AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತಾಪಿ ವರ್ಗ ಸಂಕಷ್ಟ: ಪ್ರಸಕ್ತ ವರ್ಷ ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು, ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾವನ್ನು ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ H.C.ಮಹದೇವಪ್ಪ ಟ್ವೀಟ್​ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

ರೈತಾಪಿ ವರ್ಗ ಸಂಕಷ್ಟ: ಪ್ರಸಕ್ತ ವರ್ಷ ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ
ಮೈಸೂರು ದಸರಾ (ಸಂಗ್ರಹ ಚಿತ್ರ)
ರಾಮ್​, ಮೈಸೂರು
| Edited By: |

Updated on:Sep 21, 2023 | 10:15 PM

Share

ಬೆಂಗಳೂರು, ಸೆಪ್ಟೆಂಬರ್​ 21: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಪ್ರಸಕ್ತ ವರ್ಷ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ H.C.ಮಹದೇವಪ್ಪ (hc mahadevappa) ಮಾಹಿತಿ ನೀಡಿದ್ದಾರೆ. ಈ ಕುರಿತಾಗಿ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು, ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾವನ್ನು ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಸಚಿವ HC ಮಹದೇವಪ್ಪ ಟ್ವೀಟ್ 

ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ಬರಸಿಡಿಲು ಬಡಿದಿದೆ. ಅದ್ಧೂರಿ ದಸರಾ ಆಚರಣೆ ಸಿದ್ಧತೆಯಲ್ಲಿದ್ದ ಸರ್ಕಾರ ಇದೀಗ ಸರಳ ದಸರಾ ಆಚರಣೆ ಮಾಡಬೇಕಾ ಅಥವಾ ಅದ್ಧೂರಿ ದಸರಾ ಆಚರಣೆ ಮಾಡಬೇಕಾ ಎನ್ನುವ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿತ್ತು. ಅದ್ಧೂರಿ ದಸರಾ ಆಚರಣೆಗೆ ಈ ಹಿಂದೆ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಮುಂಗಾರು ಕೈ ಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ.

ಇದನ್ನೂ ಓದಿ: ಗಣೇಶ ಚತುರ್ಥಿ: ಅಭಿಮನ್ಯು ನೇತೃತ್ವದ 9 ಗಜಪಡೆಗೆ ವಿಶೇಷ ಪೂಜೆ: ಮಳೆ ಅಡ್ಡಿ

ಮತ್ತೊಂದು ಕಡೆ ರಾಜ್ಯದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು, ರೈತರು ಬೀದಿಗಿಳಿದು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಇದು ಸರ್ಕಾರದ ಇಕ್ಕಟ್ಟಿಗೆ ಸಿಲುಕಿದಂತಾಗಿತ್ತು. ಇವೆಲ್ಲದರ ಮಧ್ಯೆ ದಸರಾ ಸರಳವಾಗಿ ಮಾಡಬೇಕಾ ಅಥವಾ ಅದ್ಧೂರಿಯಾಗಿ ಮಾಡಬೇಕಾ ಎಂಬ ಬಗ್ಗೆ ಈವರೆಗೂ ಸರ್ಕಾರದ ನಿರ್ಧಾರ ಅಂತಿಮವಾಗಿರಲಿಲ್ಲ. ಆದರೆ ಸದ್ಯ ಪ್ರಸಕ್ತ ವರ್ಷ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಯಾವಾಗೆಲ್ಲಾ ಸರಳವಾಗಿ ದಸರಾ ಆಚರಿಸಲಾಗಿದೆ

  • 2000- ಡಾ.ರಾಜ್ ಕುಮಾರ್ ಅಪಹರಣದ ವೇಳೆ
  • 2001 – ಗುಜರಾತ್ ಭೂಕಂಪ
  • 2002 – ರಾಜ್ಯದಲ್ಲಿ ಬರ ಪರಿಸ್ಥಿತಿ
  • 2011, 2012 – ಬರಗಾಲ
  • 2015, 2016 – ಬರ, ರೈತರ ಆತ್ಮಹತ್ಯೆ
  • 2020, 2021 – ಕೊರೊನಾ ಕರಿನೆರಳು, ಈ ವೇಳೆ ಸರಳವಾಗಿ ದಸರಾ ಆಚರಣೆ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:00 pm, Thu, 21 September 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ