Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ.16 ರಂದು ಆಶ್ಲೇಷ ನಕ್ಷತ್ರಕ್ಕೆ ಚಂದ್ರ ಪ್ರವೇಶ; ಈ 3 ರಾಶಿಗೆ ಬಂಪರ್ ಅದೃಷ್ಟ..!

ಮಾರ್ಚ್ 16ರಂದು ಚಂದ್ರ ಆಶ್ಲೇಷ ನಕ್ಷತ್ರವನ್ನು ಪ್ರವೇಶಿಸುತ್ತಾನೆ. ಇದರಿಂದ ಮಿಥುನ, ಕರ್ಕಾಟಕ ಮತ್ತು ಕನ್ಯಾ ರಾಶಿಯವರಿಗೆ ಶುಭ ಫಲಿತಾಂಶಗಳು ಸಿಗಲಿವೆ. ಮಿಥುನ ರಾಶಿಯವರಿಗೆ ಸಂಪತ್ತು ಹೆಚ್ಚಳ, ವೃತ್ತಿಪರ ಯಶಸ್ಸು, ಕರ್ಕಾಟಕ ರಾಶಿಯವರಿಗೆ ವೃತ್ತಿ ಪ್ರಗತಿ, ಕನ್ಯಾ ರಾಶಿಯವರಿಗೆ ಆರ್ಥಿಕ ಸುಧಾರಣೆ ಮತ್ತು ಕುಟುಂಬ ಸಂತೋಷ ಕಂಡುಬರಲಿದೆ.

ಮಾ.16 ರಂದು ಆಶ್ಲೇಷ ನಕ್ಷತ್ರಕ್ಕೆ ಚಂದ್ರ ಪ್ರವೇಶ; ಈ 3 ರಾಶಿಗೆ ಬಂಪರ್ ಅದೃಷ್ಟ..!
Ashlesha Nakshatra Transit
Follow us
ಅಕ್ಷತಾ ವರ್ಕಾಡಿ
|

Updated on:Mar 13, 2025 | 11:03 AM

ಗ್ರಹಗಳು ಯಾವಾಗಲೂ ಒಂದು ನಕ್ಷತ್ರಪುಂಜದಿಂದ ಇನ್ನೊಂದು ನಕ್ಷತ್ರಪುಂಜಕ್ಕೆ ಚಲಿಸುತ್ತಿರುತ್ತವೆ. ಈ ಗ್ರಹಗಳ ಚಲನೆಯು ಪ್ರತಿಯೊಬ್ಬರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಈ ಸಮಯದಲ್ಲಿ ಕೆಲವು ರಾಶಿಯವರಿಗೆ ಶುಭವಾದರೆ, ಇನ್ನೂ ಕೆಲವು ರಾಶಿಯವರು ತೊಂದರೆಗಳನ್ನು ಅನುಭವಿಸುತ್ತಾರೆ. ಒಂಬತ್ತು ಗ್ರಹಗಳಲ್ಲಿ ಶನಿ ಅತ್ಯಂತ ನಿಧಾನವಾಗಿ ಚಲಿಸುವ ಗ್ರಹವಾಗಿದ್ದರೆ, ಚಂದ್ರ ಅತ್ಯಂತ ವೇಗವಾಗಿ ಚಲಿಸುವ ಗ್ರಹ. ವೈದಿಕ ಜ್ಯೋತಿಷ್ಯದ ಪ್ರಕಾರ, ಚಂದ್ರನು ರಾಶಿಚಕ್ರ ಮತ್ತು ನಕ್ಷತ್ರಗಳನ್ನು ವೇಗವಾಗಿ ಬದಲಾಯಿಸುವ ಗ್ರಹವಾಗಿದೆ. ದೃಕ್ ಪಂಚಾಂಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 12:51 ಕ್ಕೆ ಚಂದ್ರನು ಆಶ್ಲೇಷ ನಕ್ಷತ್ರವನ್ನು ಪ್ರವೇಶಿಸುತ್ತಾನೆ. ಚಂದ್ರನು ಗ್ರಹಗಳ ಅಧಿಪತಿ ಬುಧನ ರಾಶಿಯಲ್ಲಿ ಸಾಗುತ್ತಾನೆ. ಈ ಸಮಯದಲ್ಲಿ 12 ರಾಶಿಗಳ ಪೈಕಿ ಮೂರು ರಾಶಿಯವರಿಗೆ ಅದೃಷ್ಟ ಒಲಿದು ಬರಲಿದೆ.

ಮಿಥುನ ರಾಶಿ:

ಮಿಥುನ ರಾಶಿಯವರಿಗೆ ಶುಭ ಫಲಿತಾಂಶಗಳು ಸಿಗುತ್ತವೆ. ಒಳ್ಳೆಯ ದಿನಗಳು ಪ್ರಾರಂಭವಾಗುತ್ತವೆ. ಸಂಪತ್ತು ಹೆಚ್ಚಾಗುವ ಸಾಧ್ಯತೆ ಇದೆ. ನೀವು ವೃತ್ತಿಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳಲು ಬಯಸಿದರೆ, ಇದು ತುಂಬಾ ಒಳ್ಳೆಯ ಸಮಯ. ನಿಮ್ಮ ಸಂಗಾತಿಯಿಂದ ಬೆಂಬಲ ದೊರೆಯುತ್ತದೆ. ಉದ್ಯಮಿಗಳು ಹೂಡಿಕೆಯೊಂದಿಗೆ ಮುಂದುವರಿಯಲು ಸಾಧ್ಯವಾಗುತ್ತದೆ. ಉತ್ತಮ ಲಾಭ ಗಳಿಸುವ ಸಾಧ್ಯತೆಯಿದೆ. ಕುಟುಂಬ ಸದಸ್ಯರೊಂದಿಗೆ ಸಂತೋಷದ ಸಮಯ ಕಳೆಯುವಿರಿ. ನೀವು ಸಮಾಜದಲ್ಲಿ ಖ್ಯಾತಿ ಮತ್ತು ಪ್ರತಿಷ್ಠೆಯನ್ನು ಗಳಿಸುವಿರಿ.

ಕರ್ಕಾಟಕ ರಾಶಿ:

ಚಂದ್ರನು ಆಶ್ಲೇಷ ನಕ್ಷತ್ರವನ್ನು ಪ್ರವೇಶಿಸುವುದರಿಂದ ಕರ್ಕಾಟಕ ರಾಶಿಯಲ್ಲಿ ಜನಿಸಿದವರಿಗೆ ಶುಭಗಳಿಗೆ ಪ್ರಾರಂಭವಾಗಲಿದೆ. ವೃತ್ತಿಜೀವನದಲ್ಲಿ ಪ್ರಗತಿ ಕಂಡುಬರಲಿದೆ. ವ್ಯವಹಾರವನ್ನು ವಿಸ್ತರಿಸುವ ಪ್ರಯತ್ನಗಳು ಯಶಸ್ವಿಯಾಗಬಹುದು. ಬಹಳ ದಿನಗಳಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ಆದರೆ ಆರ್ಥಿಕ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆ ಇದೆ.

ಇದನ್ನೂ ಓದಿ: Rahu Transit 2025: ಕುಂಭ ರಾಶಿಯಲ್ಲಿ ರಾಹು; ಈ 6 ರಾಶಿಯವರ ಲಕ್ ಬದಲಾಗಲಿದೆ!

ಕನ್ಯಾರಾಶಿ:

ಕನ್ಯಾ ರಾಶಿಯವರು ತಾವು ಕೈಗೊಳ್ಳುವ ಎಲ್ಲಾ ಕೆಲಸಗಳಲ್ಲಿ ಯಶಸ್ಸನ್ನು ಸಾಧಿಸುತ್ತಾರೆ. ಬಹಳ ದಿನಗಳಿಂದ ಬಾಕಿ ಉಳಿದಿದ್ದ ಹಣ ಸಿಗುವ ಸಾಧ್ಯತೆ ಇದೆ. ಉದ್ಯಮಿಗಳು ತಮ್ಮ ಹೂಡಿಕೆಗಳಲ್ಲಿ ಪ್ರಗತಿಯನ್ನು ಪಡೆಯುತ್ತಾರೆ. ಕುಟುಂಬ ಸದಸ್ಯರೊಂದಿಗೆ ಆಧ್ಯಾತ್ಮಿಕ ಪ್ರಯಾಣದ ಸಾಧ್ಯತೆಯಿದೆ. ಪತಿ-ಪತ್ನಿಯರ ನಡುವಿನ ಭಿನ್ನಾಭಿಪ್ರಾಯಗಳು ಬಗೆಹರಿಯುತ್ತವೆ. ಚಂದ್ರನ ಆಶೀರ್ವಾದದಿಂದ ಮನಸ್ಸು ಶಾಂತವಾಗುತ್ತದೆ. ಸ್ನೇಹಿತರೊಂದಿಗೆ ಸಂತೋಷದ ಸಮಯ ಕಳೆಯುವಿರಿ. ನೀವು ತುಂಬಾ ತಾಳ್ಮೆಯಿಂದಿರಬೇಕು. ಸಂಪತ್ತು ವೃದ್ಧಿಯಾಗುತ್ತದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.

(ಹಕ್ಕು ನಿರಾಕರಣೆ : ಈ ಮಾಹಿತಿ ಜ್ಯೋತಿಷ್ಯ, ನಂಬಿಕೆ ಆಧಾರಿತವಾಗಿದೆ. ಟಿವಿ9 ಕನ್ನಡದ ಅಭಿಪ್ರಾಯವಾಗಿರುವುದಿಲ್ಲ.)

ಜ್ಯೋತಿಷ್ಯಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:03 am, Thu, 13 March 25

ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!
ಅಯ್ಯೋ ಕರ್ಮವೇ..ನಿಂತ ಕಾರಿನ ನಾಲ್ಕು ಟೈರ್ ಬಿಚ್ಚಿಕೊಂಡು ಹೋದ ಖದೀಮರು!
ಅಯ್ಯೋ ಕರ್ಮವೇ..ನಿಂತ ಕಾರಿನ ನಾಲ್ಕು ಟೈರ್ ಬಿಚ್ಚಿಕೊಂಡು ಹೋದ ಖದೀಮರು!