AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maha Shivaratri 2022: ಶಿವರಾತ್ರಿಯಂದು ಮಾಡಬೇಕಾದ ಮೂರು ಸರಳ ಕರ್ತವ್ಯಗಳು ಯಾವುವು ಗೊತ್ತಾ?

ಒಂದೊಂದು ದೇವರ ಹಬ್ಬಕ್ಕೂ ಒಂದೊಂದು ರೀತಿಯ ವ್ರತ ನಿಯಮಗಳು ಆಚರಣೆಯಲ್ಲಿ ಬರುತ್ತವೆ. ಹಾಗೆ ಮಾಡಿದರೆ ಮಾತ್ರವೇ ಆ ಹಬ್ಬ ಹರಿದಿನಗಳು ಸಾರ್ಥಕವಾಗಿ ಸಫಲವಾಗುತ್ತವೆ. ಹೀಗೆಯೇ ಶಿವರಾತ್ರಿ ಹಬ್ಬಕ್ಕೂ ಕೆಲವು ವ್ರತ ನಿಯಮಗಳುಂಟು.

Maha Shivaratri 2022: ಶಿವರಾತ್ರಿಯಂದು ಮಾಡಬೇಕಾದ ಮೂರು ಸರಳ ಕರ್ತವ್ಯಗಳು ಯಾವುವು ಗೊತ್ತಾ?
ಶಿವನ ಭಕ್ತರು ಶಿವರಾತ್ರಿಯಂದು ಕೆಳಗಿನ ಈ ಮೂರು ನಿಯಮಗಳನ್ನು ಪಾಲಿಸಬೇಕು:
TV9 Web
| Edited By: |

Updated on: Feb 28, 2022 | 12:57 PM

Share

ಒಂದೊಂದು ದೇವರ ಹಬ್ಬಕ್ಕೂ ಒಂದೊಂದು ರೀತಿಯ ವ್ರತ ನಿಯಮಗಳು ಆಚರಣೆಯಲ್ಲಿ ಬರುತ್ತವೆ. ಹಾಗೆ ಮಾಡಿದರೆ ಮಾತ್ರವೇ ಆ ಹಬ್ಬ ಹರಿದಿನಗಳು ಸಾರ್ಥಕವಾಗಿ ಸಫಲವಾಗುತ್ತವೆ. ವರಸಿದ್ಧಿ ವಿನಾಯಕನಿಗೆ ಕರಿಗಡುಬು; ಶ್ರೀರಾಮ ನವಮಿ ಮತ್ತು ನರಸಿಂಹ ಜಯಂತಿಗಳಲ್ಲಿ ಪಾನಕ ಕೋಸಂಬರಿ; ಶ್ರೀಕೃಷ್ಣ ಜನ್ಮಾಷ್ಟಮಿಗೆ ಚಕ್ಕುಲಿ, ಕೋಡುಬಳೆ, ತೇಂಗೊಳಲು, ಅವಲಕ್ಕಿ, ಮೊಸರು; ಏಕಾದಶಿ ದಿನ ಹಣ್ಣುಹಂಪಲು; ಯುಗಾದಿ ದೀಪಾವಳಿಯಲ್ಲಿ ಅಭ್ಯಂಜನ ಸ್ನಾನ ಮತ್ತು ಹೋಳಿಗೆ ಊಟ.. ಇತ್ಯಾದಿ ಇತ್ಯಾದಿ. ಹೀಗೆಯೇ ಶಿವರಾತ್ರಿ ಹಬ್ಬಕ್ಕೂ ಕೆಲವು ವ್ರತ ನಿಯಮಗಳುಂಟು.

ಶಿವನ ಭಕ್ತರು ಶಿವರಾತ್ರಿಯಂದು ಕೆಳಗಿನ ಈ ಮೂರು ನಿಯಮಗಳನ್ನು ಪಾಲಿಸಬೇಕು: 

  1. ಮೂರು ಕರ್ತವ್ಯ: ನಾಲ್ಕೂ ಜಾವಗಳಲ್ಲಿ ಶಿವನಿಗೆ ಅಭಿಷೇಕಾದಿ ಪೂಜೆ, 2) ಜಾಗರಣೆ ಮತ್ತು 3) ಉಪವಾಸ. ಈ ಮೂರರಿಂದ ಪರಮ ಶಿವನು ಸಂತುಷ್ಟನಾಗಿ ತನ್ನ ಭಕ್ತರಿಗೆ ವರಪ್ರದನಾಗುತ್ತಾನೆ. ಈ ಮೂರು ನಿಯಮಗಳ ಅರ್ಥ ಕೆಳಗೆ ವಿವರಿಸಲಾಗಿದೆ.
  2.  ಶಿವಪೂಜೆ: ಶಿವಾಲಯಗಳಿಗೆ ಹೋಗಿ ಅಥವಾ ತಮ್ಮ ಮನೆಯಲ್ಲಿಯೇ ಶಿವಲಿಂಗವನ್ನು ಇಟ್ಟುಕೊಂಡು ಅದಕ್ಕೆ ಅಭಿಷೇಕ, ಅಷ್ಟೋತ್ತರ, ಸಹಸ್ರನಾಮ ಪೂಜೆಯನ್ನು ಯಥಾಶಕ್ತಿ ಮಾಡಬಹುದು. ಬಿಲ್ವ ಪತ್ತೆ ದಳಗಳಿಂದ ಪೂಜಿಸಿದರೆ ತುಂಬಾ ಶ್ರೇಷ್ಠ. ಶಿವರಾತ್ರಿಯಂದು ಸಾಯಂಕಾಲ 6 ಗಂಟೆಯಿಂದ ಪ್ರಾರಂಭಿಸಿ ಮಾರನೆಯ ದಿವಸ ಬೆಳಿಗ್ಗೆ 6 ಗಂಟೆಯವರೆಗೂ ನಾಲ್ಕೂ ಜಾವಗಳಲ್ಲಿ ಶಿವನ ಪೂಜೆಯನ್ನು ಮಾಡಬೇಕು.
  3.  ಜಾಗರಣೆ: ಅಂದು ರಾತ್ರಿಯೆಲ್ಲ ಶಿವನನ್ನು ಪೂಜಿಸುತ್ತಾ ಶಿವ ಪಂಚಾಕ್ಷರೀ ಮಂತ್ರವನ್ನು ಜಪಿಸುತ್ತಾ, ಶಿವನ ಧ್ಯಾನದಲ್ಲಿಯೇ ಮಗ್ನರಾಗಿರಬೇಕು. ಅಂದು ರಾತ್ರಿ ಮಲಗಬಾರದು. ನಿದ್ರೆಯನ್ನು ತಡೆಯುವುದಕ್ಕಾಗಿ ಸಿನಿಮಾ ಮಂದಿರಗಳಿಗೆ ಹೋಗಿ ಕಾಲ ಕಳೆಯಬಾರದು. ಪರಮೇಶ್ವರನ ಪೂಜೆಯನ್ನು ಮಾಡುತ್ತಾ ಇದ್ದರೆ ನಿದ್ರೆಯೇ ಬರುವುದಿಲ್ಲ!
  4. ಉಪವಾಸ: ಶಿವರಾತ್ರಿಯ ದಿನದಂದು ಬೇಯಿಸಿದ ಆಹಾರಗಳನ್ನು ತಿನ್ನಬಾರದು. ಕೇವಲ ಹಾಲು ಹಣ್ಣುಗಳನ್ನು ಮಾತ್ರ ಲಘುವಾಗಿ ಸ್ವೀಕರಿಸಬೇಕು. ಶಕ್ತಿ-ಸಾಮರ್ಥ್ಯಗಳಿದ್ದರೆ ಇದನ್ನೂ ತೆಗೆದುಕೊಳ್ಳದೇ ಕೇವಲ ನೀರನ್ನು ಕುಡಿದುಕೊಂಡೇ ಇರಬೇಕು. ಹೀಗೆ ಉಪವಾಸವಿದ್ದು, ರಾತ್ರಿಯೆಲ್ಲಾ ಜಾಗರಣೆ ಮಾಡುತ್ತಾ ಶಿವನಿಗೆ ಅಭಿಷೇಕ, ಅಷ್ಟೋತ್ತರ ಪೂಜೆಗಳನ್ನು ಮಾಡಿದಾಗ ಅದು ಅನ್ವರ್ಥ ಶಿವರಾತ್ರಿಯಾಗುತ್ತದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ