Laxmi Puja: ಸಂಜೆ ಸಮಯದಲ್ಲಿ ಈ ಕೆಲಸ ಮಾಡಿ, ಶ್ರೀಮಂತರಾಗುವುದು ಖಂಡಿತ

ಲಕ್ಷ್ಮೀ ದೇವಿ ಅನುಗ್ರಹ ಪಡೆಯಲು ಸಂಜೆಯ ಸಮಯದಲ್ಲಿ ಕೆಲವು ಕೆಲಸಗಳನ್ನು ಮಾಡುವುದು ವಿಶೇಷವಾಗಿ ಫಲಪ್ರದವೆಂದು ಪರಿಗಣಿಸಲಾಗಿದೆ. ಹಾಗಾಗಿ, ನೀವು ಕೂಡ ಲಕ್ಷ್ಮೀ ದೇವಿಯ ಆಶೀರ್ವಾದ ಪಡೆಯಲು ಪ್ರತಿದಿನ ಸಂಜೆ ಈ ಕೆಲಸವನ್ನು ತಪ್ಪದೇ ಮಾಡಿ. ಇದರಿಂದ ಆರ್ಥಿಕ ಸಮಸ್ಯೆಗೆ ಪರಿಹಾರ ಸಿಗುವುದಲ್ಲದೆ ಎಂದಿಗೂ ಹಣದ ಕೊರತೆ ಬರುವುದಿಲ್ಲ. ಹಾಗಾದರೆ ಲಕ್ಷ್ಮೀ ದೇವಿಯ ಆರಾಧನೆಯನ್ನು ಹೇಗೆ ಮಾಡಬೇಕು? ಸಂಜೆ ಸಮಯದಲ್ಲಿ ಯಾವ ರೀತಿಯ ನಿಯಮಗಳನ್ನು ಪಾಲನೆ ಮಾಡಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ.

Laxmi Puja: ಸಂಜೆ ಸಮಯದಲ್ಲಿ ಈ ಕೆಲಸ ಮಾಡಿ, ಶ್ರೀಮಂತರಾಗುವುದು ಖಂಡಿತ
Edited By:

Updated on: Mar 16, 2024 | 5:25 PM

ಹಿಂದೂ ಧರ್ಮದಲ್ಲಿ ತಾಯಿ ಲಕ್ಷ್ಮೀ ದೇವಿಗೆ ವಿಶೇಷ ಸ್ಥಾನವನ್ನು ನೀಡಲಾಗಿದೆ. ಆಕೆಯನ್ನು ನೆನೆಯದವರಿಲ್ಲ. ತಾಯಿ ಲಕ್ಷ್ಮೀ ದೇವಿಯನ್ನು ಸಂಪತ್ತು ಮತ್ತು ಸಮೃದ್ಧಿಯ ದೇವತೆ ಎಂದು ಕರೆಯಲಾಗುತ್ತದೆ. ಲಕ್ಷ್ಮೀ ದೇವಿಯ ಆಶೀರ್ವಾದ ಯಾವಾಗಲೂ ಇರಬೇಕೆಂದು ಪ್ರತಿಯೊಬ್ಬರೂ ಬಯಸುತ್ತಾರೆ, ಆದ್ದರಿಂದ ಜನರು ಈ ದೇವಿಯನ್ನು ವಿವಿಧ ರೀತಿಯಲ್ಲಿ ಪೂಜಿಸುತ್ತಾರೆ. ಲಕ್ಷ್ಮೀ ದೇವಿ ಅನುಗ್ರಹ ಪಡೆಯಲು ಸಂಜೆಯ ಸಮಯದಲ್ಲಿ ಕೆಲವು ಕೆಲಸಗಳನ್ನು ಮಾಡುವುದು ವಿಶೇಷವಾಗಿ ಫಲಪ್ರದವೆಂದು ಪರಿಗಣಿಸಲಾಗಿದೆ. ಹಾಗಾಗಿ, ನೀವು ಕೂಡ ಲಕ್ಷ್ಮೀ ದೇವಿಯ ಆಶೀರ್ವಾದ ಪಡೆಯಲು ಪ್ರತಿದಿನ ಸಂಜೆ ಈ ಕೆಲಸವನ್ನು ತಪ್ಪದೇ ಮಾಡಿ. ಇದರಿಂದ ಆರ್ಥಿಕ ಸಮಸ್ಯೆಗೆ ಪರಿಹಾರ ಸಿಗುವುದಲ್ಲದೆ ಎಂದಿಗೂ ಹಣದ ಕೊರತೆ ಬರುವುದಿಲ್ಲ. ಹಾಗಾದರೆ ಲಕ್ಷ್ಮೀ ದೇವಿಯ ಆರಾಧನೆಯನ್ನು ಹೇಗೆ ಮಾಡಬೇಕು? ಸಂಜೆ ಸಮಯದಲ್ಲಿ ಯಾವ ರೀತಿಯ ನಿಯಮಗಳನ್ನು ಪಾಲನೆ ಮಾಡಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ.

ಈ ಕೆಲಸವನ್ನು ಸಂಜೆ ಸಮಯದಲ್ಲಿ ಮಾಡಿ;

ತುಳಸಿ ಪೂಜೆ ಮಾಡಿ

ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಈ ಗಿಡವನ್ನು ಮನೆಯಲ್ಲಿ ನೆಟ್ಟು ಪೂಜೆ ಮಾಡುವುದು ತುಂಬಾ ಶುಭವೆಂದು ಪರಿಗಣಿಸಲಾಗಿದೆ. ಏಕೆಂದರೆ ಕೆಲವು ನಂಬಿಕೆಗಳ ಪ್ರಕಾರ ಲಕ್ಷ್ಮೀ ದೇವಿ ಮತ್ತು ವಿಷ್ಣು ತುಳಸಿ ಗಿಡದಲ್ಲಿ ವಾಸಿಸುತ್ತಾರೆ ಎಂದು ನಂಬಲಾಗಿದೆ, ಆದ್ದರಿಂದ ಈ ಗಿಡವನ್ನು ಬಹಳ ಪವಿತ್ರ ಮತ್ತು ಪೂಜನೀಯ ಎಂದು ಪರಿಗಣಿಸಲಾಗಿದೆ. ಹಾಗಾಗಿ ಪ್ರತಿದಿನ ಸಂಜೆ ಸಮಯದಲ್ಲಿ ತುಳಸಿ ಗಿಡವನ್ನು ಪೂಜಿಸುವುದರಿಂದ, ಲಕ್ಷ್ಮೀ ದೇವಿ ಸಂತುಷ್ಟಳಾಗುತ್ತಾಳೆ ಜೊತೆಗೆ ಅವಳ ಅನುಗ್ರಹದಿಂದಾಗಿ, ಮನೆಯಲ್ಲಿ ಹಣ ಮತ್ತು ಧಾನ್ಯಗಳ ಕೊರತೆ ಉಂಟಾಗುವುದಿಲ್ಲ ಎಂದು ನಂಬಲಾಗಿದೆ. ಆದ್ದರಿಂದ, ಪ್ರತಿದಿನ ಸಂಜೆ ತುಳಸಿ ಗಿಡಕ್ಕೆ ಪೂಜೆ ಮಾಡಿ, ತುಪ್ಪದ ದೀಪವನ್ನು ಹಚ್ಚಿರಿ.

ಕರ್ಪೂರದ ಆರತಿ ಮಾಡಿ

ಕರ್ಪೂರವನ್ನು ಪೂಜೆಯಲ್ಲಿ ಪ್ರಮುಖವಾಗಿ ಬಳಸಲಾಗುತ್ತದೆ. ಕರ್ಪೂರದ ಆರತಿ ಮಾಡುವುದರಿಂದ ಮನೆಯಲ್ಲಿನ ನಕಾರಾತ್ಮಕ ಶಕ್ತಿ ಕಡಿಮೆಯಾಗುತ್ತದೆ ಮತ್ತು ಮನೆಯಲ್ಲಿ ಸಕಾರಾತ್ಮಕ ಶಕ್ತಿ ತುಂಬಿರುತ್ತದೆ ಎಂದು ನಂಬಲಾಗಿದೆ. ಸಂಜೆ ಕರ್ಪೂರದ ಆರತಿ ಮಾಡುವುದರಿಂದ ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರುತ್ತದೆ, ಕರ್ಪೂರವನ್ನು ಹಚ್ಚಿ ಮನೆಯ ಮುಖ್ಯ ದ್ವಾರದಲ್ಲಿ ಇಡಬೇಕು ಇದರಿಂದ ದುಷ್ಟ ಶಕ್ತಿಗಳು ಮನೆಯನ್ನು ಪ್ರವೇಶಿಸುವುದಿಲ್ಲ. ಇದರ ಹೊರತಾಗಿ ನೀವು ಧೂಪವನ್ನು ಸಹ ಇಡಬಹುದು.

ಇದನ್ನೂ ಓದಿ: ಮೇಷ ರಾಶಿಯವರಿಗೆ ಬಾಳ ಸಂಗಾತಿಯಾಗುವವರು ಈ 3 ರಾಶಿಯವರಾದರೆ ಅದೃಷ್ಟ

ಮುಖ್ಯ ದ್ವಾರದಲ್ಲಿ ದೀಪ ಹಚ್ಚಿ

ಲಕ್ಷ್ಮೀ ದೇವಿಯು ಮನೆಯ ಮುಖ್ಯ ದ್ವಾರದ ಮೂಲಕ ಮಾತ್ರ ಮನೆಯನ್ನು ಪ್ರವೇಶಿಸುತ್ತಾಳೆ ಎಂದು ನಂಬಲಾಗಿದೆ. ಆದ್ದರಿಂದ ಮನೆಯ ಮುಖ್ಯ ದ್ವಾರದಲ್ಲಿ ಎಂದಿಗೂ ಕತ್ತಲೆ ಮಾಡಬಾರದು. ಮುಖ್ಯ ಬಾಗಿಲು ಕತ್ತಲೆಯಾಗಿರುವ ಮನೆಗೆ ಲಕ್ಷ್ಮೀ ದೇವಿಯು ಪ್ರವೇಶಿಸುವುದಿಲ್ಲ ಎಂದು ಹೇಳಲಾಗುತ್ತದೆ. ಆದ್ದರಿಂದ ಪ್ರತಿದಿನ ಸಂಜೆ, ಮನೆಯ ಮುಖ್ಯ ದ್ವಾರದಲ್ಲಿ ತುಪ್ಪ ಅಥವಾ ಎಣ್ಣೆಯ ದೀಪವನ್ನು ತಪ್ಪದೆ ಹಚ್ಚಿರಿ. ಅದರಲ್ಲಿಯೂ ಸಂಜೆ ಸಮಯದಲ್ಲಿ ಬಾಗಿಲುಗಳನ್ನು ಮುಚ್ಚಿಡಬೇಡಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

 

 

Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us