AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿ: 135 ವರ್ಷ ಹಳೆಯ ದೇವಾಲಯದಲ್ಲಿ ವಿಗ್ರಹ, ಗೋಡೆ, ನೆಲದ ಮೇಲೆ 8 ಕೋಟಿ ಕರೆನ್ಸಿ ನೋಟು, ಚಿನ್ನದಿಂದ ಅಲಂಕಾರ!

ಕುತೂಹಲದ ಪ್ರಶ್ನೆಯೆಂದರೆ ಒಂಬತ್ತು ದಿನಗಳ ಹಬ್ಬ ಆಚರಣೆ ಮುಗಿದ ನಂತರ ಈ ನಗ ನಾಣ್ಯ ಆಭರಣ ಏನಾಗುತ್ತದೆ? "ಇದು ಸಾರ್ವಜನಿಕ ಕೊಡುಗೆಯಾಗಿದೆ ಮತ್ತು ಪೂಜೆ ಮುಗಿದ ನಂತರ ಹಿಂದಿರುಗಿಸಲಾಗುತ್ತದೆ. ಆದರೆ ಇದು ದೇವಾಲಯದ ಟ್ರಸ್ಟ್‌ಗೆ ಹೋಗುವುದಿಲ್ಲ ಎಂದು ದೇವಾಲಯದ ಸಮಿತಿ ತಿಳಿಸಿರುವುದಾಗಿ ANI ಸುದ್ದಿಸಂಸ್ಥೆ ವರದಿ ಮಾಡಿದೆ.

ನವರಾತ್ರಿ: 135 ವರ್ಷ ಹಳೆಯ ದೇವಾಲಯದಲ್ಲಿ ವಿಗ್ರಹ, ಗೋಡೆ, ನೆಲದ ಮೇಲೆ  8 ಕೋಟಿ ಕರೆನ್ಸಿ ನೋಟು, ಚಿನ್ನದಿಂದ ಅಲಂಕಾರ!
135 ವರ್ಷ ಹಳೆಯ ದೇವಾಲಯದಲ್ಲಿ ವಿಗ್ರಹ, ಗೋಡೆ, ನೆಲದ ಮೇಲೆ 8 ಕೋಟಿ ಕರೆನ್ಸಿ ನೋಟು, ಚಿನ್ನದಿಂದ ಅಲಂಕಾರ!
TV9 Web
| Updated By: ಸಾಧು ಶ್ರೀನಾಥ್​|

Updated on: Oct 01, 2022 | 4:03 PM

Share

ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿರುವ 135 ವರ್ಷಗಳಷ್ಟು ಹಳೆಯದಾದ ದೇವಾಲಯದಲ್ಲಿ, ಆಡಳಿತ ಸಮಿತಿಯು ನವರಾತ್ರಿ ಹಬ್ಬದ ಋತುವಿನ ಭಕ್ತರು/ ಸಾರ್ವಜನಿಕರು ನೀಡಿರುವ ಹಣ- ಆಭರಣ ಬಳಸಿ (ಗಮನಿಸಿ- ಇದು ಹುಂಡಿಗೆ ಹಾಕಿರುವ ಕಾಣಿಕೆಯಲ್ಲ) ಅದ್ದೂರಿಯಾಗಿ ದೇವಿಯ ಅಲಂಕಾರ ಮಾಡಿದ್ದಾರೆ.

ವಿಶಾಖಪಟ್ಟಣಂ: ಹಿಂದೂ ದೇವಾಲಯಗಳಲ್ಲಿ ವಿಗ್ರಹಗಳ ಮೇಲೆ ಚಿನ್ನದ ಆಭರಣಗಳನ್ನು ಅಲಂಕರಿಸುವುದು ಹೊಸದೇನೂ ಅಲ್ಲ. ಆದರೆ ಮೌಲ್ಯಯುತ ಕರೆನ್ಸಿ ನೋಟುಗಳನ್ನೂ ದೇಗುಲದ ಗೋಡೆಗಳ ಮೇಲೆ ಮತ್ತು ನೆಲದ ಮೇಲೆ ಅಂಟಿಸುವುದು ವಾಡಿಕೆಯಲ್ಲ. ಆದಾಗ್ಯೂ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿರುವ 135 ವರ್ಷಗಳಷ್ಟು ಹಳೆಯದಾದ ದೇವಾಲಯದಲ್ಲಿ, ಆಡಳಿತ ಸಮಿತಿಯು ನವರಾತ್ರಿ ಹಬ್ಬದ ಋತುವಿನ ಭಕ್ತರು ನೀಡಿರುವ ಕೊಡುಗೆಗಳನ್ನು ಬಳಸಿ ವಾಸವಿ ಕನ್ನಿಕಾ ಪರಮೇಶ್ವರಿ ದೇವಿಯನ್ನು ಅದ್ದೂರಿಯಾಗಿ ಅಲಂಕಾರ ಮಾಡಿದ್ದಾರೆ. ನೋಟುಗಳಿಂದ ಮಾಡಿದ ಬಂಟಿಂಗ್ಸ್‌ಗಳನ್ನೂ ಸಹ ಮರಗಳ ಮೇಲೆ ಮತ್ತು ಚಾವಣಿಯ ಮೇಲೆ ನೇತುಹಾಕಲಾಗಿದೆ.

ನವರಾತ್ರಿ ಮತ್ತು ದಸರಾ ಹಬ್ಬದ ಋತುವಿನಲ್ಲಿ ಕಂಡುಬಂದಿರುವ ಈ ಅಲಂಕಾರವು 8 ಕೋಟಿ ರೂಪಾಯಿ ಮೌಲ್ಯದ್ದಾಗಿದೆ! ಇತ್ತೀಚಿನ ವರ್ಷಗಳಲ್ಲಿ ದೇವಾಲಯಗಳಲ್ಲಿ ಈ ರೀತಿಯ ಅಲಂಕಾರಗಳು ಹೆಚ್ಚಾಗಿ ಕಂಡುಬರುತ್ತಿವೆ. ಭಕ್ತರು ತಮ್ಮ ಶಕ್ತ್ಯಾನುಸಾರ ಕರೆನ್ಸಿ ನೋಟುಗಳ ಅಲಂಕಾರ ಮಾಡುತ್ತಿದ್ದಾರೆ.

ಕುತೂಹಲದ ಪ್ರಶ್ನೆಯೆಂದರೆ ಒಂಬತ್ತು ದಿನಗಳ ಹಬ್ಬ ಆಚರಣೆ ಮುಗಿದ ನಂತರ ಈ ನಗ ನಾಣ್ಯ ಆಭರಣ ಏನಾಗುತ್ತದೆ? “ಇದು ಸಾರ್ವಜನಿಕ ಕೊಡುಗೆಯಾಗಿದೆ ಮತ್ತು ಪೂಜೆ ಮುಗಿದ ನಂತರ ಹಿಂದಿರುಗಿಸಲಾಗುತ್ತದೆ. ಆದರೆ ಇದು ದೇವಾಲಯದ ಟ್ರಸ್ಟ್‌ಗೆ ಹೋಗುವುದಿಲ್ಲ ಎಂದು ದೇವಾಲಯದ ಸಮಿತಿ ತಿಳಿಸಿರುವುದಾಗಿ ANI ಸುದ್ದಿಸಂಸ್ಥೆ ವರದಿ ಮಾಡಿದೆ. ಈ ದೇವಾಲಯವು ಪಶ್ಚಿಮ ಗೋದಾವರಿ ಜಿಲ್ಲೆಯ ಪೆನುಗೊಂಡ ಪಟ್ಟಣದಲ್ಲಿದೆ. ಇದರ ಅಧಿ ದೇವತೆ ವಾಸವಿ ಕನ್ನಿಕಾ ಪರಮೇಶ್ವರಿ. ಅಂದಹಾಗೆ ದೇವಾಲಯವು ಈ ಹಿಂದೆ ಸುಮಾರು 5 ಕೋಟಿ ಮೌಲ್ಯದ ಕರೆನ್ಸಿ ಅಲಂಕಾರವನ್ನು ಕಂಡಿದೆ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ