AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2025: ಶ್ರೀಕೃಷ್ಣ ಜನ್ಮಾಷ್ಟಮಿಯ ಪೂಜಾ ಮುಹೂರ್ತ ಮತ್ತು ಮಹತ್ವವನ್ನು ತಿಳಿಯಿರಿ

ಈ ವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಗಸ್ಟ್ 16 ರಂದು ಆಚರಿಸಲಾಗುತ್ತದೆ. ಬಾಲಗೋಪಾಲನ ಪೂಜೆ, ರಾತ್ರಿ ಪೂಜೆಯ ಶುಭ ಮುಹೂರ್ತ ಮತ್ತು ವಿವಿಧ ನೈವೇದ್ಯಗಳನ್ನು ಅರ್ಪಿಸುವುದರ ಹಿಂದಿನ ಮಹತ್ವದ ಕುರಿತು ಇಲ್ಲಿ ವಿವರಿಸಲಾಗಿದೆ. ಹಬ್ಬವನ್ನು ಭಕ್ತಿಯಿಂದ ಆಚರಿಸುವ ಮೂಲಕ ಕೃಷ್ಣನ ಅನುಗ್ರಹ ಪಡೆಯಿರಿ.

Krishna Janmashtami 2025: ಶ್ರೀಕೃಷ್ಣ ಜನ್ಮಾಷ್ಟಮಿಯ ಪೂಜಾ ಮುಹೂರ್ತ ಮತ್ತು ಮಹತ್ವವನ್ನು ತಿಳಿಯಿರಿ
ಶ್ರೀಕೃಷ್ಣ ಜನ್ಮಾಷ್ಟಮಿ
ಅಕ್ಷತಾ ವರ್ಕಾಡಿ
|

Updated on: Aug 12, 2025 | 11:48 AM

Share

ಶ್ರೀಕೃಷ್ಣನ ಜನ್ಮ ದಿನವನ್ನು ಶ್ರೀಕೃಷ್ಣ ಜನ್ಮಾಷ್ಟಮಿ ಎಂದು ಆಚರಿಸಲಾಗುವುದು. ವಿಷ್ಣುವಿನ ಏಂಟನೇ ಅವತಾರವಾದ ಶ್ರೀ ಕೃಷ್ಣ ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಜನಿಸಿದ ದಿನವಾಗಿದೆ. ಕೃಷ್ಣನ ಭಕ್ತರು ಈ ಹಬ್ಬವನ್ನು ಪ್ರಪಂಚದಾದ್ಯಂತ ಬಹಳ ಸಂಭ್ರಮ ಮತ್ತು ಸಡಗರದಿಂದ ಆಚರಿಸುತ್ತಾರೆ. ಈ ದಿನ ಶ್ರೀಕೃಷ್ಣನ ಬಾಲ ರೂಪವನ್ನು ಪೂಜಿಸುವ ಮೂಲಕ ಕೃಷ್ಣನ ಅನುಗ್ರಹವನ್ನು ಪಡೆದುಕೊಳ್ಳಬಹುದು.

ಈ ವರ್ಷ ಶ್ರೀಕೃಷ್ಣ ಜನ್ಮಾಷ್ಟಮಿ ಯಾವಾಗ?

ಪಂಚಾಂಗದ ಪ್ರಕಾರ, ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿ ತಿಥಿ ಆಗಸ್ಟ್ 15 ರಂದು ರಾತ್ರಿ 11:49 ಕ್ಕೆ ಪ್ರಾರಂಭವಾಗುತ್ತದೆ. ಆದರೆ, ಈ ತಿಥಿ ಆಗಸ್ಟ್ 16 ರಂದು ರಾತ್ರಿ 9:34 ಕ್ಕೆ ಕೊನೆಗೊಳ್ಳುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಉದಯ ತಿಥಿಯ ಆಧಾರದ ಮೇಲೆ ನೋಡಿದರೆ ಆಗಸ್ಟ್ 16 ರಂದು ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತದೆ.

ಜನ್ಮಾಷ್ಟಮಿ ಪೂಜಾ ಮುಹೂರ್ತ:

ಜನ್ಮಾಷ್ಟಮಿಯಂದು ಪೂಜೆಗೆ ಶುಭ ಸಮಯ ಆಗಸ್ಟ್ 16 ರಂದು ಬೆಳಿಗ್ಗೆ 12:04 ರಿಂದ ಪ್ರಾರಂಭವಾಗಿ 12:47 ರವರೆಗೆ ಮುಂದುವರಿಯುತ್ತದೆ. ಈ ಸಂದರ್ಭದಲ್ಲಿ, ನಿಮಗೆ ಪೂಜೆಗೆ ಒಟ್ಟು 43 ನಿಮಿಷಗಳು ಸಿಗುತ್ತವೆ. ಈ ಸಮಯ ಪೂಜೆಗೆ ಅತ್ಯಂತ ಶುಭ ಎಂದು ಪರಿಗಣಿಸಲಾಗುತ್ತದೆ.

  • ನಿಶ್ಚಿತ ಪೂಜಾ ಸಮಯ – ಆಗಸ್ಟ್ 15 – 16 ರಂದು ಬೆಳಿಗ್ಗೆ 12:04 ರಿಂದ 12:47 ರವರೆಗೆ
  • ಪರಾನ ಸಮಯ – ಆಗಸ್ಟ್ 16 – ರಾತ್ರಿ 09:34 ರ ನಂತರ

ಇದನ್ನೂ ಓದಿ: ಮಕ್ಕಳಲ್ಲಿ ಕಂಡುಬರುವ ಬಾಲಾರಿಷ್ಟ ದೋಷಕ್ಕೆ ಸರಳ ಪರಿಹಾರ ಇಲ್ಲಿದೆ

ಕೃಷ್ಣ ಜನ್ಮಾಷ್ಟಮಿಯ ಪೂಜೆ ವಿಧಾನ:

  • ಜನ್ಮಾಷ್ಟಮಿ ದಿನದಂದು ಮುಂಜಾನೆ ಬೇಗ ಎದ್ದು ಸ್ನಾನ ಮಾಡಿ ಮನೆಯ ದೇವರ ಕೋಣೆಯನ್ನು ಸ್ವಚ್ಛಗೊಳಿಸಿ.
  • ಮನೆಯ ದೇವರ ಕೋಣೆಯನ್ನು ಹೂವಿನಿಂದ ಅಲಂಕರಿಸಿ ದೀಪವನ್ನು ಬೆಳಗಿಸಿ.
  • ಎಲ್ಲಾ ದೇವಾನು ದೇವತೆಗಳ ಜಲಾಭಿಷೇಕವನ್ನು ಮಾಡಿ. ಈ ದಿನ, ಶ್ರೀ ಕೃಷ್ಣನ ಮಗುವಿನ ರೂಪವನ್ನು ಅಂದರೆ ಬಾಲ ಗೋಪಾಲನನ್ನು ಪೂಜಿಸಲಾಗುತ್ತದೆ.
  • ಈ ದಿನ ಬಾಲ ಗೋಪಾಲನನ್ನು ಉಯ್ಯಾಲೆಯಲ್ಲಿ ಕೂರಿಸಿ. ನಿಮ್ಮ ಇಚ್ಛೆಯಂತೆ ಗೋಪಾಲನಿಗೆ ಲಡ್ಡು ಅರ್ಪಿಸಿ.
  • ಈ ದಿನದಂದು ರಾತ್ರಿಯ ಪೂಜೆಯು ಮುಖ್ಯವಾಗಿದೆ. ಏಕೆಂದರೆ ಭಗವಾನ್ ಶ್ರೀ ಕೃಷ್ಣ ರಾತ್ರಿಯಲ್ಲಿ ಜನಿಸಿದನು.
  • ರಾತ್ರಿ ಶ್ರೀಕೃಷ್ಣನ ವಿಶೇಷ ಪೂಜೆಯನ್ನು ಮಾಡಿ. ಗೋಪಾಲನಿಗೆ ಬೆಣ್ಣೆ, ಕಲ್ಲು ಸಕ್ಕರೆ, ಹಣ್ಣುಗಳು, ಸಿಹಿತಿಂಡಿಗಳು ಮತ್ತು ಒಣ ಹಣ್ಣುಗಳನ್ನು ಅರ್ಪಿಸಿ.
  • ನೈವೇದ್ಯವನ್ನು ಅರ್ಪಿಸಿದ ನಂತರ ಶ್ರೀಕೃಷ್ಣನಿಗೆ ಆರತಿಯನ್ನು ಮಾಡಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ