Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಲಕ್ಷಣಗಳು ಕಂಡುಬಂದರೆ ನಿಮ್ಮ ಜಾತಕದಲ್ಲಿ ಬುಧನ ಸ್ಥಾನ ದುರ್ಬಲವಾಗಿದೆ ಎಂದರ್ಥ!

ಜ್ಯೋತಿಷ್ಯದಲ್ಲಿ ಬುಧನನ್ನು ಗ್ರಹಗಳ ರಾಜಕುಮಾರ ಎನ್ನಲಾಗುತ್ತದೆ. ಜಾತಕದಲ್ಲಿ ಬುಧ ಬಲವಾಗಿದ್ದರೆ ಆರೋಗ್ಯ, ಬುದ್ಧಿವಂತಿಕೆ ಮತ್ತು ವ್ಯವಹಾರದಲ್ಲಿ ಯಶಸ್ಸು ದೊರೆಯುತ್ತದೆ. ದುರ್ಬಲವಾಗಿದ್ದರೆ ಆರೋಗ್ಯ ಸಮಸ್ಯೆಗಳು, ಸಂಬಂಧಗಳಲ್ಲಿ ತೊಂದರೆ ಮತ್ತು ವ್ಯವಹಾರದಲ್ಲಿ ನಷ್ಟಕ್ಕೆ ಕಾರಣವಾಗಬಹುದು. ಬುಧವನ್ನು ಬಲಪಡಿಸಲು ವಿಷ್ಣು ಧ್ಯಾನ, ಪಚ್ಚೆ ರತ್ನ ಧಾರಣೆ, ದಾನ ಇತ್ಯಾದಿ ಪರಿಹಾರಗಳನ್ನು ಮಾಡುವುದು ಅಗತ್ಯ.

ಈ ಲಕ್ಷಣಗಳು ಕಂಡುಬಂದರೆ ನಿಮ್ಮ ಜಾತಕದಲ್ಲಿ ಬುಧನ ಸ್ಥಾನ ದುರ್ಬಲವಾಗಿದೆ ಎಂದರ್ಥ!
Mercury In Astrology
Follow us
ಅಕ್ಷತಾ ವರ್ಕಾಡಿ
|

Updated on: Mar 26, 2025 | 9:49 AM

ಜ್ಯೋತಿಷ್ಯದಲ್ಲಿ ಬುಧನನ್ನು ಗ್ರಹಗಳ ರಾಜಕುಮಾರ ಎಂದು ಕರೆಯಲಾಗುತ್ತದೆ. ಜಾತಕದಲ್ಲಿ ಬುಧ ಗ್ರಹವು ಚೆನ್ನಾಗಿದ್ದರೆ ಜೀವನದಲ್ಲಿ ಎಲ್ಲವೂ ಚೆನ್ನಾಗಿ ನಡೆಯುತ್ತದೆ ಎಂದು ಜ್ಯೋತಿಷ್ಯದಲ್ಲಿ ಹೇಳಲಾಗಿದೆ. ಆದರೆ ಜಾತಕದಲ್ಲಿ ಬುಧನ ಸ್ಥಾನವು ದುರ್ಬಲವಾಗಿದ್ದರೆ, ಜೀವನದಲ್ಲಿ ನಕಾರಾತ್ಮಕ ಪರಿಣಾಮಗಳು ಕಂಡುಬರುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಜಾತಕದಲ್ಲಿ ಬುಧನ ಸ್ಥಾನವು ಬಲವಾಗಿದೆಯೇ ಅಥವಾ ದುರ್ಬಲವಾಗಿದೆಯೇ ಎಂದು ತಿಳಿಯುವುದು ಹೇಗೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಜಾತಕದಲ್ಲಿ ಬುಧನ ಸ್ಥಾನ ಬಲವಾಗಿದ್ದರೆ ಈ ಲಕ್ಷಣ ಕಂಡುಬರುತ್ತದೆ:

ಯಾರ ಜಾತಕದಲ್ಲಿ ಬುಧನ ಸ್ಥಾನ ಬಲವಾಗಿರುತ್ತದೋ ಅವರು ಯಾವಾಗಲೂ ಆರೋಗ್ಯವಾಗಿರುತ್ತಾರೆ. ಅವರ ಮುಖವು ಹೊಳೆಯುತ್ತದೆ ಮತ್ತು ತ್ವರಿತ ಬುದ್ಧಿಯುಳ್ಳವರಾಗಿರುತ್ತಾರೆ. ಇದಲ್ಲದೇ ಅವರು ರಾಮ, ಶ್ರೀಕೃಷ್ಣ ಮತ್ತು ವಿಷ್ಣುವಿನ ಆರಾಧಕರಾಗಿರುತ್ತಾರೆ. ಯಾರ ಜಾತಕದಲ್ಲಿ ಬುಧನ ಸ್ಥಾನ ಬಲವಾಗಿರುತ್ತದೋ ಅವರು ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುತ್ತಾರೆ.

ಜಾತಕದಲ್ಲಿ ಬುಧನ ಸ್ಥಾನ ದುರ್ಬಲವಾಗಿದ್ದರೆ ಈ ಲಕ್ಷಣ ಕಂಡುಬರುತ್ತದೆ:

ಯಾರ ಜಾತಕದಲ್ಲಿ ಬುಧ ದುರ್ಬಲ ಸ್ಥಾನದಲ್ಲಿರುವನೋ ಅವರು ಅನೇಕ ರೋಗಗಳಿಂದ ಸುತ್ತುವರೆದಿರುತ್ತಾರೆ. ಲೈಂಗಿಕವಾಗಿ ಹರಡುವ ರೋಗ ಸಂಭವಿಸುತ್ತದೆ. ಬುಧ ದುರ್ಬಲವಾಗಿರುವ ವ್ಯಕ್ತಿಯ ಜೀರ್ಣಶಕ್ತಿ ದುರ್ಬಲಗೊಳ್ಳುತ್ತದೆ. ಉಗುರುಗಳು, ಹಲ್ಲುಗಳು ಮತ್ತು ಕೂದಲು ಕೂಡ ದುರ್ಬಲವಾಗುತ್ತವೆ ಮತ್ತು ಮುರಿಯಲು ಪ್ರಾರಂಭಿಸುತ್ತವೆ. ಯಾರ ಜಾತಕದಲ್ಲಿ ಬುಧ ದುರ್ಬಲ ಸ್ಥಾನದಲ್ಲಿರುವರೋ, ಅವರು ಮಾತನಾಡುವಾಗ ತೊದಲುತ್ತಾರೆ. ಸಹೋದರಿ ಮತ್ತು ಚಿಕ್ಕಮ್ಮನೊಂದಿಗಿನ ಸಂಬಂಧಗಳು ಹದಗೆಡುತ್ತವೆ. ಕಠಿಣ ಪರಿಶ್ರಮದ ನಂತರವೂ ವ್ಯವಹಾರ ಅಥವಾ ಉದ್ಯೋಗದಲ್ಲಿ ಯಶಸ್ಸು ಸಿಗುವುದಿಲ್ಲ. ವ್ಯಾಪಾರದಲ್ಲಿ ನಷ್ಟವಾಗುತ್ತದೆ.

ಇದನ್ನೂ ಓದಿ
Image
ಮನೆಯಿಂದಲೇ ಕೆಲಸ ಮಾಡುತ್ತಿದ್ದೀರಾ? ಹಾಗಿದ್ರೆ ಈ ವಾಸ್ತು ಸಲಹೆ ಅನುಸರಿಸಿ
Image
ಈ ಮೂರು ರಾಶಿಯವರಿಗೆ ಗಜಕೇಸರಿ ಯೋಗ; ಅದೃಷ್ಟ ಖುಲಾಯಿಸಲಿದೆ
Image
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗ ಈ ವಿಷ್ಯ ನೆನಪಿಟ್ಟುಕೊಳ್ಳಿ
Image
ನರಸಿಂಹ ದ್ವಾದಶಿ ಯಾವಾಗ? ದಿನಾಂಕ, ಶುಭ ಸಮಯ ಮತ್ತು ಪೂಜಾ ವಿಧಾನ ತಿಳಿಯಿರಿ

ಇದನ್ನೂ ಓದಿ: ಹನುಮಾನ್ ಚಾಲೀಸಾವನ್ನು ಯಾವಾಗ, ಹೇಗೆ ಮತ್ತು ಎಷ್ಟು ಬಾರಿ ಪಠಿಸಬೇಕು?

ಬುಧ ಗ್ರಹವನ್ನು ಬಲಪಡಿಸುವ ಕ್ರಮಗಳು:

  • ಜಾತಕದಲ್ಲಿ ಬುಧ ದುರ್ಬಲವಾಗಿರುವವರು ವಿಷ್ಣುವಿನ ಧ್ಯಾನ ಮಾಡಬೇಕು.
  • ಬುಧವಾರ ಗಣೇಶನಿಗೆ ಲಡ್ಡುಗಳನ್ನು ಅರ್ಪಿಸಿ. ಈ ದಿನ ಉಪವಾಸ ಮಾಡಿ.
  • ಬುಧವಾರದಂದು ಹಸುಗಳಿಗೆ ಹಸಿ ಹುಲ್ಲು ತಿನ್ನಿಸಿ.
  • ಪಚ್ಚೆ ರತ್ನವನ್ನು ಧರಿಸಿ.
  • ತುಳಸಿಗೆ ನೀರು ಅರ್ಪಿಸಿ.
  • ಬುಧವಾರ ತುಳಸಿ ಎಲೆಗಳನ್ನು ತಿನ್ನಿರಿ.
  • ದೇವಸ್ಥಾನದಲ್ಲಿ ಹಾಲು ಮತ್ತು ಅನ್ನವನ್ನು ದಾನ ಮಾಡಿ.
  • ಮಾಂಸ, ಮೊಟ್ಟೆ ಮತ್ತು ಮದ್ಯ ಸೇವನೆಯನ್ನು ತಪ್ಪಿಸಿ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್