AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dasara 2024: ದಸರಾ ಯಾವಾಗ? ಆಯುಧಪೂಜೆ, ರಾವಣ ದಹನ ಮುಹೂರ್ತ ಯಾವಾಗ? ಪಠಿಸಬೇಕಾದ ಮಂತ್ರಗಳು ಇವು

ದಸರಾ ಹಬ್ಬದ ಸಂಭ್ರಮ ನಾಡಿನಲ್ಲಿ ಎಲ್ಲ ಕಡೆ ಮನೆ ಮಾಡಿದೆ. ಇನ್ನು ದುರ್ಗಾ ದೇವಿಯು ಮಹಿಷಾಸುರನನ್ನು ಕೊಂದ ದಿನವನ್ನು ವಿಜಯ ದಶಮಿ ಎಂದು ಕರೆಯುತ್ತಾರೆ. ಆಶ್ವಯುಜ ಮಾಸದ ಶುಕ್ಲ ಪಕ್ಷದ ಹತ್ತನೇ ದಿನದಂದು ಪ್ರತಿ ವರ್ಷ ದಸರಾ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬವನ್ನು ಸದ್ಗುಣದ ಮತ್ತು ಕೆಡುಕಿನ ಮೇಲೆ ಒಳಿತಿನ ವಿಜಯವೆಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ವರ್ಷ ವಿಜಯದಶಮಿ ಯಾವಾಗ ಬರುತ್ತದೆ? ರಾವಣನ ದಹನ ಯಾವಾಗ ನಡೆಯಲಿದೆ ಎಂದು ತಿಳಿಯೋಣ..

Dasara 2024: ದಸರಾ ಯಾವಾಗ? ಆಯುಧಪೂಜೆ, ರಾವಣ ದಹನ ಮುಹೂರ್ತ ಯಾವಾಗ? ಪಠಿಸಬೇಕಾದ ಮಂತ್ರಗಳು ಇವು
Spiritual Dasara 2024
Follow us
ಸಾಧು ಶ್ರೀನಾಥ್​
|

Updated on:Oct 11, 2024 | 8:42 AM

Dasara 2024, Ravana Dahan: ದಸರಾ ಹಬ್ಬದ ಸಂಭ್ರಮ ನಾಡಿನಲ್ಲಿ ಎಲ್ಲ ಕಡೆ ಮನೆ ಮಾಡಿದೆ. ಇನ್ನು ದುರ್ಗಾ ದೇವಿಯು ಮಹಿಷಾಸುರನನ್ನು ಕೊಂದ ದಿನವನ್ನು ವಿಜಯ ದಶಮಿ ಎಂದು ಕರೆಯುತ್ತಾರೆ. ಆಶ್ವಯುಜ ಮಾಸದ ಶುಕ್ಲ ಪಕ್ಷದ ಹತ್ತನೇ ದಿನದಂದು ಪ್ರತಿ ವರ್ಷ ದಸರಾ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬವನ್ನು ಸದ್ಗುಣದ ಮತ್ತು ಕೆಡುಕಿನ ಮೇಲೆ ಒಳಿತಿನ ವಿಜಯವೆಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ವರ್ಷ ವಿಜಯದಶಮಿ ಯಾವಾಗ ಬರುತ್ತದೆ? ರಾವಣನ ದಹನ ಯಾವಾಗ ನಡೆಯಲಿದೆ ಎಂದು ತಿಳಿಯೋಣ..

ಈ ವರ್ಷ ದಸರಾ ಯಾವಾಗ? ಹಿಂದೂ ಕ್ಯಾಲೆಂಡರ್ ಪ್ರಕಾರ, ಈ ವರ್ಷ ಆಶ್ವಯುಜ ಮಾಸದ ದಶಮಿ ತಿಥಿ ಅಕ್ಟೋಬರ್ 12 ರಂದು ಬೆಳಿಗ್ಗೆ 10:58 ಕ್ಕೆ ಪ್ರಾರಂಭವಾಗುತ್ತದೆ. ಅಕ್ಟೋಬರ್ 13 ಬೆಳಿಗ್ಗೆ 9:08 ರವರೆಗೆ ಮುಂದುವರಿಯುತ್ತದೆ. ಈ ವರ್ಷದ ಉದಯ ತಿಥಿಯಂತೆ ಅಕ್ಟೋಬರ್ 12 ಶನಿವಾರದಂದು ದಸರಾ ಹಬ್ಬವನ್ನು ಆಚರಿಸಲಾಗುವುದು.

ಇದನ್ನೂ ಓದಿ:  Significance of Kalasha Pooja – ಕಲಶದೊಳಗೆ ಮಾವಿನ ಸೊಪ್ಪನ್ನು ಏಕೆ ಹಾಕುತ್ತೇವೆ? ಕುಂಭದ ಮೇಲೆ ತೆಂಗಿನ ಕಾಯಿ ಇಡುವ ಉದ್ದೇಶವೇನು ?

ರಾವಣ ದಹನ ಕಾರ್ಯಕ್ರಮ- ಅದು ಮಂಗಳಕರ ಸಮಯ ಹಿಂದೂ ನಂಬಿಕೆಗಳ ಪ್ರಕಾರ ಪ್ರದೋಷ ಕಾಲದಲ್ಲಿ ರಾವಣನನ್ನು ದಹನ ಮಾಡಲಾಗುತ್ತದೆ. ಪಂಚಾಂಗದ ಪ್ರಕಾರ ಅಕ್ಟೋಬರ್ 12 ರಂದು ಸಂಜೆ 5:53 ರಿಂದ 7:27 ರವರೆಗೆ ರಾವಣ ದಹನಕ್ಕೆ ಶುಭ ಮುಹೂರ್ತ.

ದಸರಾ ಶಾಸ್ತ್ರ ಪೂಜೆ ಅಥವಾ ಆಯುಧಪೂಜೆ ಶುಭ ಮುಹೂರ್ತ ಅಕ್ಟೋಬರ್ 12 ಶನಿವಾರದಂದು 2:03 PM ರಿಂದ 2:49 PM ವರೆಗೆ ದಸರಾ ದಿನದಂದು ಶಾಸ್ತ್ರಪೂಜೆ ಅಥವಾ ಆಯುಧ ಪೂಜೆಯನ್ನು ಮಾಡಲು ಮಂಗಳಕರ ಸಮಯ. ಈ ವರ್ಷದ ಪ್ರಕಾರ ಆಯುಧ ಪೂಜೆಗೆ 46 ನಿಮಿಷ ಸಮಯ ಸಿಗುತ್ತದೆ.

ದಸರಾ ದಿನದಂದು ಈ ಮಂತ್ರಗಳನ್ನು ಪಠಿಸಿ:

ರಾಮ ಧ್ಯಾನ ಮಂತ್ರ – ಅಪದಾಮಪ ಹರ್ತಾರಂ ದಾತಾರಂ ಸರ್ವ ಸಂಪದ ಲೋಕಾಭಿರಾಮಂ ಶ್ರೀರಾಮ ಭೂಯೋ ಭೂಯೋ ನಮಾಮ್ಯಹಮ್ ॥

ಶ್ರೀ ರಾಮ ಗಾಯತ್ರಿ ಮಂತ್ರ – ಓಂ ದಶರಥಾಯ ವಿದ್ಮಹೇ ಸೀತಾ ವಲ್ಲಭಾಯ ಧೀಮಹಿ

ಇದನ್ನೂ ಓದಿ: October 2024 festivals list – ಅಕ್ಟೋಬರ್ ತಿಂಗಳ ಪ್ರಮುಖ ಹಬ್ಬಗಳು, ಧಾರ್ಮಿಕ ಆಚರಣೆಗಳು, ರಾಷ್ಟ್ರೀಯ ದಿನಾಚರಣೆಗಳ ಸಂಪೂರ್ಣ ಪಟ್ಟಿ

ರಾಮ ಮೂಲ ಮಂತ್ರ – ಓಂ ಹ್ರಾಂ ಹ್ರೀಂ ರಾಮ ರಾಮಾಯ ನಮಃ

ದಸರಾ ಮಹತ್ವ ಹಿಂದೂ ಧರ್ಮದಲ್ಲಿ ದಸರಾಗೆ ವಿಶೇಷ ಮಹತ್ವವಿದೆ. ಈ ದಿನವನ್ನು ಅಸತ್ಯದ ಮೇಲೆ ಸತ್ಯದ ವಿಜಯವನ್ನು ಗುರುತಿಸಲು ಆಚರಿಸಲಾಗುತ್ತದೆ, ಅಂದರೆ ಕೆಟ್ಟದ್ದರ ಮೇಲೆ ಒಳ್ಳೆಯದ ವಿಜಯ. ಈ ದಿನ, ಹೊಸ ಉದ್ಯೋಗವನ್ನು ಪ್ರಾರಂಭಿಸುವುದು, ವಾಹನ, ಆಭರಣಗಳನ್ನು ಖರೀದಿಸುವುದು ಮುಂತಾದ ಶುಭ ಕಾರ್ಯಗಳನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

(ಗಮನಿಸಿ: ಈ ಲೇಖನವು ರೂಢಿಗತ, ಜನಪ್ರಿಯ ನಂಬಿಕೆಗಳನ್ನು ಆಧರಿಸಿದೆ. ಈ ಸುದ್ದಿಯಲ್ಲಿ ಒಳಗೊಂಡಿರುವ ಮಾಹಿತಿ ಮತ್ತು ಸತ್ಯಗಳ ನಿಖರತೆಗೆ ಟಿವಿ9 ಜವಾಬ್ದಾರರಾಗಿರುವುದಿಲ್ಲ)

Published On - 3:00 am, Fri, 11 October 24

ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್