AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ ಈ ದೇವಸ್ಥಾನಕ್ಕೆ ಭೇಟಿ ನೀಡಿ ನಾಣ್ಯವನ್ನು ಅರ್ಪಿಸಿ!

ಉತ್ತರಾಖಂಡದ ಜಾಗೇಶ್ವರ ಧಾಮದಲ್ಲಿರುವ ಕುಬೇರ ದೇವಸ್ಥಾನವು ಸಂಪತ್ತಿನ ದೇವರ ಪೂಜಾ ಸ್ಥಳವಾಗಿದೆ. ಭಕ್ತರು ಇಲ್ಲಿ ನಾಣ್ಯಗಳನ್ನು ಅರ್ಪಿಸಿ ಆರ್ಥಿಕ ಸಮೃದ್ಧಿಗೆ ಪ್ರಾರ್ಥಿಸುತ್ತಾರೆ. ದೇವಸ್ಥಾನವು ಚಿನ್ನ ಅಥವಾ ಬೆಳ್ಳಿಯ ನಾಣ್ಯಗಳನ್ನು ಭಕ್ತರಿಗೆ ಪ್ರಸಾದವಾಗಿ ನೀಡುತ್ತದೆ. ಈ ದೇವಸ್ಥಾನವು 9ನೇ ಶತಮಾನದಿಂದಲೂ ಭಕ್ತಿಯ ಕೇಂದ್ರವಾಗಿದೆ ಮತ್ತು ಅದರ ವಾಸ್ತುಶಿಲ್ಪ ಮತ್ತು ಪವಾಡಗಳಿಗೆ ಹೆಸರುವಾಸಿಯಾಗಿದೆ.

ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ ಈ ದೇವಸ್ಥಾನಕ್ಕೆ ಭೇಟಿ ನೀಡಿ ನಾಣ್ಯವನ್ನು ಅರ್ಪಿಸಿ!
Kubera Temple In India
ಅಕ್ಷತಾ ವರ್ಕಾಡಿ
|

Updated on: Jan 12, 2025 | 7:44 AM

Share

ಭಾರತವನ್ನು ದೇವಾಲಯಗಳ ನಾಡು ಎಂದು ಕರೆಯಲಾಗುತ್ತದೆ. ದೇವಾಲಯಗಳ ರಹಸ್ಯಗಳು ಮತ್ತು ಪವಾಡಗಳ ಕಥೆಗಳು ಇಲ್ಲಿ ಜನಪ್ರಿಯವಾಗಿವೆ. ಕೆಲವು ದೇವಾಲಯ ತನ್ನ ವಾಸ್ತು ಶೈಲಿ ಹಾಗೂ ಪವಾಡಗಳಿಂದಲೇ ಪ್ರಪಂಚದಾದ್ಯಂತ ಜನಪ್ರಿಯವಾಗಿವೆ. ಇದೀಗ ಅಂತದ್ದೇ ಸಂಪತ್ತಿನ ದೇವರಾದ ಕುಬೇರನ ದೇವಾಲವೊಂದು ಭಾರತದಾದ್ಯಂತ ಜನಪ್ರಿಯವಾಗಿದೆ. ಈ ದೇವಸ್ಥಾನಕ್ಕೆ ಭೇಟಿ ನೀಡಿದರೆ ದಾರಿದ್ರ್ಯ ತೊಲಗುತ್ತದೆ ಎಂಬುದು ಜನರ ನಂಬಿಕೆ. ಇದಲ್ಲದೆ, ಕುಬೇರನಿಗೆ ನಾಣ್ಯಗಳನ್ನು ಅರ್ಪಿಸುವುದು ಮತ್ತು ಇತರ ವಿಭಿನ್ನ ಸಂಪ್ರದಾಯಗಳು ಇಲ್ಲಿ ಆಕರ್ಷಕವಾಗಿವೆ.

ಕುಬೇರ ದೇವಾಲಯ ಎಲ್ಲಿದೆ?

ಸಂಪತ್ತಿನ ದೇವರಾದ ಕುಬೇರನ ಈ ದೇವಾಲಯವು ಉತ್ತರಾಖಂಡದ ದೇವಭೂಮಿಯ ಅಲ್ಮೋರಾದಿಂದ 40 ಕಿಮೀ ದೂರದಲ್ಲಿದೆ. ಈ ದೇವಾಲಯವನ್ನು ಜಾಗೇಶ್ವರ ಧಾಮ ಎಂದು ಕರೆಯಲಾಗುತ್ತದೆ. ಹಣಕಾಸಿನ ಸಮಸ್ಯೆಯನ್ನು ಹೋಗಲಾಡಿಸುವ ಬಯಕೆಯಿಂದ ಪ್ರತಿದಿನ ಅಪಾರ ಸಂಖ್ಯೆಯ ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ.

ಬಡತನದಿಂದ ಮುಕ್ತಿ:

ಕುಬೇರನ ಆಶೀರ್ವಾದ ಪಡೆದ ವ್ಯಕ್ತಿಯು ಕೀರ್ತಿ, ಸಂಪತ್ತು ಇತ್ಯಾದಿಗಳನ್ನು ಪಡೆಯುತ್ತಾನೆ ಎಂದು ನಂಬಲಾಗಿದೆ. ಪ್ರತಿದಿನ ಭಕ್ತರು ಈ ದೇವಾಲಯಕ್ಕೆ ವಿವಿಧ ಇಷ್ಟಾರ್ಥಗಳೊಂದಿಗೆ ಭೇಟಿ ನೀಡುತ್ತಾರೆ ಮತ್ತು ಭಗವಾನ್ ಕುಬೇರನನ್ನು ಪ್ರಾರ್ಥಿಸುತ್ತಾರೆ. ಈ ದೇವಾಲಯಕ್ಕೆ ಭೇಟಿ ನೀಡುವುದರಿಂದ ವ್ಯಕ್ತಿಯು ಆರ್ಥಿಕವಾಗಿ ಏಳಿಗೆ ಹೊಂದುತ್ತಾನೆ ಮತ್ತು ಜೀವನದಲ್ಲಿ ಸಮಸ್ಯೆಗಳಿಂದ ಮುಕ್ತನಾಗುತ್ತಾನೆ ಎಂದು ನಂಬಲಾಗಿದೆ.

ಚಿನ್ನ ಮತ್ತು ಬೆಳ್ಳಿಯ ನಾಣ್ಯ:

ಈ ದೇವಾಲಯದಲ್ಲಿ ಕುಬೇರನನ್ನು ಪೂಜಿಸುವುದು ಮಾತ್ರವಲ್ಲದೆ ಪೂಜೆ ಮಾಡಿದವರಿಗೆ ಚಿನ್ನ ಅಥವಾ ಬೆಳ್ಳಿ ನಾಣ್ಯಗಳನ್ನು ಅರ್ಪಿಸುತ್ತಾರೆ. ಆ ನಾಣ್ಯಗಳನ್ನು ಹಳದಿ ಬಟ್ಟೆಯಲ್ಲಿ ಕಟ್ಟಿ ಮನೆಗೆ ತೆಗೆದುಕೊಂಡು ಹೋಗುತ್ತಾರೆ. ಹೀಗೆ ಮಾಡುವುದರಿಂದ ಆರ್ಥಿಕ ಸಮಸ್ಯೆಗಳು ಪರಿಹಾರವಾಗುತ್ತವೆ ಎಂದು ನಂಬಲಾಗಿದೆ. ಈ ದೇವಾಲಯಕ್ಕೆ ಭೇಟಿ ನೀಡಿದರೆ ತಮ್ಮ ಇಷ್ಟಾರ್ಥಗಳು ಈಡೇರುತ್ತವೆ ಎಂಬುದು ಜನರ ನಂಬಿಕೆ. ಇಷ್ಟಾರ್ಥಗಳನ್ನು ಪೂರೈಸಿದ ನಂತರ, ಭಕ್ತರು ಮತ್ತೆ ದೇವಸ್ಥಾನಕ್ಕೆ ಹೋಗಿ ಕುಬೇರನಿಗೆ ಅಕ್ಕಿಯಿಂದ ಮಾಡಿದ ಪಾಯಸವನ್ನು ಅರ್ಪಿಸುತ್ತಾರೆ.

ಇದನ್ನೂ ಓದಿ: ಜ್ಯೋತಿಷ್ಯದ ಪ್ರಕಾರ ಈ ರಾಶಿಯವರು ಬೆಳ್ಳಿ ಧರಿಸಬಾರದು; ಜೀವನ ದುಃಖದಿಂದಲೇ ಸಾಗುತ್ತದೆ!

ದೇವಾಲಯದ ಇತಿಹಾಸ:

ಜಾಗೇಶ್ವರ್ ಧಾಮ್ ಸಂಕೀರ್ಣದಲ್ಲಿರುವ 125 ದೇವಾಲಯ ಗುಂಪುಗಳಲ್ಲಿ ಸಂಪತ್ತಿನ ಅಧಿಪತಿಯಾದ ಕುಬೇರನ ದೇವಾಲಯವಾಗಿದೆ. ಇದು ಭಾರತದ ಎಂಟನೇ ಕುಬೇರ ದೇವಾಲಯವಾಗಿದೆ. ಈ ದೇವಾಲಯವು 9 ನೇ ಶತಮಾನಕ್ಕೆ ಸೇರಿದೆ ಎಂದು ಹೇಳಲಾಗುತ್ತದೆ. ಈ ಪುರಾತನ ದೇವಾಲಯವು ಭಕ್ತರ ನಂಬಿಕೆಯ ಪ್ರಮುಖ ಕೇಂದ್ರವಾಗಿದೆ. ಕುಬೇರನು ಇಲ್ಲಿ ಏಕಮುಖ ಶಿವಲಿಂಗದಲ್ಲಿ ಶಕ್ತಿಯ ರೂಪದಲ್ಲಿರುತ್ತಾನೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ