AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maha Shivaratri 2022: ಶಿವರಾತ್ರಿಯಂದು ಮಾಡಬೇಕಾದ ಮೂರು ಸರಳ ಕರ್ತವ್ಯಗಳು ಯಾವುವು ಗೊತ್ತಾ?

ಒಂದೊಂದು ದೇವರ ಹಬ್ಬಕ್ಕೂ ಒಂದೊಂದು ರೀತಿಯ ವ್ರತ ನಿಯಮಗಳು ಆಚರಣೆಯಲ್ಲಿ ಬರುತ್ತವೆ. ಹಾಗೆ ಮಾಡಿದರೆ ಮಾತ್ರವೇ ಆ ಹಬ್ಬ ಹರಿದಿನಗಳು ಸಾರ್ಥಕವಾಗಿ ಸಫಲವಾಗುತ್ತವೆ. ಹೀಗೆಯೇ ಶಿವರಾತ್ರಿ ಹಬ್ಬಕ್ಕೂ ಕೆಲವು ವ್ರತ ನಿಯಮಗಳುಂಟು.

Maha Shivaratri 2022: ಶಿವರಾತ್ರಿಯಂದು ಮಾಡಬೇಕಾದ ಮೂರು ಸರಳ ಕರ್ತವ್ಯಗಳು ಯಾವುವು ಗೊತ್ತಾ?
ಶಿವನ ಭಕ್ತರು ಶಿವರಾತ್ರಿಯಂದು ಕೆಳಗಿನ ಈ ಮೂರು ನಿಯಮಗಳನ್ನು ಪಾಲಿಸಬೇಕು:
TV9 Web
| Edited By: |

Updated on: Feb 28, 2022 | 12:57 PM

Share

ಒಂದೊಂದು ದೇವರ ಹಬ್ಬಕ್ಕೂ ಒಂದೊಂದು ರೀತಿಯ ವ್ರತ ನಿಯಮಗಳು ಆಚರಣೆಯಲ್ಲಿ ಬರುತ್ತವೆ. ಹಾಗೆ ಮಾಡಿದರೆ ಮಾತ್ರವೇ ಆ ಹಬ್ಬ ಹರಿದಿನಗಳು ಸಾರ್ಥಕವಾಗಿ ಸಫಲವಾಗುತ್ತವೆ. ವರಸಿದ್ಧಿ ವಿನಾಯಕನಿಗೆ ಕರಿಗಡುಬು; ಶ್ರೀರಾಮ ನವಮಿ ಮತ್ತು ನರಸಿಂಹ ಜಯಂತಿಗಳಲ್ಲಿ ಪಾನಕ ಕೋಸಂಬರಿ; ಶ್ರೀಕೃಷ್ಣ ಜನ್ಮಾಷ್ಟಮಿಗೆ ಚಕ್ಕುಲಿ, ಕೋಡುಬಳೆ, ತೇಂಗೊಳಲು, ಅವಲಕ್ಕಿ, ಮೊಸರು; ಏಕಾದಶಿ ದಿನ ಹಣ್ಣುಹಂಪಲು; ಯುಗಾದಿ ದೀಪಾವಳಿಯಲ್ಲಿ ಅಭ್ಯಂಜನ ಸ್ನಾನ ಮತ್ತು ಹೋಳಿಗೆ ಊಟ.. ಇತ್ಯಾದಿ ಇತ್ಯಾದಿ. ಹೀಗೆಯೇ ಶಿವರಾತ್ರಿ ಹಬ್ಬಕ್ಕೂ ಕೆಲವು ವ್ರತ ನಿಯಮಗಳುಂಟು.

ಶಿವನ ಭಕ್ತರು ಶಿವರಾತ್ರಿಯಂದು ಕೆಳಗಿನ ಈ ಮೂರು ನಿಯಮಗಳನ್ನು ಪಾಲಿಸಬೇಕು: 

  1. ಮೂರು ಕರ್ತವ್ಯ: ನಾಲ್ಕೂ ಜಾವಗಳಲ್ಲಿ ಶಿವನಿಗೆ ಅಭಿಷೇಕಾದಿ ಪೂಜೆ, 2) ಜಾಗರಣೆ ಮತ್ತು 3) ಉಪವಾಸ. ಈ ಮೂರರಿಂದ ಪರಮ ಶಿವನು ಸಂತುಷ್ಟನಾಗಿ ತನ್ನ ಭಕ್ತರಿಗೆ ವರಪ್ರದನಾಗುತ್ತಾನೆ. ಈ ಮೂರು ನಿಯಮಗಳ ಅರ್ಥ ಕೆಳಗೆ ವಿವರಿಸಲಾಗಿದೆ.
  2.  ಶಿವಪೂಜೆ: ಶಿವಾಲಯಗಳಿಗೆ ಹೋಗಿ ಅಥವಾ ತಮ್ಮ ಮನೆಯಲ್ಲಿಯೇ ಶಿವಲಿಂಗವನ್ನು ಇಟ್ಟುಕೊಂಡು ಅದಕ್ಕೆ ಅಭಿಷೇಕ, ಅಷ್ಟೋತ್ತರ, ಸಹಸ್ರನಾಮ ಪೂಜೆಯನ್ನು ಯಥಾಶಕ್ತಿ ಮಾಡಬಹುದು. ಬಿಲ್ವ ಪತ್ತೆ ದಳಗಳಿಂದ ಪೂಜಿಸಿದರೆ ತುಂಬಾ ಶ್ರೇಷ್ಠ. ಶಿವರಾತ್ರಿಯಂದು ಸಾಯಂಕಾಲ 6 ಗಂಟೆಯಿಂದ ಪ್ರಾರಂಭಿಸಿ ಮಾರನೆಯ ದಿವಸ ಬೆಳಿಗ್ಗೆ 6 ಗಂಟೆಯವರೆಗೂ ನಾಲ್ಕೂ ಜಾವಗಳಲ್ಲಿ ಶಿವನ ಪೂಜೆಯನ್ನು ಮಾಡಬೇಕು.
  3.  ಜಾಗರಣೆ: ಅಂದು ರಾತ್ರಿಯೆಲ್ಲ ಶಿವನನ್ನು ಪೂಜಿಸುತ್ತಾ ಶಿವ ಪಂಚಾಕ್ಷರೀ ಮಂತ್ರವನ್ನು ಜಪಿಸುತ್ತಾ, ಶಿವನ ಧ್ಯಾನದಲ್ಲಿಯೇ ಮಗ್ನರಾಗಿರಬೇಕು. ಅಂದು ರಾತ್ರಿ ಮಲಗಬಾರದು. ನಿದ್ರೆಯನ್ನು ತಡೆಯುವುದಕ್ಕಾಗಿ ಸಿನಿಮಾ ಮಂದಿರಗಳಿಗೆ ಹೋಗಿ ಕಾಲ ಕಳೆಯಬಾರದು. ಪರಮೇಶ್ವರನ ಪೂಜೆಯನ್ನು ಮಾಡುತ್ತಾ ಇದ್ದರೆ ನಿದ್ರೆಯೇ ಬರುವುದಿಲ್ಲ!
  4. ಉಪವಾಸ: ಶಿವರಾತ್ರಿಯ ದಿನದಂದು ಬೇಯಿಸಿದ ಆಹಾರಗಳನ್ನು ತಿನ್ನಬಾರದು. ಕೇವಲ ಹಾಲು ಹಣ್ಣುಗಳನ್ನು ಮಾತ್ರ ಲಘುವಾಗಿ ಸ್ವೀಕರಿಸಬೇಕು. ಶಕ್ತಿ-ಸಾಮರ್ಥ್ಯಗಳಿದ್ದರೆ ಇದನ್ನೂ ತೆಗೆದುಕೊಳ್ಳದೇ ಕೇವಲ ನೀರನ್ನು ಕುಡಿದುಕೊಂಡೇ ಇರಬೇಕು. ಹೀಗೆ ಉಪವಾಸವಿದ್ದು, ರಾತ್ರಿಯೆಲ್ಲಾ ಜಾಗರಣೆ ಮಾಡುತ್ತಾ ಶಿವನಿಗೆ ಅಭಿಷೇಕ, ಅಷ್ಟೋತ್ತರ ಪೂಜೆಗಳನ್ನು ಮಾಡಿದಾಗ ಅದು ಅನ್ವರ್ಥ ಶಿವರಾತ್ರಿಯಾಗುತ್ತದೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್