AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿ: 135 ವರ್ಷ ಹಳೆಯ ದೇವಾಲಯದಲ್ಲಿ ವಿಗ್ರಹ, ಗೋಡೆ, ನೆಲದ ಮೇಲೆ 8 ಕೋಟಿ ಕರೆನ್ಸಿ ನೋಟು, ಚಿನ್ನದಿಂದ ಅಲಂಕಾರ!

ಕುತೂಹಲದ ಪ್ರಶ್ನೆಯೆಂದರೆ ಒಂಬತ್ತು ದಿನಗಳ ಹಬ್ಬ ಆಚರಣೆ ಮುಗಿದ ನಂತರ ಈ ನಗ ನಾಣ್ಯ ಆಭರಣ ಏನಾಗುತ್ತದೆ? "ಇದು ಸಾರ್ವಜನಿಕ ಕೊಡುಗೆಯಾಗಿದೆ ಮತ್ತು ಪೂಜೆ ಮುಗಿದ ನಂತರ ಹಿಂದಿರುಗಿಸಲಾಗುತ್ತದೆ. ಆದರೆ ಇದು ದೇವಾಲಯದ ಟ್ರಸ್ಟ್‌ಗೆ ಹೋಗುವುದಿಲ್ಲ ಎಂದು ದೇವಾಲಯದ ಸಮಿತಿ ತಿಳಿಸಿರುವುದಾಗಿ ANI ಸುದ್ದಿಸಂಸ್ಥೆ ವರದಿ ಮಾಡಿದೆ.

ನವರಾತ್ರಿ: 135 ವರ್ಷ ಹಳೆಯ ದೇವಾಲಯದಲ್ಲಿ ವಿಗ್ರಹ, ಗೋಡೆ, ನೆಲದ ಮೇಲೆ  8 ಕೋಟಿ ಕರೆನ್ಸಿ ನೋಟು, ಚಿನ್ನದಿಂದ ಅಲಂಕಾರ!
135 ವರ್ಷ ಹಳೆಯ ದೇವಾಲಯದಲ್ಲಿ ವಿಗ್ರಹ, ಗೋಡೆ, ನೆಲದ ಮೇಲೆ 8 ಕೋಟಿ ಕರೆನ್ಸಿ ನೋಟು, ಚಿನ್ನದಿಂದ ಅಲಂಕಾರ!
TV9 Web
| Edited By: |

Updated on: Oct 01, 2022 | 4:03 PM

Share

ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿರುವ 135 ವರ್ಷಗಳಷ್ಟು ಹಳೆಯದಾದ ದೇವಾಲಯದಲ್ಲಿ, ಆಡಳಿತ ಸಮಿತಿಯು ನವರಾತ್ರಿ ಹಬ್ಬದ ಋತುವಿನ ಭಕ್ತರು/ ಸಾರ್ವಜನಿಕರು ನೀಡಿರುವ ಹಣ- ಆಭರಣ ಬಳಸಿ (ಗಮನಿಸಿ- ಇದು ಹುಂಡಿಗೆ ಹಾಕಿರುವ ಕಾಣಿಕೆಯಲ್ಲ) ಅದ್ದೂರಿಯಾಗಿ ದೇವಿಯ ಅಲಂಕಾರ ಮಾಡಿದ್ದಾರೆ.

ವಿಶಾಖಪಟ್ಟಣಂ: ಹಿಂದೂ ದೇವಾಲಯಗಳಲ್ಲಿ ವಿಗ್ರಹಗಳ ಮೇಲೆ ಚಿನ್ನದ ಆಭರಣಗಳನ್ನು ಅಲಂಕರಿಸುವುದು ಹೊಸದೇನೂ ಅಲ್ಲ. ಆದರೆ ಮೌಲ್ಯಯುತ ಕರೆನ್ಸಿ ನೋಟುಗಳನ್ನೂ ದೇಗುಲದ ಗೋಡೆಗಳ ಮೇಲೆ ಮತ್ತು ನೆಲದ ಮೇಲೆ ಅಂಟಿಸುವುದು ವಾಡಿಕೆಯಲ್ಲ. ಆದಾಗ್ಯೂ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿರುವ 135 ವರ್ಷಗಳಷ್ಟು ಹಳೆಯದಾದ ದೇವಾಲಯದಲ್ಲಿ, ಆಡಳಿತ ಸಮಿತಿಯು ನವರಾತ್ರಿ ಹಬ್ಬದ ಋತುವಿನ ಭಕ್ತರು ನೀಡಿರುವ ಕೊಡುಗೆಗಳನ್ನು ಬಳಸಿ ವಾಸವಿ ಕನ್ನಿಕಾ ಪರಮೇಶ್ವರಿ ದೇವಿಯನ್ನು ಅದ್ದೂರಿಯಾಗಿ ಅಲಂಕಾರ ಮಾಡಿದ್ದಾರೆ. ನೋಟುಗಳಿಂದ ಮಾಡಿದ ಬಂಟಿಂಗ್ಸ್‌ಗಳನ್ನೂ ಸಹ ಮರಗಳ ಮೇಲೆ ಮತ್ತು ಚಾವಣಿಯ ಮೇಲೆ ನೇತುಹಾಕಲಾಗಿದೆ.

ನವರಾತ್ರಿ ಮತ್ತು ದಸರಾ ಹಬ್ಬದ ಋತುವಿನಲ್ಲಿ ಕಂಡುಬಂದಿರುವ ಈ ಅಲಂಕಾರವು 8 ಕೋಟಿ ರೂಪಾಯಿ ಮೌಲ್ಯದ್ದಾಗಿದೆ! ಇತ್ತೀಚಿನ ವರ್ಷಗಳಲ್ಲಿ ದೇವಾಲಯಗಳಲ್ಲಿ ಈ ರೀತಿಯ ಅಲಂಕಾರಗಳು ಹೆಚ್ಚಾಗಿ ಕಂಡುಬರುತ್ತಿವೆ. ಭಕ್ತರು ತಮ್ಮ ಶಕ್ತ್ಯಾನುಸಾರ ಕರೆನ್ಸಿ ನೋಟುಗಳ ಅಲಂಕಾರ ಮಾಡುತ್ತಿದ್ದಾರೆ.

ಕುತೂಹಲದ ಪ್ರಶ್ನೆಯೆಂದರೆ ಒಂಬತ್ತು ದಿನಗಳ ಹಬ್ಬ ಆಚರಣೆ ಮುಗಿದ ನಂತರ ಈ ನಗ ನಾಣ್ಯ ಆಭರಣ ಏನಾಗುತ್ತದೆ? “ಇದು ಸಾರ್ವಜನಿಕ ಕೊಡುಗೆಯಾಗಿದೆ ಮತ್ತು ಪೂಜೆ ಮುಗಿದ ನಂತರ ಹಿಂದಿರುಗಿಸಲಾಗುತ್ತದೆ. ಆದರೆ ಇದು ದೇವಾಲಯದ ಟ್ರಸ್ಟ್‌ಗೆ ಹೋಗುವುದಿಲ್ಲ ಎಂದು ದೇವಾಲಯದ ಸಮಿತಿ ತಿಳಿಸಿರುವುದಾಗಿ ANI ಸುದ್ದಿಸಂಸ್ಥೆ ವರದಿ ಮಾಡಿದೆ. ಈ ದೇವಾಲಯವು ಪಶ್ಚಿಮ ಗೋದಾವರಿ ಜಿಲ್ಲೆಯ ಪೆನುಗೊಂಡ ಪಟ್ಟಣದಲ್ಲಿದೆ. ಇದರ ಅಧಿ ದೇವತೆ ವಾಸವಿ ಕನ್ನಿಕಾ ಪರಮೇಶ್ವರಿ. ಅಂದಹಾಗೆ ದೇವಾಲಯವು ಈ ಹಿಂದೆ ಸುಮಾರು 5 ಕೋಟಿ ಮೌಲ್ಯದ ಕರೆನ್ಸಿ ಅಲಂಕಾರವನ್ನು ಕಂಡಿದೆ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ