Secrets of Gayatri Mantra: ಮನುಷ್ಯನ ಗುಣವೇ ಅಹಂಕಾರ -ನಾನು ಎಂಬ ಅಹಂಕಾರವನ್ನು ದೂರ ಮಾಡುವುದೇ ಸಂಧ್ಯಾವಂದನೆ!

Benefits of Chanting Gayatri Mantra:  ಗಾಯತ್ರೀ ಮಂತ್ರ ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದು. ಬ್ರಹ್ಮ ಪವಿತ್ರವಾದ ಸೂರ್ಯ ನಾರಾಯಣನಿಂದ ಉದ್ಭವಿಸಲ್ಪಟ್ಟ ಗಾಯತ್ರಿ ಮಂತ್ರ ಅತ್ಯಂತ ಪ್ರಭಾವಶಾಲಿಯಾದುದು. ಸೂರ್ಯ ದೇವರಿಗೆ ಸಂಬಂಧಿಸಿದ ಈ ಮಂತ್ರ ನಮ್ಮ ಋಷಿಮುನಿಗಳು ನಮಗೆ ಬಿಟ್ಟು ಹೋಗಿರುವ ನಮ್ಮ ಜನ್ಮವನ್ನು ನಾವೇ ಉದ್ಧಾರ ಮಾಡಿಕೊಳ್ಳಬಹುದಾದ ದಿವ್ಯಮಂತ್ರವಾಗಿದೆ ಎಂದರೆ ತಪ್ಪಾಗಲಾರದು.

Secrets of Gayatri Mantra: ಮನುಷ್ಯನ ಗುಣವೇ ಅಹಂಕಾರ -ನಾನು ಎಂಬ ಅಹಂಕಾರವನ್ನು ದೂರ ಮಾಡುವುದೇ ಸಂಧ್ಯಾವಂದನೆ!
ನಿತ್ಯವೂ ಸಂಧ್ಯಾವಂದನೆ ಮಾಡುವುದರಿಂದ ಏಕಾಗ್ರತೆ ಹೆಚ್ಚುತ್ತದೆ.

Updated on: Aug 22, 2024 | 4:04 PM

Benefits of Chanting Gayatri Mantra: ಸಂಧ್ಯಾವಂದನೆ ನಿತ್ಯ ನೈಮಿತ್ತಿಕ ಕರ್ಮಗಳಲ್ಲೊಂದಾಗಿದೆ. ಅದನ್ನು ತಪ್ಪದೇ ಆಚರಿಸುವುದು ಮನುಷ್ಯನ ಆದ್ಯ ಕರ್ತವ್ಯ. ಮನುಷ್ಯನ ಪ್ರಮುಖ ಗುಣವೇ ಅಹಂಕಾರ. ನಾನು ಎಂಬ ಈ ಅಹಂಕಾರವನ್ನು ದೂರ ಮಾಡುವುದೇ ಸಂಧ್ಯಾವಂದನೆಯಿಂದಾಗುವ ಸಾಧನೆ! ಸಂಧ್ಯಾವಂದನೆಯಿಂದಾಗುವ (sandhyavandane) ನಾನಾ ಪರಿಣಾಮಗಳ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ. Secrets of Gayatri Mantra: ಗಾಯತ್ರಿ ಮಂತ್ರ ಎಂಬುದು ಮಂತ್ರವಲ್ಲ. ಅದು ಒಂದು ಛಂದಸ್ಸು. ಗಾಯತ್ರೀ ಮಂತ್ರ ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದು. ಬ್ರಹ್ಮ ಪವಿತ್ರವಾದ ಸೂರ್ಯ ನಾರಾಯಣನಿಂದ ಉದ್ಭವಿಸಲ್ಪಟ್ಟ ಗಾಯತ್ರಿ ಮಂತ್ರ ಅತ್ಯಂತ ಪ್ರಭಾವಶಾಲಿಯಾದುದು. ಸೂರ್ಯ ದೇವರಿಗೆ ಸಂಬಂಧಿಸಿದ ಈ ಮಂತ್ರ ನಮ್ಮ ಋಷಿಮುನಿಗಳು ನಮಗೆ ಬಿಟ್ಟು ಹೋಗಿರುವ ನಮ್ಮ ಜನ್ಮವನ್ನು ನಾವೇ ಉದ್ಧಾರ ಮಾಡಿಕೊಳ್ಳಬಹುದಾದ ದಿವ್ಯಮಂತ್ರವಾಗಿದೆ ಎಂದರೆ ತಪ್ಪಾಗಲಾರದು. ಗಾಯತ್ರಿ ಮೂಲತಃ ಸಂಸ್ಕೃತ ಪದವಾದ ಗಾಯತ್ರ ಪದದ ಸ್ತ್ರೀಲಿಂಗ ರೂಪ. ಈ ಪದವನ್ನು ಸಂಸ್ಕೃತದಲ್ಲಿ ಗಾಯಂತಮ್ ತ್ರಾಯತೇ ಯಸ್ಮಾತ್ ಇತಿ ಗಾಯತ್ರಾ ಎಂದು ಬಿಡಿಸುತ್ತಾರೆ. ಭಾಷಾಂತರಿಸಿದರೆ ಯಾವುದರ ಉಚ್ಚಾರದಿಂದ ಸಂಕಷ್ಟ ತೀರುವುದೊ ಅದೆ ಗಾಯತ್ರ ಎಂಬ ಅರ್ಥ ಮೂಡಿ ಬರುತ್ತದೆ. ಹಿಂದೂ ಧರ್ಮಾನುಯಾಯಿಗಳ ವಚನ ಲೇಖನಗಳಲ್ಲಿ ಮತ್ತು ಧರ್ಮ ಗ್ರಂಥಗಳಲ್ಲಿ ಈ ಪದವನ್ನು ಮೂರು ಸ್ವರೂಪದಲ್ಲಿ ಕಾಣಬಹುದು. ಗಾಯತ್ರೀ ದೇವಿ (ಸಾವಿತ್ರಿ) ಬ್ರಹ್ಮನ ಪತ್ನಿಯಾದ ಸರಸ್ವತಿಯ ಸ್ವರೂಪ ಎಂಬ ಪ್ರತೀತಿ ಇದೆ. ವೇದ ಮಾತೆ...

Published On - 6:06 am, Thu, 22 August 24

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ