Secrets of Gayatri Mantra: ಮನುಷ್ಯನ ಗುಣವೇ ಅಹಂಕಾರ -ನಾನು ಎಂಬ ಅಹಂಕಾರವನ್ನು ದೂರ ಮಾಡುವುದೇ ಸಂಧ್ಯಾವಂದನೆ!

Benefits of Chanting Gayatri Mantra:  ಗಾಯತ್ರೀ ಮಂತ್ರ ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದು. ಬ್ರಹ್ಮ ಪವಿತ್ರವಾದ ಸೂರ್ಯ ನಾರಾಯಣನಿಂದ ಉದ್ಭವಿಸಲ್ಪಟ್ಟ ಗಾಯತ್ರಿ ಮಂತ್ರ ಅತ್ಯಂತ ಪ್ರಭಾವಶಾಲಿಯಾದುದು. ಸೂರ್ಯ ದೇವರಿಗೆ ಸಂಬಂಧಿಸಿದ ಈ ಮಂತ್ರ ನಮ್ಮ ಋಷಿಮುನಿಗಳು ನಮಗೆ ಬಿಟ್ಟು ಹೋಗಿರುವ ನಮ್ಮ ಜನ್ಮವನ್ನು ನಾವೇ ಉದ್ಧಾರ ಮಾಡಿಕೊಳ್ಳಬಹುದಾದ ದಿವ್ಯಮಂತ್ರವಾಗಿದೆ ಎಂದರೆ ತಪ್ಪಾಗಲಾರದು.

Secrets of Gayatri Mantra: ಮನುಷ್ಯನ ಗುಣವೇ ಅಹಂಕಾರ -ನಾನು ಎಂಬ ಅಹಂಕಾರವನ್ನು ದೂರ ಮಾಡುವುದೇ ಸಂಧ್ಯಾವಂದನೆ!
ನಿತ್ಯವೂ ಸಂಧ್ಯಾವಂದನೆ ಮಾಡುವುದರಿಂದ ಏಕಾಗ್ರತೆ ಹೆಚ್ಚುತ್ತದೆ.
ಸಾಧು ಶ್ರೀನಾಥ್​

Updated on: Aug 22, 2024 | 4:04 PM

Benefits of Chanting Gayatri Mantra: ಸಂಧ್ಯಾವಂದನೆ ನಿತ್ಯ ನೈಮಿತ್ತಿಕ ಕರ್ಮಗಳಲ್ಲೊಂದಾಗಿದೆ. ಅದನ್ನು ತಪ್ಪದೇ ಆಚರಿಸುವುದು ಮನುಷ್ಯನ ಆದ್ಯ ಕರ್ತವ್ಯ. ಮನುಷ್ಯನ ಪ್ರಮುಖ ಗುಣವೇ ಅಹಂಕಾರ. ನಾನು ಎಂಬ ಈ ಅಹಂಕಾರವನ್ನು ದೂರ ಮಾಡುವುದೇ ಸಂಧ್ಯಾವಂದನೆಯಿಂದಾಗುವ ಸಾಧನೆ! ಸಂಧ್ಯಾವಂದನೆಯಿಂದಾಗುವ (sandhyavandane) ನಾನಾ ಪರಿಣಾಮಗಳ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ. Secrets of Gayatri Mantra: ಗಾಯತ್ರಿ ಮಂತ್ರ ಎಂಬುದು ಮಂತ್ರವಲ್ಲ. ಅದು ಒಂದು ಛಂದಸ್ಸು. ಗಾಯತ್ರೀ ಮಂತ್ರ ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದು. ಬ್ರಹ್ಮ ಪವಿತ್ರವಾದ ಸೂರ್ಯ ನಾರಾಯಣನಿಂದ ಉದ್ಭವಿಸಲ್ಪಟ್ಟ ಗಾಯತ್ರಿ ಮಂತ್ರ ಅತ್ಯಂತ ಪ್ರಭಾವಶಾಲಿಯಾದುದು. ಸೂರ್ಯ ದೇವರಿಗೆ ಸಂಬಂಧಿಸಿದ ಈ ಮಂತ್ರ ನಮ್ಮ ಋಷಿಮುನಿಗಳು ನಮಗೆ ಬಿಟ್ಟು ಹೋಗಿರುವ ನಮ್ಮ ಜನ್ಮವನ್ನು ನಾವೇ ಉದ್ಧಾರ ಮಾಡಿಕೊಳ್ಳಬಹುದಾದ ದಿವ್ಯಮಂತ್ರವಾಗಿದೆ ಎಂದರೆ ತಪ್ಪಾಗಲಾರದು. ಗಾಯತ್ರಿ ಮೂಲತಃ ಸಂಸ್ಕೃತ ಪದವಾದ ಗಾಯತ್ರ ಪದದ ಸ್ತ್ರೀಲಿಂಗ ರೂಪ. ಈ ಪದವನ್ನು ಸಂಸ್ಕೃತದಲ್ಲಿ ಗಾಯಂತಮ್ ತ್ರಾಯತೇ ಯಸ್ಮಾತ್ ಇತಿ ಗಾಯತ್ರಾ ಎಂದು ಬಿಡಿಸುತ್ತಾರೆ. ಭಾಷಾಂತರಿಸಿದರೆ ಯಾವುದರ ಉಚ್ಚಾರದಿಂದ ಸಂಕಷ್ಟ ತೀರುವುದೊ ಅದೆ ಗಾಯತ್ರ ಎಂಬ ಅರ್ಥ ಮೂಡಿ ಬರುತ್ತದೆ. ಹಿಂದೂ ಧರ್ಮಾನುಯಾಯಿಗಳ ವಚನ ಲೇಖನಗಳಲ್ಲಿ ಮತ್ತು ಧರ್ಮ ಗ್ರಂಥಗಳಲ್ಲಿ ಈ ಪದವನ್ನು ಮೂರು ಸ್ವರೂಪದಲ್ಲಿ ಕಾಣಬಹುದು. ಗಾಯತ್ರೀ ದೇವಿ (ಸಾವಿತ್ರಿ) ಬ್ರಹ್ಮನ ಪತ್ನಿಯಾದ ಸರಸ್ವತಿಯ ಸ್ವರೂಪ ಎಂಬ ಪ್ರತೀತಿ ಇದೆ. ವೇದ ಮಾತೆ...

Published On - 6:06 am, Thu, 22 August 24

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ