AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Masik Shivratri 2024: ಮಾಸ ಶಿವರಾತ್ರಿ ಆಚರಿಸುವುದರಿಂದ ಸಿಗುತ್ತೆ ಹಲವಾರು ಪ್ರಯೋಜನ

 ಮಾಸಿಕ ಶಿವರಾತ್ರಿ ಉಪವಾಸವನ್ನು ಆಚರಿಸುವುದರಿಂದ ಶಿವನು ಸಂತೋಷಗೊಳ್ಳುತ್ತಾನೆ ಎಂದು ನಂಬಲಾಗಿದೆ. ಧರ್ಮಗ್ರಂಥಗಳ ಪ್ರಕಾರ, ಲಕ್ಷ್ಮೀ, ಸರಸ್ವತಿ, ಇಂದ್ರಾಣಿ, ಗಾಯತ್ರಿ, ಸಾವಿತ್ರಿ ಮತ್ತು ತಾಯಿ ಪಾರ್ವತಿ ಕೂಡ ಈ ಉಪವಾಸವನ್ನು ಆಚರಿಸಿದ್ದರು ಎನ್ನಲಾಗುತ್ತದೆ. ಧಾರ್ಮಿಕ ನಂಬಿಕೆಯ ಪ್ರಕಾರ ಶಿವನು ಚತುರ್ದಶಿಯ ರಾತ್ರಿ ಪಾರ್ವತಿ ದೇವಿಯನ್ನು ವಿವಾಹವಾದನು. ಆದ್ದರಿಂದ, ಮಾಸಿಕ ಶಿವರಾತ್ರಿಯಂದು ರಾತ್ರಿ ಪೂಜೆ ಮಾಡುವುದು ತುಂಬಾ ಶುಭವೆಂದು ಪರಿಗಣಿಸಲಾಗುತ್ತದೆ. ಇನ್ನು ಮಾಘ ಮಾಸದ ಮಾಸಿಕ ಶಿವರಾತ್ರಿ ಉಪವಾಸವನ್ನು ಫೆ. 8 ರಂದು (ಗುರುವಾರ) ಆಚರಿಸಲಾಗುತ್ತದೆ.

Masik Shivratri 2024: ಮಾಸ ಶಿವರಾತ್ರಿ ಆಚರಿಸುವುದರಿಂದ ಸಿಗುತ್ತೆ ಹಲವಾರು ಪ್ರಯೋಜನ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 02, 2024 | 11:02 AM

Share

ಪ್ರತಿ ತಿಂಗಳು ಕೃಷ್ಣ ಪಕ್ಷದ ಚತುರ್ದಶಿ ದಿನದಂದು ಮಾಸಿಕ ಶಿವರಾತ್ರಿಯನ್ನು ಆಚರಿಸಲಾಗುತ್ತದೆ. ಮಾಸಿಕ ಶಿವರಾತ್ರಿ ಉಪವಾಸವನ್ನು ಆಚರಿಸುವುದರಿಂದ ಶಿವನು ಸಂತೋಷಗೊಳ್ಳುತ್ತಾನೆ ಎಂದು ನಂಬಲಾಗಿದೆ. ಧರ್ಮಗ್ರಂಥಗಳ ಪ್ರಕಾರ, ಲಕ್ಷ್ಮೀ, ಸರಸ್ವತಿ, ಇಂದ್ರಾಣಿ, ಗಾಯತ್ರಿ, ಸಾವಿತ್ರಿ ಮತ್ತು ತಾಯಿ ಪಾರ್ವತಿ ಕೂಡ ಈ ಉಪವಾಸವನ್ನು ಆಚರಿಸಿದ್ದರು ಎನ್ನಲಾಗುತ್ತದೆ. ಧಾರ್ಮಿಕ ನಂಬಿಕೆಯ ಪ್ರಕಾರ ಶಿವನು ಚತುರ್ದಶಿಯ ರಾತ್ರಿ ಪಾರ್ವತಿ ದೇವಿಯನ್ನು ವಿವಾಹವಾದನು. ಆದ್ದರಿಂದ, ಮಾಸಿಕ ಶಿವರಾತ್ರಿಯಂದು ರಾತ್ರಿ ಪೂಜೆ ಮಾಡುವುದು ತುಂಬಾ ಶುಭವೆಂದು ಪರಿಗಣಿಸಲಾಗುತ್ತದೆ. ಇನ್ನು ಮಾಘ ಮಾಸದ ಮಾಸಿಕ ಶಿವರಾತ್ರಿ ಉಪವಾಸವನ್ನು ಫೆ. 8 ರಂದು (ಗುರುವಾರ) ಆಚರಿಸಲಾಗುತ್ತದೆ.

ಮಾಸಿಕ ಶಿವರಾತ್ರಿಯ ಮಹತ್ವ;

ಪುರಾಣ ಗ್ರಂಥಗಳ ಪ್ರಕಾರ, ಈ ದಿನವು ತುಂಬಾ ವಿಶೇಷವಾಗಿದೆ. ಏಕೆಂದರೆ ಮಾಸಿಕ ಶಿವರಾತ್ರಿ ಪ್ರತಿ ತಿಂಗಳ ಕೃಷ್ಣ ಪಕ್ಷದ ಚತುರ್ಥಿ ದಿನದಂದು ಬರುತ್ತದೆ. ಈ ದಿನಾಂಕದ ಅಧಿಪತಿ ಶಿವ. ಅದಲ್ಲದೆ ಮಾಸಿಕ ಶಿವರಾತ್ರಿಯಂದು ಶಿವನ ಆರಾಧನೆಯ ಜೊತೆಗೆ, ಶಿವ ಕುಟುಂಬದ ಎಲ್ಲಾ ಸದಸ್ಯರನ್ನು ಕೂಡ ಪೂಜಿಸಲಾಗುತ್ತದೆ. ಈ ದಿನ ಮನೆ ಬಳಿಯಿರುವ ದೇವಸ್ಥಾನಗಳಿಗೆ ತೆರಳುವ ಮೂಲಕ ಹೂವುಗಳನ್ನು ಅರ್ಪಿಸಿ, ಶಿವ ಮಂತ್ರಗಳನ್ನು ಪಠಿಸುವುದು ವಿಶೇಷ ಮಹತ್ವವನ್ನು ಹೊಂದಿದೆ. ಅಲ್ಲದೆ ಇಷ್ಟಾರ್ಥ ಸಿದ್ದಿಸಲು ಈ ದಿನ ಉಪವಾಸ ಮಾಡಲಾಗುತ್ತದೆ. ಮಾಸಿಕ ಶಿವರಾತ್ರಿ ಉಪವಾಸದ ಪರಿಣಾಮದಿಂದಾಗಿ, ವ್ಯಕ್ತಿಯು ಕಾಮ, ಕೋಪ, ಲೋಭ ಇತ್ಯಾದಿ ಬಂಧನದಿಂದ ಮುಕ್ತನಾಗುತ್ತಾನೆ ಎಂಬ ನಂಬಿಕೆ ಇದೆ.

ಮಾಸಿಕ ಶಿವರಾತ್ರಿಯಂದು ಉಪವಾಸ ಮಾಡುವುದರಿಂದ ಸಿಗುವ ಪ್ರಯೋಜನಗಳೇನು?

-ಶಿವಾಲಯದಲ್ಲಿ ಅಥವಾ ಮನೆಯ ಪೂರ್ವ ಭಾಗದಲ್ಲಿ ಕುಳಿತು ಶಿವ ಮಂತ್ರಗಳನ್ನು ಪಠಿಸುವುದರಿಂದ ಹೆಚ್ಚಿನ ಫಲಿತಾಂಶ ಸಿಗುತ್ತದೆ ಎಂದು ನಂಬಲಾಗಿದೆ.

-ಮಾಸಿಕ ಶಿವರಾತ್ರಿಯ ಪೂಜೆಯ ನಂತರ, ಬ್ರಾಹ್ಮಣರಿಗೆ ಆಹಾರ ನೀಡಬೇಕು.

-ಮಾಸಿಕ ಉಪವಾಸವನ್ನು ಪೂರ್ಣ ಭಕ್ತಿಯಿಂದ ಆಚರಿಸುವ ಯಾವುದೇ ಭಕ್ತನ ಪಾಪಗಳು ಕೂಡ ನಾಶವಾಗುತ್ತವೆ ಎಂಬ ನಂಬಿಕೆ ಇದೆ.

-ಈ ದಿನವನ್ನು ಆಚರಣೆ ಮಾಡುವುದರಿಂದ ಜೀವನದಲ್ಲಿ ಬರುವ ಎಲ್ಲಾ ತೊಂದರೆಗಳು ದೂರವಾಗುತ್ತವೆ ಮತ್ತು ಸಂತೋಷ ಪ್ರಾಪ್ತಿಯಾಗುತ್ತದೆ.

-ಮಾಸಿಕ ಶಿವರಾತ್ರಿ ಉಪವಾಸ ಮಾಡುವುದರಿಂದ, ದೀರ್ಘಾಯುಷ್ಯ, ಸಂಪತ್ತು, ಆರೋಗ್ಯ ಮತ್ತು ಮಕ್ಕಳಾಗದವರು ಮಕ್ಕಳನ್ನು ಪಡೆಯಬಹುದಾಗಿದೆ. ಅದಲ್ಲದೆ ಈ ಉಪವಾಸವನ್ನು ಮಾಡುವ ವ್ಯಕ್ತಿಯ ಎಲ್ಲಾ ಆಸೆಗಳು ಈಡೇರುತ್ತವೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಹನುಮಂತನ ತಾಯಿ ಅಂಜನಾದೇವಿ ಕೋತಿಯಾಗಿದ್ದು ಹೇಗೆ ಗೊತ್ತಾ?

ಮಾಸಿಕ ಶಿವರಾತ್ರಿ ಪೂಜೆ ಮಾಡುವುದು ಹೇಗೆ?

ಶಿವ ಚತುರ್ದಶಿಯ ದಿನ ಶಿವ, ತಾಯಿ ಪಾರ್ವತಿ, ಗಣೇಶ, ಕಾರ್ತಿಕೇಯ ಮತ್ತು ಶಿವಗಣಗಳನ್ನು ಪೂಜಿಸಲಾಗುತ್ತದೆ. ಹಾಲು, ಮೊಸರು, ಜೇನುತುಪ್ಪ, ಸಕ್ಕರೆ, ಗಂಗಾ ನೀರು ಮತ್ತು ಕಬ್ಬಿನ ರಸ ಇತ್ಯಾದಿಗಳಿಂದ ಅಭಿಷೇಕ ಮಾಡಲಾಗುತ್ತದೆ. ತೆಂಗಿನಕಾಯಿಯಿಂದ ತಯಾರಿಸಿದ ತಿನಿಸುಗಳನ್ನು ಶಿವನಿಗೆ ಭೋಗವಾಗಿ ಅರ್ಪಿಸಲಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?