AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mesh Sankranti 2024: ವರ್ಷ ಪೂರ್ತಿ ಒಳ್ಳೆಯ ಫಲ ಪಡೆಯಲು ಮೇಷ ಸಂಕ್ರಾಂತಿಯಂದು ಈ ವಸ್ತುಗಳನ್ನು ದಾನ ಮಾಡಿ!

ಮೇಷ ಸಂಕ್ರಾಂತಿಯಂದು ಸೂರ್ಯನು ಮೀನ ರಾಶಿಯನ್ನು ಬಿಟ್ಟು ಮೇಷ ರಾಶಿಯನ್ನು ಪ್ರವೇಶಿಸುತ್ತಾನೆ. ಈ ದಿನವನ್ನು ಎ. 13 ರಂದು ಆಚರಣೆ ಮಾಡಲಾಗುತ್ತದೆ. ಅಂದು ರಾತ್ರಿ 9:15 ಕ್ಕೆ, ಸೂರ್ಯನು ಮೇಷ ರಾಶಿಗೆ ಚಲಿಸುತ್ತಾನೆ. ಮೇಷ ಸಂಕ್ರಾಂತಿಯನ್ನು ಮಹಾ ವಿಷು ಸಂಕ್ರಾಂತಿ ಎಂದೂ ಕೂಡ ಕರೆಯುತ್ತಾರೆ.

Mesh Sankranti 2024: ವರ್ಷ ಪೂರ್ತಿ ಒಳ್ಳೆಯ ಫಲ ಪಡೆಯಲು ಮೇಷ ಸಂಕ್ರಾಂತಿಯಂದು ಈ ವಸ್ತುಗಳನ್ನು ದಾನ ಮಾಡಿ!
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 12, 2024 | 9:45 AM

Share

ಹಿಂದೂ ಪಂಚಾಗದ ಪ್ರಕಾರ ಮೇಷ ಸಂಕ್ರಾಂತಿಯನ್ನು ಬಹಳ ಮುಖ್ಯ ದಿನವೆಂದು ಪರಿಗಣಿಸಲಾಗಿದೆ. ಒಂದು ವರ್ಷದಲ್ಲಿ ಒಟ್ಟು 12 ಸಂಕ್ರಾಂತಿಗಳಿವೆ. ಅವುಗಳಲ್ಲಿ ಮೇಷ ಸಂಕ್ರಾಂತಿಯೂ ಒಂದು. ಈ ದಿನ, ಸೂರ್ಯನು ಮೀನ ರಾಶಿಯನ್ನು ಬಿಟ್ಟು ಮೇಷ ರಾಶಿಯನ್ನು ಪ್ರವೇಶಿಸುತ್ತಾನೆ. ಈ ದಿನವನ್ನು ಎ. 13 ರಂದು ಆಚರಣೆ ಮಾಡಲಾಗುತ್ತದೆ. ಅಂದು ರಾತ್ರಿ 9:15 ಕ್ಕೆ, ಸೂರ್ಯನು ಮೇಷ ರಾಶಿಗೆ ಚಲಿಸುತ್ತಾನೆ. ಮೇಷ ಸಂಕ್ರಾಂತಿಯನ್ನು ಮಹಾ ವಿಷು ಸಂಕ್ರಾಂತಿ ಎಂದೂ ಕೂಡ ಕರೆಯುತ್ತಾರೆ. ಅನೇಕ ಹಿಂದೂ ಸೌರ ಕ್ಯಾಲೆಂಡರ್ ಗಳಲ್ಲಿ, ಹೊಸ ವರ್ಷವು ಮೇಷ ಸಂಕ್ರಾಂತಿಯ ದಿನದಂದು ಪ್ರಾರಂಭವಾಗುತ್ತದೆ. ಹಾಗಾದರೆ ಈ ದಿನ ಪುಣ್ಯ ಫಲಗಳನ್ನು ಪಡೆಯಲು ಯಾವ ವಸ್ತುಗಳನ್ನು ದಾನ ಮಾಡಬೇಕು? ಇಲ್ಲಿದೆ ಮಾಹಿತಿ.

ಮೇಷ ಸಂಕ್ರಾಂತಿಯಂದು, ನೀವು ಗೋಧಿ, ಕೆಂಪು ಬಟ್ಟೆಗಳು, ಕೆಂಪು ಶ್ರೀಗಂಧ, ಕಪ್ಪು ಎಳ್ಳು, ಕೆಂಪು ಹೂವುಗಳು, ತಾಮ್ರದ ಪಾತ್ರೆಗಳು ಇತ್ಯಾದಿಗಳನ್ನು ದಾನ ಮಾಡಬಹುದು. ಇದು ಸೌರಯುಗಾದಿಯ ಆರಂಭವಾಗಿರುವುದರಿಂದ ವರ್ಷ ಪೂರ್ತಿ ಒಳ್ಳೆಯ ಫಲಗಳನ್ನು ಪಡೆಯಲು ದಾನ- ಧರ್ಮಗಳನ್ನು ಮಾಡಬಹುದು.

ಮೇಷ ಸಂಕ್ರಾಂತಿಯನ್ನು ದಾನಕ್ಕೆ ಬಹಳ ಶುಭವೆಂದು ಪರಿಗಣಿಸಲಾಗುತ್ತದೆ. ಮೇಷ ಸಂಕ್ರಾಂತಿಯ ದಿನದಂದು ಬೆಳಿಗ್ಗೆ ಎದ್ದು ಸ್ನಾನ ಮಾಡಿದ ನಂತರ, ನೀವು ಸೂರ್ಯ ದೇವರನ್ನು ಪೂಜಿಸಬೇಕು. ಅದರ ನಂತರ ಸೂರ್ಯ ದೇವರಿಗೆ ಸಂಬಂಧಿಸಿದ ವಸ್ತುಗಳನ್ನು ದಾನ ಮಾಡಬೇಕು. ಇದರಿಂದ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಪರಿಹಾರ ಸಿಗುತ್ತದೆ.

ಇದನ್ನೂ ಓದಿ: ಚೈತ್ರ ಮಾಸದ ವಿನಾಯಕ ಚತುರ್ಥಿಯನ್ನು ಈ ರೀತಿ ಆಚರಣೆ ಮಾಡಿ!

ಈ ದಿನ ಮನೆಯಲ್ಲಿ ದೇವರಿಗೆ ಬಗೆ ಬಗೆಯ ನೈವೇದ್ಯಗಳನ್ನು ಇಟ್ಟು ಪೂಜೆ ಮಾಡಿದ ಬಳಿಕ ಅದನ್ನು ಎಲ್ಲರಿಗೂ ಹಂಚಿ. ಇದರಿಂದ ಪುಣ್ಯ ಫಲ ಪ್ರಾಪ್ತಿಯಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್