದ ದೂರವಿದ್ದರೂ ಮೋಕ್ಷಾರ್ಥಿಗಳ ಮೆಚ್ಚುಗೆ ಗಳಿಸಿದೆ. ಮೊದಲಿಂದಲೂ ಸತ್ಸಂಗ ಭವನವಾಗಿ ಬೆಳೆದು ಬಂದಿರುವ ಕಾಶಿ ಲಾಭ್ ಮುಕ್ತಿ ಭವನದಲ್ಲಿ ನಿತ್ಯ ಪೂಜೆ, ಪುನಸ್ಕಾರ, ಭಜನೆ ನಡೆಯುತ್ತಲೆ ಇರುತ್ತದೆ. ಇದರಿಂದ ಮುಕ್ತಿ ಹೊಂದಲು ಬಂದಿರುವ ವ್ಯಕ್ತಿಗೆ ಸೂಕ್ತ ಆಧಾತ್ಮಿಕ ವಾತಾವರಣ ಸೃಷ್ಟಿಯಾಗುತ್ತದೆ ಎಂದು ಜನ ನಂಬಿದ್ದಾರೆ. ಸಾಯುವ ಮುನ್ನ ಭಗವನ್ನಾಮ್ ಸ್ಮರಣೆ, ರಾಮಚರಿತಾ ಮಾನಸ ಕಿವಿಗೆ ಬೀಳುತ್ತಿದ್ದರೆ, ಮೋಕ್ಷಾರ್ಥಿಗಳಿಗೆ ಮೋಕ್ಷ ಖಚಿತ ಎನ್ನಲಾಗಿದೆ.

ಹೀಗೆ, ಸುಮಾರು 52 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ‘ಕಾಶೀಲಾಭ್ ಮುಕ್ತಿಭವನ’ದಲ್ಲಿ ಈಗಾಗಲೇ ಸುಮಾರು 20 ಸಾವಿರಕ್ಕು ಹೆಚ್ಚು ಜನರ ಪ್ರಾಣ ಹೋಗಿದೆ! ಅವರಿಗೆಲ್ಲ ಸ್ವರ್ಗ ಸಿಕ್ಕಿದೆಯೇ? ಮನುಷ್ಯ ಜನ್ಮದಿಂದ ಮುಕ್ತಿ ಪಡೆದಿದ್ದಾರೆಯೇ? ಗೊತ್ತಿಲ್ಲ. ಏಕೆಂದರೆ ಹೋದವರು ಯಾರೂ ವಾಪಸ್ ಬಂದು ಹೇಳುವುದಿಲ್ಲ…ಅಲ್ಲವಾ!?

ಈ ಮುಕ್ತಿ ಭವನಗಳಲ್ಲಿ ನೆಲೆಸಲು ನಿಯಮಗಳಿವೆ: 1. ಮರಣಶಯ್ಯೆಯಲ್ಲಿರುವ ಮೋಕ್ಷಾರ್ಥಿ ಹಾಗೂ ಆತನ ಕುಟುಂಬ ಗರಿಷ್ಠ 15 ದಿನಗಳ ಇಲ್ಲಿ ನೆಲೆಸಬಹುದು. 2. ಸಾಂಕ್ರಾಮಿಕ ರೋಗಗ್ರಸ್ತರಿಗೆ ನೆಲೆಸಲು ಅವಕಾಶವಿಲ್ಲ. 3. ಅತಿಥಿ ಗೃಹದ ಇತರೆ ಸದಸ್ಯರು, ನಿರ್ವಾಹಕರೊಡನೆ ಅಸಭ್ಯವಾಗಿ ವರ್ತಿಸುವುದು, ಅನುಚಿತವಾಗಿ ನಡೆದುಕೊಳ್ಳುವಂತಿಲ್ಲ. 4. ಸಂಬಂಧಿಕರು ಸೌದೆ ಒಲೆಯಲ್ಲಿ ಅಡುಗೆ ಮಾಡಿಕೊಳ್ಳತಕ್ಕದ್ದು. 5. ಮೋಕ್ಷಾರ್ಥಿಯೂ ಮುಕ್ತಿ ಹೊಂದಿದ 24 ಗಂಟೆಗಳಲ್ಲಿ ಅವರ ಕುಟುಂಬಸ್ಥರು ಅತಿಥಿ ಗೃಹ ತೊರೆಯಬೇಕು. 6. ಕರ್ಮ ಕಳೆಯುವ ತನಕ ಮುಕ್ತಿ ಇಲ್ಲ. 7. ಸಾವಿನಲ್ಲೂ ಇಲ್ಲಿ ಸಮಾನತೆ ಇಲ್ಲ. ಕಾಶಿಯಲ್ಲಿ ಹಲವೆಡೆ ವರ್ಣಾಶ್ರಮಕ್ಕೆ ತಕ್ಕ ಪ್ರತ್ಯೇಕ ಘಾಟ್ ಗಳಿವೆ. ಕೆಲವು ಹಿಂದೂಗಳಿಗೆ ಸಾವಿನಲ್ಲೂ ಹೆಚ್ಚಿನ ಮರ್ಯಾದೆ ನೀಡಲಾಗುತ್ತದೆ ಎಂಬ ಕೂಗಿದೆ.

ಆದರೆ, ಮೊದಲೇ ಹೇಳಿದಂತೆ ಮುಕ್ತಿ ಹೊಂದಲು ಸಾಯುವ ವ್ಯಕ್ತಿಯ ಮನಃಸ್ಥಿತಿ ಮುಖ್ಯವಾಗುತ್ತದೆ. ಜಾತಿ, ಧರ್ಮ, ಮತ, ಪಂಥ ಎಲ್ಲವನ್ನೂ ಮೀರಿದ್ದು ಸಾವು. ಅತಿಥಿ ಗೃಹಗಳು ಮೋಕ್ಷಾರ್ಥಿಯ ಕೊನೆ ನಿಲ್ದಾಣವಾಗಿ, ಹುಟ್ಟು ಸಾವಿನ ಚಕ್ರದಿಂದ ತಪ್ಪಿಸಿಕೊಳ್ಳಲು ಕಾಶಿಯಲ್ಲಿ ಮುಕ್ತಿ ಹೊಂದುವುದೇ ಮಾರ್ಗ ಎಂಬ ನಂಬಿಕೆ ಅಚಲವಾಗಿ ಇಂದಿಗೂ ಉಳಿದುಕೊಂಡು ಬಂದಿದೆ. ಆದರೆ, ಕಾಶಿಯಲ್ಲಿ ಸಾಯುವವರಿಗೆಲ್ಲ ಮುಕ್ತಿ ಸಿಗುವುದಿಲ್ಲ, ಮುಕ್ತಿ ಸಿಗಲು ಕಾಶಿಯಲ್ಲೇ ಸಾಯಬೇಕಾಗಿಲ್ಲ. ಕರ್ಮ ಕಳೆಯುವ ತನಕ ಮುಕ್ತಿ ಇಲ್ಲ ಎಂಬ ಮಾತಿದ್ದರೂ, ಹುಟ್ಟು ಸಾವಿನ ಮರ್ಮ ಅರಿತರೇ ಮೋಕ್ಷ ತಾನಾಗೇ ಲಭಿಸುತ್ತದೆ. (ಸಂಗ್ರಹ- ಸತ್ಸಂಗ)

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!