Mysuru Dasara: ಸರ್ಕಾರ ಉರುಳಿಸುವ ಕೆಲಸಕ್ಕೆ ಮುಂದಾಗಬಾರದು, ದಸರಾ ಉದ್ಘಾಟನೆ ವೇಳೆ ಹಂಪ ನಾಗರಾಜಯ್ಯ ಪಾಠ

ಮೈಸೂರು ದಸರಾ: ವಿಶ್ವವಿಖ್ಯಾತ ಮೈಸೂರು ದಸರಾವಗೆ ಗುರುವಾರ ಚಾಲನೆ ದೊರೆಯಿತು. ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಪ್ರತಿಪಕ್ಷಗಳಿಗೆ ಪಾಠ ಹೇಳಿದರು! ಜೀವನವೇ ದೊಡ್ಡ ಅಖಾಡ, ಧೃತಿಗೆಡದೆ ತೊಡೆತಟ್ಟಿ ನಿಲ್ಲಲೇಬೇಕು ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನುದ್ದೇಶಿಸಿ ಹೇಳಿದರು.

Mysuru Dasara: ಸರ್ಕಾರ ಉರುಳಿಸುವ ಕೆಲಸಕ್ಕೆ ಮುಂದಾಗಬಾರದು, ದಸರಾ ಉದ್ಘಾಟನೆ ವೇಳೆ ಹಂಪ ನಾಗರಾಜಯ್ಯ ಪಾಠ
ಮೈಸೂರು ದಸರಾಗೆ ಗುರುವಾರ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಾಹಿತಿ ಹಂಪ ನಾಗರಾಜಯ್ಯ ಇತರರು ಇದ್ದಾರೆ.
Edited By:

Updated on: Oct 03, 2024 | 10:30 AM

ಮೈಸೂರು, ಅಕ್ಟೋಬರ್ 3: ಸೋತ ಪಕ್ಷವೂ ಮತ್ತೆ ಅಧಿಕಾರಕ್ಕೆ ಬರಲು 5 ವರ್ಷಗಳ ನಂತರ ಅವಕಾಶವಿದೆ. ಪ್ರತಿಪಕ್ಷಗಳು ಸರ್ಕಾರ ಉರುಳಿಸುವ ಕೆಲಸಕ್ಕೆ ಮುಂದಾಗಬಾರದು ಎಂದು ಸಾಹಿತಿ ಹಂಪ ನಾಗರಾಜಯ್ಯ ಹೇಳಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಯುವಕರು ಮೋದಿ ಮೋದಿ ಎಂದು ಮುಂದುವರಿಯುತ್ತಿದ್ದಾರೆ. ಹಾಗೆಂದು ಸರ್ಕಾರ ಅಸ್ಥಿರಗೊಳಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದರು.

ದಸರಾ ಎಂಬುದು ಮತ ಧರ್ಮಗಳ ತಾರತಮ್ಯ ಇಲ್ಲದ ಸರ್ವ ಜನಾಂಗದ ಹಬ್ಬ. ಆಸ್ತಿಕತೆ, ನಾಸ್ತಿಕತೆ ಎಂಬುದು ದಸರಾದಲ್ಲಿ ಅಪ್ರಸ್ತುತ. ದಸರಾ ಅರಮನೆ ಹಬ್ಬವಲ್ಲ, ಜನ ಆರಿಸಿದ ಸರ್ಕಾರ ನಡೆಸುವ ಹಬ್ಬ ಎಂದು ನಾಗರಾಜಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಎಷ್ಟೇ ಅಡ್ಡಿ ಆತಂಕಗಳು ಎದುರಾಗುತ್ತಿದ್ದರೂ ಎದೆಗುಂದದೆ ಸೆಡ್ಡು ಹೊಡೆದು ಗಟ್ಟಿಯಾಗಿ ನಿಂತಿದ್ದಾರೆ. ಜೀವನವೇ ದೊಡ್ಡ ಅಖಾಡ, ಧೃತಿಗೆಡದೆ ತೊಡೆತಟ್ಟಿ ನಿಲ್ಲಲೇಬೇಕು. ಸಜ್ಜನಿಕೆ, ಸೌಮ್ಯ ಸ್ವಭಾವ ದೌರ್ಬಲ್ಯವಲ್ಲ ಎಂದರು. ಆ ಮೂಲಕ ಹಂಪ ನಾಗರಾಜಯ್ಯ ಪರೋಕ್ಷವಾಗಿ ಸಿದ್ದರಾಮಯ್ಯಗೆ ಧೈರ್ಯ ತುಂಬಿದರು. ಜತೆಗೆ, ಸಿಎಂ, ಡಿಸಿಎಂ ಒಂದು ರೀತಿಯಲ್ಲಿ ಗರಡಿ ಮನೆ ಆಳಿನಂತೆ ಜಟ್ಟಿಗಳು ಬಣ್ಣಿಸಿದರು.

ಮೈಸೂರು ಅಂದರೆ ದಸರಾ, ದಸರಾ ಅಂದರೆ ಮೈಸೂರು ಎಂದು ನಾಗರಾಜಯ್ಯ ಬಣ್ಣಿಸಿದರು.

ಪತ್ನಿ ನೆನೆದು ಭಾವುಕರಾದ ನಾಗರಾಜಯ್ಯ

ಹಂಪ ನಾಗರಾಜಯ್ಯ ಹೆಂಡತಿ ದಿ. ಕಮಲಾ‌ ಹಂಪನಾ ಅವರಿಗೆ ನಮನ ಸಲ್ಲಿಕೆ ಮಾಡಲಾಯಿತು. ಇದೇ ವೇಳೆ, 88 ವರ್ಷದ ಧೀರ್ಘ ಜೀವನದ ನೆನಪು ಮಾಡಿಕೊಂಡ ಹಂಪನಾ ಭಾವುಕರಾದರು.

ಇದನ್ನೂ ಓದಿ: ಮೈಸೂರು ದಸರಾ: ಮಹಿಷಾಸುರ ಮರ್ದಿನಿ ವಿಗ್ರಹದ ವಿಶೇಷಗಳ ಬಗ್ಗೆ ಅರ್ಚಕ ಶಶಿಶೇಖರ ದೀಕ್ಷಿತ್ ಮಾತು ಇಲ್ಲಿದೆ

71 ವರ್ಷದ ಸ್ನೇಹದ ಸುಖ ನೀಡಿದೆ. 63 ವರ್ಷ ಮಡದಿಯಾಗಿ ಜೊತೆಯಾಗಿದ್ದೆ. ಆರು ವರ್ಷಗಳ ಕಾಲ ಸಹಪಾಠಿಯಾಗಿದ್ದೆ. ನಿನ್ನ ದಿವ್ಯ ನೆನಪಿಗೆ ಈ ಗೌರವ ಸಮರ್ಪಣೆ ಎಂದು ನಾಗರಾಜಯ್ಯ ಭಾವುಕರಾಗಿ ನೆನೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us