AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maha Shivaratri 2022: ಶಿವರಾತ್ರಿಯಂದು ಮಾಡಬೇಕಾದ ಮೂರು ಸರಳ ಕರ್ತವ್ಯಗಳು ಯಾವುವು ಗೊತ್ತಾ?

ಒಂದೊಂದು ದೇವರ ಹಬ್ಬಕ್ಕೂ ಒಂದೊಂದು ರೀತಿಯ ವ್ರತ ನಿಯಮಗಳು ಆಚರಣೆಯಲ್ಲಿ ಬರುತ್ತವೆ. ಹಾಗೆ ಮಾಡಿದರೆ ಮಾತ್ರವೇ ಆ ಹಬ್ಬ ಹರಿದಿನಗಳು ಸಾರ್ಥಕವಾಗಿ ಸಫಲವಾಗುತ್ತವೆ. ಹೀಗೆಯೇ ಶಿವರಾತ್ರಿ ಹಬ್ಬಕ್ಕೂ ಕೆಲವು ವ್ರತ ನಿಯಮಗಳುಂಟು.

Maha Shivaratri 2022: ಶಿವರಾತ್ರಿಯಂದು ಮಾಡಬೇಕಾದ ಮೂರು ಸರಳ ಕರ್ತವ್ಯಗಳು ಯಾವುವು ಗೊತ್ತಾ?
ಶಿವನ ಭಕ್ತರು ಶಿವರಾತ್ರಿಯಂದು ಕೆಳಗಿನ ಈ ಮೂರು ನಿಯಮಗಳನ್ನು ಪಾಲಿಸಬೇಕು:
Follow us
TV9 Web
| Updated By: ಸಾಧು ಶ್ರೀನಾಥ್​

Updated on: Feb 28, 2022 | 12:57 PM

ಒಂದೊಂದು ದೇವರ ಹಬ್ಬಕ್ಕೂ ಒಂದೊಂದು ರೀತಿಯ ವ್ರತ ನಿಯಮಗಳು ಆಚರಣೆಯಲ್ಲಿ ಬರುತ್ತವೆ. ಹಾಗೆ ಮಾಡಿದರೆ ಮಾತ್ರವೇ ಆ ಹಬ್ಬ ಹರಿದಿನಗಳು ಸಾರ್ಥಕವಾಗಿ ಸಫಲವಾಗುತ್ತವೆ. ವರಸಿದ್ಧಿ ವಿನಾಯಕನಿಗೆ ಕರಿಗಡುಬು; ಶ್ರೀರಾಮ ನವಮಿ ಮತ್ತು ನರಸಿಂಹ ಜಯಂತಿಗಳಲ್ಲಿ ಪಾನಕ ಕೋಸಂಬರಿ; ಶ್ರೀಕೃಷ್ಣ ಜನ್ಮಾಷ್ಟಮಿಗೆ ಚಕ್ಕುಲಿ, ಕೋಡುಬಳೆ, ತೇಂಗೊಳಲು, ಅವಲಕ್ಕಿ, ಮೊಸರು; ಏಕಾದಶಿ ದಿನ ಹಣ್ಣುಹಂಪಲು; ಯುಗಾದಿ ದೀಪಾವಳಿಯಲ್ಲಿ ಅಭ್ಯಂಜನ ಸ್ನಾನ ಮತ್ತು ಹೋಳಿಗೆ ಊಟ.. ಇತ್ಯಾದಿ ಇತ್ಯಾದಿ. ಹೀಗೆಯೇ ಶಿವರಾತ್ರಿ ಹಬ್ಬಕ್ಕೂ ಕೆಲವು ವ್ರತ ನಿಯಮಗಳುಂಟು.

ಶಿವನ ಭಕ್ತರು ಶಿವರಾತ್ರಿಯಂದು ಕೆಳಗಿನ ಈ ಮೂರು ನಿಯಮಗಳನ್ನು ಪಾಲಿಸಬೇಕು: 

  1. ಮೂರು ಕರ್ತವ್ಯ: ನಾಲ್ಕೂ ಜಾವಗಳಲ್ಲಿ ಶಿವನಿಗೆ ಅಭಿಷೇಕಾದಿ ಪೂಜೆ, 2) ಜಾಗರಣೆ ಮತ್ತು 3) ಉಪವಾಸ. ಈ ಮೂರರಿಂದ ಪರಮ ಶಿವನು ಸಂತುಷ್ಟನಾಗಿ ತನ್ನ ಭಕ್ತರಿಗೆ ವರಪ್ರದನಾಗುತ್ತಾನೆ. ಈ ಮೂರು ನಿಯಮಗಳ ಅರ್ಥ ಕೆಳಗೆ ವಿವರಿಸಲಾಗಿದೆ.
  2.  ಶಿವಪೂಜೆ: ಶಿವಾಲಯಗಳಿಗೆ ಹೋಗಿ ಅಥವಾ ತಮ್ಮ ಮನೆಯಲ್ಲಿಯೇ ಶಿವಲಿಂಗವನ್ನು ಇಟ್ಟುಕೊಂಡು ಅದಕ್ಕೆ ಅಭಿಷೇಕ, ಅಷ್ಟೋತ್ತರ, ಸಹಸ್ರನಾಮ ಪೂಜೆಯನ್ನು ಯಥಾಶಕ್ತಿ ಮಾಡಬಹುದು. ಬಿಲ್ವ ಪತ್ತೆ ದಳಗಳಿಂದ ಪೂಜಿಸಿದರೆ ತುಂಬಾ ಶ್ರೇಷ್ಠ. ಶಿವರಾತ್ರಿಯಂದು ಸಾಯಂಕಾಲ 6 ಗಂಟೆಯಿಂದ ಪ್ರಾರಂಭಿಸಿ ಮಾರನೆಯ ದಿವಸ ಬೆಳಿಗ್ಗೆ 6 ಗಂಟೆಯವರೆಗೂ ನಾಲ್ಕೂ ಜಾವಗಳಲ್ಲಿ ಶಿವನ ಪೂಜೆಯನ್ನು ಮಾಡಬೇಕು.
  3.  ಜಾಗರಣೆ: ಅಂದು ರಾತ್ರಿಯೆಲ್ಲ ಶಿವನನ್ನು ಪೂಜಿಸುತ್ತಾ ಶಿವ ಪಂಚಾಕ್ಷರೀ ಮಂತ್ರವನ್ನು ಜಪಿಸುತ್ತಾ, ಶಿವನ ಧ್ಯಾನದಲ್ಲಿಯೇ ಮಗ್ನರಾಗಿರಬೇಕು. ಅಂದು ರಾತ್ರಿ ಮಲಗಬಾರದು. ನಿದ್ರೆಯನ್ನು ತಡೆಯುವುದಕ್ಕಾಗಿ ಸಿನಿಮಾ ಮಂದಿರಗಳಿಗೆ ಹೋಗಿ ಕಾಲ ಕಳೆಯಬಾರದು. ಪರಮೇಶ್ವರನ ಪೂಜೆಯನ್ನು ಮಾಡುತ್ತಾ ಇದ್ದರೆ ನಿದ್ರೆಯೇ ಬರುವುದಿಲ್ಲ!
  4. ಉಪವಾಸ: ಶಿವರಾತ್ರಿಯ ದಿನದಂದು ಬೇಯಿಸಿದ ಆಹಾರಗಳನ್ನು ತಿನ್ನಬಾರದು. ಕೇವಲ ಹಾಲು ಹಣ್ಣುಗಳನ್ನು ಮಾತ್ರ ಲಘುವಾಗಿ ಸ್ವೀಕರಿಸಬೇಕು. ಶಕ್ತಿ-ಸಾಮರ್ಥ್ಯಗಳಿದ್ದರೆ ಇದನ್ನೂ ತೆಗೆದುಕೊಳ್ಳದೇ ಕೇವಲ ನೀರನ್ನು ಕುಡಿದುಕೊಂಡೇ ಇರಬೇಕು. ಹೀಗೆ ಉಪವಾಸವಿದ್ದು, ರಾತ್ರಿಯೆಲ್ಲಾ ಜಾಗರಣೆ ಮಾಡುತ್ತಾ ಶಿವನಿಗೆ ಅಭಿಷೇಕ, ಅಷ್ಟೋತ್ತರ ಪೂಜೆಗಳನ್ನು ಮಾಡಿದಾಗ ಅದು ಅನ್ವರ್ಥ ಶಿವರಾತ್ರಿಯಾಗುತ್ತದೆ.

5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ