AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mesh Sankranti 2024: ವರ್ಷ ಪೂರ್ತಿ ಒಳ್ಳೆಯ ಫಲ ಪಡೆಯಲು ಮೇಷ ಸಂಕ್ರಾಂತಿಯಂದು ಈ ವಸ್ತುಗಳನ್ನು ದಾನ ಮಾಡಿ!

ಮೇಷ ಸಂಕ್ರಾಂತಿಯಂದು ಸೂರ್ಯನು ಮೀನ ರಾಶಿಯನ್ನು ಬಿಟ್ಟು ಮೇಷ ರಾಶಿಯನ್ನು ಪ್ರವೇಶಿಸುತ್ತಾನೆ. ಈ ದಿನವನ್ನು ಎ. 13 ರಂದು ಆಚರಣೆ ಮಾಡಲಾಗುತ್ತದೆ. ಅಂದು ರಾತ್ರಿ 9:15 ಕ್ಕೆ, ಸೂರ್ಯನು ಮೇಷ ರಾಶಿಗೆ ಚಲಿಸುತ್ತಾನೆ. ಮೇಷ ಸಂಕ್ರಾಂತಿಯನ್ನು ಮಹಾ ವಿಷು ಸಂಕ್ರಾಂತಿ ಎಂದೂ ಕೂಡ ಕರೆಯುತ್ತಾರೆ.

Mesh Sankranti 2024: ವರ್ಷ ಪೂರ್ತಿ ಒಳ್ಳೆಯ ಫಲ ಪಡೆಯಲು ಮೇಷ ಸಂಕ್ರಾಂತಿಯಂದು ಈ ವಸ್ತುಗಳನ್ನು ದಾನ ಮಾಡಿ!
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 12, 2024 | 9:45 AM

Share

ಹಿಂದೂ ಪಂಚಾಗದ ಪ್ರಕಾರ ಮೇಷ ಸಂಕ್ರಾಂತಿಯನ್ನು ಬಹಳ ಮುಖ್ಯ ದಿನವೆಂದು ಪರಿಗಣಿಸಲಾಗಿದೆ. ಒಂದು ವರ್ಷದಲ್ಲಿ ಒಟ್ಟು 12 ಸಂಕ್ರಾಂತಿಗಳಿವೆ. ಅವುಗಳಲ್ಲಿ ಮೇಷ ಸಂಕ್ರಾಂತಿಯೂ ಒಂದು. ಈ ದಿನ, ಸೂರ್ಯನು ಮೀನ ರಾಶಿಯನ್ನು ಬಿಟ್ಟು ಮೇಷ ರಾಶಿಯನ್ನು ಪ್ರವೇಶಿಸುತ್ತಾನೆ. ಈ ದಿನವನ್ನು ಎ. 13 ರಂದು ಆಚರಣೆ ಮಾಡಲಾಗುತ್ತದೆ. ಅಂದು ರಾತ್ರಿ 9:15 ಕ್ಕೆ, ಸೂರ್ಯನು ಮೇಷ ರಾಶಿಗೆ ಚಲಿಸುತ್ತಾನೆ. ಮೇಷ ಸಂಕ್ರಾಂತಿಯನ್ನು ಮಹಾ ವಿಷು ಸಂಕ್ರಾಂತಿ ಎಂದೂ ಕೂಡ ಕರೆಯುತ್ತಾರೆ. ಅನೇಕ ಹಿಂದೂ ಸೌರ ಕ್ಯಾಲೆಂಡರ್ ಗಳಲ್ಲಿ, ಹೊಸ ವರ್ಷವು ಮೇಷ ಸಂಕ್ರಾಂತಿಯ ದಿನದಂದು ಪ್ರಾರಂಭವಾಗುತ್ತದೆ. ಹಾಗಾದರೆ ಈ ದಿನ ಪುಣ್ಯ ಫಲಗಳನ್ನು ಪಡೆಯಲು ಯಾವ ವಸ್ತುಗಳನ್ನು ದಾನ ಮಾಡಬೇಕು? ಇಲ್ಲಿದೆ ಮಾಹಿತಿ.

ಮೇಷ ಸಂಕ್ರಾಂತಿಯಂದು, ನೀವು ಗೋಧಿ, ಕೆಂಪು ಬಟ್ಟೆಗಳು, ಕೆಂಪು ಶ್ರೀಗಂಧ, ಕಪ್ಪು ಎಳ್ಳು, ಕೆಂಪು ಹೂವುಗಳು, ತಾಮ್ರದ ಪಾತ್ರೆಗಳು ಇತ್ಯಾದಿಗಳನ್ನು ದಾನ ಮಾಡಬಹುದು. ಇದು ಸೌರಯುಗಾದಿಯ ಆರಂಭವಾಗಿರುವುದರಿಂದ ವರ್ಷ ಪೂರ್ತಿ ಒಳ್ಳೆಯ ಫಲಗಳನ್ನು ಪಡೆಯಲು ದಾನ- ಧರ್ಮಗಳನ್ನು ಮಾಡಬಹುದು.

ಮೇಷ ಸಂಕ್ರಾಂತಿಯನ್ನು ದಾನಕ್ಕೆ ಬಹಳ ಶುಭವೆಂದು ಪರಿಗಣಿಸಲಾಗುತ್ತದೆ. ಮೇಷ ಸಂಕ್ರಾಂತಿಯ ದಿನದಂದು ಬೆಳಿಗ್ಗೆ ಎದ್ದು ಸ್ನಾನ ಮಾಡಿದ ನಂತರ, ನೀವು ಸೂರ್ಯ ದೇವರನ್ನು ಪೂಜಿಸಬೇಕು. ಅದರ ನಂತರ ಸೂರ್ಯ ದೇವರಿಗೆ ಸಂಬಂಧಿಸಿದ ವಸ್ತುಗಳನ್ನು ದಾನ ಮಾಡಬೇಕು. ಇದರಿಂದ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಪರಿಹಾರ ಸಿಗುತ್ತದೆ.

ಇದನ್ನೂ ಓದಿ: ಚೈತ್ರ ಮಾಸದ ವಿನಾಯಕ ಚತುರ್ಥಿಯನ್ನು ಈ ರೀತಿ ಆಚರಣೆ ಮಾಡಿ!

ಈ ದಿನ ಮನೆಯಲ್ಲಿ ದೇವರಿಗೆ ಬಗೆ ಬಗೆಯ ನೈವೇದ್ಯಗಳನ್ನು ಇಟ್ಟು ಪೂಜೆ ಮಾಡಿದ ಬಳಿಕ ಅದನ್ನು ಎಲ್ಲರಿಗೂ ಹಂಚಿ. ಇದರಿಂದ ಪುಣ್ಯ ಫಲ ಪ್ರಾಪ್ತಿಯಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್