AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Main Gate Vastu: ಮನೆಯ ಬಾಗಿಲಿನ ಮೇಲೆ ದೇವರ ಫೋಟೋ ಇಟ್ಟಿದ್ದೀರಾ? ಈ ನಿಯಮ ಕಡ್ಡಾಯ ಪಾಲಿಸಿ

ನೀವು ಕೂಡ ಮನೆ ಬಾಗಿಲಿನಲ್ಲಿ ದೇವರ ಫೋಟೋ ಇಟ್ಟಿದ್ದರೆ ಕೆಲವು ಪ್ರಮುಖ ವಿಷಯಗಳನ್ನು ತಿಳಿದುಕೊಳ್ಳಬೇಕು. ದೇವರ ಫೋಟೋವನ್ನು ಮನೆಯ ಬಾಗಿಲಿನ ಮೇಲೆ ಇಡಬೇಕೇ ಅಥವಾ ಬೇಡವೇ ಮತ್ತು ಅದನ್ನು ಇರಿಸಿದರೆ ಯಾವ ನಿಯಮಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

Main Gate Vastu: ಮನೆಯ ಬಾಗಿಲಿನ ಮೇಲೆ ದೇವರ ಫೋಟೋ ಇಟ್ಟಿದ್ದೀರಾ? ಈ ನಿಯಮ ಕಡ್ಡಾಯ ಪಾಲಿಸಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 03, 2024 | 5:06 PM

Share

ಮನೆಯ ಬಾಗಿಲುಗಳನ್ನು ಸಿಂಗರಿಸಲು ಅನೇಕ ರೀತಿಯ ಅಲಂಕಾರಗಳನ್ನು ಮಾಡುತ್ತಾರೆ. ಕೆಲವರು ತಮ್ಮ ಮನೆಯ ದ್ವಾರದ ಮೇಲೆ ದೇವರ ಫೋಟೋವನ್ನು ನೇತು ಹಾಕುತ್ತಾರೆ. ನೀವು ಕೂಡ ಮನೆ ಬಾಗಿಲಿನಲ್ಲಿ ದೇವರ ಫೋಟೋ ಇಟ್ಟಿದ್ದರೆ ಕೆಲವು ಪ್ರಮುಖ ವಿಷಯಗಳನ್ನು ತಿಳಿದುಕೊಳ್ಳಬೇಕು. ದೇವರ ಫೋಟೋವನ್ನು ಮನೆಯ ಬಾಗಿಲಿನ ಮೇಲೆ ಇಡಬೇಕೇ ಅಥವಾ ಬೇಡವೇ ಮತ್ತು ಅದನ್ನು ಇರಿಸಿದರೆ ಯಾವ ನಿಯಮಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ವಾಸ್ತು ಶಾಸ್ತ್ರದ ಪ್ರಕಾರ ದೇವರ ಚಿತ್ರವನ್ನು ಮನೆಯ ಬಾಗಿಲುಗಳ ಮೇಲೆ, ವಿಶೇಷವಾಗಿ ಮುಖ್ಯ ದ್ವಾರದ ಮೇಲೆ ಇಡಬಾರದು ಎಂದು ಹೇಳಲಾಗುತ್ತದೆ. ಏಕೆಂದರೆ ದೇವರು ನಿಮ್ಮ ದ್ವಾರಪಾಲಕನಲ್ಲ. ನೀವು ಮನೆಯ ಮುಖ್ಯ ದ್ವಾರದಲ್ಲಿ ಅಥವಾ ಬೇರೆ ಯಾವುದೇ ಬಾಗಿಲಿನ ಮೇಲೆ ದೇವರ ಚಿತ್ರವನ್ನು ನೇತುಹಾಕಲು ಅಥವಾ ಇಡಲು ಬಯಸಿದಲ್ಲಿ, ಕೆಲವು ವಿಶೇಷ ನಿಯಮಗಳನ್ನು ಅನುಸರಿಸುವ ಮೂಲಕ ಗಣೇಶ, ಹನುಮಂತ ಮತ್ತು ಮಾತೆ ಲಕ್ಷ್ಮೀಯ ಫೋಟೋಗಳನ್ನು ಇಡಬಹುದು ಎಂದು ಕೆಲವು ವಾಸ್ತು ತಜ್ಞರು ಹೇಳುತ್ತಾರೆ. ಆದರೆ ದೇವರ ಫೋಟೋದ ಗಾತ್ರವು ದೊಡ್ಡದಾಗಿರಬೇಕು ಮತ್ತು ಈ ಫೋಟೋವನ್ನು ಗಾಜಿನ ಚೌಕಟ್ಟಿನಲ್ಲಿನಲ್ಲಿಯೇ ಇಡಬೇಕು ಎಂಬುದನ್ನು ನೆನಪಿನಲ್ಲಿಡಿ.

ಜೊತೆಗೆ ದೇವರ ಚಿತ್ರವಿರುವ ದ್ವಾರದ ಮೇಲೆ ಯಾವಾಗಲೂ ಬೆಳಕು ಬರುವಂತಿರಬೇಕು. ನೀವು ಮನೆಯಲ್ಲಿ ಇಲ್ಲದಿದ್ದರೂ ಸಹ ಆ ಸ್ಥಳಕ್ಕೆ ಬೆಳಕು ಬರಬೇಕು. ಪ್ರತಿದಿನ ದೇವರ ಚಿತ್ರವನ್ನು ಸ್ವಚ್ಛಗೊಳಿಸಬೇಕು. ಸಾಧ್ಯವಾದರೆ, ಪ್ರತಿದಿನ ಚಿತ್ರದ ಮುಂದೆ ದೀಪವನ್ನು ಹಚ್ಚಿಡಿ. ಬಾಗಿಲಿನ ಮೇಲೆ ದೇವರ ಚಿತ್ರವಿದ್ದರೆ, ಅಲ್ಲಿಯೇ ಕೆಳಗೆ ಶೂ ಮತ್ತು ಚಪ್ಪಲಿಗಳನ್ನು ಇಡಬೇಡಿ. ಬಾಗಿಲಿನ ಮೇಲೆ ದೇವರ ಚಿತ್ರವನ್ನು ಹಾಕುವುದು ಒಳ್ಳೆಯದೇ ಅಥವಾ ಇಲ್ಲವೇ ಎಂಬ ಬಗ್ಗೆ ನೀವು ವಾಸ್ತು ತಜ್ಞರಿಂದ ಸಲಹೆ ಪಡೆದುಕೊಳ್ಳಬಹುದು. ಈ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು, ನಿಮ್ಮ ಮನೆಯ ಬಾಗಿಲಿನ ಮೇಲೆ ದೇವರ ಚಿತ್ರವನ್ನು ಇಟ್ಟಲ್ಲಿ ನೀವು ಶುಭ ಫಲಿತಾಂಶಗಳನ್ನು ಪಡೆಯುತ್ತೀರಿ.

ಇದನ್ನೂ ಓದಿ: ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿನಲ್ಲಿಡಬೇಕು?

ಈ ನಿಯಮಗಳನ್ನು ಅನುಸರಿಸಿ, ದೇವರ ಫೋಟೋವನ್ನು ಮುಖ್ಯ ದ್ವಾರದ ಮೇಲೆ ಇಟ್ಟರೆ ಮನೆಯ ವಾಸ್ತು ದೋಷ ನಿವಾರಣೆಯಾಗುತ್ತದೆ ನಿಮ್ಮ ವೃತ್ತಿ ಜೀವನ ಕೂಡ ಚೆನ್ನಾಗಿರುತ್ತದೆ. ಮನೆಯಲ್ಲಿರುವವರ ಆರೋಗ್ಯವು ಉತ್ತಮವಾಗಿರುತ್ತದೆ. ಜೊತೆಗೆ ದೇವರ ಆಶೀರ್ವಾದದಿಂದ, ನಿಮ್ಮ ಮನೆಯಲ್ಲಿ ಯಾವುದೇ ರೀತಿಯಲ್ಲಿ ಜಗಳ ಮನಸ್ತಾಪಗಳು ಬರುವುದಿಲ್ಲ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ