AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naga Panchami 2021: ಕೃಷಿಕ ಮಹಿಳೆಯರ ಹಬ್ಬ ನಾಗರಪಂಚಮಿ, ಶ್ರಾವಣ ಮಾಸದಲ್ಲಿ ಆಚರಿಸುವ ನಾಗಪೂಜೆಯ ವಿಶೇಷವೇನು?

ಶ್ರಾವಣ ಮಾಸದಲ್ಲಿ ರೈತಾಪಿ ಜನರೆಲ್ಲರೂ ಸಂಜೆಯವರೆಗೂ ಹೊಲ-ಗದ್ದೆಯಲ್ಲಿ ಕೆಲಸ ಮಾಡುತ್ತಿರುತ್ತಾರೆ. ಶ್ರಾವಣದ ಮಳೆಯಿಂದಾಗಿ ಸಂಧ್ಯಾ ಕಾಲದಲ್ಲಿ ನಾಗರಹಾವುಗಳು ತಮ್ಮ ಭದ್ರತೆಗಾಗಿ ಹುತ್ತಗಳನ್ನು ಹುಡುಕುತ್ತಾ ಓಡಾಡುತ್ತಿರುತ್ತವೆ. ಹೀಗಾಗಿ ಹೊಲ-ಗದ್ದೆಯಲ್ಲಿ ಕೆಲಸ ಮಾಡುವವರಿಗೆ ತೊಂದರೆಯನ್ನು ನೀಡಬಾರದೆಂದು ಬೇಡುತ್ತ ಕೃಷಿ ಮಹಿಳೆಯರು ನಾಗರಪಂಚಮಿಯನ್ನು ಆಚರಿಸುತ್ತಾರೆ.

Naga Panchami 2021: ಕೃಷಿಕ ಮಹಿಳೆಯರ ಹಬ್ಬ ನಾಗರಪಂಚಮಿ, ಶ್ರಾವಣ ಮಾಸದಲ್ಲಿ ಆಚರಿಸುವ ನಾಗಪೂಜೆಯ ವಿಶೇಷವೇನು?
ನಾಗರಪಂಚಮಿ
TV9 Web
| Edited By: |

Updated on: Aug 13, 2021 | 6:41 AM

Share

ಶ್ರಾವಣ ಮಾಸ ಶಿವ, ವಿಷ್ಣುವನ್ನು ಆರಾಧಿಸುವ ಮಾಸ. ಶ್ರಾವಣವನ್ನು ಒಂದೊಂದು ಕಡೆ ಒಂದೊಂದು ರೀತಿಯಲ್ಲಿ ಆಚರಣೆ ಮಾಡುತ್ತಾರೆ. ಶ್ರಾವಣ ಬಂತೆಂದರೆ ಸಾಕು ಹಬ್ಬಗಳು ಹರಿದು ಬರುತ್ತವೆ. ಹಬ್ಬಗಳ ಮಾಸವೇ ಶ್ರಾವಣ. ಶ್ರಾವಣ ಶುಕ್ಲ ಪಂಚಮಿಯನ್ನು ನಾಗರಪಂಚಮಿ ಎಂದು ಸಂಭ್ರಮದಿಂದ ಆಚರಿಸುವ ಹಬ್ಬವಾಗಿದೆ. ನಾಗರಪಂಚಮಿಯಂದು ಏಳುಹೆಡೆಯ ಸರ್ಪಾಕೃತಿಯ ಚಿತ್ರಬರೆದು ತಾಳೆಹೂವಿನಿಂದ ಅದಕ್ಕೆ ಹಾಲೆರೆಯುವ ಪದ್ಧತಿ ಇದೆ. ಇದಕ್ಕೆ ತನಿಎರೆಯುವುದು ಎನ್ನುತ್ತಾರೆ. ಅಂತೆಯೇ ಬೆನ್ನುಮೂಳೆಯ ಆರಂಭದ ಎಡೆ, ಹೊಕ್ಕಳು, ಹೃದಯ, ಗಂಟಲಗುಳಿ, ಅದರ ಹಿಂಭಾಗದ ಬೆನ್ನಿನ ನೇರ, ನೆತ್ತಿ ಇವುಗಳಿಗೆ ಹಾಲು ತುಪ್ಪವನ್ನು ಸವರುವುದೂ ರೂಢಿಯಲ್ಲಿದೆ. ನಾಗದ ವಾಸದ ಎಡೆಯಾದ ಹುತ್ತಗಳಿರುವಲ್ಲಿಗೆ ಹೋಗಿ ಹಾಲು ತುಪ್ಪಗಳನ್ನೆರೆಯುತ್ತಾರೆ.

ನಾಗಜಾತಿಯ ಸಮ್ಮಿಲನದ ಮಾಸ ನಾಗರಪಂಚಮಿ ಹಬ್ಬದ ಹಿಂದೆ ಅನೇಕ ವಿಶೇಷತೆಗಳಿವೆ. ಸಂತಾನೋತ್ಪತ್ತಿಯನ್ನು ಬಯಸಿ ನಾಗರಹಾವಿಗಳು(ಹೆಣ್ಣು) ತಕ್ಕ ಜೋಡಿಗಾಗಿ ಹುಡುಕಾಟ ಪ್ರಾರಂಭಿಸಿ ಯಧೇಚ್ಛಾವಿಹಾರ ಮಾಡುವ ಮಾಸ ಶ್ರಾವಣ ಮಾಸ. ಈ ಸಮಯದಲ್ಲಿ ನಾಗಜಾತಿ ಮಹಾ ಆವೇಶದಿಂದ ಇರುತ್ತವೆ. ಇನ್ನು ಭಾರತದಲ್ಲಿ ಕೆಲವರು ಶ್ರಾವಣ ಶುದ್ಧ ಪಂಚಮಿಗೆ ನಾಗಪೂಜೆಯನ್ನು ಮಾಡಿದರೆ ಕೆಲವರು ಕಾರ್ತೀಕ ಶುದ್ಧ ಚವಿತಿಗೆ ನಾಗಪೂಜೆಯನ್ನು ಮಾಡುತ್ತಾರೆ. ಆದರೆ ನಾಗಜಾತಿಗೆ ಶ್ರಾವಣ ಮಾಸವೆಂದರೆ ಇಷ್ಟದ ಮಾಸ ಎಂದು ಹೇಳಲಾಗುತ್ತೆ.

ಶ್ರಾವಣ ಶುದ್ಧ ಪಂಚಮಿಗೆ ಮಾಡುವ ನಾಗಪಂಚಮಿಗೆ ಹಲವಾರು ವಿಶೇಷಗಳಿವೆ. ಶ್ರಾವಣ ಮಾಸದಲ್ಲಿ ರೈತಾಪಿ ಜನರೆಲ್ಲರೂ ಸಂಜೆಯವರೆಗೂ ಹೊಲ-ಗದ್ದೆಯಲ್ಲಿ ಕೆಲಸ ಮಾಡುತ್ತಿರುತ್ತಾರೆ. ಶ್ರಾವಣದ ಮಳೆಯಿಂದಾಗಿ ಸಂಧ್ಯಾ ಕಾಲದಲ್ಲಿ ನಾಗರಹಾವುಗಳು ತಮ್ಮ ಭದ್ರತೆಗಾಗಿ ಹುತ್ತಗಳನ್ನು ಹುಡುಕುತ್ತಾ ಓಡಾಡುತ್ತಿರುತ್ತವೆ. ಹೀಗಾಗಿ ಹೊಲ-ಗದ್ದೆಯಲ್ಲಿ ಕೆಲಸ ಮಾಡುವವರಿಗೆ ತೊಂದರೆಯನ್ನು ನೀಡಬಾರದೆಂದು ಬೇಡುತ್ತ ಕೃಷಿ ಮಹಿಳೆಯರು ನಾಗರಪಂಚಮಿಯನ್ನು ಆಚರಿಸುತ್ತಾರೆ.

ನಾಗರಾಜಾ.. ನಮ್ಮ ಮನೆಯವರು ಮುಗ್ಧರು. ತಿಳಿದೂ ತಿಳಿಯದೇ ಅವರಿಂದ ನಿನಗೇನಾದರೂ ತೊಂದರೆಯಾದರೆ ಹೆಡೆ ಎತ್ತಿ ಸೇಡು ತೀರಿಸಿಕೊಳ್ಳಬೇಡ. ನಾವು ನಿನ್ನ ಭಕ್ತರು. ನಿನ್ನ ಆರಾಧಕರು. ನಮ್ಮನ್ನು ನೀನು ದಯಾಗುಣದಿಂದ ಕಾಪಾಡು. ನನ್ನ ಮಾಂಗಲ್ಯಕ್ಕೆ ರಕ್ಷೆ ನೀಡು ಎಂದು ನಮಿಸಿ ಶ್ರಾವಣ ಪಂಚಮಿಯಂದು ಹುತ್ತಗಳಿರುವಲ್ಲಿಗೆ ಹೋಗಿ ಹಾಲು ತುಪ್ಪಗಳನ್ನೆರೆಯುತ್ತಾರೆ.

ಪುರಾಣಗಳ ಪ್ರಕಾರ, ಪಾತಾಳ ಲೋಕವು ಹಾವಿಗಳ ವಾಸಸ್ಥಾನವಾಗಿದೆ. ಹೀಗಾಗಿ ನಾಗರಪಂಚಮಿಯಂದು ಕಲ್ಲಿನ ನಾಗನಿಗೆ ಅಥವಾ ಮರದ ನಾಗನಿಗೆ ಹಾಲಿನ ಅಭಿಷೇಕ ಮಾಡಿದರೆ ಅದು ಪಾತಾಳ ಲೋಕದಲ್ಲಿನ ಹಾವುಗಳಿಗೆ ಅಭಿಷೇಕ ಮಾಡಿದಂತೆ ಎಂಬ ನಂಬಿಕೆ ಇದೆ.

ಇದನ್ನೂ ಓದಿ: Naga Panchami 2021: ಶ್ರಾವಣ ಮಾಸದ ಮದರಂಗಿ ಹಬ್ಬ ನಾಗರ ಪಂಚಮಿ- ಏನಿದರ ವಿಶೇಷ, ಆಚರಣೆ, ಭಕ್ತಿ-ಭಾವ ಹೇಗೆ?

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ