AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರು ಆಲದ ಮರಕ್ಕೆ ದಾರ ಕಟ್ಟುವುದರ ಹಿಂದಿರುವ ಕಾರಣವೇನು? ಅದರ ಪ್ರಯೋಜನಗಳೇನು?

ಹಿಂದೂ ಧರ್ಮದಲ್ಲಿ, ಮಹಿಳೆಯರು ಆಲದ ಮರಕ್ಕೆ ದಾರ ಕಟ್ಟುವುದನ್ನು ನೀವು ನೋಡಿರಬಹುದು, ಆದರೆ ದಾರವನ್ನು ಏಕೆ ಕಟ್ಟುತ್ತಾರೆಂದು ನಿಮಗೆ ತಿಳಿದಿದೆಯೇ? ಆಲದ ಮರಕ್ಕೆ ದಾರವನ್ನು ಕಟ್ಟುವ ಪ್ರಾಮುಖ್ಯತೆ ಏನು ಮತ್ತು ಅದರ ಪ್ರಯೋಜನಗಳೇನು? ಈ ವಿಷಯದ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಹಿಳೆಯರು ಆಲದ ಮರಕ್ಕೆ ದಾರ ಕಟ್ಟುವುದರ ಹಿಂದಿರುವ ಕಾರಣವೇನು? ಅದರ ಪ್ರಯೋಜನಗಳೇನು?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 15, 2024 | 10:46 AM

Share

ಹಿಂದೂ ಧರ್ಮದಲ್ಲಿ, ಅನೇಕ ಮರ ಮತ್ತು ಗಿಡಗಳನ್ನು ದೇವರಂತೆಯೇ ಪೂಜಿಸಲಾಗುತ್ತದೆ. ಇದರಲ್ಲಿ ಆಲದ ಮರವೂ ಸೇರಿದೆ. ಏಕೆಂದರೆ ಈ ಮರದ ಪೂಜೆಗೆ ಹಿಂದೂ ಧರ್ಮದಲ್ಲಿ ವಿಶೇಷ ಮಹತ್ವವಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಮರ ಮತ್ತು ಸಸ್ಯಗಳನ್ನು ಪೂಜಿಸುವುದರಿಂದ ಮನೆಯ ವಾಸ್ತು ದೋಷಗಳನ್ನು ನಿವಾರಣೆ ಮಾಡಿಕೊಳ್ಳಬಹುದಾಗಿದೆ. ಅಲ್ಲದೆ ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಮನೆ ಮಾಡಲು ಕೂಡ ಇದು ಸಹಕಾರಿಯಾಗಿದೆ. ಇನ್ನು ಪೂಜೆಯ ಹೊರತಾಗಿ ಮಹಿಳೆಯರು ಆಲದ ಮರಕ್ಕೆ ದಾರ ಕಟ್ಟುವುದನ್ನು ನೀವು ನೋಡಿರಬಹುದು. ಆದರೆ ದಾರವನ್ನು ಏಕೆ ಕಟ್ಟುತ್ತಾರೆಂದು ನಿಮಗೆ ತಿಳಿದಿದೆಯೇ? ಅದರ ಪ್ರಾಮುಖ್ಯತೆ ಏನು ಮತ್ತು ಅದರಿಂದ ಜನರು ಯಾವ ಪ್ರಯೋಜನಗಳನ್ನು ಪಡೆಯುತ್ತಾರೆ ಎಂಬುದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಪಂಡಿತ್ ರಾಜೇಂದ್ರ ತಿವಾರಿ ಹೇಳುವ ಪ್ರಕಾರ ಬ್ರಹ್ಮ, ಶ್ರೀ ಹರಿ ಮತ್ತು ಶಿವ ಆಲದ ಮರದಲ್ಲಿ ವಾಸಿಸುತ್ತಾರೆ. ಆಲದ ಮರವು ಇತರ ಎಲ್ಲಾ ಮರಗಳಿಗಿಂತ ಹೆಚ್ಚಿನ ಜೀವಿತಾವಧಿಯನ್ನು ಹೊಂದಿದೆ, ಆದ್ದರಿಂದ ಇದನ್ನು ‘ಅಕ್ಷಯವೃಕ್ಷ’ ಎಂದೂ ಕರೆಯಲಾಗುತ್ತದೆ. ಆಲದ ಮರವು ದೈವಿಕ ಶಕ್ತಿಯನ್ನು ಒಳಗೊಂಡಿರುವುದರಿಂದ ಅದರ ಪೂಜೆಗೆ ವಿಶೇಷ ಮಹತ್ವವಿದೆ. ಅದಲ್ಲದೆ ಹಿಂದೂ ಧರ್ಮದಲ್ಲಿ, ಆಲದ ಮರವನ್ನು ಅದೃಷ್ಟ, ಆರೋಗ್ಯ ಮತ್ತು ಸಂಪತ್ತಿನ ಅನುಗ್ರಹ ಪಡೆಯಲು ಪೂಜೆ ಮಾಡಲಾಗುತ್ತದೆ. ಜೊತೆಗೆ ಮಹಿಳೆಯರು ತಮ್ಮ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಲು ಆಲದ ಮರಕ್ಕೆ ದಾರವನ್ನು ಕಟ್ಟುತ್ತಾರೆ. ಇದರಿಂದ ದೇವತೆಗಳ ಆಶೀರ್ವಾದ ಸಿಗುತ್ತದೆ ಎನ್ನುವ ನಂಬಿಕೆ ಇದೆ.

ಆಲದ ಮರಕ್ಕೆ ದಾರವನ್ನು ಕಟ್ಟುವುದರ ಪ್ರಯೋಜನಗಳೇನು?

ಆಲದ ಮರವನ್ನು ಪೂಜಿಸಿದ ನಂತರ, ಅದಕ್ಕೆ ದಾರವನ್ನು ಕಟ್ಟುವುದರಿಂದ ಮಹಿಳೆಯರಿಗೆ ವಿವಾಹ ಭಾಗ್ಯ ಪ್ರಾಪ್ತವಾಗುತ್ತದೆ ಎಂದು ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಈ ರೀತಿ ಮಾಡುವುದರಿಂದ ವೈವಾಹಿಕ ಜೀವನದಲ್ಲಿ ಸಂತೋಷ ಕಾಪಾಡಿಕೊಳ್ಳಬಹುದಾಗಿದೆ. ಅಲ್ಲದೆ, ಇದು ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧದಲ್ಲಿ ಯಾವುದೇ ಸಮಸ್ಯೆ ಬರದಂತೆ ಕಾಪಾಡುತ್ತದೆ. ಜೊತೆಗೆ, ಆಲದ ಮರಕ್ಕೆ ದಾರವನ್ನು ಕಟ್ಟುವ ಮೂಲಕ, ಅಕಾಲಿಕ ಮರಣವನ್ನು ಸಹ ತಪ್ಪಿಸಬಹುದು ಎಂದು ನಂಬಲಾಗಿದೆ.

ಇದನ್ನೂ ಓದಿ: ದಿನಗಳಿಗೆ ಅನುಗುಣವಾಗಿ ವಸ್ತು ದಾನ ಮಾಡಿ, ಶುಭ ಫಲಿತಾಂಶ ಖಂಡಿತ

ಆಲದ ಮರದ ಮಹತ್ವವೇನು ಗೊತ್ತಾ?

ಹಿಂದೂ ಪುರಾಣಗಳ ಪ್ರಕಾರ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರು ಆಲದ ಮರದಲ್ಲಿ ವಾಸಿಸುತ್ತಾರೆ. ಮರದ ಬೇರುಗಳು ಬ್ರಹ್ಮನನ್ನು ಪ್ರತಿನಿಧಿಸುತ್ತವೆ, ಆಲದ ಮರದ ಕಾಂಡವು ವಿಷ್ಣುವನ್ನು ಪ್ರತಿನಿಧಿಸುತ್ತದೆ ಮತ್ತು ಶಿವನು ಆಲದ ಮರದ ಮೇಲಿನ ಭಾಗವನ್ನು ಪ್ರತಿನಿಧಿಸುತ್ತಾನೆ ಹಾಗೂ ಈ ಇಡೀ ಮರವನ್ನು ಸಾವಿತ್ರಿ ಎಂದು ಪರಿಗಣಿಸಲಾಗುತ್ತದೆ. ಈ ಪವಿತ್ರ ಮರವನ್ನು ಪೂಜಿಸುವ ಮೂಲಕ, ಭಕ್ತರ ಎಲ್ಲಾ ಆಸೆಗಳು ಈಡೇರುತ್ತವೆ ಮತ್ತು ವ್ಯಕ್ತಿಗೆ ಜೀವನದ ತೊಂದರೆಗಳಿಂದ ಪರಿಹಾರ ಸಿಗುತ್ತದೆ ಹಾಗೂ ಶಾಂತಿ, ಸುಖ, ಸಂಪತ್ತು ಎಲ್ಲವೂ ಪ್ರಾಪ್ತವಾಗುತ್ತದೆ. ಹಾಗಾಗಿ ಕಷ್ಟ ಬಂದವರು ಆಲದ ಮರಕ್ಕೆ ಪೂಜೆ ನೀಡುವುದರಿಂದ ಅದರಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ