AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ದರ್ಶನ ಮಾಡುವ ಮುಂಚೆ ಈ ಕ್ರಮವನ್ನು ನೆನಪಿನಲ್ಲಿಡಿ, ಆಗಲೇ ದರ್ಶನದ ಫಲ ಪ್ರಾಪ್ತಿಯಾಗುವುದು

ಯಾವುದೇ ಯಾತ್ರೆಗೆ ಹೋದಾಗ ಯಾತ್ರಾರ್ಥಿಯು ದೇವರ ಪ್ರಥಮ ದರ್ಶನ ಸಮಯದಲ್ಲಿ ಮೊದಲು ದೇವಸ್ಥಾನದ ಗೋಡೆಗೆ ಒರಗಿ ನಿಂತು ಕೈಮುಗಿದು ಹೀಗೆ ಹೇಳಬೇಕು.

ದೇವರ ದರ್ಶನ ಮಾಡುವ ಮುಂಚೆ ಈ ಕ್ರಮವನ್ನು ನೆನಪಿನಲ್ಲಿಡಿ, ಆಗಲೇ ದರ್ಶನದ ಫಲ ಪ್ರಾಪ್ತಿಯಾಗುವುದು
ಭಗವಾನ್ ಶಿವ
TV9 Web
| Edited By: |

Updated on: Jan 25, 2022 | 6:50 AM

Share

ಯಾವುದಾದರೂ ಯಾತ್ರೆ ಅಥವಾ ದೇವಸ್ಥಾನಕ್ಕೆ ಹೋದಾಗ ನಾವು ದೇವರ ದರ್ಶನ ಹೇಗೆ ಪಡೆಯಬೇಕು ಅನ್ನುವುದಕ್ಕೆ ನಮ್ಮ ಪೂರ್ವಜರು ಸರಿಯಾದ ಕ್ರಮವನ್ನು ತಿಳಿಸಿದ್ದಾರೆ. ಅದರಂತೆ ನಡೆದರೆ ನಮಗೆ ಖಂಡಿತ ದರ್ಶನ ಫಲ ಸಿಗುತ್ತೆ. ಯಾವುದೇ ಯಾತ್ರೆಗೆ ಹೋದಾಗ ಯಾತ್ರಾರ್ಥಿಯು ದೇವರ ಪ್ರಥಮ ದರ್ಶನ ಸಮಯದಲ್ಲಿ ಮೊದಲು ದೇವಸ್ಥಾನದ ಗೋಡೆಗೆ ಒರಗಿ ನಿಂತು ಕೈಮುಗಿದು ಹೀಗೆ ಹೇಳಬೇಕು.

‘ನೂರು ಕೋಟಿ ತೀರ್ಥಗಳ ಸ್ನಾನ ಮಾಡಿಸು, ವಿರಜಾ ನದಿಯ ಸ್ನಾನ ಮಾಡಿಸು, ತಾರಕ ಬ್ರಹ್ಮ ದೇವರಿಂದ ತತ್ವ ಉಪದೇಶ ಮಾಡಿಸು. ವೈಕುಂಠಕ್ಕೆ ಕರೆದೊಯ್ದು ನಿನ್ನ ದರುಶನ ಮಾಡಿಸು’ ಎಂದು ಪ್ರಾರ್ಥಿಸಿ ನಂತರ ಹೊರಗಿನಿಂದಲೇ ದೇವರ ದರ್ಶನ ಮಾಡಬೇಕು. ಅದಕ್ಕೆ ಧೂಳಿದರ್ಶನ ಅಂತಾರೆ ಧೂಳಿ ದರ್ಶನಂ ಪಾಪ ನಾಶನಂ. ಧೂಳಿದರ್ಶನ ದಿಂದ ಪಾಪ ನಾಶವಾಗುತ್ತೆ. ನಂತರ ತಲೆಯಲ್ಲಿರುವ ಚಿಂತೆಗಳನ್ನೇಲ್ಲ ಬಿಟ್ಟು ಶಿಖರ ದರ್ಶನ ಮಾಡಿ ಶಿಖರ ದರ್ಶನಂ ಚಿಂತಾನಾಶನಂ ನಂತರ ದೇವಸ್ಥಾನ ಒಳಗೆ ಹೋಗುವಾಗ ಕೈಕಾಲುಗಳನ್ನು ತೊಳೆದು ದೇವಸ್ಥಾನ ಒಳಗಡೆ ಪ್ರವೇಶಮಾಡಿ ತಕ್ಷಣ ದೇವರ ವಿಗ್ರಹವನ್ನು ನೋಡ ಬೇಡಿ ಅದಕ್ಕೂ ಒಂದು ಕ್ರಮವಿದೆ.

ದೇವರ ದರ್ಶನ ಮಾಡುವ ಕ್ರಮ ಮೊದಲು ಪಾದ ದರ್ಶನ ಮಾಡಿ ಪಾದ ದರ್ಶನಂ ಪಾಪನಾಶನಂ. ನಂತರ ಕಟಿ ದರ್ಶನ ಮಾಡಿ ಕಟಿ ದರ್ಶನಂ ಕಾಮನಾಶನಂ ನಂತರ ನಾಭಿ ದರ್ಶನ ಮಾಡಿ ನಾಭಿ ದರ್ಶನಂ ನರಕ ನಾಶನಂ ನಂತರ ಕಂಠ ದರ್ಶನ ಮಾಡಿ ಕಂಠ ದರ್ಶನಂ ವೈಕುಂಠ ಸಾಧನಂ ನಂತರ ಮುಖ ದರ್ಶನ ಮಾಡಿ ಮುಖ ದರ್ಶನಂ ಮುಕ್ತಿ ಸಾಧನಂ ನಂತರ ಕಿರೀಟ ದರ್ಶನ ಮಾಡಿ ಕೀರಿಟ ದರ್ಶನಂ ಪುನರ್ಜನ್ಮ ನಾಶನಂ ನಂತರ ಸರ್ವ ದರ್ಶನ ಮಾಡಿ ಸರ್ವಾಂಗ ದರ್ಶನಂ ಸರ್ವ ಪಾಪ ನಾಶನಂ. ಸರ್ವಾಂಗ ದರ್ಶನ ಮಾಡಬೇಕು. ಈ ರೀತಿ ಕ್ರಮಬದ್ಧವಾಗಿ ದೇವರ ದರ್ಶನ ಮಾಡುವುದರಿಂದ ದರ್ಶನದ ಫಲ ಸಿಗುತ್ತೆ ಎಂದು ಪೂರ್ವಜರು ತಿಳಿಸಿದ್ದಾರೆ.

ದೇವಸ್ಥಾನದಲ್ಲಿ ಕುಳಿತು ಈ ಶ್ಲೋಕ ಪಠಿಸಿ ದೇವಸ್ಥಾನಗಳಿಗೆ ಹೋದಾಗ ದೇವರ ದರುಶನ ಮುಗಿಸಿ ನಮಸ್ಕಾರ ಹಾಕಿದ ನಂತರ ದೇಗುಲದ ಹೊರಗೆ ಬಂದು ಸ್ವಲ್ಪಹೊತ್ತು ಹೊರಗಡೆ ಕಟ್ಟೆಯ ಮೇಲೋ ಅಥವಾ ದೇಗಿಲದ ಮೆಟ್ಟಿಲುಗಳ ಮೇಲೆಯೋ ಕುಳಿತು ಕೊಳ್ಳುವುದು ವಾಡಿಕೆ. ಆದರೆ ಕುಳಿತಾಗ ನಾವು ದರ್ಶನ ಮಾಡಿದ ದೇವರನ್ನು ನೆನಸಿಕೊಂಡು ಈ ಕೆಳಗಿನ ಶ್ಲೋಕ ಹೇಳಿಕೊಂಡು ಪ್ರಾರ್ಥಿಸಬೇಕು. ಇದನ್ನು ನಿರ್ದಿಷ್ಟ ಉದ್ದೇಶಕ್ಕಾಗಿ ಮಾಡಲಾಗಿದೆ.

ಶ್ಲೋಕ: 1. ಅನಾಯಾಸೇನ ಮರಣಂ 2. ವಿನಾ ದೈನೇನ ಜೀವನಂ 3. ದೇಹಾಂತ ತವ ಸಾನಿಧ್ಯಂ 4. ದೇಹಿಮೇ ಪರಮೇಶ್ವರಂ

ಇದನ್ನೂ ಓದಿ: ದೇವಸ್ಥಾನದಲ್ಲಿ ದೇವರ ದರ್ಶನ ಪಡೆದ ನಂತರ ಭಕ್ತರು ಹೊರಗಡೆ ಕಟ್ಟೆ ಮೇಲೆ ಕೆಲ ಹೊತ್ತು ಕುಳಿತುಕೊಳ್ಳಬೇಕು, ಏಕೆ?

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್