AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mesh Sankranti 2024: ವರ್ಷ ಪೂರ್ತಿ ಒಳ್ಳೆಯ ಫಲ ಪಡೆಯಲು ಮೇಷ ಸಂಕ್ರಾಂತಿಯಂದು ಈ ವಸ್ತುಗಳನ್ನು ದಾನ ಮಾಡಿ!

ಮೇಷ ಸಂಕ್ರಾಂತಿಯಂದು ಸೂರ್ಯನು ಮೀನ ರಾಶಿಯನ್ನು ಬಿಟ್ಟು ಮೇಷ ರಾಶಿಯನ್ನು ಪ್ರವೇಶಿಸುತ್ತಾನೆ. ಈ ದಿನವನ್ನು ಎ. 13 ರಂದು ಆಚರಣೆ ಮಾಡಲಾಗುತ್ತದೆ. ಅಂದು ರಾತ್ರಿ 9:15 ಕ್ಕೆ, ಸೂರ್ಯನು ಮೇಷ ರಾಶಿಗೆ ಚಲಿಸುತ್ತಾನೆ. ಮೇಷ ಸಂಕ್ರಾಂತಿಯನ್ನು ಮಹಾ ವಿಷು ಸಂಕ್ರಾಂತಿ ಎಂದೂ ಕೂಡ ಕರೆಯುತ್ತಾರೆ.

Mesh Sankranti 2024: ವರ್ಷ ಪೂರ್ತಿ ಒಳ್ಳೆಯ ಫಲ ಪಡೆಯಲು ಮೇಷ ಸಂಕ್ರಾಂತಿಯಂದು ಈ ವಸ್ತುಗಳನ್ನು ದಾನ ಮಾಡಿ!
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 12, 2024 | 9:45 AM

Share

ಹಿಂದೂ ಪಂಚಾಗದ ಪ್ರಕಾರ ಮೇಷ ಸಂಕ್ರಾಂತಿಯನ್ನು ಬಹಳ ಮುಖ್ಯ ದಿನವೆಂದು ಪರಿಗಣಿಸಲಾಗಿದೆ. ಒಂದು ವರ್ಷದಲ್ಲಿ ಒಟ್ಟು 12 ಸಂಕ್ರಾಂತಿಗಳಿವೆ. ಅವುಗಳಲ್ಲಿ ಮೇಷ ಸಂಕ್ರಾಂತಿಯೂ ಒಂದು. ಈ ದಿನ, ಸೂರ್ಯನು ಮೀನ ರಾಶಿಯನ್ನು ಬಿಟ್ಟು ಮೇಷ ರಾಶಿಯನ್ನು ಪ್ರವೇಶಿಸುತ್ತಾನೆ. ಈ ದಿನವನ್ನು ಎ. 13 ರಂದು ಆಚರಣೆ ಮಾಡಲಾಗುತ್ತದೆ. ಅಂದು ರಾತ್ರಿ 9:15 ಕ್ಕೆ, ಸೂರ್ಯನು ಮೇಷ ರಾಶಿಗೆ ಚಲಿಸುತ್ತಾನೆ. ಮೇಷ ಸಂಕ್ರಾಂತಿಯನ್ನು ಮಹಾ ವಿಷು ಸಂಕ್ರಾಂತಿ ಎಂದೂ ಕೂಡ ಕರೆಯುತ್ತಾರೆ. ಅನೇಕ ಹಿಂದೂ ಸೌರ ಕ್ಯಾಲೆಂಡರ್ ಗಳಲ್ಲಿ, ಹೊಸ ವರ್ಷವು ಮೇಷ ಸಂಕ್ರಾಂತಿಯ ದಿನದಂದು ಪ್ರಾರಂಭವಾಗುತ್ತದೆ. ಹಾಗಾದರೆ ಈ ದಿನ ಪುಣ್ಯ ಫಲಗಳನ್ನು ಪಡೆಯಲು ಯಾವ ವಸ್ತುಗಳನ್ನು ದಾನ ಮಾಡಬೇಕು? ಇಲ್ಲಿದೆ ಮಾಹಿತಿ.

ಮೇಷ ಸಂಕ್ರಾಂತಿಯಂದು, ನೀವು ಗೋಧಿ, ಕೆಂಪು ಬಟ್ಟೆಗಳು, ಕೆಂಪು ಶ್ರೀಗಂಧ, ಕಪ್ಪು ಎಳ್ಳು, ಕೆಂಪು ಹೂವುಗಳು, ತಾಮ್ರದ ಪಾತ್ರೆಗಳು ಇತ್ಯಾದಿಗಳನ್ನು ದಾನ ಮಾಡಬಹುದು. ಇದು ಸೌರಯುಗಾದಿಯ ಆರಂಭವಾಗಿರುವುದರಿಂದ ವರ್ಷ ಪೂರ್ತಿ ಒಳ್ಳೆಯ ಫಲಗಳನ್ನು ಪಡೆಯಲು ದಾನ- ಧರ್ಮಗಳನ್ನು ಮಾಡಬಹುದು.

ಮೇಷ ಸಂಕ್ರಾಂತಿಯನ್ನು ದಾನಕ್ಕೆ ಬಹಳ ಶುಭವೆಂದು ಪರಿಗಣಿಸಲಾಗುತ್ತದೆ. ಮೇಷ ಸಂಕ್ರಾಂತಿಯ ದಿನದಂದು ಬೆಳಿಗ್ಗೆ ಎದ್ದು ಸ್ನಾನ ಮಾಡಿದ ನಂತರ, ನೀವು ಸೂರ್ಯ ದೇವರನ್ನು ಪೂಜಿಸಬೇಕು. ಅದರ ನಂತರ ಸೂರ್ಯ ದೇವರಿಗೆ ಸಂಬಂಧಿಸಿದ ವಸ್ತುಗಳನ್ನು ದಾನ ಮಾಡಬೇಕು. ಇದರಿಂದ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಪರಿಹಾರ ಸಿಗುತ್ತದೆ.

ಇದನ್ನೂ ಓದಿ: ಚೈತ್ರ ಮಾಸದ ವಿನಾಯಕ ಚತುರ್ಥಿಯನ್ನು ಈ ರೀತಿ ಆಚರಣೆ ಮಾಡಿ!

ಈ ದಿನ ಮನೆಯಲ್ಲಿ ದೇವರಿಗೆ ಬಗೆ ಬಗೆಯ ನೈವೇದ್ಯಗಳನ್ನು ಇಟ್ಟು ಪೂಜೆ ಮಾಡಿದ ಬಳಿಕ ಅದನ್ನು ಎಲ್ಲರಿಗೂ ಹಂಚಿ. ಇದರಿಂದ ಪುಣ್ಯ ಫಲ ಪ್ರಾಪ್ತಿಯಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ