AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2025: 11 ದಿನಗಳ ದಸರಾ ಆಚರಣೆ ಅಪಶಕುನನಾ? ತಜ್ಞರು ಹೇಳುವುದೇನು?

2025ರ ಮೈಸೂರು ದಸರಾ ಆಚರಣೆ 11 ದಿನಗಳ ಕಾಲ ನಡೆಯಲಿದೆ. ಡಾ. ಶೆಲ್ವ ಪಿಳ್ಳೈ ಅಯ್ಯಂಗಾರ್ ಅವರು ಈ ಆಚರಣೆಯ ಕುರಿತು ಮಾಹಿತಿ ನೀಡಿದ್ದು, ಪಂಚಾಂಗದ ಪ್ರಕಾರ ಈ ಬಾರಿ ಪಂಚಮಿ ತಿಥಿ ಎರಡು ದಿನಗಳಿರುವುದರಿಂದ ಹನ್ನೊಂದು ದಿನಗಳ ಆಚರಣೆಯಾಗುತ್ತಿದೆ ಎಂದು ಹೇಳಿದ್ದಾರೆ. ಇದರ ಜೊತೆಗೆ ರಾಜಮಾತೆ ಪ್ರಮೋದಾದೇವಿ ಏನು ಹೇಳಿದ್ದಾರೆ ಎಂಬುದನ್ನು ಕೂಡ ಇಲ್ಲಿ ವಿವರಿಸಲಾಗಿದೆ.

Mysore Dasara 2025: 11 ದಿನಗಳ ದಸರಾ ಆಚರಣೆ ಅಪಶಕುನನಾ? ತಜ್ಞರು ಹೇಳುವುದೇನು?
Mysore Dasara Image Credit source: Pinterest
ಅಕ್ಷತಾ ವರ್ಕಾಡಿ
|

Updated on:Jun 22, 2025 | 11:26 AM

Share

2025ರ ಮೈಸೂರು ದಸರಾ 11 ದಿನಗಳ ಕಾಲ ನಡೆಯಲಿದೆ. ಇದು ಜನರಲ್ಲಿ ಕುತೂಹಲ ಮತ್ತು ಗೊಂದಲವನ್ನು ಸೃಷ್ಟಿಸಿದೆ. ಪ್ರತಿ ವರ್ಷ ನವರಾತ್ರಿಯ ಒಂಬತ್ತು ದಿನಗಳ ನಂತರ 10ನೇ ದಿನ ವಿಜಯದಶಮಿಯನ್ನು ಆಚರಿಸಲಾಗುತ್ತಿತ್ತು. ಆದರೆ, ಈ ವರ್ಷ ಪಂಚಾಂಗದ ಪ್ರಕಾರ ಪಂಚಮಿ ತಿಥಿ ಎರಡು ದಿನಗಳ ಕಾಲ ಇರುವುದರಿಂದ ದಸರಾ ಆಚರಣೆ ಹನ್ನೊಂದು ದಿನಗಳವರೆಗೆ ವಿಸ್ತರಿಸಲಾಗಿದೆ. ಸೆಪ್ಟೆಂಬರ್ 22 ರಂದು ಉದ್ಘಾಟನೆ ಮತ್ತು ಅಕ್ಟೋಬರ್ 2 ರಂದು ವಿಜಯದಶಮಿ ಆಚರಣೆ ನಡೆಯಲಿದೆ.

ಖ್ಯಾತ ಜ್ಯೋತಿಷಿ ಡಾ. ಶೆಲ್ವ ಪಿಳ್ಳೈ ಅಯ್ಯಂಗಾರ್ ಅವರು ಈ ವಿಸ್ತೃತ ಆಚರಣೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅವರ ಪ್ರಕಾರ, ಹನ್ನೊಂದು ದಿನಗಳ ಆಚರಣೆಯು ಅಪಶಕುನವಲ್ಲ. ಹನ್ನೊಂದು ಸಂಖ್ಯೆಯು ಜ್ಯೋತಿಷ್ಯ ಶಾಸ್ತ್ರದಲ್ಲಿ ಮಹತ್ವದ್ದಾಗಿದೆ ಮತ್ತು ಅನೇಕ ಸಂದರ್ಭಗಳಲ್ಲಿ ಶುಭವೆಂದು ಪರಿಗಣಿಸಲ್ಪಡುತ್ತದೆ. ಹನ್ನೊಂದನೇ ಸ್ಥಾನದಲ್ಲಿರುವ ಗ್ರಹಗಳು ಒಳ್ಳೆಯ ಫಲಿತಾಂಶಗಳನ್ನು ನೀಡುತ್ತವೆ ಎಂಬ ನಂಬಿಕೆ ಇದೆ. ಇದಲ್ಲದೆ, ಹೆಚ್ಚುವರಿ ದಿನವು ದೇವತೆಗಳಿಗೆ ವಿಶೇಷ ಪೂಜೆ ಮತ್ತು ಆರಾಧನೆಗೆ ಅವಕಾಶ ನೀಡುತ್ತದೆ ಎಂದು ಅವರು ವಿವರಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ
Image
ಈ ದೇವಾಲಯಕ್ಕೆ ಗಂಡ ಹೆಂಡತಿ ಒಟ್ಟಿಗೆ ಹೋಗುವಂತಿಲ್ಲ, ಯಾಕೆ ಗೊತ್ತಾ?
Image
ಈ ಪ್ರಾಣಿಗಳು ನಿಮ್ಮ ಕನಸಿನಲ್ಲಿ ಪದೇ ಪದೇ ಕಾಣಿಸಿಕೊಂಡರೆ ಅದೃಷ್ಟದ ಸೂಚನೆ
Image
ಕೇದಾರನಾಥ ಯಾತ್ರೆಯ ಸಮಯದಲ್ಲಿ ಈ ವಸ್ತುಗಳನ್ನು ತೆಗೆದುಕೊಂಡು ಹೋಗಲೇಬಾರದು
Image
ವಾರದಲ್ಲಿ ಈ ಎರಡು ದಿನ ಬಟ್ಟೆ ಒಗೆಯಲೇಬೇಡಿ; ಕಷ್ಟಗಳು ತಪ್ಪಿದಲ್ಲ!

ಇದನ್ನೂ ಓದಿ: ಸಂಖ್ಯೆ 7ರ ಹಿಂದಿನ ರಹಸ್ಯಗಳು; ಇದು ಶುಭವೋ, ಅಶುಭವೋ?

ಮೈಸೂರು ಅರಮನೆಯ ದಸರಾ ಆಚರಣೆಯು ರಾಜಪರಂಪರೆಯ ಪರಂಪರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕ ಸರ್ಕಾರ ಇದನ್ನು ನಾಡಹಬ್ಬವಾಗಿ ಆಚರಿಸುತ್ತದೆ. ಹನ್ನೊಂದು ದಿನಗಳ ಆಚರಣೆಯು ಪ್ರವಾಸಿಗರಿಗೆ ಹೆಚ್ಚಿನ ರಸದೌತಣವನ್ನು ಒದಗಿಸುತ್ತದೆ ಮತ್ತು ಹೆಚ್ಚಿನ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶವನ್ನು ನೀಡುತ್ತದೆ. ಯಾವುದೇ ಅಪಶಕುನಗಳ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಡಾ. ಶೆಲ್ವ ಪಿಳ್ಳೈ ಅಯ್ಯಂಗಾರ್ ಸ್ಪಷ್ಟಪಡಿಸಿದ್ದಾರೆ. ಪಂಚಾಂಗದ ಪ್ರಕಾರ ಈ ಆಚರಣೆಯು ಸರಿಯಾಗಿದೆ ಮತ್ತು ಎಲ್ಲರಿಗೂ ಒಳಿತನ್ನು ತರುತ್ತದೆ ಎಂಬ ನಂಬಿಕೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ರಾಜಮಾತೆ ಪ್ರಮೋದಾದೇವಿ ಸ್ಪಷ್ಟನೆ:

ಈ ವರ್ಷ ಮೈಸೂರು ದಸರಾ 11 ದಿನಗಳ ಕಾಲ ಆಚರಣೆ ಮಾಡುತ್ತಿರುವುದರ ಬಗ್ಗೆ ರಾಜಮಾತೆ ಪ್ರಮೋದಾದೇವಿ ಸ್ಪಷ್ಟನೆ ನೀಡಿದ್ದಾರೆ. 11 ದಿನಗಳ ಕಾಲ ಆಚರಣೆ ಮಾಡುತ್ತಿರುವುದು ಹೊಸತೇನಲ್ಲ. ಈ ಹಿಂದೆಯು ಹಲವು ಬಾರಿ 11 ದಿನಗಳ ಕಾಲ ಸಾಂಪ್ರದಾಯಿಕವಾಗಿ ಆಚರಣೆ ಮಾಡಲಾಗಿದೆ. ಅದೇ ರೀತಿ ಈ ಬಾರಿಯೂ ಸಹ 11 ದಿನಗಳ ಕಾಲ ನಡೆಲಿದೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ. ನಾಡಹಬ್ಬ ಹಾಗೂ ಅರಮನೆಯ ನವರಾತ್ರಿಗಳು ಸಾಂಪ್ರದಾಯಿಕವಾಗಿ ಈ ಹಿಂದಿನಂತೆಯೇ ನಡೆಯಲಿವೆ ಎಂದು ಪತ್ರದ ಮೂಲಕ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಹಿಂದೆ 1920, 1929, 1952, 1962, 1980, 1990, 1998, 2000, 2015 ಹಾಗೂ 2016ರಲ್ಲಿ ದಸರಾವನ್ನು 11 ದಿನಗಳ ಕಾಲ ಆಚರಣೆ ಮಾಡಲಾಗಿದೆ ಎಂದು ರಾಜಮಾತೆ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

Kn Mys 02 Promadadeviwodeyer Vis Ka10003 21062025165821 2106f 1750505301 1108

Kn Mys 02 Promadadeviwodeyer Vis Ka10003 21062025165821 2106f 1750505301 1108

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:22 am, Sun, 22 June 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!