AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿ ಸಂಭ್ರಮ, ಘಾಟಿ ಸುಬ್ರಹ್ಮಣ್ಯದಲ್ಲಿ ಜನದಟ್ಟಣೆ

ನಾಗರಪಂಚಮಿಯಂದು ಘಾಟಿ ಸುಬ್ರಮಣ್ಯನ ದರ್ಶನ ಪಡೆದರೆ ಶ್ರೇಯಸ್ಸು ಎನ್ನುವ ನಂಬಿಕೆಯಿರುವುದರಿಂದ ಘಾಟಿ ಕ್ಷೇತ್ರದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರು.

ಕರ್ನಾಟಕದಲ್ಲಿ ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿ ಸಂಭ್ರಮ, ಘಾಟಿ ಸುಬ್ರಹ್ಮಣ್ಯದಲ್ಲಿ ಜನದಟ್ಟಣೆ
ನಾಗರ ಪಂಚಮಿ ಪ್ರಯುಕ್ತ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರು ಪೂಜೆ ಸಲ್ಲಿಸಿದರು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Aug 02, 2022 | 9:09 AM

Share

ಬೆಂಗಳೂರು: ಪ್ರತಿವರ್ಷ ಶ್ರಾವಣಮಾಸ ಬಂತೆಂದರೆ ಸಾಲುಸಾಲು ಹಬ್ಬಗಳು ಶುರುವಾಗುತ್ತವೆ. ಹಬ್ಬಗಳ ಸಂಭ್ರಮಕ್ಕೆ ಮುನ್ನುಡಿ ಬರೆಯುವ ಮೊದಲ ಹಬ್ಬ ‘ನಾಗರಪಂಚಮಿ’. ಅಣ್ಣ-ತಂಗಿ ಹಬ್ಬ ಎಂದೇ ಹೆಸರಾದ ನಾಗರ ಪಂಚಮಿಯಂದು ಮದುವೆಯಾದ ಹೆಣ್ಣುಮಕ್ಕಳು ತವರುಮನೆಗೆ ಶುಭ ಕೋರುವುದು, ಅಣ್ಣ-ತಮ್ಮಂದಿರ ಬೆನ್ನುತೊಳೆದು ಹಾಲು-ತುಪ್ಪ ಹಚ್ಚುವುದು ವಾಡಿಕೆ. ಅಕ್ಕ-ತಂಗಿಯರು ಎಲ್ಲಿದ್ದರು ಇಂದು ಅವರನ್ನು ಸೋದರರು ಭೇಟಿ ಮಾಡಿ, ಉಡುಗೊರೆ ಕೊಡುವ ಸಂಪ್ರದಾಯವೂ ಇದೆ. ಧಾರ್ಮಿಕ ಆಚರಣೆಯ ಜೊತೆಗೆ ಬಾಂಧವ್ಯದ ಬೆಸುಗೆ ಬೆಸೆಯುವ ಹಬ್ಬವನ್ನಾಗಿಯೂ ನಾಗರಪಂಚಮಿಯನ್ನು ಆಚರಿಸಲಾಗುತ್ತದೆ.

ಕೊರೊನಾದಿಂದಾಗಿ ಕಳೆದ ಎರಡು ವರ್ಷಗಳಿಂದ ನಾಗರಪಂಚಮಿ ಸೇರಿದಂತೆ ಯಾವುದೇ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗಿರಲಿಲ್ಲ. ಈ ವರ್ಷ ಕೊರೋನಾ ಆತಂಕ ಕಡಿಮೆಯಾಗಿರುವುದರಿಂದ ಹಲವು ದೇವಸ್ಥಾನಗಳಲ್ಲಿಯು ಇಂದು ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು ನಗರದ ಕಾಡುಮಲ್ಲೇಶ್ವರ, ಗವಿಗಂಗಾಧೇಶ್ವರ, ವಿಶ್ವೇಶ್ವರಪುರಂನ ಸುಬ್ರಹ್ಮಣ್ಯೇಶ್ವರ ದೇಗುಲ, ವಿವಿಧ ಬಡಾವಣೆಗಳಲ್ಲಿ ಇರುವ ನಾಗರಕಲ್ಲುಗಳಿಗೆ ನಗರದ ಜನರು ಹಾಲೆರೆದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಘಾಟಿ ಕ್ಷೇತ್ರದಲ್ಲಿ ಸಂಭ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಘಾಟಿ‌ ಸುಬ್ರಹ್ಮಣ್ಯ ಕ್ಷೇತ್ರದಲ್ಲಿಯೂ ನಾಗರಪಂಚಮಿ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಜನದಟ್ಟಣೆ ಹೆಚ್ಚಾಗಿದ್ದು, ದೇವಾಲಯದ ಗೋಪುರದಿಂದ ಹೊರಗಿನ ರಸ್ತೆವರೆಗೂ ಕ್ಯೂ ಬೆಳೆದಿದೆ. ನಸುಕಿನಿಂದಲೇ ಜನರು ಕ್ಷೇತ್ರಕ್ಕೆ ಬರುತ್ತಿದ್ದಾರೆ. ಈವರೆಗೆ ಸಾವಿರಾರು ಮಂದಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ.

ನಾಗರಪಂಚಮಿಯಂದು ಘಾಟಿ ಸುಬ್ರಮಣ್ಯನ ದರ್ಶನ ಪಡೆದರೆ ಶ್ರೇಯಸ್ಸು ಎನ್ನುವ ನಂಬಿಕೆಯಿರುವುದರಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಕ್ಷೇತ್ರದಲ್ಲಿ ವಾಹನಗಳ ಪಾರ್ಕಿಂಗ್​ಗೆ ಮೀಸಲು ಇರಿಸಿದ್ದ ಸ್ಥಳ ಭರ್ತಿಯಾಗಿದ್ದು ಗಾಡಿಗಳನ್ನು ನಿಲ್ಲಿಸಲು ಭಕ್ತರು ಪರದಾಡುವಂತಾಗಿದೆ.

Published On - 9:08 am, Tue, 2 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ