AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ ಈ ದೇವಸ್ಥಾನಕ್ಕೆ ಭೇಟಿ ನೀಡಿ ನಾಣ್ಯವನ್ನು ಅರ್ಪಿಸಿ!

ಉತ್ತರಾಖಂಡದ ಜಾಗೇಶ್ವರ ಧಾಮದಲ್ಲಿರುವ ಕುಬೇರ ದೇವಸ್ಥಾನವು ಸಂಪತ್ತಿನ ದೇವರ ಪೂಜಾ ಸ್ಥಳವಾಗಿದೆ. ಭಕ್ತರು ಇಲ್ಲಿ ನಾಣ್ಯಗಳನ್ನು ಅರ್ಪಿಸಿ ಆರ್ಥಿಕ ಸಮೃದ್ಧಿಗೆ ಪ್ರಾರ್ಥಿಸುತ್ತಾರೆ. ದೇವಸ್ಥಾನವು ಚಿನ್ನ ಅಥವಾ ಬೆಳ್ಳಿಯ ನಾಣ್ಯಗಳನ್ನು ಭಕ್ತರಿಗೆ ಪ್ರಸಾದವಾಗಿ ನೀಡುತ್ತದೆ. ಈ ದೇವಸ್ಥಾನವು 9ನೇ ಶತಮಾನದಿಂದಲೂ ಭಕ್ತಿಯ ಕೇಂದ್ರವಾಗಿದೆ ಮತ್ತು ಅದರ ವಾಸ್ತುಶಿಲ್ಪ ಮತ್ತು ಪವಾಡಗಳಿಗೆ ಹೆಸರುವಾಸಿಯಾಗಿದೆ.

ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ ಈ ದೇವಸ್ಥಾನಕ್ಕೆ ಭೇಟಿ ನೀಡಿ ನಾಣ್ಯವನ್ನು ಅರ್ಪಿಸಿ!
Kubera Temple In India
ಅಕ್ಷತಾ ವರ್ಕಾಡಿ
|

Updated on: Jan 12, 2025 | 7:44 AM

Share

ಭಾರತವನ್ನು ದೇವಾಲಯಗಳ ನಾಡು ಎಂದು ಕರೆಯಲಾಗುತ್ತದೆ. ದೇವಾಲಯಗಳ ರಹಸ್ಯಗಳು ಮತ್ತು ಪವಾಡಗಳ ಕಥೆಗಳು ಇಲ್ಲಿ ಜನಪ್ರಿಯವಾಗಿವೆ. ಕೆಲವು ದೇವಾಲಯ ತನ್ನ ವಾಸ್ತು ಶೈಲಿ ಹಾಗೂ ಪವಾಡಗಳಿಂದಲೇ ಪ್ರಪಂಚದಾದ್ಯಂತ ಜನಪ್ರಿಯವಾಗಿವೆ. ಇದೀಗ ಅಂತದ್ದೇ ಸಂಪತ್ತಿನ ದೇವರಾದ ಕುಬೇರನ ದೇವಾಲವೊಂದು ಭಾರತದಾದ್ಯಂತ ಜನಪ್ರಿಯವಾಗಿದೆ. ಈ ದೇವಸ್ಥಾನಕ್ಕೆ ಭೇಟಿ ನೀಡಿದರೆ ದಾರಿದ್ರ್ಯ ತೊಲಗುತ್ತದೆ ಎಂಬುದು ಜನರ ನಂಬಿಕೆ. ಇದಲ್ಲದೆ, ಕುಬೇರನಿಗೆ ನಾಣ್ಯಗಳನ್ನು ಅರ್ಪಿಸುವುದು ಮತ್ತು ಇತರ ವಿಭಿನ್ನ ಸಂಪ್ರದಾಯಗಳು ಇಲ್ಲಿ ಆಕರ್ಷಕವಾಗಿವೆ.

ಕುಬೇರ ದೇವಾಲಯ ಎಲ್ಲಿದೆ?

ಸಂಪತ್ತಿನ ದೇವರಾದ ಕುಬೇರನ ಈ ದೇವಾಲಯವು ಉತ್ತರಾಖಂಡದ ದೇವಭೂಮಿಯ ಅಲ್ಮೋರಾದಿಂದ 40 ಕಿಮೀ ದೂರದಲ್ಲಿದೆ. ಈ ದೇವಾಲಯವನ್ನು ಜಾಗೇಶ್ವರ ಧಾಮ ಎಂದು ಕರೆಯಲಾಗುತ್ತದೆ. ಹಣಕಾಸಿನ ಸಮಸ್ಯೆಯನ್ನು ಹೋಗಲಾಡಿಸುವ ಬಯಕೆಯಿಂದ ಪ್ರತಿದಿನ ಅಪಾರ ಸಂಖ್ಯೆಯ ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ.

ಬಡತನದಿಂದ ಮುಕ್ತಿ:

ಕುಬೇರನ ಆಶೀರ್ವಾದ ಪಡೆದ ವ್ಯಕ್ತಿಯು ಕೀರ್ತಿ, ಸಂಪತ್ತು ಇತ್ಯಾದಿಗಳನ್ನು ಪಡೆಯುತ್ತಾನೆ ಎಂದು ನಂಬಲಾಗಿದೆ. ಪ್ರತಿದಿನ ಭಕ್ತರು ಈ ದೇವಾಲಯಕ್ಕೆ ವಿವಿಧ ಇಷ್ಟಾರ್ಥಗಳೊಂದಿಗೆ ಭೇಟಿ ನೀಡುತ್ತಾರೆ ಮತ್ತು ಭಗವಾನ್ ಕುಬೇರನನ್ನು ಪ್ರಾರ್ಥಿಸುತ್ತಾರೆ. ಈ ದೇವಾಲಯಕ್ಕೆ ಭೇಟಿ ನೀಡುವುದರಿಂದ ವ್ಯಕ್ತಿಯು ಆರ್ಥಿಕವಾಗಿ ಏಳಿಗೆ ಹೊಂದುತ್ತಾನೆ ಮತ್ತು ಜೀವನದಲ್ಲಿ ಸಮಸ್ಯೆಗಳಿಂದ ಮುಕ್ತನಾಗುತ್ತಾನೆ ಎಂದು ನಂಬಲಾಗಿದೆ.

ಚಿನ್ನ ಮತ್ತು ಬೆಳ್ಳಿಯ ನಾಣ್ಯ:

ಈ ದೇವಾಲಯದಲ್ಲಿ ಕುಬೇರನನ್ನು ಪೂಜಿಸುವುದು ಮಾತ್ರವಲ್ಲದೆ ಪೂಜೆ ಮಾಡಿದವರಿಗೆ ಚಿನ್ನ ಅಥವಾ ಬೆಳ್ಳಿ ನಾಣ್ಯಗಳನ್ನು ಅರ್ಪಿಸುತ್ತಾರೆ. ಆ ನಾಣ್ಯಗಳನ್ನು ಹಳದಿ ಬಟ್ಟೆಯಲ್ಲಿ ಕಟ್ಟಿ ಮನೆಗೆ ತೆಗೆದುಕೊಂಡು ಹೋಗುತ್ತಾರೆ. ಹೀಗೆ ಮಾಡುವುದರಿಂದ ಆರ್ಥಿಕ ಸಮಸ್ಯೆಗಳು ಪರಿಹಾರವಾಗುತ್ತವೆ ಎಂದು ನಂಬಲಾಗಿದೆ. ಈ ದೇವಾಲಯಕ್ಕೆ ಭೇಟಿ ನೀಡಿದರೆ ತಮ್ಮ ಇಷ್ಟಾರ್ಥಗಳು ಈಡೇರುತ್ತವೆ ಎಂಬುದು ಜನರ ನಂಬಿಕೆ. ಇಷ್ಟಾರ್ಥಗಳನ್ನು ಪೂರೈಸಿದ ನಂತರ, ಭಕ್ತರು ಮತ್ತೆ ದೇವಸ್ಥಾನಕ್ಕೆ ಹೋಗಿ ಕುಬೇರನಿಗೆ ಅಕ್ಕಿಯಿಂದ ಮಾಡಿದ ಪಾಯಸವನ್ನು ಅರ್ಪಿಸುತ್ತಾರೆ.

ಇದನ್ನೂ ಓದಿ: ಜ್ಯೋತಿಷ್ಯದ ಪ್ರಕಾರ ಈ ರಾಶಿಯವರು ಬೆಳ್ಳಿ ಧರಿಸಬಾರದು; ಜೀವನ ದುಃಖದಿಂದಲೇ ಸಾಗುತ್ತದೆ!

ದೇವಾಲಯದ ಇತಿಹಾಸ:

ಜಾಗೇಶ್ವರ್ ಧಾಮ್ ಸಂಕೀರ್ಣದಲ್ಲಿರುವ 125 ದೇವಾಲಯ ಗುಂಪುಗಳಲ್ಲಿ ಸಂಪತ್ತಿನ ಅಧಿಪತಿಯಾದ ಕುಬೇರನ ದೇವಾಲಯವಾಗಿದೆ. ಇದು ಭಾರತದ ಎಂಟನೇ ಕುಬೇರ ದೇವಾಲಯವಾಗಿದೆ. ಈ ದೇವಾಲಯವು 9 ನೇ ಶತಮಾನಕ್ಕೆ ಸೇರಿದೆ ಎಂದು ಹೇಳಲಾಗುತ್ತದೆ. ಈ ಪುರಾತನ ದೇವಾಲಯವು ಭಕ್ತರ ನಂಬಿಕೆಯ ಪ್ರಮುಖ ಕೇಂದ್ರವಾಗಿದೆ. ಕುಬೇರನು ಇಲ್ಲಿ ಏಕಮುಖ ಶಿವಲಿಂಗದಲ್ಲಿ ಶಕ್ತಿಯ ರೂಪದಲ್ಲಿರುತ್ತಾನೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್