AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lord Vishnu: ಗುರುವಾರ ವಿಷ್ಣು ಪೂಜೆ ಮಾಡುವುದರಿಂದ ಸಿಗುವ ಫಲಗಳೇನು?

ಇಂದು ಗುರುವಾರ ಈ ದಿನ ವಿಷ್ಣು ಪೂಜೆ ಮಾಡುವುದರಿಂದ ಅನೇಕ ರೀತಿಯ ಫಲಗಳು ಸಿಗುತ್ತವೆ. ಹಾಗೂ ಜಾತಕದಲ್ಲಿ ಗುರುಗ್ರಹದ ಸ್ಥಾನ ಕೆಟ್ಟದಾಗಿದ್ದರೆ, ಅವರು ಗುರುವಾರ ದೇವಾಲಯದಲ್ಲಿ ಕೇಸರಿ ಮತ್ತು ಹಳದಿ ಬಣ್ಣದ ಬೇಳೆಗಳನ್ನು ದಾನ ಮಾಡಬೇಕು. ಇದರಿಂದ ಕುಂಡಲಿಯಲ್ಲಿನ ಗುರುವಿನ ಸ್ಥಾನ ಬಲವಾಗುತ್ತೆ.

Lord Vishnu: ಗುರುವಾರ ವಿಷ್ಣು ಪೂಜೆ ಮಾಡುವುದರಿಂದ ಸಿಗುವ ಫಲಗಳೇನು?
ವಿಷ್ಣು
TV9 Web
| Edited By: |

Updated on: Dec 23, 2021 | 7:15 AM

Share

ಗುರುವಾರ ಭಗವಾನ್‌ ವಿಷ್ಣುವಿನ ಆರಾಧನೆಯ ದಿನ. ಅಲ್ಲದೆ ಈ ದಿನ ಗುರುವನ್ನು ಪೂಜಿಸುವುದರಿಂದ ಅನೇಕ ಪ್ರಯೋಜನಗಳೂ ದೊರೆಯುತ್ತವೆ. ವಾರದ 7 ದಿನಗಳೂ ಕೂಡ ಅದರದೇ ಮಹತ್ವವನ್ನು ಹೊಂದಿವೆ. ಹಿಂದೂ ಪುರಾಣಗಳ ಪ್ರಕಾರ ವಾರದ 7 ದಿನವನ್ನೂ ಒಂದೊಂದು ದೇವರಿಗೆ ಅರ್ಪಿಸಲಾಗಿದೆ. ಆ ದಿನದಂದು ಆ ದೇವರನ್ನು ಪೂಜಿಸುವುದರಿಂದ ವಿಶೇಷವಾದ ಕೃಪೆಗೆ ಪಾತ್ರರಾಗುತ್ತೀರಿ. ಇಂದು ಗುರುವಾರ ಈ ದಿನ ವಿಷ್ಣು ಪೂಜೆ ಮಾಡುವುದರಿಂದ ಅನೇಕ ರೀತಿಯ ಫಲಗಳು ಸಿಗುತ್ತವೆ. ಹಾಗೂ ಜಾತಕದಲ್ಲಿ ಗುರುಗ್ರಹದ ಸ್ಥಾನ ಕೆಟ್ಟದಾಗಿದ್ದರೆ, ಅವರು ಗುರುವಾರ ದೇವಾಲಯದಲ್ಲಿ ಕೇಸರಿ ಮತ್ತು ಹಳದಿ ಬಣ್ಣದ ಬೇಳೆಗಳನ್ನು ದಾನ ಮಾಡಬೇಕು. ಇದರಿಂದ ಕುಂಡಲಿಯಲ್ಲಿನ ಗುರುವಿನ ಸ್ಥಾನ ಬಲವಾಗುತ್ತೆ.

ಸಾಮಾನ್ಯವಾಗಿ ಗುರುವಾರ ಗುರು ರಾಘವೇಂದ್ರನನ್ನು ಪೂಜಿಸಬೇಕೆಂದು ಹೇಳುತ್ತಾರೆ. ಆದರೆ ಗುರುವಾರ ಕೇವಲ ರಾಯರನ್ನು ಮಾತ್ರವಲ್ಲ, ಸಾಯಿಬಾಬರನ್ನು ಪೂಜಿಸಿದರೂ ಕೂಡ ವಿಶೇಷ ಫಲವನ್ನು ಪಡೆದುಕೊಳ್ಳಬಹುದು. ಆದರೆ ಗುರುವಾರವು ಭಗವಾನ್‌ ವಿಷ್ಣು ದೇವರಿಗೆ ಅರ್ಪಿತವಾದ ದಿನವೆಂದು ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ. ಈ ದಿನ ಅವಿವಾಹಿತ ಕನ್ಯೆಯರು ಭಗವಾನ್‌ ವಿಷ್ಣುವನ್ನು ಪೂಜಿಸಿದರೆ ಅರ್ಹ ವರನನ್ನು ತಮ್ಮ ಪತಿಯಾಗಿ ಪಡೆದುಕೊಳ್ಳುತ್ತಾರೆ. ಮನೆಯಲ್ಲಿನ ಹಣದ ಕೊರತೆ ದೂರವಾಗುತ್ತೆ. ಮಕ್ಕಳಿಲ್ಲದ ದಂಪತಿಗಳು ಸಂತಾನ ಭಾಗ್ಯವನ್ನು ಪಡೆಯುತ್ತಾರೆ. ಉದ್ಯೋಗವನ್ನು ಹುಡುಕುತ್ತಿರುವವರಿಗೆ ಉನ್ನತ ದರ್ಜೆಯ ಕೆಲಸ ಸಿಗುತ್ತದೆ. ಆದರೆ ಈ ದಿನ ಮಾಡುವ ಉಪವಾಸವನ್ನು ಯಾವುದೇ ತಪ್ಪುಗಳಿಲ್ಲದೆ ಮಾಡಿದರೆ ಮಾತ್ರ ಉತ್ತಮ ಫಲಿತಾಂಶ ಸಿಗುತ್ತದೆ.

ಗುರುವಾರ ವಿಷ್ಣು ಪೂಜೆ ಮಾಡುವುದು ಹೇಗೆ? ಗುರುವಾರ, ಬೆಳಿಗ್ಗೆ ಸ್ನಾನ ಮಾಡಿ ವಿಷ್ಣುನನ್ನು ಪೂಜಿಸಬೇಕು. ಪೂಜೆಯಲ್ಲಿ ಹಳದಿ ವಸ್ತುಗಳು, ಹಳದಿ ಹೂವುಗಳು, ಹಳದಿ ಬಣ್ಣದ ಬೇಳೆಯನ್ನು, ಒಣ ದ್ರಾಕ್ಷಿ, ಸಿಹಿ ತಿಂಡಿಗಳನ್ನು, ಹಳದಿ ಅಕ್ಕಿ ಮತ್ತು ಅರಿಶಿನವನ್ನು ಅರ್ಪಿಸಬೇಕು. ವಿಷ್ಣುವಿನ ಕಥೆಯನ್ನು ಓದುವ ಮತ್ತು ಪೂಜಿಸುವ ಸಮಯದಲ್ಲಿ, ಶುದ್ಧ ಮನಸ್ಸಿನಿಂದ ತಮ್ಮೆಲ್ಲಾ ಆಸೆಗಳನ್ನು ಈಡೇರಿಸುವಂತೆ ಪೂಜಿಸಬೇಕು.

ಬಾಳೆ ಮರವನ್ನು ಗುರುವಾರ ಪೂಜಿಸುವುದು ಅವಶ್ಯಕ. ನೀರಿಗೆ ಅರಿಶಿನ ಸೇರಿಸಿ ಮತ್ತು ಬಾಳೆ ಮರಕ್ಕೆ ಅರ್ಪಿಸಿ. ನಂತರ ಬಾಳೆ ಮರಕ್ಕೆ ಬಾಳೆಹಣ್ಣು, ಕಡಲೆ ಬೇಳೆ, ಬೆಲ್ಲ ಮತ್ತು ಒಣ ದ್ರಾಕ್ಷಿಯನ್ನು ಅರ್ಪಿಸಿ. ಆರತಿಯನ್ನು ಬೆಳಗಿ ಬಾಳೆ ಗಿಡದ ಕೆಳಗೆ ದೀಪವನ್ನು ಬೆಳಗಿಸಬೇಕು. ಗುರುವಾರ, ಉಪವಾಸವನ್ನು ಮಾಡುವಾಗ ಕೇವಲ ಒಂದು ಬಾರಿ ಮಾತ್ರ ಆಹಾರವನ್ನು ಸೇವಿಸಬೇಕು.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಭಗವಾನ್ ವಿಷ್ಣುವಿನ ಬೆಲೆಬಾಳುವ ವಿಗ್ರಹ ಪತ್ತೆ ; ಮಣ್ಣು ಅಗೆಯುವಾಗ ಸಿಕ್ಕರೂ ಸುಮ್ಮನಿದ್ದ ಶಿಕ್ಷಕ

Follow Us
Web contact
Web contact

TV9 Kannada

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ