AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mauni Amavasya 2024: ಮೌನಿ ಅಮಾವಾಸ್ಯೆಯಂದು ಏನು ಮಾಡಬೇಕು, ಏನು ಮಾಡಬಾರದು?

ಈ ವರ್ಷ ಮೌನಿ ಅಮಾವಾಸ್ಯೆಯನ್ನು ಫೆ. 9 ರಂದು ಶುಕ್ರವಾರ ಆಚರಿಸಲಾಗುತ್ತದೆ. ಈ ದಿನ, ನದಿ ಸ್ನಾನ, ದಾನ ಮತ್ತು ಧಾರ್ಮಿಕ ಚಟುವಟಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಅದಲ್ಲದೆ ಈ ದಿನ ಪೂಜೆ ಮತ್ತು ದಾನ ಧರ್ಮಗಳನ್ನು ಮಾಡುವುದರಿಂದ ಪೂರ್ವಜರ ಆಶೀರ್ವಾದ ಪಡೆಯಬಹುದು ಎಂದು ನಂಬಲಾಗಿದೆ, ಆದರೆ ಈ ದಿನ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂದು ನಿಮಗೆ ತಿಳಿದಿದೆಯೇ? ಇಲ್ಲಿದೆ ಸಂಪೂರ್ಣ ಮಾಹಿತಿ.

Mauni Amavasya 2024: ಮೌನಿ ಅಮಾವಾಸ್ಯೆಯಂದು ಏನು ಮಾಡಬೇಕು, ಏನು ಮಾಡಬಾರದು?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 08, 2024 | 7:25 PM

Share

ಹಿಂದೂ ಧರ್ಮದಲ್ಲಿ, ಪ್ರತಿ ವರ್ಷ ಮಾಘ ಮಾಸದ ಅಮಾವಾಸ್ಯೆಯನ್ನು ಪುಷ್ಯ ಅಮಾವಾಸ್ಯೆ ಅಥವಾ ಮೌನಿ ಅಮಾವಾಸ್ಯೆ ಅಥವಾ ದರ್ಶ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಈ ವರ್ಷ ಮೌನಿ ಅಮಾವಾಸ್ಯೆಯನ್ನು ಫೆ. 9 ರಂದು ಶುಕ್ರವಾರ ಆಚರಿಸಲಾಗುತ್ತದೆ. ಈ ದಿನ, ನದಿ ಸ್ನಾನ, ದಾನ ಮತ್ತು ಧಾರ್ಮಿಕ ಚಟುವಟಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಅದಲ್ಲದೆ ಈ ದಿನ ಪೂಜೆ ಮತ್ತು ದಾನ ಧರ್ಮಗಳನ್ನು ಮಾಡುವುದರಿಂದ ಪೂರ್ವಜರ ಆಶೀರ್ವಾದ ಪಡೆಯಬಹುದು ಎಂದು ನಂಬಲಾಗಿದೆ, ಆದರೆ ಈ ದಿನ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂದು ನಿಮಗೆ ತಿಳಿದಿದೆಯೇ? ಇಲ್ಲಿದೆ ಸಂಪೂರ್ಣ ಮಾಹಿತಿ.

ಮೌನಿ ಅಮಾವಾಸ್ಯೆಯಂದು ಏನು ಮಾಡಬೇಕು?

-ಈ ದಿನ ವಿಶೇಷವಾಗಿ, ಮೌನದ ಉಪವಾಸವನ್ನು ಜನರು ಆಚರಿಸುತ್ತಾರೆ. ಹಾಗಾಗಿ ಏಕಾಂತದಲ್ಲಿ ಇದ್ದು ಅವರು ತಮ್ಮ ಮನಸ್ಸನ್ನು ಶಾಂತ ಮತ್ತು ಧ್ಯಾನದ ಸ್ಥಿತಿಗೆ ಕೊಂಡೊಯ್ಯಲು ಪ್ರಯತ್ನಿಸುತ್ತಾರೆ.

-ಉಪವಾಸ ಮಾಡುವವರು ಶಿವ ಮತ್ತು ಪಾರ್ವತಿ ದೇವಿಯನ್ನು ಪೂಜಿಸಬೇಕು. ಜೊತೆಗೆ ಶಿವನಿಗೆ ಬಿಲ್ವ ಪತ್ರೆ ಅರ್ಪಿಸಿ, ರುದ್ರಾಭಿಷೇಕ ಮಾಡಬೇಕು.

-ಮೌನಿ ಅಮಾವಾಸ್ಯೆಯಂದು ದಾನ ಮಾಡುವುದು ಸಹ ಒಳ್ಳೆಯದು. ಇನ್ನು ಬ್ರಾಹ್ಮಣರಿಗೆ, ಗುರುಜನರಿಗೆ, ಯತಿಗಳಿಗೆ ಮತ್ತು ಬಡವರಿಗೆ ದಾನ ಮಾಡುವುದು ಶುಭವೆಂದು ಪರಿಗಣಿಸಲಾಗಿದೆ.

-ಕೆಲವರು ಈ ದಿನ ಯಾತ್ರಾ ಸ್ಥಳಗಳಿಗೆ ಭೇಟಿ ನೀಡುತ್ತಾರೆ ಮತ್ತು ಪವಿತ್ರ ನದಿಗಳಲ್ಲಿ ಸ್ನಾನ ಮಾಡುತ್ತಾರೆ.

-ಸಾಧ್ಯವಾದರೆ ಶಿವ ಮತ್ತು ವಿಷ್ಣು ದೇವಾಲಯಗಳಿಗೆ ಭೇಟಿ ನೀಡಿ, ಪೂಜೆ ಮಾಡಿಸಿ.

-ಮೌನಿ ಅಮಾವಾಸ್ಯೆಯ ದಿನದಂದು ನದಿಯಲ್ಲಿ ಸ್ನಾನ ಮಾಡಿದ ನಂತರ, ಕೆಲವು ಧಾನ್ಯಗಳನ್ನು ಬ್ರಾಹ್ಮಣರಿಗೆ ದಾನ ಮಾಡುವುದು ಒಳ್ಳೆಯದು.

-ಈ ದಿನ ನೀವು ಹಸುವಿನ ಹಾಲನ್ನು ದಾನ ಮಾಡಿದರೆ, ಪೂರ್ವಜರು ತೃಪ್ತರಾಗುತ್ತಾರೆ ಎಂಬ ನಂಬಿಕೆ ಇದೆ.

-ಈ ದಿನ ಅಗತ್ಯವಿರುವವರಿಗೆ ಸಾಸಿವೆ ಎಣ್ಣೆಯನ್ನು ದಾನ ಮಾಡುವುದರಿಂದ ಪೂರ್ವಜರ ಆಶೀರ್ವಾದ ಸಿಗುತ್ತದೆ. ಅದಲ್ಲದೆ ಈ ದಿನದಂದು ಎಳ್ಳೆಣ್ಣೆ, ಅಕ್ಕಿ ಮತ್ತು ನೆಲ್ಲಿಕಾಯಿಯನ್ನು ದಾನ ಮಾಡುವುದು ಸಹ ಶುಭವೆಂದು ಪರಿಗಣಿಸಲಾಗಿದೆ.

-ಈ ದಿನ ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಬಡವರಿಗೆ ಹಣವನ್ನು ನೀಡಿ. ಇದರಿಂದ ನಿಮ್ಮ ಜಾತಕದ ದೋಷ ನಿವಾರಣೆಯಾಗುತ್ತದೆ. ಪುಣ್ಯ ಫಲವೂ ಪ್ರಾಪ್ತಿಯಾಗುತ್ತದೆ.

ಇದನ್ನೂ ಓದಿ: ದರ್ಶ ಅಮಾವಾಸ್ಯೆಯಂದು ಪಿತೃ ದೋಷ ನಿವಾರಣೆಗೆ ಈ ವಿಧಾನಗಳನ್ನು ಅನುಸರಿಸಿ

ಮೌನಿ ಅಮಾವಾಸ್ಯೆಯಂದು ಏನು ಮಾಡಬಾರದು?

-ಮೌನಿ ಅಮಾವಾಸ್ಯೆಯ ದಿನದಂದು ಉಪವಾಸ ಮಾಡುವವರು ಹೆಚ್ಚು ಮಾತನಾಡಬಾರದು.

-ಉಪವಾಸ ಮಾಡುವವರು ಮಾಂಸಾಹಾರ ಸೇವನೆ ಮಾಡಬಾರದು.

-ಈ ದಿನವನ್ನು ಆಚರಣೆ ಮಾಡುವವರು ಕೆಟ್ಟ ಮಾತುಗಳನ್ನು ಆಡಬಾರದು, ಮತ್ತೊಬ್ಬರಿಗೆ ನೋವು ಉಂಟುಮಾಡುವ ಕೆಲಸ ಮಾಡಬಾರದು.

-ಉಪವಾಸ ಆಚರಣೆ ಮಾಡಿ ಅರ್ಧಕ್ಕೆ ಮೊಟಕುಗೊಳಿಸಬಾರದು.

-ಅಕ್ಕಿಯಿಂದ ಮಾಡಿದ ಯಾವುದೇ ಆಹಾರಗಳನ್ನು ಕೂಡ ಸೇವನೆ ಮಾಡಬಾರದು.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ