AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahavir Jayanti 2024: ಮಹಾವೀರ ಸ್ವಾಮಿ ಮತ್ತು ಭಗವಾನ್ ಶ್ರೀರಾಮ ಒಂದೇ ಕುಲ? ಇದು ಸತ್ಯವೇ?

ಮಹಾವೀರ ಸ್ವಾಮಿಗಳು ಚೈತ್ರ ಮಾಸದ ಶುಕ್ಲ ಪಕ್ಷದ ತ್ರಯೋದಶಿ ತಿಥಿಯಂದು ಜನಿಸಿದರು. ಅವರನ್ನು ಜೈನ ಧರ್ಮದ ಕೊನೆಯ ತೀರ್ಥಂಕರ ಎಂದೂ ಕರೆಯಲಾಗುತ್ತದೆ. ಜೈನ ಸಮುದಾಯದಲ್ಲಿ ಮಹಾವೀರ ಜಯಂತಿಗೆ ವಿಶೇಷ ಮಹತ್ವವಿದ್ದು ಈ ಬಾರಿ ಎ. 21 ರಂದು ಆಚರಿಸಲಾಗುತ್ತದೆ. ಇನ್ನು ಮಹಾವೀರರಿಗೂ ಭಗವಾನ್ ಶ್ರೀರಾಮರಿಗೂ ಸಂಬಂಧವಿದೆ ಎನ್ನಲಾಗುತ್ತದೆ! ಇದು ಸತ್ಯವೇ? ಹಾಗಾದರೆ ಅವರಿಬ್ಬರಿಗೂ ಇರುವ ಸಂಬಂಧವೇನು? ಇಲ್ಲಿದೆ ಮಾಹಿತಿ.

Mahavir Jayanti 2024: ಮಹಾವೀರ ಸ್ವಾಮಿ ಮತ್ತು ಭಗವಾನ್ ಶ್ರೀರಾಮ ಒಂದೇ ಕುಲ? ಇದು ಸತ್ಯವೇ?
ಸಾಮದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 20, 2024 | 5:47 PM

Share

ಜೈನ ಧರ್ಮದ 24 ನೇ ತೀರ್ಥಂಕರರಾದ ಮಹಾವೀರ ಸ್ವಾಮಿಗಳು ಚೈತ್ರ ಮಾಸದ ಶುಕ್ಲ ಪಕ್ಷದ ತ್ರಯೋದಶಿ ತಿಥಿಯಂದು ಜನಿಸಿದರು. ಅವರನ್ನು ಜೈನ ಧರ್ಮದ ಕೊನೆಯ ತೀರ್ಥಂಕರ ಎಂದೂ ಕರೆಯಲಾಗುತ್ತದೆ. ಜೈನ ಸಮುದಾಯದಲ್ಲಿ ಮಹಾವೀರ ಜಯಂತಿಗೆ ವಿಶೇಷ ಮಹತ್ವವಿದ್ದು ಈ ಬಾರಿ ಎ. 21 ರಂದು ಆಚರಿಸಲಾಗುತ್ತದೆ. ಈ ದಿನ ಜೈನ ಧರ್ಮದ ಅನುಯಾಯಿಗಳು ಭಗವಾನ್ ಮಹಾವೀರನನ್ನು ಭಕ್ತಿಯಿಂದ ಪೂಜಿಸುತ್ತಾರೆ ಮತ್ತು ಅವರು ನೀಡಿದ ಬೋಧನೆಗಳು ಮತ್ತು ತತ್ವಗಳನ್ನು ಗುರುಗಳ ಮೂಲಕ ಕೇಳುತ್ತಾರೆ. ಭಗವಾನ್ ಮಹಾವೀರರು ಸಾರ್ವಜನಿಕ ಕಲ್ಯಾಣಕ್ಕಾಗಿ ಐದು ತತ್ವಗಳನ್ನು ನೀಡಿದರು, ಅದು ಇಂದಿಗೂ ಜನರನ್ನು ಸಮೃದ್ಧ ಜೀವನದತ್ತ ಕರೆದೊಯ್ಯುತ್ತಿದೆ. ಇನ್ನು, ಮಹಾವೀರರಿಗೂ ಭಗವಾನ್ ಶ್ರೀರಾಮರಿಗೂ ಸಂಬಂಧವಿದೆ ಎನ್ನಲಾಗುತ್ತದೆ! ಇದು ಸತ್ಯವೇ? ಹಾಗಾದರೆ ಅವರಿಬ್ಬರಿಗೂ ಇರುವ ಸಂಬಂಧವೇನು? ಇಲ್ಲಿದೆ ಮಾಹಿತಿ.

ಭಗವಾನ್ ಶ್ರೀರಾಮ ಮತ್ತು ಮಹಾವೀರರಿಗೆ ಇರುವ ಸಂಬಂಧವೇನು?

ಭಗವಾನ್ ಮಹಾವೀರ ಸ್ವಾಮಿ, ಜೈನ ಧರ್ಮದ 24 ನೇ ಮತ್ತು ಕೊನೆಯ ತೀರ್ಥಂಕರ, ಕ್ರಿ.ಪೂ 599 ರಲ್ಲಿ ಬಿಹಾರದಲ್ಲಿ ಜನಿಸಿದರು. ಕೆಲವು ನಂಬಿಕೆಗಳ ಪ್ರಕಾರ ಅವರು ಇಕ್ಷ್ವಾಕು ರಾಜವಂಶದಲ್ಲಿ ಜನಿಸಿದ್ದರು ಎನ್ನಲಾಗುತ್ತದೆ. ಹಾಗಾಗಿ ಮಹಾವೀರ ಸ್ವಾಮಿ ಮತ್ತು ಭಗವಾನ್ ಶ್ರೀರಾಮರು ಒಂದೇ ಕುಲದಲ್ಲಿ ಜನಿಸಿದ್ದರು ಎನ್ನಲಾಗುತ್ತದೆ. ಇಬ್ಬರೂ ಕೂಡ ಸೂರ್ಯವಂಶಿಗಳು. ಹಾಗಾಗಿ ಇಬ್ಬರಿಗೂ ಸಂಬಂಧವಿದೆ ಎಂಬ ನಂಬಿಕೆ ಇದೆ. ಕ್ರಿ.ಪೂ. ಆರನೇ ಶತಮಾನದಲ್ಲಿ ಭಗವಾನ್ ಮಹಾವೀರರು ಜೈನ ಧರ್ಮವನ್ನು ಬೋಧಿಸಿದಾಗ, ಈ ಧರ್ಮವು ಪ್ರಾಮುಖ್ಯತೆಗೆ ಬಂದಿತು ಎಂದು ಹೇಳಲಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ