
ನವರಾತ್ರಿ ಹಬ್ಬವು ದುರ್ಗಾ ದೇವಿಯ ಒಂಬತ್ತು ಅವತಾರಗಳನ್ನು ಪೂಜಿಸಲು ಒಂದು ವಿಶೇಷ ಸಮಯ. ಉಪವಾಸ, ಪೂಜೆ ಮತ್ತು ಧ್ಯಾನದ ಜೊತೆಗೆ, ಕೆಲವು ವಸ್ತುಗಳನ್ನು ಖರೀದಿಸಿ ಮನೆಗೆ ತರುವುದು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಕೆಲವು ವಸ್ತುಗಳನ್ನು ಮನೆಗೆ ತರುವುದರಿಂದ ದುರ್ಗಾ ದೇವಿಯು ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಶಾಂತಿಯನ್ನು ನೀಡುತ್ತಾಳೆ ಎಂದು ನಂಬಲಾಗಿದೆ.
ನವರಾತ್ರಿಯ ಸಮಯದಲ್ಲಿ ದುರ್ಗಾ ಮಾತೆಗೆ ಕೆಂಪು ಬಣ್ಣದ ಸೀರೆಯನ್ನು ಅರ್ಪಿಸುವುದು ಶುಭ. ಕೆಂಪು ಸೀರೆಯನ್ನು ಅರ್ಪಿಸುವುದರಿಂದ ದೇವಿಯ ಆಶೀರ್ವಾದ ಸಿಗುತ್ತದೆ ಮತ್ತು ಆಸೆಗಳು ಈಡೇರುತ್ತವೆ ಎಂದು ನಂಬಲಾಗಿದೆ.
ಶಾಸ್ತ್ರಗಳ ಪ್ರಕಾರ, ನವರಾತ್ರಿಯ ಸಮಯದಲ್ಲಿ ಬೆಳ್ಳಿ ಅಥವಾ ಚಿನ್ನದ ನಾಣ್ಯಗಳನ್ನು ಖರೀದಿಸುವುದರಿಂದ ಸಂಪತ್ತು ವೃದ್ಧಿಯಾಗುತ್ತದೆ. ಇದನ್ನು ಪೂಜೆಯ ಸಮಯದಲ್ಲಿ ದೇವಿಗೆ ಅರ್ಪಿಸುವುದರಿಂದ ನಿಮ್ಮ ಮನೆಯ ಮೇಲೆ ಲಕ್ಷ್ಮಿ ಮತ್ತು ದುರ್ಗಾ ದೇವಿಯ ಆಶೀರ್ವಾದ ಸದಾ ಇರುತ್ತದೆ ಎಂದು ನಂಬಲಾಗಿದೆ. ಅಲ್ಲದೆ, ನವರಾತ್ರಿಯ ಸಮಯದಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸುವುದು ಸಹ ಶುಭವೆಂದು ಪರಿಗಣಿಸಲಾಗಿದೆ.
ಇದನ್ನೂ ಓದಿ: ನವರಾತ್ರಿಯ ಸಮಯದಲ್ಲಿ ದುರ್ಗಾ ದೇವಿಗೆ ಎಂದಿಗೂ ಈ ಹಣ್ಣುಗಳನ್ನು ಅರ್ಪಿಸಬೇಡಿ
ನವರಾತ್ರಿಯ ಸಮಯದಲ್ಲಿ ಸೌಂದರ್ಯವರ್ಧಕಗಳನ್ನು ಖರೀದಿಸುವುದು ಬಹಳ ಶುಭವೆಂದು ಪರಿಗಣಿಸಲಾಗುತ್ತದೆ. ಬಿಂದಿ, ಬಳೆ, ಸಿಂಧೂರ, ಕಾಜಲ್ ಮುಂತಾದ ವಸ್ತುಗಳನ್ನು ಖರೀದಿಸಿ ದುರ್ಗಾ ದೇವಿಗೆ ಅರ್ಪಿಸುವುದು ಅತ್ಯಂತ ಫಲಪ್ರದವಾಗಿದೆ. ಇದನ್ನು ಮನೆಯಲ್ಲಿ ಇಡುವುದರಿಂದ ದಾಂಪತ್ಯ ಜೀವನದಲ್ಲಿ ಸಂತೋಷ ಮತ್ತು ಅದೃಷ್ಟ ಬರುತ್ತದೆ.
ನವರಾತ್ರಿಯ ಸಮಯದಲ್ಲಿ ನೀವು ಜಾಗ ಆಸ್ತಿಯನ್ನು ಖರೀದಿಸಬಹುದು. ಹಾಗೆ ಮಾಡುವುದು ಬಹಳ ಫಲಪ್ರದ. ಈ ಸಮಯದಲ್ಲಿ ಆಸ್ತಿ ಹಾಗೂ ವಾಹನಗಳನ್ನು ಖರೀದಿಸುವುದು ಶುಭವೆಂದು ನಂಬಲಾಗಿದೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ