AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahanavami 2025: ಸಿದ್ಧಿಧಾತ್ರಿ ದೇವಿಯ ಪೂಜೆಯ ಮಹತ್ವವನ್ನು ಇಲ್ಲಿ ತಿಳಿಯಿರಿ

ನವರಾತ್ರಿಯ ಅಂತಿಮ ದಿನವಾದ ಮಹಾನವಮಿಯಂದು ಸಿದ್ಧಿಧಾತ್ರಿ ದೇವಿಯ ಪೂಜೆಯ ಮಹತ್ವವನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಸಿದ್ಧಿಧಾತ್ರಿ ದೇವಿಯು ಅಷ್ಟಸಿದ್ಧಿಗಳನ್ನು ನೀಡುವ, ಮಾನಸಿಕ ಗೊಂದಲ ನಿವಾರಿಸುವ ಕರುಣಾಮಯಿ ತಾಯಿ. ಈ ದಿನ ಪೂಜಿಸುವುದರಿಂದ ಧೈರ್ಯ, ಶಕ್ತಿ, ಆರೋಗ್ಯ ವೃದ್ಧಿಯಾಗುತ್ತದೆ. ಆಯುಧ ಪೂಜೆಯೊಂದಿಗೆ ನವರಾತ್ರಿ ಪೂಜೆ ಸಂಪನ್ನಗೊಳ್ಳುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

Mahanavami 2025: ಸಿದ್ಧಿಧಾತ್ರಿ ದೇವಿಯ ಪೂಜೆಯ ಮಹತ್ವವನ್ನು ಇಲ್ಲಿ ತಿಳಿಯಿರಿ
Siddhidatri Devi Puja
ಅಕ್ಷತಾ ವರ್ಕಾಡಿ
|

Updated on:Oct 01, 2025 | 10:21 AM

Share

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಸಿದ್ಧಿಧಾತ್ರಿ ದೇವಿ ಪೂಜೆಯ ಮಹತ್ವವನ್ನು ವಿವರಿಸಿದ್ದಾರೆ. ಇಂದು ನವರಾತ್ರಿಯ ಒಂಬತ್ತನೆಯ ಮತ್ತು ಅಂತಿಮ ದಿನವಾದ ಮಹಾನವಮಿ ಹಾಗೂ ಶುಕ್ಲ ನವಮಿಯನ್ನು ಆಚರಿಸಲಾಗುತ್ತದೆ. ಈ ದಿನ ಸಿದ್ಧಿಧಾತ್ರಿ ದೇವಿ ಪೂಜೆ ಮತ್ತು ಆಯುಧ ಪೂಜೆಗಳನ್ನು ವಿಶೇಷವಾಗಿ ನೆರವೇರಿಸಲಾಗುತ್ತದೆ. ಒಂಬತ್ತು ದಿನಗಳ ನವರಾತ್ರಿ ಆಚರಣೆಯನ್ನು ಸಿದ್ಧಿಧಾತ್ರಿ ಪೂಜೆಯೊಂದಿಗೆ ಸಂಪನ್ನಗೊಳಿಸಲಾಗುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.

ಸಿದ್ಧಿಧಾತ್ರಿ ದೇವಿಯ ಮಹತ್ವ:

ಮಹಾನವಮಿಯಂದು ದುರ್ಗಾದೇವಿಯನ್ನು ಸಿದ್ಧಿಧಾತ್ರಿ ರೂಪದಲ್ಲಿ ಪೂಜಿಸಲಾಗುತ್ತದೆ. ದುರ್ಗಾದೇವಿಯು ಒಂಬತ್ತು ಶಕ್ತಿಗಳೊಂದಿಗೆ ದುಷ್ಟ ರಾಕ್ಷಸರನ್ನು ಸಂಹಾರ ಮಾಡಿದ ಪ್ರತೀಕವಾಗಿ ಈ ಪೂಜೆ ಆಚರಣೆಯಲ್ಲಿದೆ. ಸಿದ್ಧಿಧಾತ್ರಿ ಎಂಬ ಹೆಸರೇ ಸೂಚಿಸುವಂತೆ, ಇವಳು ಎಲ್ಲಾ ಸಿದ್ಧಿಗಳನ್ನು ದಯಪಾಲಿಸುವ ತಾಯಿ. ಮಾನಸಿಕ ಗೊಂದಲಗಳನ್ನು ಹೋಗಲಾಡಿಸಿ ಜಯಕ್ಕೆ ಕಾರಣೀಭೂತಳಾಗುವ, ಕರುಣೆಯ ತಾಯಿ ಎಂದು ಈ ದೇವಿಯನ್ನು ಕರೆಯಲಾಗುತ್ತದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹಳೆಯದ್ದು​​​ ಬಿಸಾಕಿ ಹೊಸ ಪರ್ಸ್ ತೆಗೆದುಕೊಳ್ಳುವ ಮುನ್ನ ಈ ವಿಷ್ಯ ತಿಳಿದುಕೊಳ್ಳಿ

ಮಾರ್ಕಂಡೇಯ ಪುರಾಣದಲ್ಲಿ ಉಲ್ಲೇಖವಾಗಿರುವಂತೆ, ಸಿದ್ಧಿಧಾತ್ರಿ ಅಷ್ಟಸಿದ್ಧಿಗಳಾದ ಅಣಿಮಾ, ಮಹಿಮಾ, ಗರಿಮಾ, ಲಘಿಮಾ, ಪ್ರಾಪ್ತಿ, ಪ್ರಾಕಮ್ಮೆಯೋ, ಈಶಿತ್ವಾ, ವಶಿತ್ವಾಗಳನ್ನು ನೀಡುವಳು. ಈ ಸಿದ್ಧಿಗಳು ಯುದ್ಧದಲ್ಲಿ ಶತ್ರುಗಳ ಮೇಲೆ ಪ್ರಭಾವ ಬೀರಲು, ಪ್ರಜ್ಞೆ ತಪ್ಪಿಸಲು, ಮತ್ತು ಅದೃಶ್ಯವಾಗಲು ಸಹಾಯ ಮಾಡುತ್ತವೆ. ಸಿದ್ಧಿಧಾತ್ರಿಯ ಮಂತ್ರ “ಓಂ ಐಂ ಹ್ರೀಂ ಶ್ರೀಂ ಸಿದ್ಧಿಧಾತ್ರೇ ನಮಃ” ಇದನ್ನು ಕನಿಷ್ಠ 21 ಬಾರಿ ಜಪಿಸುವುದರಿಂದ ಧೈರ್ಯ, ಶಕ್ತಿ, ಸಕಾರಾತ್ಮಕ ಮನೋಭಾವ, ಮತ್ತು ಅಖಂಡ ಆತ್ಮಸ್ಥೈರ್ಯ ವೃದ್ಧಿಸುತ್ತದೆ. ಆರೋಗ್ಯ, ಜಯ, ಮತ್ತು ಸಂಕುಚಿತ ಭಾವನೆಗಳ ನಿವಾರಣೆಗಾಗಿ ಈ ತಾಯಿಯನ್ನು ಶ್ರದ್ಧಾ ಭಕ್ತಿಗಳಿಂದ ಪೂಜಿಸಬೇಕು. ಸಿದ್ಧಿಧಾತ್ರಿಗೆ ಕೋಸಂಬರಿ, ಕೋಡುಬಳೆ, ಹೆಸರುಬೇಳೆ ಹುಸಲಿ ನೈವೇದ್ಯವಾಗಿ ಅರ್ಪಿಸಲಾಗುತ್ತದೆ. ತಾಯಿಯು ನಾಲ್ಕು ಭುಜಗಳನ್ನು ಹೊಂದಿದ್ದು, ಕಮಲ ಪುಷ್ಪದ ಮೇಲೆ ವಿರಾಜಮಾನಳಾಗಿರುತ್ತಾಳೆ. ಕೈಗಳಲ್ಲಿ ಶಂಖ, ಚಕ್ರ, ಗದೆ ಮತ್ತು ಕಮಲ ಪುಷ್ಪವನ್ನು ಧರಿಸಿರುತ್ತಾಳೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:21 am, Wed, 1 October 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ