ಶ್ರೀ ವಿಷ್ಣುಸಹಸ್ರನಾಮದಲ್ಲಿ ಶ್ರೀ ರಾಮ ರಾಮ ರಾಮೇತಿ ಶ್ಲೋಕದ ಮಹಿಮೆ, ಇದೊಂದು ಮಂತ್ರ ಶ್ರೀ ವಿಷ್ಣುಸಹಸ್ರನಾಮಕ್ಕೆ ಸಮ ಹೇಗೆ?

ಮಾರ್ಗಶಿರ ಮಾಸವು 2021ರ ಡಿಸೆಂಬರ್ 5ರಿಂದ ಆರಂಭವಾಗಿ 2022ರ ಜನವರಿ 2ಕ್ಕೆ ಮುಕ್ತಾಯಗೊಳ್ಳಲಿದೆ. ಈ ಮಾಸದಲ್ಲಿ ಶಂಖಪೂಜೆ, ನದಿ ಸ್ನಾನ, ದಾನ, ಭಜನೆ ಮತ್ತು ಪೂಜೆಗೆ ವಿಶೇಷ ಮಹತ್ವವಿದೆ.

ಶ್ರೀ ವಿಷ್ಣುಸಹಸ್ರನಾಮದಲ್ಲಿ ಶ್ರೀ ರಾಮ ರಾಮ ರಾಮೇತಿ ಶ್ಲೋಕದ ಮಹಿಮೆ, ಇದೊಂದು ಮಂತ್ರ ಶ್ರೀ ವಿಷ್ಣುಸಹಸ್ರನಾಮಕ್ಕೆ ಸಮ ಹೇಗೆ?
ವಿಷ್ಣು
Follow us
| Updated By: preethi shettigar

Updated on:Dec 06, 2021 | 7:06 AM

ಮಾರ್ಗಶಿರ ಮಾಸದಲ್ಲಿ ಶ್ರೀ ಕೃಷ್ಣ ಮತ್ತು ವಿಷ್ಣುವಿನ ಆರಾಧನೆ ಮಾಡಲಾಗುತ್ತೆ. ಮಾರ್ಗಶಿರ ಅಂದರೆ ಅಘನ ಮಾಸದಲ್ಲಿ ಕೃಷ್ಣ ಮತ್ತು ವಿಷ್ಣುವಿನ ಮಾಡುವುದರಿಂದ ಎಲ್ಲಾ ಪಾಪಗಳು ನಿವಾರಣೆಯಾಗಿ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ನಂಬಲಾಗಿದೆ. ಮಾರ್ಗಶಿರ ಮಾಸವು 2021ರ ಡಿಸೆಂಬರ್ 5ರಿಂದ ಆರಂಭವಾಗಿ 2022ರ ಜನವರಿ 2ಕ್ಕೆ ಮುಕ್ತಾಯಗೊಳ್ಳಲಿದೆ. ಈ ಮಾಸದಲ್ಲಿ ಶಂಖಪೂಜೆ, ನದಿ ಸ್ನಾನ, ದಾನ, ಭಜನೆ ಮತ್ತು ಪೂಜೆಗೆ ವಿಶೇಷ ಮಹತ್ವವಿದೆ.

“ಶ್ರೀ ವಿಷ್ಣುಸಹಸ್ರನಾಮದಲ್ಲಿ ಶ್ರೀ ರಾಮ ರಾಮ ರಾಮೇತಿ ಶ್ಲೋಕದ ಮಹಿಮೆ” ಅದೊಂದು ಆಶ್ರಮ ಅಲ್ಲಿ ಗುರುವೊಬ್ಬರು ಶಿಷ್ಯರಿಗೆ ಶ್ರೀ ವಿಷ್ಣುಸಹಸ್ರನಾಮ ಸ್ತೋತ್ರವನ್ನು ಹೇಳಿಕೊಡುತ್ತಿದ್ದರು ಫಲಶೃತಿಯಲ್ಲಿ ಬರುವ “ಶ್ರೀ ರಾಮ ರಾಮ ರಾಮೇತಿ ರಮೇ ರಾಮೇ ಮನೋರಮೇ” ಎಂಬ ಶ್ಲೋಕವನ್ನು ಮೂರು ಬಾರಿ ಪಠಿಸಬೇಕೆಂದು, ಹೀಗೆ ಮೂರು ಬಾರಿ ಪಠಿಸುವುದರಿಂದ ಇಡೀ ಶ್ರೀವಿಷ್ಣುಸಹಸ್ರನಾಮವನ್ನು ಪಠಿಸಿದಂತಾಗುತ್ತದೆ ಎಂದು ಹೇಳಿದನು. ಆದರೆ ಶಿಷ್ಯವೃಂದದಲ್ಲಿದ್ದ ಒಂದು ಹುಡುಗನಿಗೆ ಮಾತ್ರ ಗುರುಗಳು ಹೇಳಿದ್ದು ಸರಿ ಎನಿಸಲಿಲ್ಲ ಹಾಗಾಗಿ ಗುರುಗಳಿಗೆ ಕೇಳಿಯೇಬಿಟ್ಟ! ಗುರುಗಳೆ ಅದು ಹೇಗೆ ಮೂರು ಬಾರಿ ಪಠಿಸುವುದು ಸಾವಿರಕ್ಕೆ ಸಮವಾಗಲು ಸಾಧ್ಯ? ನನಗೆ ಇದು ನಂಬಲು ಸಾಧ್ಯವಾಗುತ್ತಿಲ್ಲ ಎಂದನು. ಇದನ್ನು ಕೇಳಿದ ಗುರು ಮುಗುಳ್ನಕ್ಕರು.

ಗುರುಗಳು ಮಹಾಪಂಡಿತರಾಗಿದ್ದರು ಹಾಗಾಗಿ ಶಿಷ್ಯನ ಪ್ರಶ್ನೆಗೆ ಉತ್ತರಿಸಲು ಆ ಗುರುವಿಗೆ ಕಷ್ಟವಾಗಲಿಲ್ಲ. ಮಗೂ “ರಾಮ” ನಾಮ ಅತ್ಯಂತ ಸವಿಯಾದ ಪದವಾಗಿದೆ ಎಂದು ಶಿವ ವರ್ಣಿಸಿದ್ದಾನೆ ಇದನ್ನು ಮೂರು ಬಾರಿ ಜಪಿಸುವುದು ಶ್ರೀ ವಿಷ್ಣುಸಹಸ್ರನಾಮಗಳನ್ನು ಪಠಿಸಿದಂತೆ ಅದು ಹೇಗೆ ಎಂಬುದನ್ನು ನಾನು ವಿವರಿಸುತ್ತೇನೆ. ಈ ಶ್ಲೋಕದಲ್ಲಿ ಬರುವ ರಾಮ ಎಂಬ ಪದವನ್ನು ತೆಗೆದುಕೋ ಇದು ಸಂಸ್ಕೃತದ “ರಾ” ಹಾಗೂ “ಮ” ಎಂಬ ಅಕ್ಷರಗಳಿಂದ ಆದ ಪದವಾಗಿದೆ.

ಪದ ರ – ಯ,ರ, ಲ, ವ ವ್ಯಂಜನದಲ್ಲಿ ಬರುವ 2 ನೇ ಪದ ಮ – ಪ, ಫ, ಬ, ಭ, ಮ ವ್ಯಂಜನ 5 ನೇ ಪದ ಈ ರಾ ಹಾಗೂ ಮ ವನ್ನು ಸೇರಿಸಿದರೆ ಬರುವುದು “ರಾಮ” ಮೇಲೆ ಹೇಳಿದಂತೆ ರ- ಯ, ರ, ಲ, ವ ದಲ್ಲಿ ಬರುವ 2 ನೆ ವ್ಯಂಜನ ಹಾಗೂ “ಮ” ಪ, ಫ, ಬ, ಭ, ಮ ದ 5 ನೆ ವ್ಯಂಜನ ಈ 2 ಹಾಗೂ 5 ನ್ನು ಗುಣಿಸಿದರೆ ಬರುವುದು ಹತ್ತು.

ಈ ಶ್ಲೋಕದಲ್ಲಿ ರಾಮ ಪದ 3 ಬಾರಿ ಬರುತ್ತದೆ ಅಂದರೆ 2,5,2,5,2,5=10x10x10=1000 ವಾಗುತ್ತದೆ. ರಾಮನಾಮವನ್ನು 3 ಬಾರಿ ಪಠಿಸಿದರೆ ಅದು ಶ್ರೀ ವಿಷ್ಣುವಿನ ಸಹಸ್ರನಾಮ ಪಠಿಸಿದಂತೆ ಆಗುತ್ತದೆ ಎಂದು ಗುರು ವಿವರಿಸಿದರು. ಗುರುವಿನ ಈ ಉತ್ತರದಿಂದ ಶಿಷ್ಯನಿಗೆ ಸಂತೋಷವಾಯಿತಲ್ಲದೆ ಭಯಭಕ್ತಿಯಿಂದ ಶ್ರೀ ವಿಷ್ಣುಸಹಸ್ರನಾಮವನ್ನು ಕಲಿಯಲಾರಂಭಿಸಿದನು.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಭಗವಾನ್ ವಿಷ್ಣುವಿನ ಬೆಲೆಬಾಳುವ ವಿಗ್ರಹ ಪತ್ತೆ ; ಮಣ್ಣು ಅಗೆಯುವಾಗ ಸಿಕ್ಕರೂ ಸುಮ್ಮನಿದ್ದ ಶಿಕ್ಷಕ

Published On - 6:40 am, Mon, 6 December 21

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ