AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara: ಅರಮನೆಯಲ್ಲಿ ಆಯುಧಪೂಜೆ, ಆನೆಗಳ ಮೇಲೆ ಚಿತ್ತಾರ, ಜಂಬೂ ಸವಾರಿಗೆ ಭರದ ಸಿದ್ಧತೆ, ಬಿಗಿ ಭದ್ರತೆ

ಆಯುಧಪೂಜೆಗಾಗಿ ರಾಜಪರಿವಾರಕ್ಕೆ ಸೇರಿದವರು ಕೋಡಿ ಸೋಮೆಶ್ವರ ದೇಗುಲಕ್ಕೆ ಬಂದಿದ್ದು, ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.

Mysore Dasara: ಅರಮನೆಯಲ್ಲಿ ಆಯುಧಪೂಜೆ, ಆನೆಗಳ ಮೇಲೆ ಚಿತ್ತಾರ, ಜಂಬೂ ಸವಾರಿಗೆ ಭರದ ಸಿದ್ಧತೆ, ಬಿಗಿ ಭದ್ರತೆ
ಮೈಸೂರು ಅರಮನೆಯಲ್ಲಿ ಪಟ್ಟದ ಆನೆ, ಒಂಟೆಗಳು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Oct 04, 2022 | 9:55 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ (Mysore Dasara Jambu Savari) ವಿಜಯದಶಮಿಯಂದು (ಅ 5) ನಡೆಯಲಿದೆ. ಮೆರವಣಿಗೆ ಸಾಗುವ ರಸ್ತೆ, ಪ್ರಮುಖ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು. ಲಕ್ಷಾಂತರ ಜನರು ಸೇರಬಹುದೆಂಬ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅರಮನೆಯಿಂದ ಜಂಬೂ ಸವಾರಿ ಹೊರಬರುವ ಬಲರಾಮ ಗೇಟ್ ಬಳಿ ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ತಪಾಸಣೆ ನಡೆಸಲಾಗಿದೆ. ಕಸದ ಡಸ್ಟ್​ಬಿನ್ ಸೇರಿದಂತೆ ಪ್ರತಿಯೊಂದು ವಸ್ತುವನ್ನೂ ಅರಮನೆ ಮೈದಾನದಿಂದ ಬನ್ನಿಮಂಟಪವರೆಗೂ ತಪಾಸಣೆ ನಡೆಸಲಾಯಿತು.

ಆಯುಧಪೂಜೆಗಾಗಿ ರಾಜಪರಿವಾರಕ್ಕೆ ಸೇರಿದವರು ಕೋಡಿ ಸೋಮೆಶ್ವರ ದೇಗುಲಕ್ಕೆ ಬಂದಿದ್ದು, ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ಮುತೈದೆಯರ ಜೊತೆ ದೇವರನ್ನು ತರಲಾಗುತ್ತಿದೆ. ಪಲ್ಲಕ್ಕಿಯಲ್ಲಿ ಪಟ್ಟದ ಕತ್ತಿಯಿಟ್ಟು ಜಯಮಾರ್ತಾಂಡ ದ್ವಾರದ ಮೂಲಕ ಕೋಡಿ ಸೋಮೇಶ್ವರ ದೇಗುಲಕ್ಕೆ ಕಳಿಸಲಾಯಿತು. ಈ ವೇಳೆ ನಾದಸ್ವರ ತಂಡ ಹಾಗೂ ರಾಜ ಪರಿವಾರದವರು ಜೊತೆಗಿದ್ದರು. ಅರಮನೆಯ ಒಂಟೆ ಹಾಗೂ ಆನೆಗಳು ಇದ್ದವು.

ಮೈಸೂರು ಅರಮನೆಯಲ್ಲಿ ಆಯುಧಪೂಜೆಯ ಪೂಜಾ ಕೈಂಕರ್ಯ ಆರಂಭವಾಗಿದ್ದು, ಆನೆಬಾಗಿಲು ಮೂಲಕ ಪಟ್ಟದ ಆನೆ, ಕುದುರೆ, ಹಸುಗಳು ಬಂದಿವೆ. ಪಾರಂಪರಿಕ ಆಯುಧ ಪಲ್ಲಕ್ಕಿಯನ್ನು ರಾಜವಂಶಸ್ಥರು, ಅರಮನೆ ಸಿಬ್ಬಂದಿ ನೇತೃತ್ವದಲ್ಲಿ ತರಲಾಯಿತು. ಕೋಡಿಸೋಮೇಶ್ವರ ದೇಗುಲದಲ್ಲಿ ಪಾರಂಪರಿಕ ಆಯುಧಗಳನ್ನು ಅಲಂಕರಿಸಿದ ರಾಜಪುರೋಹಿತರು ವಿಶೇಷ ಪೂಜೆ ನೆರವೇರಿಸಲಾಯಿತು.

ಅರಮನೆ ನಗರಿಯಲ್ಲಿ ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ. ಬೆಳಗ್ಗೆ 6 ಗಂಟೆಯಿಂದಲೇ ಚಂಡಿ ಹೋಮದ ವಿಧಿಗಳು ಆರಂಭವಾಗಿದ್ದು, 9 ಗಂಟೆಗೆ ಚಂಡಿಹೋಮ ಪೂರ್ಣಾಹುತಿ ನಡೆಯಿತು. 11.02ರಿಂದ 11.25ರ ಶುಭ ಮುಹೂರ್ತದಲ್ಲಿ ಯದುವೀರ ಕೃಷದತ್ತ ಚಾಮರಾಜ ಒಡೆಯರ್‌ ಪೂಜೆ ಆಯುಧಗಳಿಗೆ ಪೂಜೆ ಸಲ್ಲಿಸಲಾಗುವುದು. ಇಂದು ರಾತ್ರಿ ಈ ವರ್ಷದ ಖಾಸಗಿ ದರ್ಬಾರ್​ನ ಕೊನೆಯ ದಿನ. ದರ್ಬಾರ್ ನಂತರ ಸಿಂಹಾಸನದ ಸಿಂಹ ವಿಸರ್ಜಿಸಲಾಗುವುದು. ರಾತ್ರಿ ದೇವರ ಮನೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಂಕಣ ವಿಸರ್ಜನೆ ಮಾಡಲಿದ್ದಾರೆ.

ಆನೆಗಳಿಗೆ ಚಿತ್ತಾರ

ಮೈಸೂರು ಅರಮನೆಯ ಪಟ್ಟದ ಆನೆಗಳಾದ ಭೀಮ ಮತ್ತು ಧನಂಜಯ್​ಗೆ ಚಿತ್ತಾರದ ಅಲಂಕಾರ ಮಾಡಲಾಗಿದೆ. ಅರಮನೆಯ ಎರಡು ಹೆಣ್ಣು ಆನೆಗಳೂ ಕೋಡಿ ಸೋಮೇಶ್ವರ ದೇವಸ್ಥಾನಕ್ಕೆ ಆಗಮಿಸಿವೆ. ಪಟ್ಟದ ಆನೆಗಳ ಮೇಲೆ ಮೈಸೂರು ರಾಜಮನೆತನದ ಲಾಂಛನವಾದ ಗಂಡಬೇರುಂಡ, ಕಾಲುಗಳಿಗೆ ಎಲೆ ಬಳ್ಳಿ, ಕಿವಿಗಳಿಗೆ ಶಂಕು-ಚಕ್ರ, ಸೊಂಡಿಲಿಗೆ ಹೂ ಬಳ್ಳಿ ಚಿತ್ತಾರಗಳನ್ನು ಮೈಸೂರು ಮೂಲದ ಕಲಾವಿದ ರಾಜು ಬಿಡಿಸಿದ್ದಾರೆ.

ವಿಶೇಷ ವ್ಯವಸ್ಥೆ

ಜಂಬೂ ಸವಾರಿ ವೀಕ್ಷಣೆಗಾಗಿ ವಿದೇಶಿಯರು ಹಾಗೂ ವಿಶೇಷ ಚೇತನರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಆಯುರ್ವೇದ ಕಾಲೇಜು ಬಳಿ ಹಾಕಿರುವ ಪೆಂಡಾಲ್​ನಲ್ಲಿ ಕುಳಿತು ಇವರು ದಸರಾ ವೀಕ್ಷಿಸಬಹುದಾಗಿದೆ. ಪೆಂಡಾಲ್​ನಿಂದ ರಸ್ತೆಗೆ ಯಾರೂ ಬರದಂತೆ ಮರದ ಗಳುಗಳನ್ನು ಅಡ್ಡ ಕಟ್ಟಲಾಗಿದೆ.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?