Sign In

By signing in or creating an account, you agree with Associated Broadcasting Company's Terms & Conditions and Privacy Policy.

Friday Puja Tips: ಶುಕ್ರವಾರದಂದು ಈ ವಸ್ತುಗಳಿಂದ ಲಕ್ಷ್ಮಿ ದೇವಿಯನ್ನು ಪೂಜಿಸಿ; ಹಣದ ಕೊರತೆ ಇರುವುದಿಲ್ಲ

ಶುಕ್ರವಾರ ಲಕ್ಷ್ಮೀ ದೇವಿಯ ಪೂಜೆ ಮಾಡುವುದರಿಂದ ಸಂಪತ್ತು ಮತ್ತು ಸಮೃದ್ಧಿಗೆ ಎಂದಿಗೂ ಕೊರತೆಯಾಗುವುದಿಲ್ಲ. ಕಮಲದ ಹೂವು, ಅನ್ನದ ಪಾಯಸ, ಮತ್ತು ಶ್ರೀ ಯಂತ್ರದ ಪ್ರತಿಷ್ಠಾಪನೆಯು ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ. ಶಂಖ ಊದುವುದು ಮತ್ತು ವ್ರತ ಆಚರಿಸುವುದು ಸಹ ಮಂಗಳಕರವಾಗಿದೆ.

Friday Puja Tips: ಶುಕ್ರವಾರದಂದು ಈ ವಸ್ತುಗಳಿಂದ ಲಕ್ಷ್ಮಿ ದೇವಿಯನ್ನು ಪೂಜಿಸಿ; ಹಣದ ಕೊರತೆ ಇರುವುದಿಲ್ಲ
Lakshmi Puja Image Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Jan 03, 2025 | 7:18 AM

ಸನಾತನ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಪೂಜಿಸುವುದು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಶುಕ್ರವಾರ ಲಕ್ಷ್ಮಿ ದೇವಿಯ ಆರಾಧನೆಗೆ ಮೀಸಲಾಗಿದೆ. ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಪೂಜಿಸುವುದರಿಂದ ಮನೆಯಲ್ಲಿ ಸಂಪತ್ತು ಮತ್ತು ಸಮೃದ್ಧಿಗೆ ಎಂದಿಗೂ ಕೊರತೆಯಾಗುವುದಿಲ್ಲ.

ಶುಕ್ರವಾರದಂದು ಲಕ್ಷ್ಮಿ ಪೂಜೆಯನ್ನು ಮಾಡುವುದು ಮತ್ತು ಉಪವಾಸವನ್ನು ಆಚರಿಸುವುದು ಬಹಳ ಮುಖ್ಯ. ಹೀಗೆ ಮಾಡುವುದರಿಂದ ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು ಎಂದು ನಂಬಲಾಗಿದೆ. ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯ ಜೊತೆಗೆ, ನೀವು ಸಂಪತ್ತನ್ನು ಪಡೆಯುತ್ತೀರಿ. ಆರ್ಥಿಕ ಸಮಸ್ಯೆಗಳಿಂದ ಹೊರಬರಲು ಶುಕ್ರವಾರ ಲಕ್ಷ್ಮಿ ದೇವಿಯನ್ನು ಹೇಗೆ ಪೂಜಿಸಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಕಮಲದ ಹೂವಿನಿಂದ ಪೂಜೆ:

ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿ ದೇವಿಯನ್ನು ಶುಕ್ರವಾರದಂದು ವಿಧಿ ವಿಧಾನಗಳೊಂದಿಗೆ ಪೂಜಿಸಬೇಕು. ಲಕ್ಷ್ಮಿ ದೇವಿಗೆ ಪೂಜೆ ಮಾಡುವಾಗ ಕಮಲದ ಹೂವನ್ನು ಅರ್ಪಿಸಬೇಕು. ಕೆಂಪು ಗುಲಾಬಿ ಮತ್ತು ದಾಸವಾಳದ ಹೂವುಗಳಿಂದ ಪೂಜಿಸುವುದು ಮಂಗಳಕರ. ತೃಪ್ತಳಾದ ಲಕ್ಷ್ಮಿ ದೇವಿಯು ಮಳೆಯಂತೆ ಆಶೀರ್ವಾದವನ್ನು ನೀಡುತ್ತಾಳೆ. ಜೀವನದಲ್ಲಿ ಹಣದ ಸಮಸ್ಯೆಗಳು ದೂರವಾಗಬೇಕಾದರೆ ಲಕ್ಷ್ಮಿ ದೇವಿಯನ್ನು ಪೂಜಿಸುವಾಗ ಕಮಲದ ಹೂವನ್ನು ಅರ್ಪಿಸಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿ ಸಮೃದ್ಧಿ ಉಂಟಾಗುತ್ತದೆ. ಹಣದ ಸಮಸ್ಯೆಗಳಿಂದ ನಿಮ್ಮನ್ನು ಮುಕ್ತಗೊಳಿಸುತ್ತದೆ.

ಅನ್ನದ ಪಾಯಸ:

ಶುಕ್ರವಾರದಂದು ಲಕ್ಷ್ಮಿ ದೇವಿಯನ್ನು ಪೂಜಿಸುವಾಗ ಅನ್ನದ ಪಾಯಸವನ್ನು ತಯಾರಿಸಿ. ಸಕ್ಕರೆಯ ಬದಲು ಬೆಲ್ಲವನ್ನು ಮಿಶ್ರಣ ಮಾಡಿ. ನಂತರ ಅದನ್ನು ಲಕ್ಷ್ಮಿ ದೇವಿಗೆ ಅರ್ಪಿಸಿ. ಈ ರೀತಿ ಮಾಡುವುದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಆರೋಗ್ಯ ಬರುತ್ತದೆ. ಈ ಪಾಯಸವನ್ನು ಲಕ್ಷ್ಮಿ ದೇವಿಗೆ ಅರ್ಪಿಸುವುದರಿಂದ ದೇವಿಯ ಕೃಪೆಗೆ ಪಾತ್ರರಾಗಬಹುದು. ಆರ್ಥಿಕ ಲಾಭ ಪಡೆಯಬಹುದು.

ಶ್ರೀ ಯಂತ್ರ:

ಯಾರಿಗಾದರೂ ಆರ್ಥಿಕ ಅಡೆತಡೆಗಳಿಂದ ತೊಂದರೆಯಾಗಿದ್ದರೆ, ಅವುಗಳನ್ನು ತೊಡೆದುಹಾಕಲು, ಶುಕ್ರವಾರದಂದು ಮನೆಯಲ್ಲಿ ಶ್ರೀ ಯಂತ್ರವನ್ನು ಪ್ರತಿಷ್ಠಾಪಿಸಿ. ಮನೆಯಲ್ಲಿ ದೇವರ ಕೋಣೆಯ ಉತ್ತರ ದಿಕ್ಕಿನಲ್ಲಿ ಅಥವಾ ಮುಖ್ಯದ್ವಾರದಲ್ಲಿ ಇದನ್ನು ಸ್ಥಾಪಿಸಬೇಕು. ಹೀಗೆ ಮಾಡುವುದರಿಂದ ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಬಹುದು.

ಇದನ್ನೂ ಓದಿ: ಆರ್ಥಿಕ ಸಮಸ್ಯೆ, ಮದುವೆಯಲ್ಲಿ ಅಡೆತಡೆ ಎದುರಿಸುತ್ತಿದ್ದರೆ ಗುರುವಾರ ಈ ರೀತಿ ಮಾಡಿ

ಶಂಖ:

ಪುರಾಣಗಳ ಪ್ರಕಾರ ಮನೆಯಲ್ಲಿ ಪ್ರತಿದಿನ ಶಂಖವನ್ನು ಊದುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳು ದೂರವಾಗುತ್ತವೆ. ಪ್ರತಿ ಶುಕ್ರವಾರ ನಿಯಮಿತವಾಗಿ ಮನೆಯಲ್ಲಿ ಶಂಖ ಊದಿ. ಹೀಗೆ ಮಾಡುವುದರಿಂದ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುತ್ತದೆ ಎಂಬ ನಂಬಿಕೆ ಇದೆ.

ವೈಭವ ಲಕ್ಷ್ಮೀ ವ್ರತಂ:

ಯಾವುದೇ ಅವಿವಾಹಿತ ಯುವಕ ಯುವತಿಯರು ತಮ್ಮ ಇಚ್ಛೆಯ ವಧು ಅಥವಾ ವರನನ್ನು ಪಡೆಯಲು ಬಯಸಿದರೆ, ಅವರು ಲಕ್ಷ್ಮಿ ದೇವಿಯನ್ನು ಪೂಜಿಸಬೇಕು ಮತ್ತು ಶುಕ್ರವಾರ ಉಪವಾಸ ಮಾಡಬೇಕು. ಹೀಗೆ ಮಾಡುವುದರಿಂದ ಲಕ್ಷ್ಮಿ ದೇವಿಯು ತನ್ನ ಭಕ್ತರ ಇಷ್ಟಾರ್ಥಗಳನ್ನು ಪೂರೈಸುತ್ತಾಳೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ