AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara: ಅರಮನೆಯಲ್ಲಿ ಆಯುಧಪೂಜೆ, ಆನೆಗಳ ಮೇಲೆ ಚಿತ್ತಾರ, ಜಂಬೂ ಸವಾರಿಗೆ ಭರದ ಸಿದ್ಧತೆ, ಬಿಗಿ ಭದ್ರತೆ

ಆಯುಧಪೂಜೆಗಾಗಿ ರಾಜಪರಿವಾರಕ್ಕೆ ಸೇರಿದವರು ಕೋಡಿ ಸೋಮೆಶ್ವರ ದೇಗುಲಕ್ಕೆ ಬಂದಿದ್ದು, ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.

Mysore Dasara: ಅರಮನೆಯಲ್ಲಿ ಆಯುಧಪೂಜೆ, ಆನೆಗಳ ಮೇಲೆ ಚಿತ್ತಾರ, ಜಂಬೂ ಸವಾರಿಗೆ ಭರದ ಸಿದ್ಧತೆ, ಬಿಗಿ ಭದ್ರತೆ
ಮೈಸೂರು ಅರಮನೆಯಲ್ಲಿ ಪಟ್ಟದ ಆನೆ, ಒಂಟೆಗಳು
TV9 Web
| Edited By: |

Updated on: Oct 04, 2022 | 9:55 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ (Mysore Dasara Jambu Savari) ವಿಜಯದಶಮಿಯಂದು (ಅ 5) ನಡೆಯಲಿದೆ. ಮೆರವಣಿಗೆ ಸಾಗುವ ರಸ್ತೆ, ಪ್ರಮುಖ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು. ಲಕ್ಷಾಂತರ ಜನರು ಸೇರಬಹುದೆಂಬ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅರಮನೆಯಿಂದ ಜಂಬೂ ಸವಾರಿ ಹೊರಬರುವ ಬಲರಾಮ ಗೇಟ್ ಬಳಿ ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ತಪಾಸಣೆ ನಡೆಸಲಾಗಿದೆ. ಕಸದ ಡಸ್ಟ್​ಬಿನ್ ಸೇರಿದಂತೆ ಪ್ರತಿಯೊಂದು ವಸ್ತುವನ್ನೂ ಅರಮನೆ ಮೈದಾನದಿಂದ ಬನ್ನಿಮಂಟಪವರೆಗೂ ತಪಾಸಣೆ ನಡೆಸಲಾಯಿತು.

ಆಯುಧಪೂಜೆಗಾಗಿ ರಾಜಪರಿವಾರಕ್ಕೆ ಸೇರಿದವರು ಕೋಡಿ ಸೋಮೆಶ್ವರ ದೇಗುಲಕ್ಕೆ ಬಂದಿದ್ದು, ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಮುತೈದೆಯರ ಜೊತೆ ದೇವರನ್ನು ತರಲಾಗುತ್ತಿದೆ. ಪಲ್ಲಕ್ಕಿಯಲ್ಲಿ ಪಟ್ಟದ ಕತ್ತಿಯಿಟ್ಟು ಜಯಮಾರ್ತಾಂಡ ದ್ವಾರದ ಮೂಲಕ ಕೋಡಿ ಸೋಮೇಶ್ವರ ದೇಗುಲಕ್ಕೆ ಕಳಿಸಲಾಯಿತು. ಈ ವೇಳೆ ನಾದಸ್ವರ ತಂಡ ಹಾಗೂ ರಾಜ ಪರಿವಾರದವರು ಜೊತೆಗಿದ್ದರು. ಅರಮನೆಯ ಒಂಟೆ ಹಾಗೂ ಆನೆಗಳು ಇದ್ದವು.

ಮೈಸೂರು ಅರಮನೆಯಲ್ಲಿ ಆಯುಧಪೂಜೆಯ ಪೂಜಾ ಕೈಂಕರ್ಯ ಆರಂಭವಾಗಿದ್ದು, ಆನೆಬಾಗಿಲು ಮೂಲಕ ಪಟ್ಟದ ಆನೆ, ಕುದುರೆ, ಹಸುಗಳು ಬಂದಿವೆ. ಪಾರಂಪರಿಕ ಆಯುಧ ಪಲ್ಲಕ್ಕಿಯನ್ನು ರಾಜವಂಶಸ್ಥರು, ಅರಮನೆ ಸಿಬ್ಬಂದಿ ನೇತೃತ್ವದಲ್ಲಿ ತರಲಾಯಿತು. ಕೋಡಿಸೋಮೇಶ್ವರ ದೇಗುಲದಲ್ಲಿ ಪಾರಂಪರಿಕ ಆಯುಧಗಳನ್ನು ಅಲಂಕರಿಸಿದ ರಾಜಪುರೋಹಿತರು ವಿಶೇಷ ಪೂಜೆ ನೆರವೇರಿಸಲಾಯಿತು.

ಅರಮನೆ ನಗರಿಯಲ್ಲಿ ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ. ಬೆಳಗ್ಗೆ 6 ಗಂಟೆಯಿಂದಲೇ ಚಂಡಿ ಹೋಮದ ವಿಧಿಗಳು ಆರಂಭವಾಗಿದ್ದು, 9 ಗಂಟೆಗೆ ಚಂಡಿಹೋಮ ಪೂರ್ಣಾಹುತಿ ನಡೆಯಿತು. 11.02ರಿಂದ 11.25ರ ಶುಭ ಮುಹೂರ್ತದಲ್ಲಿ ಯದುವೀರ ಕೃಷದತ್ತ ಚಾಮರಾಜ ಒಡೆಯರ್‌ ಪೂಜೆ ಆಯುಧಗಳಿಗೆ ಪೂಜೆ ಸಲ್ಲಿಸಲಾಗುವುದು. ಇಂದು ರಾತ್ರಿ ಈ ವರ್ಷದ ಖಾಸಗಿ ದರ್ಬಾರ್​ನ ಕೊನೆಯ ದಿನ. ದರ್ಬಾರ್ ನಂತರ ಸಿಂಹಾಸನದ ಸಿಂಹ ವಿಸರ್ಜಿಸಲಾಗುವುದು. ರಾತ್ರಿ ದೇವರ ಮನೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಂಕಣ ವಿಸರ್ಜನೆ ಮಾಡಲಿದ್ದಾರೆ.

ಆನೆಗಳಿಗೆ ಚಿತ್ತಾರ

ಮೈಸೂರು ಅರಮನೆಯ ಪಟ್ಟದ ಆನೆಗಳಾದ ಭೀಮ ಮತ್ತು ಧನಂಜಯ್​ಗೆ ಚಿತ್ತಾರದ ಅಲಂಕಾರ ಮಾಡಲಾಗಿದೆ. ಅರಮನೆಯ ಎರಡು ಹೆಣ್ಣು ಆನೆಗಳೂ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ಆಗಮಿಸಿವೆ. ಪಟ್ಟದ ಆನೆಗಳ ಮೇಲೆ ಮೈಸೂರು ರಾಜಮನೆತನದ ಲಾಂಛನವಾದ ಗಂಡಬೇರುಂಡ, ಕಾಲುಗಳಿಗೆ ಎಲೆ ಬಳ್ಳಿ, ಕಿವಿಗಳಿಗೆ ಶಂಕು-ಚಕ್ರ, ಸೊಂಡಿಲಿಗೆ ಹೂ ಬಳ್ಳಿ ಚಿತ್ತಾರಗಳನ್ನು ಮೈಸೂರು ಮೂಲದ ಕಲಾವಿದ ರಾಜು ಬಿಡಿಸಿದ್ದಾರೆ.

ವಿಶೇಷ ವ್ಯವಸ್ಥೆ

ಜಂಬೂ ಸವಾರಿ ವೀಕ್ಷಣೆಗಾಗಿ ವಿದೇಶಿಯರು ಹಾಗೂ ವಿಶೇಷ ಚೇತನರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಆಯುರ್ವೇದ ಕಾಲೇಜು ಬಳಿ ಹಾಕಿರುವ ಪೆಂಡಾಲ್​ನಲ್ಲಿ ಕುಳಿತು ಇವರು ದಸರಾ ವೀಕ್ಷಿಸಬಹುದಾಗಿದೆ. ಪೆಂಡಾಲ್​ನಿಂದ ರಸ್ತೆಗೆ ಯಾರೂ ಬರದಂತೆ ಮರದ ಗಳುಗಳನ್ನು ಅಡ್ಡ ಕಟ್ಟಲಾಗಿದೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?