AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಬರಿಮಲೆಯಲ್ಲಿ ನಾಳೆಯಿಂದ ಅಯ್ಯಪ್ಪ ದರ್ಶನ: ವರ್ಚುವಲ್ ಕ್ಯೂ ಮೂಲಕ ಮಾತ್ರ ಪ್ರವೇಶ, ದಿನಕ್ಕೆ ಗರಿಷ್ಠ 1 ಲಕ್ಷ ಜನರಿಗೆ ಅವಕಾಶ

ಈ ವರ್ಷ ಯಾತ್ರಿಗಳಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ಮಾತ್ರವೇ ಪ್ರವೇಶ ಇರಲಿದೆ. ಒಂದು ದಿನಕ್ಕೆ ಗರಿಷ್ಠ 1.2 ಲಕ್ಷ ಮಂದಿಗೆ ದರ್ಶನ ಸಿಗಲಿದೆ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದೆ.

ಶಬರಿಮಲೆಯಲ್ಲಿ ನಾಳೆಯಿಂದ ಅಯ್ಯಪ್ಪ ದರ್ಶನ: ವರ್ಚುವಲ್ ಕ್ಯೂ ಮೂಲಕ ಮಾತ್ರ ಪ್ರವೇಶ, ದಿನಕ್ಕೆ ಗರಿಷ್ಠ 1 ಲಕ್ಷ ಜನರಿಗೆ ಅವಕಾಶ
ಶಬರಿಮಲೆ ಅಯ್ಯಪ್ಪ ಯಾತ್ರೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 16, 2022 | 8:08 AM

Share

ತಿರುವನಂತಪುರ: ಶಬರಿಮಲೆಯ ಅಯ್ಯಪ್ಪ ದೇಗುಲವು ಬುಧವಾರದಿಂದ (ನ 16) ತೆರೆಯಲಿದ್ದು, ಗುರುವಾರದಿಂದ (ನ 17) ಎರಡು ತಿಂಗಳ ಅವಧಿಗೆ ಭಕ್ತರ ದರ್ಶನಕ್ಕೆ ಅವಕಾಶ ಇರಲಿದೆ. ವಾರ್ಷಿಕ ಮಂಡಲಂ-ಮಕರವಿಳುಕ್ಕು ಯಾತ್ರೆಗೂ ನಾಳೆಯಿಂದಲೇ ಚಾಲನೆ ಸಿಗಲಿದೆ. ದೇಗುಲದ ಹಾಲಿ ಪ್ರಧಾನ ಅರ್ಚಕರಾದ (ತಂತ್ರಿ) ಕಂಡರಾರು ರಾಜೀವರು ಮತ್ತು ಹಿಂದ ಪ್ರಧಾನ ಅರ್ಚಕರಾದ ಎನ್.ಪರಮೇಶ್ವರನ್ ನಂಬೂದಿರಿ ಅವರ ಸಮಕ್ಷಮದಲ್ಲಿ ದೇಗುಲದ ಗರ್ಭಗೃಹವನ್ನು ಇಂದು ಸಂಜೆ 5 ಗಂಟೆಗೆ ತೆರೆಯಲಾಗುವುದು. ನಂತರ ಅಯ್ಯಪ್ಪ ಮತ್ತು ಮಲಿಕಾಪುರಮ್ ದೇಗುಲಗಳ ಮುಖ್ಯ ಅರ್ಚಕರು ಪೂಜಾ ವಿಧಿಗಳನ್ನು ಆರಂಭಿಸುವ ಮೂಲಕ ಜವಾಬ್ದಾರಿಯನ್ನು ಸ್ವೀಕರಿಸಲಿದ್ದಾರೆ. 41 ದಿನಗಳ ಮಂಡಲ ಪೂಜಾ ವಿಧಿಗಳು ಡಿ 27ಕ್ಕೆ ಮುಕ್ತಾಯವಾಗಲಿದೆ.

ನಂತರ ಮೂರು ದಿನಗಳ ಕಾಲ ದೇಗುಲದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಡಿ 30ರಿಂದ ಮಕರವಿಳುಕ್ಕು ಯಾತ್ರೆಗಾಗಿ ದೇಗುಲವನ್ನು ಮತ್ತೆ ತೆರೆಯಲಾಗುವುದು. ಜನವರಿ 14ರಂದು ಮಕರವಿಳಕ್ಕು ಕಾರ್ಯಕ್ರಮವಿದೆ. ಸಂಕ್ರಾಂತಿ ಜ್ಯೋತಿಯ ದರ್ಶನ ಮತ್ತಿತರರ ಪೂಜಾ ವಿಧಿಗಳ ನಂತರ ಜನವರಿ 20ರಂದು ದೇಗುಲವನ್ನು ಮುಚ್ಚಲಾಗುವುದು. ಅಲ್ಲಿಗೆ ಈ ವರ್ಷದ ಶಬರಿಮಲೆ ಯಾತ್ರೆ ಋತುಮಾನ ಮುಕ್ತಾಯವಾದಂತೆ ಆಗುತ್ತದೆ.

ಕೊವಿಡ್-19ರ ನಿರ್ಬಂಧದ ಕಾರಣ ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿತ್ತು. ಈ ಬಾರಿ ನಿರ್ಬಂಧ ಸಡಿಲಿಸಿರುವುದರಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆ ಯಾತ್ರೆ ಕೈಗೊಳ್ಳಬಹುದು ಎಂಬ ನಿರೀಕ್ಷೆಯಿದೆ. ಶಬರಿಮಲೆ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಸುಮಾರು 13,000 ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಈ ವರ್ಷ ಯಾತ್ರಿಗಳಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ಮಾತ್ರವೇ ಪ್ರವೇಶ ಇರಲಿದೆ. ಒಂದು ದಿನಕ್ಕೆ ಗರಿಷ್ಠ 1.2 ಲಕ್ಷ ಮಂದಿಗೆ ದರ್ಶನ ಸಿಗಲಿದೆ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದೆ.

Published On - 8:08 am, Wed, 16 November 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ