AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Badrinath Dham Yatra 2024: ಬದರೀನಾಥನಿಗೆ ತುಪ್ಪ ಲೇಪಿತ ಕಂಬಳಿ ಯಾಕೆ? ಧಾಮದ ಬಾಗಿಲು ತೆರೆಯುವ ದಿನಾಂಕ, ಸಮಯ ಇಲ್ಲಿದೆ

ಚಾರ್ ಧಾಮ್ ಯಾತ್ರೆಯ ಬಾಗಿಲು ತೆರೆಯುವ ಪ್ರಕ್ರಿಯೆ ಆರಂಭವಾಗಿದೆ. ಜೊತೆಗೆ ಬದರೀನಾಥ್ ಧಾಮದ ಬಾಗಿಲು ತೆರೆಯುವ ದಿನಾಂಕವನ್ನು ಘೋಷಿಸಲಾಗಿದೆ. ಉತ್ತರಾಖಂಡದಲ್ಲಿರುವ ವಿಷ್ಣುವಿನ ಪವಿತ್ರ ಬದರೀನಾಥ ಧಾಮದ ಬಾಗಿಲುಗಳು ಈ ವರ್ಷ ಯಾವಾಗ ತೆರೆಯುತ್ತವೆ ಎಂದು ಆ ಶುಭ ಸಮಯ ಯಾವಾಗ? ಇಲ್ಲಿದೆ ಮಾಹಿತಿ.

Badrinath Dham Yatra 2024: ಬದರೀನಾಥನಿಗೆ ತುಪ್ಪ ಲೇಪಿತ ಕಂಬಳಿ ಯಾಕೆ? ಧಾಮದ ಬಾಗಿಲು ತೆರೆಯುವ ದಿನಾಂಕ, ಸಮಯ ಇಲ್ಲಿದೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 16, 2024 | 10:54 AM

Share

ಚಾರ್ ಧಾಮ್ ಯಾತ್ರೆಯನ್ನು (Badrinath Dham Yatra) ಹಿಂದೂ ಧರ್ಮದಲ್ಲಿ ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಪ್ರತಿ ವರ್ಷ, ಚಾರ್ ಧಾಮ್ ಯಾತ್ರೆಯು ನಿಗದಿತ ಅವಧಿಗೆ ಪ್ರಾರಂಭವಾಗುತ್ತದೆ, ಅದರಲ್ಲಿ ಬದರೀನಾಥ್ ಧಾಮ್ ಯಾತ್ರೆಯನ್ನು ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ. ಏಕೆಂದರೆ ಉತ್ತರಾಖಂಡದಲ್ಲಿರುವ ಬದರೀನಾಥ ಧಾಮವನ್ನು ವಿಷ್ಣುವಿನ ಮುಖ್ಯ ವಾಸಸ್ಥಾನವೆಂದು ಪರಿಗಣಿಸಲಾಗಿದೆ. ಇದಲ್ಲದೆ, ಬದರೀನಾಥ್ ಧಾಮ್ ವನ್ನು ಭೂಮಿಯ ವೈಕುಂಠ ಧಾಮ್ ಎಂದೂ ಕೂಡ ಕರೆಯಲಾಗುತ್ತದೆ. 6 ತಿಂಗಳ ವಿಶ್ರಾಂತಿಯ ಸಮಯದಲ್ಲಿ ಶ್ರೀ ಹರಿ ವಿಷ್ಣುವು ಇಲ್ಲಿಯೇ ವಾಸಿಸುತ್ತಾನೆ ಎಂದು ನಂಬಲಾಗಿದೆ. ಈ ದೇವಾಲಯದ ಬಾಗಿಲು ತೆರೆಯುವ ಮೊದಲು, ಜೋಶಿ ಮಠದಲ್ಲಿರುವ ನರಸಿಂಹ ದೇವಸ್ಥಾನದಲ್ಲಿ ಗರುಡ ಚಾಡ್ ಉತ್ಸವವನ್ನು ಆಚರಿಸುವ ಸಂಪ್ರದಾಯವಿದೆ. ಪ್ರತಿ ವರ್ಷವು ನಡೆಯುವ ಈ ಉತ್ಸವದಲ್ಲಿ ಭಗವಾನ್ ಬದರೀನಾಥನ ಹೆಚ್ಚಿನ ಸಂಖ್ಯೆಯ ಭಕ್ತರು ಭಾಗವಹಿಸುತ್ತಾರೆ. ಹಾಗಾದರೆ ಬದರೀನಾಥ ಧಾಮದ ಬಾಗಿಲುಗಳ ತೆರೆಯುವ ಶುಭ ಸಮಯವನ್ನು ತಿಳಿದುಕೊಳ್ಳಿ.

ಬದರೀನಾಥ ಧಾಮದ ಬಾಗಿಲು ಯಾವಾಗ ತೆರೆಯುತ್ತದೆ?

ಕೋಟ್ಯಂತರ ಹಿಂದೂಗಳ ನಂಬಿಕೆ ಮತ್ತು ಪೂಜ್ಯತೆಯ ಸಂಕೇತವಾದ ಭಗವಾನ್ ಬದರೀನಾಥ ಧಾಮದ ಬಾಗಿಲುಗಳನ್ನು 2024 ರ ಮೇ 12 ರಂದು ಬೆಳಿಗ್ಗೆ 6 ಗಂಟೆಗೆ ಬ್ರಹ್ಮ ಮುಹೂರ್ತದಲ್ಲಿ ಎಲ್ಲಾ ಭಕ್ತರಿಗೆ ತೆರೆಯಲಾಗುತ್ತದೆ. ಈ ಸಂದರ್ಭದಲ್ಲಿ, ಹೆಚ್ಚಿನ ಸಂಖ್ಯೆಯ ಭಕ್ತರು ದರ್ಶನ ಪಡೆಯಲು ಬರುತ್ತಾರೆ. ಶತಮಾನಗಳಿಂದ ನಡೆಯುತ್ತಿರುವ ಈ ಸಂಪ್ರದಾಯದ ಪ್ರಕಾರ, ಅರಮನೆಯಲ್ಲಿ ಬಾರಾಜ್ ಪುರೋಹಿತರು, ತೆಹ್ರಿ ರಾಜ ಮಹಾರಾಜ ಮನುಜ್ಯೇಂದ್ರ ಷಾ ಶುಭ ದಿನದ ಲೆಕ್ಕಾಚಾರ ಮಾಡಿದ ನಂತರ, ಬಾಗಿಲು ತೆರೆಯಲು ಸಮಯವನ್ನು ನಿರ್ಧರಿಸಲಾಗುತ್ತದೆ.

ಇದನ್ನೂ ಓದಿ: ರಥ ಸಪ್ತಮಿಯ ದಿನ ಪಾಲಿಸಬೇಕಾದ ಕೆಲವು ನಿಯಮಗಳು ಇಲ್ಲಿದೆ

ಬದರಿನಾಥ ದೇಗುಲದ ಹಿನ್ನೆಲೆ:

ವಿಷ್ಣುವಿಗೆ ಸಮರ್ಪಿತವಾದ 108 ಪ್ರಮುಖ ದೇವಸ್ಥಾನಗಳಲ್ಲಿ ಬದರಿನಾಥ ಕೂಡ ಒಂದು. ಅಲಕನಂದಾ ನದಿಯ ದಡದಲ್ಲಿ ಚಮೋಲಿ ಜಿಲ್ಲೆಯ ಗರ್ವಾಲ್ ಬೆಟ್ಟದ ಸಮೀಪ ಈ ದೇವಸ್ಥಾನವಿದೆ. ಇನ್ನು ವಿಷ್ಣು ಪುರಾಣಗಳಲ್ಲಿಯೂ ಈ ದೇವಾಲಯದ ಬಗ್ಗೆ ಉಲ್ಲೇಖಿಸಲಾಗಿದೆ. ಇಲ್ಲಿರುವ ವಿಷ್ಣುವಿನ ವಿಗ್ರಹವು ಧ್ಯಾನ ಭಂಗಿಯಲ್ಲಿದೆ. ಕೆಲವು ನಂಬಿಕೆಗಳ ಪ್ರಕಾರ ವಿಷ್ಣು ದೇವರು ಈ ಸ್ಥಳದಲ್ಲಿ ಧ್ಯಾನಕ್ಕೆ ಕುಳಿತಿದ್ದಾಗ ಅಲ್ಲಿನ ಹವಾಮಾನ ಅರಿತ ವಿಷ್ಣು ಪತ್ನಿ ದೇವಿ ಲಕ್ಷ್ಮೀಯು ಬದರಿ ಮರದ ರೂಪದಲ್ಲಿ ರಕ್ಷಣೆ ನೀಡಿದ್ದಳು ಎಂದು ನಂಬಲಾಗುತ್ತದೆ. ಲಕ್ಷ್ಮೀಯ ಭಕ್ತಿಯಿಂದ ಪ್ರಸನ್ನರಾದ ವಿಷ್ಣು ದೇವರು ಈ ಸ್ಥಳಕ್ಕೆ ಬದರಿಕಾ ಆಶ್ರಮ ಎಂದು ಹೆಸರಿಟ್ಟಿದ್ದಾಗಿ ಸ್ಥಳ ಪುರಾಣ ಹೇಳುತ್ತದೆ.

ಬದರೀನಾಥನಿಗೆ ತುಪ್ಪ ಲೇಪಿತ ಕಂಬಳಿ

ಇಲ್ಲಿ ಚಳಿಗಾಲದಲ್ಲಿ ಬದರೀನಾಥನಿಗೆ ತುಪ್ಪ ಲೇಪಿತ ಕಂಬಳಿಯನ್ನು ಹೊದಿಸಲಾಗುತ್ತದೆ. ಕೊರೆಯುವ ಚಳಿಗಾಗಿ ಈ ರೀತಿಯ ಸಂಪ್ರದಾಯವನ್ನು ಹಿಂದಿನಿಂದಲೂ ಪಾಲಿಸಿಕೊಂಡು ಬರಲಾಗಿದ್ದು ದೇವರ ಮೇಲೆ ತುಪ್ಪದ ಲೇಪನ ಮತ್ತು ಕಂಬಳಿ ಹಾಳಾಗದೇ ಇದ್ದರೆ, ಇದು ಶುಭ ಸೂಚಕ ಎಂದು ನಂಬಲಾಗುತ್ತದೆ. ಕಡು ಚಳಿಯಲ್ಲಿ ತುಪ್ಪ ಒಣಗದಿದ್ದರೆ ಅದು ಇಲ್ಲಿನ ಜನರಿಗೆ ಸಂತೋಷ ಕೊಡುತ್ತದೆ ಮತ್ತು ಇದು ದೇಶಕ್ಕೆ ಶುಭ ಸೂಚಕ ಎನ್ನುವ ನಂಬಿಕೆಯೂ ಇದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ